ಎಂ.ನಾರಾಯಣ
ದೇವಾಲಯದ ಜೀರ್ಣೋದ್ಧಾರ ಹಿನ್ನೆಲೆಯಲ್ಲಿ ಈ ಬಾರಿಯೂ ರಥೋತ್ಸವ ಇಲ್ಲ
ತಿ.ನರಸೀಪುರ: ಕಾವೇರಿ ನದಿ ದಡದಲ್ಲಿರುವ ತಾಲ್ಲೂಕಿನ ಪ್ರಸಿದ್ಧ ಪುಣ್ಯ ಕ್ಷೇತ್ರ ಶ್ರೀ ಮುಡುಕುತೊರೆ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ಜಿಲ್ಲೆಯ ದೊಡ್ಡ ಜಾತ್ರೆ ಎಂದೇ ಖ್ಯಾತಿ ಪಡೆದಿರುವ ಐತಿಹಾಸಿಕ ಮುಡುಕುತೊರೆ ಜಾತ್ರಾ ಮಹೋತ್ಸವವು ಜ.೨೧ರಂದು ಸಾಂಪ್ರದಾಯಿಕ ಹಾಗೂ ಧಾರ್ಮಿಕ ಪೂಜಾ ಕಾರ್ಯಕ್ರಮ ಅಂಕುರಾರ್ಪಣೆಯೊಂದಿಗೆ ಪ್ರಾರಂಭವಾಗಲಿದೆ.
ದೇಗುಲದ ಕಾಮಗಾರಿ ನಡೆಯುತ್ತಿರುವುದರಿಂದ ಈ ಬಾರಿಯೂ ಜಾತ್ರಾ ಪೂಜೆಗಳನ್ನು ಹೊರತುಪಡಿಸಿ ಉಳಿದಂತೆ ಉತ್ಸವ ಮೆರವಣಿಗೆ, ರಥೋತ್ಸವ ನಡೆಯುವುದಿಲ್ಲ. ಆದರೆ ಪ್ರತಿದಿನ ನಿಗದಿತ ಪೂಜಾ ಕೈಂಕರ್ಯ ಗಳು ಮಾತ್ರ ನಡೆಯಲಿವೆ.ಶ್ರೀ ಭ್ರಮ ರಾಂಬ ಸಮೇತ ಮಲ್ಲಿಕಾರ್ಜುನಸ್ವಾಮಿ ಬ್ರಹ್ಮ ರಥೋತ್ಸವದ ಜಾತ್ರಾ ಮಹೋತ್ಸವದಲ್ಲಿ ದನಗಳ ಜಾತ್ರೆ ನಡೆಯುವುದು ವಾಡಿಕೆಯಾಗಿದ್ದು, ಈಗ ದೇವಾಲಯದ ಜೀರ್ಣೋದ್ಧಾರದ ಅಂಗವಾಗಿ ಕಾಮಗಾರಿ ಪೂರ್ಣಗೊಳ್ಳುವವರೆಗೆ ಬ್ರಹ್ಮರಥೋತ್ಸವ, ಮಹೋತ್ಸವಗಳನ್ನು ನಡೆಸಲು ಆಗಮಶಾಸ್ತ್ರದಲ್ಲಿ ಅವಕಾಶಗಳು ಇರುವುದಿಲ್ಲವಾದ್ದರಿಂದ ಕಳೆದ ವರ್ಷದಂತೆಯೇ ಈ ಬಾರಿಯೂ ದನಗಳ ಜಾತ್ರೆ ಮತ್ತು ಭಕ್ತರು ನಡೆಸುವ ಅರವಟ್ಟಿಗೆಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಭಕ್ತರಿಗೆ ದರ್ಶನಕ್ಕೆ ಮತ್ತು ಸೇವೆಗಳಿಗೆ ಈ ಬಾರಿಯೂ ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಅಧಿಕಾರಿಗಳ ಸಭೆ ನಡೆಸಿ ಜಾತ್ರೋತ್ಸವದಲ್ಲಿ ಭಾಗವಹಿಸುವ ಭಕ್ತರಿಗೆ ಹಾಗೂ ದನಗಳ ಪರಿಷೆಗೆ ಅಗತ್ಯವಾದ ಕುಡಿಯುವ ನೀರು, ಬಟ್ಟೆ ಬದಲಿಸುವ ಕೊಠಡಿ, ತಾತ್ಕಾಲಿಕ ಶೌಚಾಲಯ, ದೇಗುಲಗಳಿಗೆ ವಿದ್ಯುತ್ ದೀಪಾಲಂಕಾರ, ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
” ಮುಡುಕುತೊರೆ ಮಲ್ಲಿಕಾರ್ಜುನ ದೇವಾಲಯದ ಜೀರ್ಣೋದ್ಧಾರ ಪ್ರಗತಿಯಲ್ಲಿದ್ದು, ಈ ಬಾರಿಯ ಜಾತ್ರೆಯಲ್ಲೂ ಉತ್ಸವಮೂರ್ತಿ ಮೆರವಣಿಗೆ, ಉತ್ಸವಗಳು ಇರುವುದಿಲ್ಲ. ಜಾತ್ರಾ ಪೂಜಾ ಕೈಂಕರ್ಯ ಎಂದಿನಂತೆ ನೆರವೇರಲಿದ್ದು, ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಮಹೋತ್ಸವದ ಅಂಗವಾಗಿ ವಿವಿಧ ಇಲಾಖೆಗಳಿಗೆ ನೀಡಿರುವ ಮೂಲ ಸೌಲಭ್ಯದ ಕಾರ್ಯಗಳಿಗೆ ಅನುಮೋದನೆ ದೊರಕಿದ್ದು, ಶೀಘ್ರದಲ್ಲೇ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು.”
-ವೆಂಕಟೇಶ್ ಪ್ರಸಾದ್, ಸಮೂಹ ದೇವಾಲಯಗಳ ಅಧಿಕಾರಿ
” ದನಗಳ ಜಾತ್ರೆ, ಭಕ್ತರಿಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶವಿದೆ. ಕಾಮಗಾರಿ ನಡೆಯುತ್ತಿದ್ದು, ಮುಂದಿನ ವರ್ಷ ಪೂರ್ಣಗೊಂಡು ಜಾತ್ರೆ ರಥೋತ್ಸವ ನಡೆಯುವ ಸಾಧ್ಯತೆಗಳಿವೆ. ಧಾರ್ಮಿಕ ಕಾರ್ಯಗಳು ಎಂದಿನಂತೆ ನಡೆಯಲಿವೆ. ಉತ್ಸವ ಮತ್ತು ರಥೋತ್ಸವ ಇರುವುದಿಲ್ಲ. ಅರವಟ್ಟಿಗೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ತಾಲ್ಲೂಕು ಆಡಳಿತ ಹಾಗೂ ಧಾರ್ಮಿಕ ದತ್ತಿ ಇಲಾಖೆವತಿಯಿಂದ ಸಾಂಸ್ಕ ತಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ.”
-ಆನಂದ್ ದೀಕ್ಷಿತ್, ಆಗಮಿಕರು, ವೈದ್ಯನಾಥೇಶ್ವರ ಮತ್ತು ಸಮೂಹ ದೇವಾಲಯ
ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…
ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್ ಕಣಿವೆಯಲ್ಲಿ…
ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್ ಆಸ್ಪತ್ರೆಗೆ ದಾಖಲಾಗಿದ್ದ ಶರದ್ ಪವಾರ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಶರದ್ ಪವಾರ್…
ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…