Andolana originals

ಪುರಸಭೆ ವರಿಷ್ಠರ ಚುನಾವಣೆಗೆ ಫೆ.೧೯ಕ್ಕೆ ಮುಹೂರ್ತ

ಕೋಟೆ: ಪುರಸಭೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕೆಲಸಗಳಿಗೆ ಚುರುಕು ನಿರೀಕ್ಷೆ 

ಮಂಜು ಕೋಟೆ

ಎಚ್.ಡಿ.ಕೋಟೆ: ಮೀಸಲಾತಿಯ ಸಮಸ್ಯೆಯಿಂದ  ಒಂದು ವರ್ಷದಿಂದ ನನೆಗುದಿಗೆ ಬಿದ್ದಿದ್ದಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಚುನಾವಣೆಗೆ ಮುಹೂರ್ತ ನಿಗದಿಯಾಗಿದ್ದು,  ಫೆ.೧೯ರಂದು ಚುನಾವಣೆ ನಿಗದಿಯಾಗಿದೆ.

ಪಟ್ಟಣದ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷರ ಅವಧಿ ಪೂರ್ಣಗೊಂಡು ಒಂದು ವರ್ಷ ಕಳೆಯುತ್ತಿದ್ದರೂ ಸರ್ಕಾರ ಮೀಸಲಾತಿಯನ್ನು ಪ್ರಕಟಿಸಿರಲಿಲ್ಲ. ೮ ತಿಂಗಳುಗಳ ಹಿಂದೆ ಪ್ರಕಟಿಸಿದ ಮೀಸಲಾತಿಯ ಪ್ರಕಾರ ಮತ್ತೊಮ್ಮೆ ಅಧ್ಯಕ್ಷ ಸ್ಥಾನ ಎಸ್‌ಟಿ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ನಿಗದಿಯಾಗಿತ್ತು. ಆಗ ಸಾಮಾಜಿಕ ನ್ಯಾಯ ಬೇಕೆಂದು ಪುರಸಭೆಯ ಕಾಂಗ್ರೆಸ್ ಪಕ್ಷದ ಸದಸ್ಯ ಮಧುಕುಮಾರ್ ಹೈಕೋರ್ಟ್ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆದು, ಕೋರ್ಟ್ ಸರ್ಕಾರ ಪ್ರಕಟಿಸಿರುವ ಮೀಸಲಾತಿ ಸರಿ ಇದೆ ಎಂದು ಪುರಸಭಾ ಸದಸ್ಯರ ಅರ್ಜಿಯನ್ನು ವಜಾ ಮಾಡಿದೆ.

ಈ ಹಿನ್ನೆಲೆಯಲ್ಲಿ ತಹಸಿಲ್ದಾರ್ ಶ್ರೀನಿವಾಸ ಅವರು ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯನ್ನು ಫೆ.೧೯ಕ್ಕೆ ನಿಗದಿ ಮಾಡಿ ಆದೇಶ ಹೊರಡಿಸಿದ್ದಾರೆ

ಪುರಸಭೆ ಮುಖ್ಯಾಧಿಕಾರಿ ಸುರೇಶ್ ಪುರ ಸಭೆಯ ೨೩ ಸದಸ್ಯರು, ಸಂಸದರು, ಶಾಸಕರಿಗೆ ಚುನಾವಣಾ ನೋಟಿಸ್ ನೀಡಿದ್ದಾರೆ. ಒಂದು ವರ್ಷದಿಂದ ಪುರಸಭೆಗೆ ಅಧ್ಯಕ್ಷ,  ಉಪಾಧ್ಯಕ್ಷರು ಇಲ್ಲದಿದ್ದರಿಂದ  ಆಡಳಿತ ಅಧಿಕಾರಿಯಾಗಿ ಹುಣಸೂರಿನ ಉಪ ವಿಭಾಗಾಧಿಕಾರಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ,  ಒಂದು ಬಾರಿ ಕೂಡ ಪುರಸಭೆ ಅಭಿವೃದ್ಧಿಯ ವಿಚಾರಕ್ಕೆ ಸಂಬಂಧಿಸಿದಂತೆ, ಕಾಮಗಾರಿ ಗಳನ್ನು ಚುರುಕುಗೊಳಿಸಲು, ಮೂಲಸೌಕರ್ಯ ಗಳನ್ನು ಕಲ್ಪಿಸುವ ಬಗ್ಗೆ ಸದಸ್ಯರು ಮತ್ತು ಅಧಿಕಾರಿಗಳೊಡನೆ ಸಭೆ ನಡೆಸದ ಹಿನ್ನೆಲೆಯಲ್ಲಿ ಪುರಸಭೆ ವ್ಯಾಪ್ತಿಯಲ್ಲಿ ಸಮಸ್ಯೆಗಳು ಹಾಗೆಯೇ ಇದ್ದವು.

ನೂತನ ಆಡಳಿತ ಮಂಡಳಿಯ ಅಧಿಕಾರ ಅವಧಿ ೮ ತಿಂಗಳುಗಳು ಮಾತ್ರ ಇರುವುದರಿಂದ ಪಟ್ಟಣದ ಅಭಿವೃದ್ಧಿಗೆ ಬಹಳಷ್ಟು ಶ್ರಮವಹಿಸಿ ಕೆಲಸ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.

” ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯನ್ನು ಫೆ.೧೯ರಂದು ನಿಗದಿಪಡಿಸಿದ್ದು,  ಚುನಾವಣೆ ನಡೆಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.  ಸಂಬಂಧಪಟ್ಟವರಿಗೆ ಚುನಾವಣೆಗೆ ಆಗಮಿಸುವಂತೆ ನೋಟಿಸ್ ನೀಡಲಾಗಿದ್ದು ಚುನಾವಣಾಧಿಕಾರಿಯಾಗಿ ತಹಸಿಲ್ದಾರ್ ಶ್ರೀನಿವಾಸ್ ಅವರು ಕರ್ತವ್ಯ ನಿರ್ವಹಿಸಲಿದ್ದಾರೆ.  ಸರ್ಕಾರ ನಿಗದಿಪಡಿಸಿರುವ ಮೀಸಲಾತಿಯಡಿ ಚುನಾವಣೆ ನಡೆಯಲಿದೆ.”

 -ಸುರೇಶ್, ಪುರಸಭೆ ಮುಖ್ಯಾಧಿಕಾರಿ

” ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಪುರಸಭೆ ಅಧ್ಯಕ್ಷರಾಗಿ ಕೆಲಸ ನಿರ್ವಹಿಸುವ ಅವಕಾಶವನ್ನು ಮೀಸಲಾತಿ ಮೂಲಕ ಸರ್ಕಾರ ಮಾಡಿಕೊಟ್ಟಿರುವುದು ನಮ್ಮಂತಹ ಮಹಿಳೆಯರಿಗೆ ಸಂತಸ ತಂದಿದೆ. ಒಂದು ವರ್ಷದಿಂದ ಅಧ್ಯಕ್ಷರು, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯದೆ ವಾರ್ಡುಗಳಲ್ಲಿ ಬಹಳಷ್ಟು ಮೂಲಸೌಕರ್ಯಗಳ ಸಮಸ್ಯೆ ಉಂಟಾಗಿತ್ತು.”

 -ಸರೋಜಮ್ಮ ಚಿಕ್ಕಣ್ಣ, ಪುರಸಭಾ ಸದಸ್ಯರು

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

4 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

6 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

6 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

8 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

14 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

20 hours ago