Andolana originals

ಪುರಸಭೆ ವರಿಷ್ಠರ ಚುನಾವಣೆಗೆ ಫೆ.೧೯ಕ್ಕೆ ಮುಹೂರ್ತ

ಕೋಟೆ: ಪುರಸಭೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕೆಲಸಗಳಿಗೆ ಚುರುಕು ನಿರೀಕ್ಷೆ 

ಮಂಜು ಕೋಟೆ

ಎಚ್.ಡಿ.ಕೋಟೆ: ಮೀಸಲಾತಿಯ ಸಮಸ್ಯೆಯಿಂದ  ಒಂದು ವರ್ಷದಿಂದ ನನೆಗುದಿಗೆ ಬಿದ್ದಿದ್ದಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಚುನಾವಣೆಗೆ ಮುಹೂರ್ತ ನಿಗದಿಯಾಗಿದ್ದು,  ಫೆ.೧೯ರಂದು ಚುನಾವಣೆ ನಿಗದಿಯಾಗಿದೆ.

ಪಟ್ಟಣದ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷರ ಅವಧಿ ಪೂರ್ಣಗೊಂಡು ಒಂದು ವರ್ಷ ಕಳೆಯುತ್ತಿದ್ದರೂ ಸರ್ಕಾರ ಮೀಸಲಾತಿಯನ್ನು ಪ್ರಕಟಿಸಿರಲಿಲ್ಲ. ೮ ತಿಂಗಳುಗಳ ಹಿಂದೆ ಪ್ರಕಟಿಸಿದ ಮೀಸಲಾತಿಯ ಪ್ರಕಾರ ಮತ್ತೊಮ್ಮೆ ಅಧ್ಯಕ್ಷ ಸ್ಥಾನ ಎಸ್‌ಟಿ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ನಿಗದಿಯಾಗಿತ್ತು. ಆಗ ಸಾಮಾಜಿಕ ನ್ಯಾಯ ಬೇಕೆಂದು ಪುರಸಭೆಯ ಕಾಂಗ್ರೆಸ್ ಪಕ್ಷದ ಸದಸ್ಯ ಮಧುಕುಮಾರ್ ಹೈಕೋರ್ಟ್ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆದು, ಕೋರ್ಟ್ ಸರ್ಕಾರ ಪ್ರಕಟಿಸಿರುವ ಮೀಸಲಾತಿ ಸರಿ ಇದೆ ಎಂದು ಪುರಸಭಾ ಸದಸ್ಯರ ಅರ್ಜಿಯನ್ನು ವಜಾ ಮಾಡಿದೆ.

ಈ ಹಿನ್ನೆಲೆಯಲ್ಲಿ ತಹಸಿಲ್ದಾರ್ ಶ್ರೀನಿವಾಸ ಅವರು ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯನ್ನು ಫೆ.೧೯ಕ್ಕೆ ನಿಗದಿ ಮಾಡಿ ಆದೇಶ ಹೊರಡಿಸಿದ್ದಾರೆ

ಪುರಸಭೆ ಮುಖ್ಯಾಧಿಕಾರಿ ಸುರೇಶ್ ಪುರ ಸಭೆಯ ೨೩ ಸದಸ್ಯರು, ಸಂಸದರು, ಶಾಸಕರಿಗೆ ಚುನಾವಣಾ ನೋಟಿಸ್ ನೀಡಿದ್ದಾರೆ. ಒಂದು ವರ್ಷದಿಂದ ಪುರಸಭೆಗೆ ಅಧ್ಯಕ್ಷ,  ಉಪಾಧ್ಯಕ್ಷರು ಇಲ್ಲದಿದ್ದರಿಂದ  ಆಡಳಿತ ಅಧಿಕಾರಿಯಾಗಿ ಹುಣಸೂರಿನ ಉಪ ವಿಭಾಗಾಧಿಕಾರಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ,  ಒಂದು ಬಾರಿ ಕೂಡ ಪುರಸಭೆ ಅಭಿವೃದ್ಧಿಯ ವಿಚಾರಕ್ಕೆ ಸಂಬಂಧಿಸಿದಂತೆ, ಕಾಮಗಾರಿ ಗಳನ್ನು ಚುರುಕುಗೊಳಿಸಲು, ಮೂಲಸೌಕರ್ಯ ಗಳನ್ನು ಕಲ್ಪಿಸುವ ಬಗ್ಗೆ ಸದಸ್ಯರು ಮತ್ತು ಅಧಿಕಾರಿಗಳೊಡನೆ ಸಭೆ ನಡೆಸದ ಹಿನ್ನೆಲೆಯಲ್ಲಿ ಪುರಸಭೆ ವ್ಯಾಪ್ತಿಯಲ್ಲಿ ಸಮಸ್ಯೆಗಳು ಹಾಗೆಯೇ ಇದ್ದವು.

ನೂತನ ಆಡಳಿತ ಮಂಡಳಿಯ ಅಧಿಕಾರ ಅವಧಿ ೮ ತಿಂಗಳುಗಳು ಮಾತ್ರ ಇರುವುದರಿಂದ ಪಟ್ಟಣದ ಅಭಿವೃದ್ಧಿಗೆ ಬಹಳಷ್ಟು ಶ್ರಮವಹಿಸಿ ಕೆಲಸ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.

” ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯನ್ನು ಫೆ.೧೯ರಂದು ನಿಗದಿಪಡಿಸಿದ್ದು,  ಚುನಾವಣೆ ನಡೆಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.  ಸಂಬಂಧಪಟ್ಟವರಿಗೆ ಚುನಾವಣೆಗೆ ಆಗಮಿಸುವಂತೆ ನೋಟಿಸ್ ನೀಡಲಾಗಿದ್ದು ಚುನಾವಣಾಧಿಕಾರಿಯಾಗಿ ತಹಸಿಲ್ದಾರ್ ಶ್ರೀನಿವಾಸ್ ಅವರು ಕರ್ತವ್ಯ ನಿರ್ವಹಿಸಲಿದ್ದಾರೆ.  ಸರ್ಕಾರ ನಿಗದಿಪಡಿಸಿರುವ ಮೀಸಲಾತಿಯಡಿ ಚುನಾವಣೆ ನಡೆಯಲಿದೆ.”

 -ಸುರೇಶ್, ಪುರಸಭೆ ಮುಖ್ಯಾಧಿಕಾರಿ

” ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಪುರಸಭೆ ಅಧ್ಯಕ್ಷರಾಗಿ ಕೆಲಸ ನಿರ್ವಹಿಸುವ ಅವಕಾಶವನ್ನು ಮೀಸಲಾತಿ ಮೂಲಕ ಸರ್ಕಾರ ಮಾಡಿಕೊಟ್ಟಿರುವುದು ನಮ್ಮಂತಹ ಮಹಿಳೆಯರಿಗೆ ಸಂತಸ ತಂದಿದೆ. ಒಂದು ವರ್ಷದಿಂದ ಅಧ್ಯಕ್ಷರು, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯದೆ ವಾರ್ಡುಗಳಲ್ಲಿ ಬಹಳಷ್ಟು ಮೂಲಸೌಕರ್ಯಗಳ ಸಮಸ್ಯೆ ಉಂಟಾಗಿತ್ತು.”

 -ಸರೋಜಮ್ಮ ಚಿಕ್ಕಣ್ಣ, ಪುರಸಭಾ ಸದಸ್ಯರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

3 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

3 hours ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

3 hours ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

3 hours ago

ಆಂತರಿಕ ಕ್ಷೋಭೆಯಿಂದ ಭಾರತ ರಕ್ಷಿಸಿದ ಅಂಬೇಡ್ಕರ್

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…

3 hours ago

ಕೊಡಗು ಜಿಲ್ಲೆಯಲ್ಲೂ ಹೆಚ್ಚುತ್ತಿರುವ ತಾಪಮಾನ

ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ  ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…

3 hours ago