Andolana originals

ಬಿಸಿಲು, ಮಳೆಯ ಹೊಡೆತಕ್ಕೆ ತಲುಪಿದ ಪುರಸಭೆ ವಾಹನಗಳು

ಮಂಜು ಕೋಟೆ

ಕೋಟೆ: ಲಕ್ಷಾಂತರ ರೂ. ವೆಚ್ಚದಲ್ಲಿ ಶೆಡ್ ನಿರ್ಮಿಸಿದ್ದರೂ ಪುರಸಭೆ ಎದುರು ನಿಲುಗಡೆ 

ಎಚ್.ಡಿ.ಕೋಟೆ: ಸಾರ್ವಜನಿಕರ ತೆರಿಗೆ ಹಣ ಮತ್ತು ಸರ್ಕಾರದ ಅನುದಾನದಿಂದ ಸಾರ್ವಜನಿಕ ಉಪಯೋಗಕ್ಕೆ ನೀಡಲಾಗಿರುವ ಕೋಟ್ಯಂತರ ರೂ. ಬೆಲೆ ಬಾಳುವ ವಾಹನಗಳು ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ಪುರಸಭೆ ಕಚೇರಿ ಮುಂಭಾಗದಲ್ಲಿ ಬಿಸಿಲು-ಮಳೆಯ ಹೊಡೆತಕ್ಕೆ ಸಿಲುಕಿವೆ.

ಪುರಸಭೆ ವ್ಯಾಪ್ತಿಯಲ್ಲಿರುವ ನಿವಾಸಿಗಳ ಮನೆಗಳ ಕಸಗಳನ್ನು ತೆಗೆದುಕೊಂಡು ಹೋಗಲು ಹಾಗೂ ಇನ್ನಿತರ ಕೆಲಸ ಕಾರ್ಯಗಳಿಗಾಗಿ ಇತ್ತೀಚೆಗೆ ಟಿಪ್ಪರ್, ಟ್ರಾಕ್ಟರ್, ಜೆಸಿಬಿಗಳನ್ನು ಪುರಸಭೆ ಮತ್ತು ಸರ್ಕಾರದ ಮೂಲಕ ನೀಡಲಾಗಿದೆ.

ಇವುಗಳ ಕೆಲಸ ಮುಗಿದ ಬಳಿಕ ಸುರಕ್ಷಿತವಾದ ಜಾಗದಲ್ಲಿ ಇರಿಸಲು ೧೫ನೇ ಹಣಕಾಸು ಯೋಜನೆಯಡಿ ಪುರಸಭೆಯಿಂದ ಶಿವಾಜಿ ರಸ್ತೆಯ ತಾರಕಾ ನದಿ ಸಮೀಪದಲ್ಲಿ ೩೦ ಲಕ್ಷ ರೂ. ವೆಚ್ಚದಲ್ಲಿ ೩ ವರ್ಷಗಳ ಹಿಂದೆ ಶೆಡ್ ನಿರ್ಮಾಣ ಮಾಡಲಾಗಿತ್ತು. ಆದರೆ, ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಬೇಜವಾಬ್ದಾರಿತನದಿಂದ ಈ ಶೆಡ್ ಸದುಪಯೋಗವಾಗದೆ ಪಾಳು ಬಿದ್ದು ಅಕ್ರಮ ಚಟುವಟಿಕೆಗಳ ತಾಣವಾಗಿದೆ. ಜೊತೆಗೆ ಕೆಟ್ಟಿರುವ ಕೆಲ ವಾಹನಗಳಿಗೆ ಆಶ್ರಯ ನೀಡುತ್ತಿದೆ.

ಕೆಲ ವರ್ಷಗಳ ಹಿಂದೆ ಸರ್ಕಾರದಿಂದ ನೀಡಿದ ೫ ಕಸ ವಿಲೇವಾರಿ ಟಿಪ್ಪರ್‌ಗಳು ಉತ್ತಮ ಗುಣಮಟ್ಟದಿಂದ ಕೂಡಿರದೆ ಸಮರ್ಪಕವಾಗಿ ನಿರ್ವಹಣೆಯಾಗದೆ ಕೆಲವೇ ವರ್ಷಗಳಲ್ಲಿ ಕಾರ್ಯನಿರ್ವಹಿಸ ದಂತಹ ಸ್ಥಿತಿಗೆ ಬಂದಿವೆ. ಹೀಗಾಗಿ ಕೋಟ್ಯಂತರ ರೂ. ಮೌಲ್ಯದ ವಾಹನಗಳು ಮೂಲೆ ಸೇರಿಕೊಂಡಿವೆ.

ಈ ವಾಹನಗಳ ಕೊರತೆಯಿಂದಾಗಿ ಸಮರ್ಪಕವಾಗಿ ಕಸ ವಿಲೇವಾರಿಯಾಗದೆ ಹಲವಾರು ತಿಂಗಳುಗಳಿಂದ ಜನರು ಪರದಾಡುತ್ತಿದ್ದರು. ಇತ್ತೀಚೆಗೆ ನೀಡಿರುವ ಹೊಸ ವಾಹನಗಳನ್ನು ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಶೆಡ್‌ನಲ್ಲಿ ಇರಿಸ ಬೇಕಿದ್ದ ಪುರಸಭೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿರುವುದರಿಂದ ಪ್ರತಿನಿತ್ಯವೂ ಪುರಸಭೆ ಮುಂಭಾಗದಲ್ಲಿ ಕೆಲಸ ಮುಗಿದ ನಂತರ ವಾಹನಗಳನ್ನು ನಿಲ್ಲಿಸಲಾಗುತ್ತಿದೆ. ಮಳೆ, ಬಿಸಿಲಿನಲ್ಲಿ ವಾಹನಗಳು ನಿಲ್ಲುತ್ತಿದ್ದು, ಕೆಟ್ಟು ನಿಂತರೆ ಮತ್ತೆ ಜನರ ತೆರಿಗೆ ಹಣದಿಂದಲೇ ದುರಸ್ತಿ ಪಡಿಸಬೇಕಾದ ಅನಿವಾರ್ಯತೆ ಎದುರಾಗಲಿದೆ.

” ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಜನಪರ ಕಾಳಜಿ ಇದ್ದಿದ್ದರೆ ಪುರಸಭೆ ವ್ಯಾಪ್ತಿಯಲ್ಲಿ ಇಂತಹ ಸಮಸ್ಯೆಗಳು ಎದುರಾಗುತ್ತಿರಲಿಲ್ಲ. ಸಮಸ್ಯೆಗಳ ನಿವಾರಣೆಗೆ ನಾನೂ ಸೇರಿ ಕೆಲ ಸದಸ್ಯರು ಎಷ್ಟೇ ಹೋರಾಟ ಮಾಡಿದರೂ ನಿಯಂತ್ರಣವಾಗುತ್ತಿಲ್ಲ.”

-ಐಡಿಯಾ ವೆಂಕಟೇಶ್, ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ

ಆಂದೋಲನ ಡೆಸ್ಕ್

Recent Posts

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

36 mins ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

3 hours ago

ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಪ್ರವಾಸಿ ಮಹಿಳೆ ಸಾವು

ಕೊಡಗು: ಎಲಿಫೆಂಟ್‌ ಬಾತಿಂಗ್‌ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…

5 hours ago

ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿ: ತುರ್ತು ಪರಿಸ್ಥಿತಿ ಘೋಷಿಸಿದ WHO

ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…

5 hours ago

ತಾಯಿಯನ್ನೇ ಕೊಲೆಗೈದ ಪಾಪಿ ಮಗ

ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…

7 hours ago

ಹನೂರು| ರಸ್ತೆ ದುರಸ್ತಿಗೆ ಮಾರ್ಟಳ್ಳಿ ಗ್ರಾಮಸ್ಥರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…

7 hours ago