Andolana originals

ಬಿಸಿಲು, ಮಳೆಯ ಹೊಡೆತಕ್ಕೆ ತಲುಪಿದ ಪುರಸಭೆ ವಾಹನಗಳು

ಮಂಜು ಕೋಟೆ

ಕೋಟೆ: ಲಕ್ಷಾಂತರ ರೂ. ವೆಚ್ಚದಲ್ಲಿ ಶೆಡ್ ನಿರ್ಮಿಸಿದ್ದರೂ ಪುರಸಭೆ ಎದುರು ನಿಲುಗಡೆ 

ಎಚ್.ಡಿ.ಕೋಟೆ: ಸಾರ್ವಜನಿಕರ ತೆರಿಗೆ ಹಣ ಮತ್ತು ಸರ್ಕಾರದ ಅನುದಾನದಿಂದ ಸಾರ್ವಜನಿಕ ಉಪಯೋಗಕ್ಕೆ ನೀಡಲಾಗಿರುವ ಕೋಟ್ಯಂತರ ರೂ. ಬೆಲೆ ಬಾಳುವ ವಾಹನಗಳು ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ಪುರಸಭೆ ಕಚೇರಿ ಮುಂಭಾಗದಲ್ಲಿ ಬಿಸಿಲು-ಮಳೆಯ ಹೊಡೆತಕ್ಕೆ ಸಿಲುಕಿವೆ.

ಪುರಸಭೆ ವ್ಯಾಪ್ತಿಯಲ್ಲಿರುವ ನಿವಾಸಿಗಳ ಮನೆಗಳ ಕಸಗಳನ್ನು ತೆಗೆದುಕೊಂಡು ಹೋಗಲು ಹಾಗೂ ಇನ್ನಿತರ ಕೆಲಸ ಕಾರ್ಯಗಳಿಗಾಗಿ ಇತ್ತೀಚೆಗೆ ಟಿಪ್ಪರ್, ಟ್ರಾಕ್ಟರ್, ಜೆಸಿಬಿಗಳನ್ನು ಪುರಸಭೆ ಮತ್ತು ಸರ್ಕಾರದ ಮೂಲಕ ನೀಡಲಾಗಿದೆ.

ಇವುಗಳ ಕೆಲಸ ಮುಗಿದ ಬಳಿಕ ಸುರಕ್ಷಿತವಾದ ಜಾಗದಲ್ಲಿ ಇರಿಸಲು ೧೫ನೇ ಹಣಕಾಸು ಯೋಜನೆಯಡಿ ಪುರಸಭೆಯಿಂದ ಶಿವಾಜಿ ರಸ್ತೆಯ ತಾರಕಾ ನದಿ ಸಮೀಪದಲ್ಲಿ ೩೦ ಲಕ್ಷ ರೂ. ವೆಚ್ಚದಲ್ಲಿ ೩ ವರ್ಷಗಳ ಹಿಂದೆ ಶೆಡ್ ನಿರ್ಮಾಣ ಮಾಡಲಾಗಿತ್ತು. ಆದರೆ, ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಬೇಜವಾಬ್ದಾರಿತನದಿಂದ ಈ ಶೆಡ್ ಸದುಪಯೋಗವಾಗದೆ ಪಾಳು ಬಿದ್ದು ಅಕ್ರಮ ಚಟುವಟಿಕೆಗಳ ತಾಣವಾಗಿದೆ. ಜೊತೆಗೆ ಕೆಟ್ಟಿರುವ ಕೆಲ ವಾಹನಗಳಿಗೆ ಆಶ್ರಯ ನೀಡುತ್ತಿದೆ.

ಕೆಲ ವರ್ಷಗಳ ಹಿಂದೆ ಸರ್ಕಾರದಿಂದ ನೀಡಿದ ೫ ಕಸ ವಿಲೇವಾರಿ ಟಿಪ್ಪರ್‌ಗಳು ಉತ್ತಮ ಗುಣಮಟ್ಟದಿಂದ ಕೂಡಿರದೆ ಸಮರ್ಪಕವಾಗಿ ನಿರ್ವಹಣೆಯಾಗದೆ ಕೆಲವೇ ವರ್ಷಗಳಲ್ಲಿ ಕಾರ್ಯನಿರ್ವಹಿಸ ದಂತಹ ಸ್ಥಿತಿಗೆ ಬಂದಿವೆ. ಹೀಗಾಗಿ ಕೋಟ್ಯಂತರ ರೂ. ಮೌಲ್ಯದ ವಾಹನಗಳು ಮೂಲೆ ಸೇರಿಕೊಂಡಿವೆ.

ಈ ವಾಹನಗಳ ಕೊರತೆಯಿಂದಾಗಿ ಸಮರ್ಪಕವಾಗಿ ಕಸ ವಿಲೇವಾರಿಯಾಗದೆ ಹಲವಾರು ತಿಂಗಳುಗಳಿಂದ ಜನರು ಪರದಾಡುತ್ತಿದ್ದರು. ಇತ್ತೀಚೆಗೆ ನೀಡಿರುವ ಹೊಸ ವಾಹನಗಳನ್ನು ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಶೆಡ್‌ನಲ್ಲಿ ಇರಿಸ ಬೇಕಿದ್ದ ಪುರಸಭೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿರುವುದರಿಂದ ಪ್ರತಿನಿತ್ಯವೂ ಪುರಸಭೆ ಮುಂಭಾಗದಲ್ಲಿ ಕೆಲಸ ಮುಗಿದ ನಂತರ ವಾಹನಗಳನ್ನು ನಿಲ್ಲಿಸಲಾಗುತ್ತಿದೆ. ಮಳೆ, ಬಿಸಿಲಿನಲ್ಲಿ ವಾಹನಗಳು ನಿಲ್ಲುತ್ತಿದ್ದು, ಕೆಟ್ಟು ನಿಂತರೆ ಮತ್ತೆ ಜನರ ತೆರಿಗೆ ಹಣದಿಂದಲೇ ದುರಸ್ತಿ ಪಡಿಸಬೇಕಾದ ಅನಿವಾರ್ಯತೆ ಎದುರಾಗಲಿದೆ.

” ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಜನಪರ ಕಾಳಜಿ ಇದ್ದಿದ್ದರೆ ಪುರಸಭೆ ವ್ಯಾಪ್ತಿಯಲ್ಲಿ ಇಂತಹ ಸಮಸ್ಯೆಗಳು ಎದುರಾಗುತ್ತಿರಲಿಲ್ಲ. ಸಮಸ್ಯೆಗಳ ನಿವಾರಣೆಗೆ ನಾನೂ ಸೇರಿ ಕೆಲ ಸದಸ್ಯರು ಎಷ್ಟೇ ಹೋರಾಟ ಮಾಡಿದರೂ ನಿಯಂತ್ರಣವಾಗುತ್ತಿಲ್ಲ.”

-ಐಡಿಯಾ ವೆಂಕಟೇಶ್, ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

7 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

7 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

7 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

7 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

7 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

7 hours ago