Andolana originals

ಬರಿಗೈಯಲ್ಲಿ ಚರಂಡಿ ಸ್ವಚ್ಛ ಮಾಡಿದ ಪೌರಕಾರ್ಮಿಕರು

ನಂಜನಗೂಡು: ಸ್ವಚ್ಛತೆಯ ಮೂಲಕವೇ ಗ್ರಾಮದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರಿಗೆ ಸರ್ಕಾರ ಅಗತ್ಯ ರಕ್ಷಣಾತ್ಮಕ ಸೌಲಭ್ಯಗಳನ್ನು ನೀಡುವುದರ ಜೊತೆ ಚರಂಡಿಗಳನ್ನು ಸ್ವಚ್ಛ ಮಾಡುವಾಗ ಕೈಗವಸು, ಶೂ ಹಾಕಿಕೊಂಡೇ ಚರಂಡಿಗೆ ಇಳಿಯಬೇಕು ಎಂದು ಕಟ್ಟು ನಿಟ್ಟಿನ ಆದೇಶವನ್ನೂ ನೀಡಿದೆ.

ಆದರೆ ವಾರ್ಷಿಕ ಲಕ್ಷಾಂತರ ರೂ. ಅನುದಾನವಿರುವ ತಾಲ್ಲೂಕಿನ ದುಗ್ಗಹಳ್ಳಿ ಗ್ರಾಪಂ ತನ್ನ ಪೌರ ಕಾರ್ಮಿಕರಿಗೆ ಮಾಸ್ಕ್, ಕೈಗವಸು, ಶೂ ಸೇರಿದಂತೆ ಕನಿಷ್ಠ ಸೌಲಭ್ಯಗಳನ್ನೂ ನೀಡದೆ ಸರ್ಕಾರದ ಆದೇಶವನ್ನು ಗಾಳಿಗೆ ತೂರಿ ಅಮಾನವೀಯವಾಗಿ ಸ್ವಚ್ಛತಾ ಕೆಲಸವನ್ನು ಮಾಡಿಸುತ್ತಿರುವುದು ನಾಗರಿಕ ಸಮಾಜವೇ ತಲೆ ತಗ್ಗಿಸುವಂತೆ ಮಾಡಿದೆ.

೧೫ನೇ ಹಣಕಾಸು ಯೋಜನೆ ಕೇವಲ ದಾಖಲೆಗೆ ಮಾತ್ರ ಸೀಮಿತವಾಗಿದೆ ಎಂಬ ಆರೋಪಕ್ಕೆ ದುಗ್ಗಹಳ್ಳಿ ಗ್ರಾಪಂ ಕಾರ್ಯವೈಖರಿ ಇಂಬು ಕೊಟ್ಟಂತಾಗಿದೆ.

ಅನೇಕ ತಿಂಗಳುಗಳಿಂದ ಸ್ವಚ್ಛಗೊಳಿಸದೇ ಕೊಳೆತು ದುರ್ನಾತ ಬೀರುತ್ತಿರುವ ಗ್ರಾಮ ಪಂಚಾಯಿತಿಯ ಮುಖ್ಯ ರಸ್ತೆಯಲ್ಲಿ ನಾಲ್ಕು ಅಡಿ ಆಳದ ಚರಂಡಿಗಿಳಿಸಿ ತ್ಯಾಜ್ಯವನ್ನು ಬರಿಗೈನಲ್ಲೇ ಸ್ವಚ್ಛಗೊಳಿಸುತ್ತಿರುವುದು ದುಗ್ಗಹಳ್ಳಿ ಪಂಚಾಯಿತಿಯ ಅಧೋಗತಿಗೆ ಸಾಕ್ಷಿಯಾಗಿದೆ. ಸರ್ಕಾರದ ಆದೇಶವನ್ನು ಗಾಳಿಗೆ ತೂರಿ ಪೌರ ಕಾರ್ಮಿಕರನ್ನು ಬರಿಗೈನಲ್ಲೆ ಚರಂಡಿಗಿಳಿಸಿರುವ ಗ್ರಾಪಂ ಅಧ್ಯಕ್ಷರು, ಕಾರ್ಯದರ್ಶಿಗಳ ವಿರುದ್ಧ ತಾಲ್ಲೂಕು ಆಡಳಿತ ಈಗಲಾದರೂ ಕ್ರಮ ಕೈಗೊಳ್ಳಬೇಕಿದೆ ಎನ್ನುತ್ತಾರೆ ದುಗ್ಗಳ್ಳಿ ಗ್ರಾಮ ಪಂಚಾಯಿತಿಯ ಜನತೆ.

” ಪಂಚಾಯಿತಿಯ ಸ್ವಚ್ಛತಾ ಕಾರ್ಮಿಕರಿಗೆ ಕನಿಷ್ಠ ರಕ್ಷಣಾ ಸೌಲಭ್ಯ ಗಳನ್ನೇ ನೀಡದೆ ಅವರನ್ನು ಚರಂಡಿಗೆ ಇಳಿಸುವುದು ಅಪರಾಧ. ಇಂತಹ ಹೀನ ಕೆಲಸ ಮಾಡಿಸಿದ ಆ ಪಂಚಾ ಯಿತಿಯ ಅಭಿವೃದ್ಧಿ ಅಧಿಕಾರಿ ಹಾಗೂ ಅಧ್ಯಕ್ಷರ ವಿರುದ್ಧ ತಾಪಂ ಇಒ ಹಾಗೂ ಜಿಪಂ ಸಿಇಒ ತಕ್ಷಣ ಕ್ರಮ ಕೈಗೊಂಡು ಪಾಠ ಕಲಿಸಬೇಕು.”

-ಡಿ.ಆರ್.ರಾಜು, ರಾಜ್ಯ ಪೌರಕಾರ್ಮಿಕರ ಮಹಾಸಂಘದ ರಾಜ್ಯಾಧ್ಯಕ್ಷ 

” ಹಬ್ಬಗಳು ಬಂದಿದ್ದರಿಂದ ಎಲ್ಲ ಗ್ರಾಮಗಳ ಚರಂಡಿ ಕ್ಲೀನ್ ಮಾಡಿಸುವ ಕೆಲಸ ಮಾಡಬೇಕಾಗಿದೆ. ಹಾಗಾಗಿ, ಗುತ್ತಿಗೆಗೆ ಚರಂಡಿ ಕ್ಲೀನ್ ಮಾಡುವ ಕೆಲಸವನ್ನು ನೀಡಲಾಗಿದೆ. ಗ್ರಾಪಂನಲ್ಲಿ ಒಬ್ಬರೇ ಪೌರ ಕಾರ್ಮಿಕರು ಇರುವುದು. ಅವರ ಬದಲಿಗೆ ಅವರ ಮಗ, ಗುತ್ತಿಗೆದಾರರ ಕಡೆಯುವರು ಕೆಲಸ ಮಾಡುತ್ತಿದ್ದರು. ಬೂಟು, ಕೈಗವಸು ಇಲ್ಲದೆ ಕೆಲಸ ಮಾಡುತ್ತಿರುವ ಬಗ್ಗೆ ದೂರು ಕೇಳಿ ಬಂದಿದ್ದರಿಂದ ಅವನ್ನು ಕೊಡಿಸಲು ವ್ಯವಸ್ಥೆ ಮಾಡಲಾಗಿದೆ. ಗುರುವಾರದಿಂದಲೇ ಬೂಟು, ಕೈಗವಸು ಹಾಕಿ ಕೆಲಸ ಮಾಡಲಿದ್ದಾರೆ.”

ಕರಿಯಪ್ಪ, ಪ್ರಭಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ

 

 

ಆಂದೋಲನ ಡೆಸ್ಕ್

Recent Posts

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

2 hours ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

2 hours ago

ಅವನತಿಯತ್ತ ಸಾಗಿದ ಅಗಸನ ಕೆರೆಯ ಪುನಶ್ಚೇತನ

ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ  ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…

2 hours ago

2 ವರ್ಷಗಳಿಂದ ಕಬ್ಬು ಅರೆಯದ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ

ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ  ಹೊಸೂರು: ಮಾಜಿ ಶಾಸಕ ದಿವಂಗತ…

2 hours ago

ಸಾಹಿತ್ಯದಲ್ಲೂ ಹೋರಾಟದ ಛಾಪು ಮೂಡಿಸಿದ ಮುಳ್ಳೂರು: ಎಸ್.ಜಿ.ಸಿದ್ದರಾಮಯ್ಯ ಬಣ್ಣನೆ

ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…

3 hours ago