Andolana originals

ಓದುಗರ ಪತ್ರ: ಬರ್ಬರ ಹತ್ಯೆಗಳಿಗೆ ಕೊನೆ ಎಂದು?

ಶ್ರದ್ಧಾ ವಾಕರ್ ಎಂಬ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ಇರಿಸಿದ್ದ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಪ್ರೇಯಸಿಯನ್ನೇ ಇಷ್ಟೊಂದು ಅಮಾನುಷವಾಗಿ ಕೊಲೆ ಮಾಡಿದ ಈ ಪ್ರಕರಣ ಭಾರೀ ಸಂಚಲನವನ್ನೇ ಮೂಡಿಸಿತ್ತು. ಇಂತಹ ಪ್ರಕರಣ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಈಗ ಬೆಂಗಳೂರಿನಲ್ಲಿಯೂ ಅಂತಹದ್ದೇ ಭೀಕರ ಹತ್ಯೆ ನಡೆದಿರುವುದು ನಾಗರಿಕ ಸಮಾಜಕ್ಕೆ ಆಘಾತವನ್ನು ಉಂಟು ಮಾಡಿದೆ.

ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ, ಕೊಲೆ ಪ್ರಕರಣಗಳು ಹೆಚ್ಚುತ್ತಿವೆ. ಕೌಟುಂಬಿಕ ಕಲಹಗಳಿರಲಿ, ಪ್ರೀತಿ-ಪ್ರೇಮದ ಪ್ರಕರಣಗಳಿರಲಿ ಅಲ್ಲಿ ಬಲಿ ಯಾಗುವುದು ಮಾತ್ರ ಹೆಣ್ಣು ಮಕ್ಕಳಾಗಿರುತ್ತಾರೆ. ಸಣ್ಣ ಪುಟ್ಟ ಮನಸ್ತಾಪಗಳಿಗೂ ಯುವಕರು ಕೊಲೆ ಮಾಡುವಷ್ಟರ ಮಟ್ಟಿಗೆ ಹೋಗುತ್ತಾರೆ ಎಂದರೆ ಅವರ ಮನಸ್ಥಿತಿ ಎಂತಹದ್ದು ಎಂಬುದು ತಿಳಿಯುತ್ತದೆ. ಬೆಂಗಳೂರಿನಲ್ಲಿ ಈಗ ಅಂತಹದ್ದೇ ಕೊಲೆ ನಡೆದಿದೆ. ಮಹಾಲಕ್ಷಿ ಎಂಬ ಮಹಿಳೆಯನ್ನು ೫೦ಕ್ಕೂ ಅಽಕ ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟು ಪಾತಕಿ ತನ್ನ ಕ್ರೌರ್ಯವನ್ನು ಮೆರೆದಿದ್ದಾನೆ. ದೇಶದಲ್ಲಿ ಈ ಹಿಂದೆ ನಡೆದಿದ್ದ ಕೊಲೆಯನ್ನೇ ಆಧರಿಸಿ ಈ ಪಾತಕಿ ಕೊಲೆ ಮಾಡಿದ್ದಾನೆ ಎಂದರೆ ಆತನಿಗೆ ಕಾನೂನಿನ ಭಯವಿಲ್ಲ ಎಂಬುದು ತಿಳಿಯುತ್ತದೆ. ಶ್ರದ್ಧಾ ವಾಕರ್ ಪ್ರಕರಣದ ಆರೋಪಿಗೆ ಅಂದೇ ಕಠಿಣ ಶಿಕ್ಷೆಯಾಗಿದ್ದರೆ ಇಂದು ಇಂತಹ ಘಟನೆಗಳು ಮರುಕಳಿಸುತ್ತಿರಲಿಲ್ಲ. ಆದ್ದರಿಂದ ಸರ್ಕಾರ ಕೊಲೆ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಕೃತ್ಯಗಳು ನಡೆಯದಂತೆ ಎಚ್ಚರವಹಿಸಬೇಕು.

 

andolana

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

9 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

17 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

17 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

17 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

20 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

20 hours ago