Andolana originals

ಓದುಗರ ಪತ್ರ: ಬರ್ಬರ ಹತ್ಯೆಗಳಿಗೆ ಕೊನೆ ಎಂದು?

ಶ್ರದ್ಧಾ ವಾಕರ್ ಎಂಬ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ಇರಿಸಿದ್ದ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಪ್ರೇಯಸಿಯನ್ನೇ ಇಷ್ಟೊಂದು ಅಮಾನುಷವಾಗಿ ಕೊಲೆ ಮಾಡಿದ ಈ ಪ್ರಕರಣ ಭಾರೀ ಸಂಚಲನವನ್ನೇ ಮೂಡಿಸಿತ್ತು. ಇಂತಹ ಪ್ರಕರಣ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಈಗ ಬೆಂಗಳೂರಿನಲ್ಲಿಯೂ ಅಂತಹದ್ದೇ ಭೀಕರ ಹತ್ಯೆ ನಡೆದಿರುವುದು ನಾಗರಿಕ ಸಮಾಜಕ್ಕೆ ಆಘಾತವನ್ನು ಉಂಟು ಮಾಡಿದೆ.

ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ, ಕೊಲೆ ಪ್ರಕರಣಗಳು ಹೆಚ್ಚುತ್ತಿವೆ. ಕೌಟುಂಬಿಕ ಕಲಹಗಳಿರಲಿ, ಪ್ರೀತಿ-ಪ್ರೇಮದ ಪ್ರಕರಣಗಳಿರಲಿ ಅಲ್ಲಿ ಬಲಿ ಯಾಗುವುದು ಮಾತ್ರ ಹೆಣ್ಣು ಮಕ್ಕಳಾಗಿರುತ್ತಾರೆ. ಸಣ್ಣ ಪುಟ್ಟ ಮನಸ್ತಾಪಗಳಿಗೂ ಯುವಕರು ಕೊಲೆ ಮಾಡುವಷ್ಟರ ಮಟ್ಟಿಗೆ ಹೋಗುತ್ತಾರೆ ಎಂದರೆ ಅವರ ಮನಸ್ಥಿತಿ ಎಂತಹದ್ದು ಎಂಬುದು ತಿಳಿಯುತ್ತದೆ. ಬೆಂಗಳೂರಿನಲ್ಲಿ ಈಗ ಅಂತಹದ್ದೇ ಕೊಲೆ ನಡೆದಿದೆ. ಮಹಾಲಕ್ಷಿ ಎಂಬ ಮಹಿಳೆಯನ್ನು ೫೦ಕ್ಕೂ ಅಽಕ ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟು ಪಾತಕಿ ತನ್ನ ಕ್ರೌರ್ಯವನ್ನು ಮೆರೆದಿದ್ದಾನೆ. ದೇಶದಲ್ಲಿ ಈ ಹಿಂದೆ ನಡೆದಿದ್ದ ಕೊಲೆಯನ್ನೇ ಆಧರಿಸಿ ಈ ಪಾತಕಿ ಕೊಲೆ ಮಾಡಿದ್ದಾನೆ ಎಂದರೆ ಆತನಿಗೆ ಕಾನೂನಿನ ಭಯವಿಲ್ಲ ಎಂಬುದು ತಿಳಿಯುತ್ತದೆ. ಶ್ರದ್ಧಾ ವಾಕರ್ ಪ್ರಕರಣದ ಆರೋಪಿಗೆ ಅಂದೇ ಕಠಿಣ ಶಿಕ್ಷೆಯಾಗಿದ್ದರೆ ಇಂದು ಇಂತಹ ಘಟನೆಗಳು ಮರುಕಳಿಸುತ್ತಿರಲಿಲ್ಲ. ಆದ್ದರಿಂದ ಸರ್ಕಾರ ಕೊಲೆ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಕೃತ್ಯಗಳು ನಡೆಯದಂತೆ ಎಚ್ಚರವಹಿಸಬೇಕು.

 

andolana

Recent Posts

‘ನಮ್ಮ ಕ್ಲಿನಿಕ್’; ಉಡಾಫೆ ಸಿಬ್ಬಂದಿಗೆ ಬ್ರೇಕ್!

ಕೆ.ಬಿ.ರಮೇಶನಾಯಕ ೨ನೇ, ೪ನೇ ಶನಿವಾರ, ಭಾನುವಾರ ಬಾಗಿಲು ಹಾಕಿದರೆ ಶಿಸ್ತುಕ್ರಮ ಮೈಸೂರು: ವಾರದ ಭಾನುವಾರವೂ ಸೇರಿದಂತೆ ಸರ್ಕಾರಿ ರಜಾ ದಿನಗಳಂದು…

2 mins ago

ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಸಂಚು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿ

ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…

13 hours ago

ವಾಟಾಳ್‌ ನಾಗರಾಜ್‌ಗೆ ಬಿಗ್‌ ರಿಲೀಫ್:‌ 10 ಕೇಸ್‌ಗಳು ವಾಪಸ್‌

ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ರಾಜ್ಯ ಸರ್ಕಾರ ರಿಲೀಫ್‌ ನೀಡಿದೆ. ವಾಟಾಳ್‌ ನಾಗರಾಜ್‌ ಮೇಲಿನ ಕೇಸ್‌ಗಳನ್ನು ಸರ್ಕಾರ ಹಿಂಪಡೆಯಲು…

14 hours ago

52 ಪ್ರಕರಣಗಳನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ: ಸಚಿವ ಪರಮೇಶ್ವರ್

ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌…

15 hours ago

ಆತ್ಮಹತ್ಯೆಯ ಹಾಟ್‌ಸ್ಪಾಟ್ ಆಗುತ್ತಿದೆ ಪ್ರಸಿದ್ದ ವೆಲ್ಲೆಸ್ಲಿ ಸೇತುವೆ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್‌ಸ್ಪಾಟ್‌ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…

15 hours ago