Andolana originals

ಓದುಗರ ಪತ್ರ: ಬರ್ಬರ ಹತ್ಯೆಗಳಿಗೆ ಕೊನೆ ಎಂದು?

ಶ್ರದ್ಧಾ ವಾಕರ್ ಎಂಬ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ಇರಿಸಿದ್ದ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಪ್ರೇಯಸಿಯನ್ನೇ ಇಷ್ಟೊಂದು ಅಮಾನುಷವಾಗಿ ಕೊಲೆ ಮಾಡಿದ ಈ ಪ್ರಕರಣ ಭಾರೀ ಸಂಚಲನವನ್ನೇ ಮೂಡಿಸಿತ್ತು. ಇಂತಹ ಪ್ರಕರಣ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಈಗ ಬೆಂಗಳೂರಿನಲ್ಲಿಯೂ ಅಂತಹದ್ದೇ ಭೀಕರ ಹತ್ಯೆ ನಡೆದಿರುವುದು ನಾಗರಿಕ ಸಮಾಜಕ್ಕೆ ಆಘಾತವನ್ನು ಉಂಟು ಮಾಡಿದೆ.

ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ, ಕೊಲೆ ಪ್ರಕರಣಗಳು ಹೆಚ್ಚುತ್ತಿವೆ. ಕೌಟುಂಬಿಕ ಕಲಹಗಳಿರಲಿ, ಪ್ರೀತಿ-ಪ್ರೇಮದ ಪ್ರಕರಣಗಳಿರಲಿ ಅಲ್ಲಿ ಬಲಿ ಯಾಗುವುದು ಮಾತ್ರ ಹೆಣ್ಣು ಮಕ್ಕಳಾಗಿರುತ್ತಾರೆ. ಸಣ್ಣ ಪುಟ್ಟ ಮನಸ್ತಾಪಗಳಿಗೂ ಯುವಕರು ಕೊಲೆ ಮಾಡುವಷ್ಟರ ಮಟ್ಟಿಗೆ ಹೋಗುತ್ತಾರೆ ಎಂದರೆ ಅವರ ಮನಸ್ಥಿತಿ ಎಂತಹದ್ದು ಎಂಬುದು ತಿಳಿಯುತ್ತದೆ. ಬೆಂಗಳೂರಿನಲ್ಲಿ ಈಗ ಅಂತಹದ್ದೇ ಕೊಲೆ ನಡೆದಿದೆ. ಮಹಾಲಕ್ಷಿ ಎಂಬ ಮಹಿಳೆಯನ್ನು ೫೦ಕ್ಕೂ ಅಽಕ ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟು ಪಾತಕಿ ತನ್ನ ಕ್ರೌರ್ಯವನ್ನು ಮೆರೆದಿದ್ದಾನೆ. ದೇಶದಲ್ಲಿ ಈ ಹಿಂದೆ ನಡೆದಿದ್ದ ಕೊಲೆಯನ್ನೇ ಆಧರಿಸಿ ಈ ಪಾತಕಿ ಕೊಲೆ ಮಾಡಿದ್ದಾನೆ ಎಂದರೆ ಆತನಿಗೆ ಕಾನೂನಿನ ಭಯವಿಲ್ಲ ಎಂಬುದು ತಿಳಿಯುತ್ತದೆ. ಶ್ರದ್ಧಾ ವಾಕರ್ ಪ್ರಕರಣದ ಆರೋಪಿಗೆ ಅಂದೇ ಕಠಿಣ ಶಿಕ್ಷೆಯಾಗಿದ್ದರೆ ಇಂದು ಇಂತಹ ಘಟನೆಗಳು ಮರುಕಳಿಸುತ್ತಿರಲಿಲ್ಲ. ಆದ್ದರಿಂದ ಸರ್ಕಾರ ಕೊಲೆ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಕೃತ್ಯಗಳು ನಡೆಯದಂತೆ ಎಚ್ಚರವಹಿಸಬೇಕು.

 

andolana

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

7 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

7 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

8 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

9 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

14 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

14 hours ago