Andolana originals

ಮೈಸೂರು ಗಾಳಿ ಕಲುಷಿತ

ಗ್ರೀನ್ ಪೀಸ್ ಇಂಡಿಯಾ ಸಂಶೋಧನಾ ವರದಿ ಬಹಿರಂಗ

ಮೈಸೂರು: ಚಾಮುಂಡಿ ಬೆಟ್ಟದ ಮಡಿಲಲ್ಲಿರುವ, ಬಂಡೀಪುರ, ನಾಗರಹೊಳೆ ಮತ್ತಿತರ ಸಮೃದ್ಧ ಅರಣ್ಯ ಪ್ರದೇಶಗಳಿಂದ ಸುತ್ತುವರಿದಿ ರುವ ಮೈಸೂರು ನಗರದ ಗಾಳಿಯ ಗುಣಮಟ್ಟ ತೀವ್ರ ಕುಸಿತ ಕಂಡಿದೆ ಎಂಬ ಆಘಾತಕಾರಿ ಸುದ್ದಿ ಗ್ರೀನ್ ಪೀಸ್ ಸಂಶೋಧನಾವರದಿಯಲ್ಲಿ ಬಹಿರಂಗಗೊಂಡಿದೆ.

ಈ ವರದಿಯು ವಾಯು ಮಾಲಿನ್ಯದಿಂದ ನಗರದ ಜನತೆಯ ಆರೋಗ್ಯದ ಮೇಲೆ ಗಂಭೀರ ಉಂಟಾಗಬಹುದಾದ ಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡಿದೆ.

ರಾಜ್ಯದ ಮೂರು ಪ್ರಮುಖ ನಗರಗಳಾದ ಬೆಂಗಳೂರು, ಮೈಸೂರು ಹಾಗೂ ಮಂಗಳೂರಿ ನಲ್ಲಿ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿ ದಿದ್ದು, ಮಾಲಿನ್ಯದ ಪ್ರಮಾಣ ಅಪಾಯಕಾರಿ ಮಟ್ಟಕ್ಕೆ ತಲುಪಿದೆ. ಈ ಕೂಡಲೇ ವಾಯು ಮಾಲಿನ್ಯವನ್ನು ತಗ್ಗಿಸಲು ಸೂಕ್ತ ಕ್ರಮ ಕೈಗೊಳ್ಳ ದಿದ್ದರೆ, ಜನರ ಆರೋಗ್ಯದ ಮೇಲೆ ಅದು ತೀವ್ರ ತೆರನಾದ ದುಷ್ಪರಿಣಾಮ ಬೀರಬಲ್ಲದು. ದಕ್ಷಿಣ ಭಾರತದ 10 ಪ್ರಮುಖ ನಗರಗಳ ಗಾಳಿಯಲ್ಲಿ ಮಾಲಿನ್ಯಕಾರಕ ಕಣಗಳಾದ ಪಿಎಂ 2.5 (ಸೂಕ್ಷ್ಮ) ಮತ್ತು ಪಿಎಂ 10 (ಅತಿಸೂಕ್ಷ್ಮಗಳ ಪ್ರಮಾಣವು ಡಬ್ಲ್ಯುಎಚ್‌ ಒ ಮಾರ್ಗಸೂಚಿ ನಿಗದಿಪಡಿಸಿದ ಸರಾಸರಿ ಮಟ್ಟ ಗಳನ್ನು ಮೀರಿದ್ದು, ಇದು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಗ್ರೀನ್‌ಸ್ ಇಂಡಿಯಾದ ‘ಸ್ಟೇರ್ ದಿ ಏರ್-2 ವರದಿಯು ಎಚ್ಚರಿಸಿದೆ. ದಕ್ಷಿಣ ಭಾರತದ ಪ್ರಮುಖ ನಗರಗಳಾದ ಬೆಂಗಳೂರು, ಬೆಂಗಳೂರು, ಮಂಗಳೂರು, ಮೈಸೂರು, ಹೈದರಾಬಾದ್, ಚೆನ್ನೈ, ವಿಶಾಖಪಟ್ಟಣ, ಕೊಚ್ಚಿ, ಅಮರಾವತಿ, ವಿಜಯವಾಡ ಮತ್ತು ಪುದುಚೇರಿಯಲ್ಲಿ ಳಿಯ ಗುಣಮಟ್ಟವನ್ನು ಈ ಸಂಸ್ಥೆ ವಿಶ್ಲೇಷಿಸುತ್ತದೆ. ಈ ಹತ್ತು ನಗರಗಳ ಪೈಕಿ ವಿಶಾಖಪಟ್ಟಣದಲ್ಲಿ ಗಾಳಿಯ ಗುಣಮಟ್ಟ ತೀವ್ರ ಕುಸಿತ ಕಂಡಿದೆ. ಇಲ್ಲಿನ ಗಾಳಿಯಲ್ಲಿ ಪಿಎಂ 2.5 ಕಣಗಳ ಪ್ರಮಾಣ ಡಬ್ಲ್ಯುಎಚ್‌ ಮಾರ್ಗಸೂಚಿ ನಿಗದಿ ಪಡಿಸಿದ ಮಾನದಂಡಕ್ಕಿಂತ 10 ಪಟ್ಟು ಮತ್ತು ಪಿಎಂ 10 ಕಣಗಳ ಪ್ರಮಾಣ 9 ಪಟ್ಟು ಹೆಚ್ಚಿರು ವುದು ದೃಢಪಟ್ಟಿದೆ. ಇದು ಗಾಳಿಯ ಗುಣಮಟ್ಟ ಮಾಪಕ ನ್ಯಾಶನಲ್ ಎಂಬಿಯಂಟ್ ಏರ್ ಕ್ವಾಲಿಟಿ ಸ್ಟಾಂಡರ್ಡ್ (ಎನ್ಎಕ್ಯೂಎಸ್) ನಿಗದಿಪಡಿಸಿದ ಮಿತಿಗಳನ್ನೂ ಮೀರಿದೆ ಎಂದು ಅಧ್ಯಯನವು ಸ್ಪಷ್ಟಪಡಿಸಿದೆ.

ಡಬ್ಲ್ಯುಎಚ್‌ ಒ ಮಾರ್ಗಸೂಚಿಗಳೊಂದಿಗೆ ಹೋಲಿಸಿದಾಗ, ಗಾಳಿಯಲ್ಲಿ ಪಿಎಂ 2.5 ಕಣಗಳ ಮಟ್ಟವು ಮಂಗಳೂರು, ಹೈದರಾಬಾದ್, ವಿಜಯವಾಡ, ಕೊಚ್ಚಿ, ಅಮರಾವತಿ ಮತ್ತು ಚೆನ್ನೈನಲ್ಲಿ 6ರಿಂದ 7 ಪಟ್ಟು ಹೆಚ್ಚಾಗಿದೆ. ಅದೇ ರೀತಿ, ಪಿಎಂ 10 ಕಣಗಳ ಮಟ್ಟವು ಬೆಂಗಳೂರು, ಮೈಸೂರು ಮತ್ತು ಪುದುಚೇರಿ ನಗರಗಳಲ್ಲಿ 4ರಿಂದ 5 ಪಟ್ಟು ಹೆಚ್ಚಾಗಿದೆ ಎಂಬುದನ್ನು ವರದಿಯು ದೃಢಪಡಿಸಿದೆ.

ಈ ಸಂಶೋಧನಾ ತಂಡದ ನೇತೃತ್ವವನ್ನು ವಹಿಸಿದ್ದ ಸಂಶೋಧಕಿ, ಆಕಾಂಕ್ಷಾಸಿಂಗ್, ಈ ಅಧ್ಯಯನವು ಗಾಳಿಯ ಗುಣಮಟ್ಟಕ್ಕೆ ಸಂಬಂಧಿಸಿ ದಂತೆ ನ್ಯಾಶನಲ್ ಎಂಬಿಯೆಂಟ್ ಏರ್ ಕ್ವಾಲಿಟಿ ಸ್ಟ್ಯಾಂಡರ್ಡ್ಸ್ (ಎನ್ ಎಎಕ್ಯೂಎಸ್) ಮಾರ್ಗಸೂಚಿ ಯಲ್ಲಿ ತಿಳಿಸಲಾದ ಮಾನದಂಡ ಗಳನ್ನು ಮೀರಿರುವ ನಗರಗಳ ಮೇಲೆ ಕೇಂದ್ರೀಕೃತವಾಗಿದೆ. ಆದರೆ, ಈಗಾಗಲೇ ನಿಗದಿಪಡಿಸಲಾದ ಮಾನದಂಡಗಳನ್ನು ಅನುಸರಿಸುತ್ತಿ ರುವ ನಗರಗಳನ್ನೂ ಈ ಅಧ್ಯ ಯನಕ್ಕೆ ಒಳಪಡಿಸುವುದು ಅಗತ್ಯ ವಾಗಿದೆ. ಈ ನಗರಗಳಲ್ಲಿನ ಗಾಳಿಯ ಗುಣಮಟ್ಟವನ್ನು ಅದು ನಿಗದಿಪಡಿ ಮಾನದಂಡಗಳನ್ನು ಮೀರುವ ಮುಂಚಿತವಾಗಿಯೇ ಕಾಪಾಡಿ ಕೊಳ್ಳು ವುದು ಅಗತ್ಯ ಎಂದು ಎಚ್ಚರಿಸಿದರು. ಈ ವರದಿಯು ಪ್ರಸ್ತುತ ವಾಯು ಮಾಲಿನ್ಯದ ಬಿಕ್ಕಟ್ಟು ಕೇವಲ ಉತ್ತರ ಭಾರತದ ನಗರಗಳನ್ನು ಮಾತ್ರವಲ್ಲ ಇಡೀ ದೇಶವನ್ನು ಒಳಗೊಳ್ಳುತ್ತಿದೆ ಎಂಬುದನ್ನು ಸಾಬೀತುಪಡಿಸಿದೆ ಎಂದರು.

• ರಾಜ್ಯದ ಪ್ರಮುಖ ನಗರಗಳಾದ ಬೆಂಗಳೂರು, ಮೈಸೂರು ಹಾಗೂ ಮಂಗಳೂರಿನಲ್ಲಿ ಗಾಳಿಯ ಗುಣಮಟ್ಟ ತೀವ್ರ ಕುಸಿತ ದಕ್ಷಿಣ ಭಾರತದ 10 ಪ್ರಮುಖ ನಗರಗಳ ಗಾಳಿಯಲ್ಲಿ ಮಾಲಿನ್ಯಕಾರಕ ಕಣಗಳ ಪ್ರಮಾಣ ಏರಿಕೆ
• ಡಬ್ಲ್ಯುಎಚ್‌ಒ ಮಾರ್ಗಸೂಚಿ ನಿಗದಿಪಡಿಸಿದ ಸರಾಸರಿ ಮಟ್ಟ ಮೀರಿ ಮಾಲಿನ್ಯದ ಪ್ರಮಾಣ ಅಪಾಯಕಾರಿ ಮಟ್ಟಕ್ಕೆ
• ಜನತೆಯ ಆರೋಗ್ಯದ ಮೇಲೆ ಉಂಟಾಗಬಹುದಾದ ಗಂಭೀರ ಪರಿಣಾಮಗಳ ಬಗ್ಗೆ ಎಚ್ಚರಿಕೆ ಸಂದೇಶ ಮಾಲಿನ್ಯಕಾರಕ ಕಣ ಪಿಎಂ 10 (ಅತಿಸೂಕ್ಷ್ಮ ) ಮಾನದಂಡ

• ವಿಶಾಖಪಟ್ಟಣದಲ್ಲಿ 9 ಪಟ್ಟು ಹೆಚ್ಚಳ
• ಬೆಂಗಳೂರು, ಮೈಸೂರು ಮತ್ತು ಪುದುಚೇರಿ ನಗರಗಳಲ್ಲಿ 4ರಿಂದ 5 ಪಟ್ಟು ಹೆಚ್ಚಳ

ಮಾಲಿನ್ಯಕಾರಕ ಕಣ ಪಿಎಂ 2.5 (ಸೂಕ್ಷ್ಮ) ಮಾನದಂಡ
• ವಿಶಾಖಪಟ್ಟಣದಲ್ಲಿ 10 ಪಟ್ಟು ಹೆಚ್ಚಳ
• ಮಂಗಳೂರು, ಹೈದರಾ ಬಾದ್, ವಿಜಯವಾಡ,
ಕೊಚ್ಚಿ, ಅಮರಾವತಿ ಮತ್ತು ಚೆನ್ನೈನಲ್ಲಿ 6 ರಿಂದ 7 ಪಟ್ಟು ಹೆಚ್ಚಳ

ಪ್ರಸ್ತುತ ವರದಿಯು ದೇಶದ ಎಲ್ಲಾ ಪ್ರಮುಖ ನಗರಗಳಲ್ಲಿನ ಮಾಲಿನ್ಯ ಕಾರಕ ಪಿಎಂ (ಪರ್ಟಿಕ್ಯುಲೇಟ್ ಮ್ಯಾಟರ್ಸ್) ಕಣಗಳ ಮಟ್ಟವು ಡಬ್ಲ್ಯುಎಚ್‌ ಒನಿಂದ ಪರಿಷ್ಕೃತ ನಿಗ ದಿತ ಮಾರ್ಗಸೂಚಿಗಳನ್ನು ಮೀರಿದೆ ಎಂಬುದನ್ನು ಸ್ಪಷ್ಟಪಡಿಸುತ್ತಿದೆ.
ಆಕಾಂಕ್ಷಾ ಸಿಂಗ್, ಸಂಶೋಧನಾ ತಂಡದ ನೇತೃತ್ವ ವಹಿಸಿದ್ದ ಸಂಶೋಧಕಿ,

ದಕ್ಷಿಣ ಭಾರತದ ನಗರಗಳಲ್ಲಿ ಅಪಾಯಕಾರಿ ಪ್ರಮಾಣದಲ್ಲಿರುವ ಮಾಲಿನ್ಯಕಾರಕ ಕಣಗಳ ಮಟ್ಟವು ಡಬ್ಲ್ಯುಎಚ್‌ ಒ ಮಾರ್ಗಸೂಚಿಗಳನ್ನು ಮೀರಿದ್ದು, ಜನರ ಆರೋಗ್ಯಕ್ಕೆ ತೀವ್ರ ಆತಂಕವನ್ನೊಡ್ಡಿದೆ.
-ಲೋಮಿ ಗಾರ್ನಾಯಕ್, ಗ್ರೀನ್‌ ಪೀಸ್ ಇಂಡಿಯಾದ ಪ್ರಚಾರಕಿ

 

ಗ್ರೀನ್‌ಸ್ ಇಂಡಿಯಾ ಬಗ್ಗೆ
ಗ್ರೀನ್‌ ಪೀಸ್ ಇಂಡಿಯಾ ಸ್ವತಂತ್ರ ಸಂಸ್ಥೆಯಾಗಿದ್ದು, ಲಾಭರಹಿತ ಮತ್ತು ಪರಿಸರ ಪರ ಅಭಿಯಾನಗಳನ್ನು ಹಮ್ಮಿ ಕೊಳ್ಳುವ ಸಂಸ್ಥೆಯಾಗಿದೆ. ಹವಾಮಾನ ಭೂಮಿಯ ತಾಪಮಾನ ತಗ್ಗಿಸುವಿಕೆಗೆ ಹೊಸ ಮಾರ್ಗೋಪಾಯ ಮತ್ತು ಅಗತ್ಯ ಮಾರ್ಪಾಡುಗಳಿಗೆ ಉತ್ತೇ ಜನ ನೀಡಲು ಮೀಸಲಾಗಿದೆ.

• ಮಾಹಿತಿಗೆ: https://www.greenpeace.org/india/en/
ಶೇತಾ ಸಿಂಗ್: shweta.singh1@greenpeace.org, . 20.9691330473
• ಸೆಲೋಮಿ ಗರ್ನಾಯಕ್ ಇಮೇಲ್: selomi.garnaik@ greenpeace.org, ಮೊ.ಸಂ.7991000638 ಸಂಪರ್ಕಿಸಬಹುದು.‌

ಆಂದೋಲನ ಡೆಸ್ಕ್

Recent Posts

ಉಪಸಭಾಪತಿಗೆ ಚಿತ್ರಹಿಂಸೆ ಆರೋಪ : ಐಪಿಎಸ್‌ ಅಧಿಕಾರಿ ಬಂಧನ

ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…

8 hours ago

ಮಾರ್ಚ್‌ 11ರಿಂದ ವೈದ್ಯಾಧಿಕಾರಿಗಳ ಮುಷ್ಕರ : ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…

8 hours ago

ಟ್ರಂಪ್‌ ಜಾಗತಿಕ ಸುಂಕ ರದ್ದು : ವರದಿ

ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…

9 hours ago

ಸಫಾರಿ ಆದಾಯದ ಶೇ.35 ಭಾಗ ಕಾಡಿನಂಚಿನ ಜನಕಲ್ಯಾಣಕ್ಕೆ ಬಳಕೆ : ಖಂಡ್ರೆ

ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…

9 hours ago

ವನ್ಯಜೀವಿ ಸಂಚಾರ | ಕಾಡಂಚಿನ ಗ್ರಾಮದ ಮುಖಂಡರಿಗೆ ಮಾಹಿತಿ ರವಾನಿಸಲು ಖಂಡ್ರೆ ಸೂಚನೆ

ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…

10 hours ago

ಮನರೇಗಾ ನಾಶ | ಜನರ ಅನ್ನ ಕಿತ್ತುಕೊಳ್ಳುತ್ತಿರುವ ಕೇಂದ್ರ ; ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…

10 hours ago