Categories: Andolana originals

ಮೈ-ಬೆಂ ನಾನ್‌ಸ್ಟಾಪ್‌ ಬಸ್‌ಗಳಲ್ಲಿ ಇ-ಪೇಮೆಂಟ್‌

  • ಕೆ.ಬಿ.ರಮೇಶನಾಯಕ

 

ಶೀಘ್ರದಲ್ಲೇ ನಿಲುಗಡೆ, ಎಕ್ಸ್‌ಪ್ರೆಸ್‌ ಬಸ್‌ಗಳಿಗೂ ಸೇವೆ ವಿಸ್ತರಣೆ

ಮೈಸೂರು: ಚಿಲ್ಲರೆ ಸಮಸ್ಯೆ, ಪ್ರಯಾಣಿಕರಿಗೆ ಟಿಕೆಟ್ ಕೊಡಲು ವಿಳಂಬವಾಗುತ್ತಿರುವುದನ್ನು ತಪ್ಪಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮೈಸೂರು-ಬೆಂಗಳೂರು ನಡುವ ಸಂಚರಿಸುವ ತಡೆರಹಿತ ಬಸ್‌ಗಳಿಗೆ ಇ-ಪಾವತಿ (ಇ-ಟಿಕೆಟಿಂಗ್ ವ್ಯವಸ್ಥೆ ಜಾರಿಗೆ ತಂದಿದ್ದು, ಶೀಘ್ರದಲ್ಲಿ ಶಟಲ್, ಎಕ್ಸ್‌ಪ್ರೆಸ್ ಬಸ್‌ಗಳಿಗೂ ಈ ಸೇವೆಯನ್ನು ವಿಸ್ತರಿಸಲು ಅಗತ್ಯ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಮೈಸೂರು ನಗರದಿಂದ ಬೆಂಗಳೂರಿಗೆ ತೆರಳುವ ಬಸ್‌ಗಳಲ್ಲಿ ಮೂರು ವಿಧದ ವ್ಯವಸ್ಥೆ ಇದ್ದು, ನಾನ್‌ ಸ್ಟಾಪ್, ಎಕ್ಸ್‌ಪ್ರೆಸ್ ಹಾಗೂ ಶಟಲ್ (ಕೃತೋರಿದಲ್ಲಿ ನಿಲ್ಲುವ) ಬಸ್‌ಗಳಿವೆ. ಮೈಸೂರು-ಬೆಂಗಳೂರು ನಡುವೆ ಸಂಚರಿಸುವ ನಾನ್‌ಸ್ಟಾಪ್ ಬಸ್‌ಗಳ ಟಿಕೆಟ್ ದರ 187 ರೂ. ಇದ್ದು, ಮೂರು ರೂ. ಚಿಲ್ಲರೆ ಮರು ಪಾವತಿ ಮಾಡುವುದು ತುಂಬಾ ಕಷ್ಟಕರವಾಗಿತ್ತು. ಬಸ್‌ನಿಂದ ಇಳಿದಾಗ ನಿರ್ವಾಹಕರು ಮೂರು ರೂ. ಕೊಡುವುದಕ್ಕೆ ಚಿಲ್ಲರೆ ಇಲ್ಲವೆಂದು ಹೇಳಿದಾಗ ವಾಗ್ವಾದಕ್ಕೂ ಕಾರಣವಾಗಿತ್ತು. ಇದನ್ನು ಮನಗಂಡ ಅಧಿಕಾರಿಗಳು ನವೀಕೃತ ಟಿಕೆಟ್ ಮಷಿನ್‌ನಲ್ಲಿ ಟಿಕೆಟ್ ಕೊಡುವ ಮತ್ತು ಇ-ಪಾವತಿ ವ್ಯವಸ್ಥೆ ಕೂಡ ಇರುವುದನ್ನು ಬಳಸಿಕೊಂಡು ಚಿಲ್ಲರೆ ಸಮಸ್ಯೆಗೆ ಬ್ರೇಕ್‌ ಹಾಕಲು ಆರಂಭಿಸಿದ ವ್ಯವಸ್ಥೆ ಸಫಲವಾಗಿದೆ.

ಸದ್ಯಕ್ಕೆ ಮೈಸೂರು-ಬೆಂಗಳೂರು ನಡುವೆ ಸಂಚರಿಸುವ 300 ನಾನ್‌ಸ್ಟಾಪ್‌ ಬಸ್‌ಗಳಲ್ಲಿ ಅಳವಡಿಸಿಕೊಂಡಿದ್ದು, ಶೀಘ್ರದಲ್ಲೇ ಶಟಲ್‌, ಎಕ್ಸ್‌ಪ್ರೆಸ್‌ ಬಸ್‌ಗಳಿಗೂ ಈ ಸೇವೆಯನ್ನು ವಿಸ್ತರಿಸಲಾಗುತ್ತದೆ. ಹಾಲಿ ಇರುವ ಟಿಕೆಟ್‌ ಮೆಷಿನ್‌ನಿಂದ ಒಬ್ಬರಿಗೆ ಟಿಕೆಟ್‌ ಕೊಡಲು ಕನಿಷ್ಠ ಒಂದೂವರೆ ನಿಮಿಷ ತೆಗೆದುಕೊಳ್ಳುತ್ತದೆ.

ಈ ಪರಿಣಾಮ ನಿರ್ವಾಹಕರು ಮೂರು ರೀತಿಯ ಆಯ್ಕೆಯನ್ನು ಮಾಡಬೇಕಿತ್ತು. ಇ-ಪೇಮೆಂಟ್‌ನಲ್ಲಿ ಸ್ಕ್ಯಾನ್‌ ಮಾಡಿದ ತಕ್ಷಣ ಪಾವತಿಯಾಗುತ್ತಿದ್ದಂತೆ ಟಿಕೆಟ್‌ ಹರಿದುಕೊಡುಗುವುದು ಸುಲಭವಾಗಲಿದೆ. ಹೀಗಾಗಿಯೇ, ಗ್ರಾಮಾಂತರ ವಿಭಾಗದ ವ್ಯಾಪ್ತಿಯಲ್ಲಿರುವ ಎಲ್ಲಾ ಬಸ್‌ಗಳಿಗೂ ಯೋಜನೆ ರೂಪಿಸಲಾಗಿದೆ.

ನಗರ ವ್ಯಾಪ್ತಿಯಲ್ಲಿ ಸ್ಪಂದನೆ: ಪ್ರತಿನಿತ್ಯ ಸಾವಿರಾರು ಮಂದಿ ಪ್ರಯಾಣಿಸುವ ಮೈಸೂರು ನಗರ ಸಾರಿಗೆ ಬಸ್‌ಗಳಲ್ಲಿ ಚಿಲ್ಲರೆ ಪೂರೈಸುವುದು ಕಷ್ಟಕರವಾಗಿದ್ದು, ಇದಕ್ಕೆ ಬ್ರೇಕ್‌ ಹಾಕುವ ಜೊತೆಗೆ ನಿಗದಿತ ಸಮಯದಲ್ಲಿ ರೂಟ್‌ಗಳನ್ನು ತಲುಪುವಂತೆ ಮಾಡಲು ವಾರದ ಹಿಂದೆ ಜಾರಿಗೆ ತಂದ ಇ-ಪೇಮೆಂಟ್‌ ವ್ಯವಸ್ಥೆಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಮಹಿಳೆಯರಿಗೆ ಉಚಿತ ಪ್ರಯಾಣ ಇರುವ ಕಾರಣ ಗುರುತಿನ ಚೀಟಿಗಳನ್ನು ಪರಿಶೀಲಿಸಿ ಟಿಕೆಟ್‌ ಕೊಡುತ್ತಾರೆ. ಆದರೆ ಪಾಸ್‌ ಹೊಂದಿಲ್ಲದ ಕಾಳೇಜು ವಿದ್ಯಾರ್ಥಿಗಳು, ಸರ್ಕಾರಿ ನೌಕರರು, ಅರೆ ಸರ್ಕಾರಿ ನೌಕರರು, ಸಾರ್ವಜನಿಕರು ಇ-ಪೇಮೆಂಟ್‌ ಮೂಲಕವೇ ಪಾವತಿಸಿ ಟಿಕೆಟ್‌ ಖರೀದಿಸುತ್ತಿದ್ದಾರೆ. ಇದರಿಂದ ಅರ್ಧದಷ್ಟು ಸಮಸ್ಯೆ ಇತ್ಯರ್ಥವಾಗಿದೆ ಎಂದು ನಿರ್ವಾಹಕರೊಬ್ಬರು ಹೇಳಿದರು.

ಮೈಸೂರು ನಗರದಲ್ಲಿ 514 ಅನು ಸೂಚಿತ ಮಾರ್ಗಗಳಿದ್ದು, ಎಲ್ಲಾ ಬಸ್ ಗಳಲ್ಲೂ ಇ-ಪೇಮೆಂಟ್ ವ್ಯವಸ್ಥೆ ಜಾರಿಗೆ ತಂದಿದ್ದೇವೆ. ಕಾಲೇಜು ವಿದ್ಯಾರ್ಥಿಗಳು, ಕೆಲಸಕ್ಕೆ ಹೋಗುವವರು ಜಾಸ್ತಿ ಬಳಸುತ್ತಿದ್ದಾರೆ.
ಚಿಲ್ಲರೆ ಸಮಸ್ಯೆ ನೀಗುವ ಜತೆಗೆ ಬಹುಬೇಗನೆ ಟಿಕೆಟ್ ವಿತರಿಸುವುದಕ್ಕೂ ತುಂಬಾ ಅನುಕೂಲವಾಗಿದೆ.

ವೀರೇಶ್‌, ಮೈಸೂರು ನಗರ ವಿಭಾಗೀಯ ನಿಯಂತ್ರಣಾಧಿಕಾರಿ

ಕೆ.ಬಿ. ರಮೇಶ ನಾಯಕ

ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ನಾನು ಮೂಲತಃ ಚಾಮರಾಜನಗರ ತಾಲ್ಲೂಕು ಮತ್ತು ಜಿಲ್ಲೆಯ ಕಣ್ಣೇಗಾಲ ಗ್ರಾಮದವನು. ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಪ್ರಾಥಮಿಕ,ಪ್ರೌಢಶಿಕ್ಷಣ, ಚಾಮರಾಜನಗರದಲ್ಲಿ ಪಿಯುಸಿ ವ್ಯಾಸಂಗ ಮಾಡಿದ ನಾನು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದೇನೆ. 1992ರಿಂದ 2002ರವರೆಗೆ ಮೈಸೂರು ಮಿತ್ರ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಸೇವೆ ಸಲ್ಲಿಸಿದ ಬಳಿಕ 2002ರಿಂದ 2012ರವರೆಗೆ ಸಂಯುಕ್ತ ಕರ್ನಾಟಕ ಮೈಸೂರು ಪ್ರಾದೇಶಿಕ ಕಚೇರಿಯಲ್ಲಿ ವರದಿಗಾರನಾಗಿ, 2013ರಿಂದ 2015ರವರೆಗೆ ಹಾಸನ ಮತ್ತು ಮೈಸೂರಿನಲ್ಲಿ ವಿಜಯ ಕರ್ನಾಟಕ ಹಿರಿಯ ವರದಿಗಾರನಾಗಿ, 2015ರಿಂದ 2017ರವರೆಗೆ ಸಂಯುಕ್ತ ಕರ್ನಾಟಕ ಮುಖ್ಯ ವರದಿಗಾರನಾಗಿ, 2017ರಿಂದ 2020 ಜೂನ್‌ವರಗೆ ವಿಶ್ವವಾಣಿ ಮೈಸೂರು ಬ್ಯೂರೋ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸಿದ್ದೇನೆ.

Recent Posts

ಹನೂರು| ರಸ್ತೆಯಲ್ಲಿ ಹುಲಿ ದರ್ಶನ: ವಿಡಿಯೋ ವೈರಲ್‌

ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…

14 mins ago

ಶೀಘ್ರದಲ್ಲೇ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ರಹೀಂ ಖಾನ್‌

ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್‌ ತಿಳಿಸಿದರು. ವಿಧಾನಪರಿಷತ್‌ ಕಲಾಪದಲ್ಲಿ…

19 mins ago

ಎಚ್‌ಡಿಕೆ ಹುಟ್ಟುಹಬ್ಬ: ಮಂಡ್ಯದಲ್ಲಿ ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…

26 mins ago

ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ: ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಿಷ್ಟು.!

ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ…

44 mins ago

ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

1 hour ago

ಗ್ರೇಟರ್‌ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

ಬೆಳಗಾವಿ: ವಿಧಾನಸಭೆಯಲ್ಲಿ ಇಂದು ಗ್ರೇಟರ್‌ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕ ಮಂಡನೆ ಆಗಿದೆ. ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ…

2 hours ago