Categories: Andolana originals

ಮೈ-ಬೆಂ ನಾನ್‌ಸ್ಟಾಪ್‌ ಬಸ್‌ಗಳಲ್ಲಿ ಇ-ಪೇಮೆಂಟ್‌

  • ಕೆ.ಬಿ.ರಮೇಶನಾಯಕ

 

ಶೀಘ್ರದಲ್ಲೇ ನಿಲುಗಡೆ, ಎಕ್ಸ್‌ಪ್ರೆಸ್‌ ಬಸ್‌ಗಳಿಗೂ ಸೇವೆ ವಿಸ್ತರಣೆ

ಮೈಸೂರು: ಚಿಲ್ಲರೆ ಸಮಸ್ಯೆ, ಪ್ರಯಾಣಿಕರಿಗೆ ಟಿಕೆಟ್ ಕೊಡಲು ವಿಳಂಬವಾಗುತ್ತಿರುವುದನ್ನು ತಪ್ಪಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮೈಸೂರು-ಬೆಂಗಳೂರು ನಡುವ ಸಂಚರಿಸುವ ತಡೆರಹಿತ ಬಸ್‌ಗಳಿಗೆ ಇ-ಪಾವತಿ (ಇ-ಟಿಕೆಟಿಂಗ್ ವ್ಯವಸ್ಥೆ ಜಾರಿಗೆ ತಂದಿದ್ದು, ಶೀಘ್ರದಲ್ಲಿ ಶಟಲ್, ಎಕ್ಸ್‌ಪ್ರೆಸ್ ಬಸ್‌ಗಳಿಗೂ ಈ ಸೇವೆಯನ್ನು ವಿಸ್ತರಿಸಲು ಅಗತ್ಯ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಮೈಸೂರು ನಗರದಿಂದ ಬೆಂಗಳೂರಿಗೆ ತೆರಳುವ ಬಸ್‌ಗಳಲ್ಲಿ ಮೂರು ವಿಧದ ವ್ಯವಸ್ಥೆ ಇದ್ದು, ನಾನ್‌ ಸ್ಟಾಪ್, ಎಕ್ಸ್‌ಪ್ರೆಸ್ ಹಾಗೂ ಶಟಲ್ (ಕೃತೋರಿದಲ್ಲಿ ನಿಲ್ಲುವ) ಬಸ್‌ಗಳಿವೆ. ಮೈಸೂರು-ಬೆಂಗಳೂರು ನಡುವೆ ಸಂಚರಿಸುವ ನಾನ್‌ಸ್ಟಾಪ್ ಬಸ್‌ಗಳ ಟಿಕೆಟ್ ದರ 187 ರೂ. ಇದ್ದು, ಮೂರು ರೂ. ಚಿಲ್ಲರೆ ಮರು ಪಾವತಿ ಮಾಡುವುದು ತುಂಬಾ ಕಷ್ಟಕರವಾಗಿತ್ತು. ಬಸ್‌ನಿಂದ ಇಳಿದಾಗ ನಿರ್ವಾಹಕರು ಮೂರು ರೂ. ಕೊಡುವುದಕ್ಕೆ ಚಿಲ್ಲರೆ ಇಲ್ಲವೆಂದು ಹೇಳಿದಾಗ ವಾಗ್ವಾದಕ್ಕೂ ಕಾರಣವಾಗಿತ್ತು. ಇದನ್ನು ಮನಗಂಡ ಅಧಿಕಾರಿಗಳು ನವೀಕೃತ ಟಿಕೆಟ್ ಮಷಿನ್‌ನಲ್ಲಿ ಟಿಕೆಟ್ ಕೊಡುವ ಮತ್ತು ಇ-ಪಾವತಿ ವ್ಯವಸ್ಥೆ ಕೂಡ ಇರುವುದನ್ನು ಬಳಸಿಕೊಂಡು ಚಿಲ್ಲರೆ ಸಮಸ್ಯೆಗೆ ಬ್ರೇಕ್‌ ಹಾಕಲು ಆರಂಭಿಸಿದ ವ್ಯವಸ್ಥೆ ಸಫಲವಾಗಿದೆ.

ಸದ್ಯಕ್ಕೆ ಮೈಸೂರು-ಬೆಂಗಳೂರು ನಡುವೆ ಸಂಚರಿಸುವ 300 ನಾನ್‌ಸ್ಟಾಪ್‌ ಬಸ್‌ಗಳಲ್ಲಿ ಅಳವಡಿಸಿಕೊಂಡಿದ್ದು, ಶೀಘ್ರದಲ್ಲೇ ಶಟಲ್‌, ಎಕ್ಸ್‌ಪ್ರೆಸ್‌ ಬಸ್‌ಗಳಿಗೂ ಈ ಸೇವೆಯನ್ನು ವಿಸ್ತರಿಸಲಾಗುತ್ತದೆ. ಹಾಲಿ ಇರುವ ಟಿಕೆಟ್‌ ಮೆಷಿನ್‌ನಿಂದ ಒಬ್ಬರಿಗೆ ಟಿಕೆಟ್‌ ಕೊಡಲು ಕನಿಷ್ಠ ಒಂದೂವರೆ ನಿಮಿಷ ತೆಗೆದುಕೊಳ್ಳುತ್ತದೆ.

ಈ ಪರಿಣಾಮ ನಿರ್ವಾಹಕರು ಮೂರು ರೀತಿಯ ಆಯ್ಕೆಯನ್ನು ಮಾಡಬೇಕಿತ್ತು. ಇ-ಪೇಮೆಂಟ್‌ನಲ್ಲಿ ಸ್ಕ್ಯಾನ್‌ ಮಾಡಿದ ತಕ್ಷಣ ಪಾವತಿಯಾಗುತ್ತಿದ್ದಂತೆ ಟಿಕೆಟ್‌ ಹರಿದುಕೊಡುಗುವುದು ಸುಲಭವಾಗಲಿದೆ. ಹೀಗಾಗಿಯೇ, ಗ್ರಾಮಾಂತರ ವಿಭಾಗದ ವ್ಯಾಪ್ತಿಯಲ್ಲಿರುವ ಎಲ್ಲಾ ಬಸ್‌ಗಳಿಗೂ ಯೋಜನೆ ರೂಪಿಸಲಾಗಿದೆ.

ನಗರ ವ್ಯಾಪ್ತಿಯಲ್ಲಿ ಸ್ಪಂದನೆ: ಪ್ರತಿನಿತ್ಯ ಸಾವಿರಾರು ಮಂದಿ ಪ್ರಯಾಣಿಸುವ ಮೈಸೂರು ನಗರ ಸಾರಿಗೆ ಬಸ್‌ಗಳಲ್ಲಿ ಚಿಲ್ಲರೆ ಪೂರೈಸುವುದು ಕಷ್ಟಕರವಾಗಿದ್ದು, ಇದಕ್ಕೆ ಬ್ರೇಕ್‌ ಹಾಕುವ ಜೊತೆಗೆ ನಿಗದಿತ ಸಮಯದಲ್ಲಿ ರೂಟ್‌ಗಳನ್ನು ತಲುಪುವಂತೆ ಮಾಡಲು ವಾರದ ಹಿಂದೆ ಜಾರಿಗೆ ತಂದ ಇ-ಪೇಮೆಂಟ್‌ ವ್ಯವಸ್ಥೆಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಮಹಿಳೆಯರಿಗೆ ಉಚಿತ ಪ್ರಯಾಣ ಇರುವ ಕಾರಣ ಗುರುತಿನ ಚೀಟಿಗಳನ್ನು ಪರಿಶೀಲಿಸಿ ಟಿಕೆಟ್‌ ಕೊಡುತ್ತಾರೆ. ಆದರೆ ಪಾಸ್‌ ಹೊಂದಿಲ್ಲದ ಕಾಳೇಜು ವಿದ್ಯಾರ್ಥಿಗಳು, ಸರ್ಕಾರಿ ನೌಕರರು, ಅರೆ ಸರ್ಕಾರಿ ನೌಕರರು, ಸಾರ್ವಜನಿಕರು ಇ-ಪೇಮೆಂಟ್‌ ಮೂಲಕವೇ ಪಾವತಿಸಿ ಟಿಕೆಟ್‌ ಖರೀದಿಸುತ್ತಿದ್ದಾರೆ. ಇದರಿಂದ ಅರ್ಧದಷ್ಟು ಸಮಸ್ಯೆ ಇತ್ಯರ್ಥವಾಗಿದೆ ಎಂದು ನಿರ್ವಾಹಕರೊಬ್ಬರು ಹೇಳಿದರು.

ಮೈಸೂರು ನಗರದಲ್ಲಿ 514 ಅನು ಸೂಚಿತ ಮಾರ್ಗಗಳಿದ್ದು, ಎಲ್ಲಾ ಬಸ್ ಗಳಲ್ಲೂ ಇ-ಪೇಮೆಂಟ್ ವ್ಯವಸ್ಥೆ ಜಾರಿಗೆ ತಂದಿದ್ದೇವೆ. ಕಾಲೇಜು ವಿದ್ಯಾರ್ಥಿಗಳು, ಕೆಲಸಕ್ಕೆ ಹೋಗುವವರು ಜಾಸ್ತಿ ಬಳಸುತ್ತಿದ್ದಾರೆ.
ಚಿಲ್ಲರೆ ಸಮಸ್ಯೆ ನೀಗುವ ಜತೆಗೆ ಬಹುಬೇಗನೆ ಟಿಕೆಟ್ ವಿತರಿಸುವುದಕ್ಕೂ ತುಂಬಾ ಅನುಕೂಲವಾಗಿದೆ.

ವೀರೇಶ್‌, ಮೈಸೂರು ನಗರ ವಿಭಾಗೀಯ ನಿಯಂತ್ರಣಾಧಿಕಾರಿ

ಕೆ.ಬಿ. ರಮೇಶ ನಾಯಕ

ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ನಾನು ಮೂಲತಃ ಚಾಮರಾಜನಗರ ತಾಲ್ಲೂಕು ಮತ್ತು ಜಿಲ್ಲೆಯ ಕಣ್ಣೇಗಾಲ ಗ್ರಾಮದವನು. ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಪ್ರಾಥಮಿಕ,ಪ್ರೌಢಶಿಕ್ಷಣ, ಚಾಮರಾಜನಗರದಲ್ಲಿ ಪಿಯುಸಿ ವ್ಯಾಸಂಗ ಮಾಡಿದ ನಾನು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದೇನೆ. 1992ರಿಂದ 2002ರವರೆಗೆ ಮೈಸೂರು ಮಿತ್ರ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಸೇವೆ ಸಲ್ಲಿಸಿದ ಬಳಿಕ 2002ರಿಂದ 2012ರವರೆಗೆ ಸಂಯುಕ್ತ ಕರ್ನಾಟಕ ಮೈಸೂರು ಪ್ರಾದೇಶಿಕ ಕಚೇರಿಯಲ್ಲಿ ವರದಿಗಾರನಾಗಿ, 2013ರಿಂದ 2015ರವರೆಗೆ ಹಾಸನ ಮತ್ತು ಮೈಸೂರಿನಲ್ಲಿ ವಿಜಯ ಕರ್ನಾಟಕ ಹಿರಿಯ ವರದಿಗಾರನಾಗಿ, 2015ರಿಂದ 2017ರವರೆಗೆ ಸಂಯುಕ್ತ ಕರ್ನಾಟಕ ಮುಖ್ಯ ವರದಿಗಾರನಾಗಿ, 2017ರಿಂದ 2020 ಜೂನ್‌ವರಗೆ ವಿಶ್ವವಾಣಿ ಮೈಸೂರು ಬ್ಯೂರೋ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸಿದ್ದೇನೆ.

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

1 hour ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

4 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

4 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

5 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

5 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

5 hours ago