Categories: Andolana originals

ಮೈ-ಬೆಂ ನಾನ್‌ಸ್ಟಾಪ್‌ ಬಸ್‌ಗಳಲ್ಲಿ ಇ-ಪೇಮೆಂಟ್‌

  • ಕೆ.ಬಿ.ರಮೇಶನಾಯಕ

 

ಶೀಘ್ರದಲ್ಲೇ ನಿಲುಗಡೆ, ಎಕ್ಸ್‌ಪ್ರೆಸ್‌ ಬಸ್‌ಗಳಿಗೂ ಸೇವೆ ವಿಸ್ತರಣೆ

ಮೈಸೂರು: ಚಿಲ್ಲರೆ ಸಮಸ್ಯೆ, ಪ್ರಯಾಣಿಕರಿಗೆ ಟಿಕೆಟ್ ಕೊಡಲು ವಿಳಂಬವಾಗುತ್ತಿರುವುದನ್ನು ತಪ್ಪಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮೈಸೂರು-ಬೆಂಗಳೂರು ನಡುವ ಸಂಚರಿಸುವ ತಡೆರಹಿತ ಬಸ್‌ಗಳಿಗೆ ಇ-ಪಾವತಿ (ಇ-ಟಿಕೆಟಿಂಗ್ ವ್ಯವಸ್ಥೆ ಜಾರಿಗೆ ತಂದಿದ್ದು, ಶೀಘ್ರದಲ್ಲಿ ಶಟಲ್, ಎಕ್ಸ್‌ಪ್ರೆಸ್ ಬಸ್‌ಗಳಿಗೂ ಈ ಸೇವೆಯನ್ನು ವಿಸ್ತರಿಸಲು ಅಗತ್ಯ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಮೈಸೂರು ನಗರದಿಂದ ಬೆಂಗಳೂರಿಗೆ ತೆರಳುವ ಬಸ್‌ಗಳಲ್ಲಿ ಮೂರು ವಿಧದ ವ್ಯವಸ್ಥೆ ಇದ್ದು, ನಾನ್‌ ಸ್ಟಾಪ್, ಎಕ್ಸ್‌ಪ್ರೆಸ್ ಹಾಗೂ ಶಟಲ್ (ಕೃತೋರಿದಲ್ಲಿ ನಿಲ್ಲುವ) ಬಸ್‌ಗಳಿವೆ. ಮೈಸೂರು-ಬೆಂಗಳೂರು ನಡುವೆ ಸಂಚರಿಸುವ ನಾನ್‌ಸ್ಟಾಪ್ ಬಸ್‌ಗಳ ಟಿಕೆಟ್ ದರ 187 ರೂ. ಇದ್ದು, ಮೂರು ರೂ. ಚಿಲ್ಲರೆ ಮರು ಪಾವತಿ ಮಾಡುವುದು ತುಂಬಾ ಕಷ್ಟಕರವಾಗಿತ್ತು. ಬಸ್‌ನಿಂದ ಇಳಿದಾಗ ನಿರ್ವಾಹಕರು ಮೂರು ರೂ. ಕೊಡುವುದಕ್ಕೆ ಚಿಲ್ಲರೆ ಇಲ್ಲವೆಂದು ಹೇಳಿದಾಗ ವಾಗ್ವಾದಕ್ಕೂ ಕಾರಣವಾಗಿತ್ತು. ಇದನ್ನು ಮನಗಂಡ ಅಧಿಕಾರಿಗಳು ನವೀಕೃತ ಟಿಕೆಟ್ ಮಷಿನ್‌ನಲ್ಲಿ ಟಿಕೆಟ್ ಕೊಡುವ ಮತ್ತು ಇ-ಪಾವತಿ ವ್ಯವಸ್ಥೆ ಕೂಡ ಇರುವುದನ್ನು ಬಳಸಿಕೊಂಡು ಚಿಲ್ಲರೆ ಸಮಸ್ಯೆಗೆ ಬ್ರೇಕ್‌ ಹಾಕಲು ಆರಂಭಿಸಿದ ವ್ಯವಸ್ಥೆ ಸಫಲವಾಗಿದೆ.

ಸದ್ಯಕ್ಕೆ ಮೈಸೂರು-ಬೆಂಗಳೂರು ನಡುವೆ ಸಂಚರಿಸುವ 300 ನಾನ್‌ಸ್ಟಾಪ್‌ ಬಸ್‌ಗಳಲ್ಲಿ ಅಳವಡಿಸಿಕೊಂಡಿದ್ದು, ಶೀಘ್ರದಲ್ಲೇ ಶಟಲ್‌, ಎಕ್ಸ್‌ಪ್ರೆಸ್‌ ಬಸ್‌ಗಳಿಗೂ ಈ ಸೇವೆಯನ್ನು ವಿಸ್ತರಿಸಲಾಗುತ್ತದೆ. ಹಾಲಿ ಇರುವ ಟಿಕೆಟ್‌ ಮೆಷಿನ್‌ನಿಂದ ಒಬ್ಬರಿಗೆ ಟಿಕೆಟ್‌ ಕೊಡಲು ಕನಿಷ್ಠ ಒಂದೂವರೆ ನಿಮಿಷ ತೆಗೆದುಕೊಳ್ಳುತ್ತದೆ.

ಈ ಪರಿಣಾಮ ನಿರ್ವಾಹಕರು ಮೂರು ರೀತಿಯ ಆಯ್ಕೆಯನ್ನು ಮಾಡಬೇಕಿತ್ತು. ಇ-ಪೇಮೆಂಟ್‌ನಲ್ಲಿ ಸ್ಕ್ಯಾನ್‌ ಮಾಡಿದ ತಕ್ಷಣ ಪಾವತಿಯಾಗುತ್ತಿದ್ದಂತೆ ಟಿಕೆಟ್‌ ಹರಿದುಕೊಡುಗುವುದು ಸುಲಭವಾಗಲಿದೆ. ಹೀಗಾಗಿಯೇ, ಗ್ರಾಮಾಂತರ ವಿಭಾಗದ ವ್ಯಾಪ್ತಿಯಲ್ಲಿರುವ ಎಲ್ಲಾ ಬಸ್‌ಗಳಿಗೂ ಯೋಜನೆ ರೂಪಿಸಲಾಗಿದೆ.

ನಗರ ವ್ಯಾಪ್ತಿಯಲ್ಲಿ ಸ್ಪಂದನೆ: ಪ್ರತಿನಿತ್ಯ ಸಾವಿರಾರು ಮಂದಿ ಪ್ರಯಾಣಿಸುವ ಮೈಸೂರು ನಗರ ಸಾರಿಗೆ ಬಸ್‌ಗಳಲ್ಲಿ ಚಿಲ್ಲರೆ ಪೂರೈಸುವುದು ಕಷ್ಟಕರವಾಗಿದ್ದು, ಇದಕ್ಕೆ ಬ್ರೇಕ್‌ ಹಾಕುವ ಜೊತೆಗೆ ನಿಗದಿತ ಸಮಯದಲ್ಲಿ ರೂಟ್‌ಗಳನ್ನು ತಲುಪುವಂತೆ ಮಾಡಲು ವಾರದ ಹಿಂದೆ ಜಾರಿಗೆ ತಂದ ಇ-ಪೇಮೆಂಟ್‌ ವ್ಯವಸ್ಥೆಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಮಹಿಳೆಯರಿಗೆ ಉಚಿತ ಪ್ರಯಾಣ ಇರುವ ಕಾರಣ ಗುರುತಿನ ಚೀಟಿಗಳನ್ನು ಪರಿಶೀಲಿಸಿ ಟಿಕೆಟ್‌ ಕೊಡುತ್ತಾರೆ. ಆದರೆ ಪಾಸ್‌ ಹೊಂದಿಲ್ಲದ ಕಾಳೇಜು ವಿದ್ಯಾರ್ಥಿಗಳು, ಸರ್ಕಾರಿ ನೌಕರರು, ಅರೆ ಸರ್ಕಾರಿ ನೌಕರರು, ಸಾರ್ವಜನಿಕರು ಇ-ಪೇಮೆಂಟ್‌ ಮೂಲಕವೇ ಪಾವತಿಸಿ ಟಿಕೆಟ್‌ ಖರೀದಿಸುತ್ತಿದ್ದಾರೆ. ಇದರಿಂದ ಅರ್ಧದಷ್ಟು ಸಮಸ್ಯೆ ಇತ್ಯರ್ಥವಾಗಿದೆ ಎಂದು ನಿರ್ವಾಹಕರೊಬ್ಬರು ಹೇಳಿದರು.

ಮೈಸೂರು ನಗರದಲ್ಲಿ 514 ಅನು ಸೂಚಿತ ಮಾರ್ಗಗಳಿದ್ದು, ಎಲ್ಲಾ ಬಸ್ ಗಳಲ್ಲೂ ಇ-ಪೇಮೆಂಟ್ ವ್ಯವಸ್ಥೆ ಜಾರಿಗೆ ತಂದಿದ್ದೇವೆ. ಕಾಲೇಜು ವಿದ್ಯಾರ್ಥಿಗಳು, ಕೆಲಸಕ್ಕೆ ಹೋಗುವವರು ಜಾಸ್ತಿ ಬಳಸುತ್ತಿದ್ದಾರೆ.
ಚಿಲ್ಲರೆ ಸಮಸ್ಯೆ ನೀಗುವ ಜತೆಗೆ ಬಹುಬೇಗನೆ ಟಿಕೆಟ್ ವಿತರಿಸುವುದಕ್ಕೂ ತುಂಬಾ ಅನುಕೂಲವಾಗಿದೆ.

ವೀರೇಶ್‌, ಮೈಸೂರು ನಗರ ವಿಭಾಗೀಯ ನಿಯಂತ್ರಣಾಧಿಕಾರಿ

ಕೆ.ಬಿ. ರಮೇಶ ನಾಯಕ

ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ನಾನು ಮೂಲತಃ ಚಾಮರಾಜನಗರ ತಾಲ್ಲೂಕು ಮತ್ತು ಜಿಲ್ಲೆಯ ಕಣ್ಣೇಗಾಲ ಗ್ರಾಮದವನು. ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಪ್ರಾಥಮಿಕ,ಪ್ರೌಢಶಿಕ್ಷಣ, ಚಾಮರಾಜನಗರದಲ್ಲಿ ಪಿಯುಸಿ ವ್ಯಾಸಂಗ ಮಾಡಿದ ನಾನು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದೇನೆ. 1992ರಿಂದ 2002ರವರೆಗೆ ಮೈಸೂರು ಮಿತ್ರ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಸೇವೆ ಸಲ್ಲಿಸಿದ ಬಳಿಕ 2002ರಿಂದ 2012ರವರೆಗೆ ಸಂಯುಕ್ತ ಕರ್ನಾಟಕ ಮೈಸೂರು ಪ್ರಾದೇಶಿಕ ಕಚೇರಿಯಲ್ಲಿ ವರದಿಗಾರನಾಗಿ, 2013ರಿಂದ 2015ರವರೆಗೆ ಹಾಸನ ಮತ್ತು ಮೈಸೂರಿನಲ್ಲಿ ವಿಜಯ ಕರ್ನಾಟಕ ಹಿರಿಯ ವರದಿಗಾರನಾಗಿ, 2015ರಿಂದ 2017ರವರೆಗೆ ಸಂಯುಕ್ತ ಕರ್ನಾಟಕ ಮುಖ್ಯ ವರದಿಗಾರನಾಗಿ, 2017ರಿಂದ 2020 ಜೂನ್‌ವರಗೆ ವಿಶ್ವವಾಣಿ ಮೈಸೂರು ಬ್ಯೂರೋ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸಿದ್ದೇನೆ.

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

3 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

3 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

3 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

3 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

3 hours ago