ಮೈಸೂರು : ಜಿಐ ಟ್ಯಾಗ್ ಹೊಂದಿರುವ ನಂಜನಗೂಡು ರಸಬಾಳೆ, ಮೈಸೂರು ವೀಳ್ಯದೆಲೆ ಪ್ರಸ್ತುತ ಜಪಾನ್, ಮಾಲ್ಡೀವ್ಸ್ ದೇಶಗಳಿಗೆ ರಫ್ತಾಗುತ್ತಿದ್ದು, ಬಾಂಗ್ಲಾದೇಶದಿಂದಲೂ ಬೇಡಿಕೆ ಬಂದಿದೆ.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮಂಜುನಾಥ್ ಅಂಗಡಿ ಈ ಮಾಹಿತಿ ಹಂಚಿ ಕೊಂಡರು.
ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದಾಗಿ 40 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಹಾನಿಗೀಡಾಗಿದ್ದು, 61 ರೈತರಿಗೆ 7.50 ಲಕ್ಷ ರೂಪಾಯಿ ಪರಿಹಾರಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು.
ರೈತರಿಗೆ ಯಂತ್ರೋಪಕರಣಗಳು ಹಾಗೂ ಹನಿನೀರಾವರಿ ಉಪಕರಣಗಳನ್ನು ವಿತರಿಸಬೇಕಾಗಿತ್ತು. ಆದರೆ ಎರಡು ಕೋಟಿ ರೂ. ಅನುದಾನವನ್ನು ಈ ಬಾರಿ ಬಿಡುಗಡೆ ಮಾಡದ ಕಾರಣ ವಿತರಣೆ ಆಗಲಿಲ್ಲ ಎಂದು ತಿಳಿಸಿದರು.
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…