Andolana originals

ದೀಪಾಲಂಕಾರ; ಪರಿಕಲ್ಪನೆ ರೂಪಾಂತರ

ಪ್ರವಾಸಿಗರ ಆಕರ್ಷಣೆಗೆ ಮುಂಬೈ, ಪಶ್ಚಿಮಬಂಗಾಳದ ಪ್ರಮುಖ ಹಬ್ಬಗಳ ಅಲಂಕಾರ ಮಾದರಿ ಅಳವಡಿಕೆ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ನವರಾತ್ರಿಯ ದಿನಗಳಲ್ಲಿ ಅರಮನೆ ನಗರಿಗೆ ಆಗಮಿಸುವ ಪ್ರವಾಸಿ ಗರನ್ನು ಆಕರ್ಷಿಸುವ ವಿದ್ಯುತ್ ದೀಪಾ ಲಂಕಾರಕ್ಕೆ ಮತ್ತಷ್ಟು ಮೆರುಗು ನೀಡಲು ಮುಂದಾಗಿದ್ದು, ಈ ಬಾರಿ ವಾರ್ಮ್ ವೈಟ್ ಪರಿಕಲ್ಪನೆಯಡಿ ದೀಪಾಲಂಕಾರ ಮಾಡಲಾಗುತ್ತದೆ.

ನವರಾತ್ರಿಯ ಹತ್ತೂ ದಿನಗಳಲ್ಲಿ ಲಕ್ಷಾಂತರ ಜನರು ದೀಪಾಲಂಕಾರವನ್ನು ಕಣ್ತುಂಬಿಕೊಳ್ಳುವ ಕಾರಣ ಹಳೆಯ ಮತ್ತು ಏಕತಾನತೆಯಿಂದ ಕೂಡಿರದೆ ಬದಲಾದ ಕಾಲಕ್ಕೆ ತಕ್ಕಂತೆ ಬದಲಾವಣೆ ಮಾಡಿಕೊಂಡು ವಿನೂತನ ಶೈಲಿಯ ದೀಪಾಲಂಕಾರ ಮಾಡಲಾಗುತ್ತದೆ. ಈಗಾಗಲೇ ಮುಂಬೈ, ಪಶ್ಚಿಮಬಂಗಾಳದ ಪ್ರಮುಖ ನಗರಗಳಲ್ಲಿ ನಡೆಯುವ ಹಬ್ಬಗಳಲ್ಲಿ ಮಾಡಿರುವ ದೀಪಾಲಂಕಾರದ ಮಾದರಿಯನ್ನು ಸಂಗ್ರಹಿಸಿ ದಸರಾ ದೀಪಾಲಂಕಾರದಲ್ಲಿ ಅಳವಡಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

ಈಗಾಗಲೇ ಸೆಸ್ಕ್‌ನ ವ್ಯವಸ್ಥಾಪಕ ನಿರ್ದೇಶಕರು, ತಾಂತ್ರಿಕ ನಿರ್ದೇಶಕರು ಮಹತ್ವದ ಸಭೆಗಳನ್ನು ನಡೆಸಿ ದೀಪಾಲಂಕಾರದಲ್ಲಿ ಹಲವಾರು ಬದಲಾವಣೆ, ಸುಧಾರಣೆಗಳನ್ನು ತರುವ ಮೂಲಕ ದೀಪಾಲಂಕಾರಕ್ಕೆ ಹೊಸತನದ ಟಚ್ ಕೊಡಲು ಮುಂದಾಗಿರುವುದರಿಂದ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸಲಿದೆ. ಈ ಬಾರಿ ಅಂಬಾವಿಲಾಸ ಅರಮನೆಯ ದೀಪಾಲಂಕಾರಕ್ಕೆ ಸರಿಹೊಂದುವಂತೆ ವಾರ್ಮ್ ವೈಟ್ ಪರಿಕಲ್ಪನೆಯಲ್ಲಿ ದೀಪಾಲಂಕಾರ ಮಾಡುತ್ತಿರುವುದು ಗಮನಾರ್ಹವಾಗಿದೆ. ಈಗಾಗಲೇ ನಗರದ ಕೆ. ಆರ್. ವೃತ್ತ, ಹಾರ್ಡಿಂಜ್ ವೃತ್ತ, ರಾಮಸ್ವಾಮಿ ವೃತ್ತ, ದಾಸಪ್ಪ ವೃತ್ತ, ಆಯುರ್ವೇದ ಆಸ್ಪತ್ರೆ ಸರ್ಕಲ್, ಅಶೋಕ ವೃತ್ತ, ಅಗ್ರಹಾರ, ಡಿ. ದೇವರಾಜ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆ, ಧನ್ವಂತ್ರಿ ರಸ್ತೆ, ಅಲ್ಬರ್ಟ್ ವಿಕ್ಟರ್ ರಸ್ತೆ, ಅಶೋಕ ರಸ್ತೆ, ಮುಖ್ಯ ರಸ್ತೆಗಳು, ವೃತ್ತಗಳು ಹಾಗೂ ಪ್ರಮುಖ ಸ್ಮಾರಕಗಳಿಗೆ ದೀಪಾಲಂಕಾರ ಮಾಡುವ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ರೂಪರೇಷೆ ಸಿದ್ಧಪಡಿಸಲಾಗಿದೆ.

ವಿಶೇಷವಾಗಿ, ಅಂಬಾವಿಲಾಸ ಅರಮನೆ ಸುತ್ತಲಿನ ಪ್ರದೇಶ, ಚಾಮುಂಡಿಬೆಟ್ಟ, ದೊಡ್ಡಕೆರೆ ಮೈದಾನ ಅಲ್ಲದೆ ಹಲವು ಪ್ರಮುಖ ಸ್ಥಳಗಳಲ್ಲಿ ದೀಪಾಲಂಕಾರ ಮಾಡಲಾಗುತ್ತದೆ. ದೀಪಾಲಂಕಾರದಲ್ಲಿ ಏಕತಾನತೆಯಿಂದ ಹೊರ ತರುವ ಸವಾಲು ಇಲಾಖೆ ಮೇಲಿದೆ. ನೂತನ ತಂತ್ರಜ್ಞಾನಗಳ ನೆರವಿನಿಂದ ಹೊಸತನ ಪರಿಚಯಿಸುವ ಉದ್ದೇಶ ಹೊಂದಲಾಗಿದೆ.

ಮುಂಬಯಿ-ಪಶ್ಚಿಮ ಬಂಗಾಳ ಮಾದರಿ: ಈ ನಿಟ್ಟಿನಲ್ಲಿ ಈಗಾಗಲೇ ಸಂಬಂಧಪಟ್ಟ ಅಽಕಾರಿ ವರ್ಗದವರು ಕಾರ್ಯೋನ್ಮುಖವಾಗಿದ್ದು, ಮುಂಬೈ, ಪಶ್ಚಿಮಬಂಗಾಳದ ಪ್ರಮುಖ ನಗರಗಳಿಗೆ ತೆರಳಿ ಅಲ್ಲಿನ ಪ್ರಮುಖ ಹಬ್ಬಗಳ ಆಚರಣೆ ವೇಳೆಯಲ್ಲಿನ ದೀಪಾಲಂಕಾರ ವ್ಯವಸ್ಥೆ ಬಗೆಗೂ ಮಾಹಿತಿ ಸಂಗ್ರಹಿಸಲಾಗಿದೆ. ಜತೆಗೆ ಚೀನಾದಲ್ಲಿನ ತಾಂತ್ರಿಕ ಅಭಿವೃದ್ಧಿ ಬಗೆಗೂ ಹೆಚ್ಚಿನ ಅಧ್ಯಯನ ನಡೆಸಿ ಅವುಗಳನ್ನು ದಸರಾ ದೀಪಾಲಂಕಾರದಲ್ಲಿ ಅಳವಡಿಸಿಕೊಳ್ಳಲು ಉದ್ದೇಶಿಸಲಾಗಿದೆ.

ಸಾವಿರ ಡ್ರೋನ್ ಕ್ಯಾಮೆರಾದಲ್ಲಿ ಶೂಟ್: ಮೈಸೂರಿನ ದಸರಾ ದೀಪಾಲಂಕಾರ ಪ್ರಮುಖ ಯೋಜನೆಯಾಗಿ ಪ್ರಸಿದ್ಧವಾಗಿದೆ. ಇದು ಪ್ರವಾಸಿಗರ ಗಮನವನ್ನು ಸೆಳೆಯುತ್ತದೆ ಮತ್ತು ನಗರವನ್ನು ಸುಂದರ ಹಾಗೂ ಆಕರ್ಷಕವಾಗಿ ತೋರಿಸುತ್ತದೆ. ಈ ಸೌಂದರ್ಯವನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲು ಉದ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಒಮ್ಮೆಲೇ ಒಂದು ಸಾವಿರ ಡ್ರೋನ್‌ಗಳನ್ನು ಬಳಸಿ 135 ಕಿ. ಮೀ. ಉದ್ದದ ದೀಪಾಲಂಕಾರದ ದೃಶ್ಯ ವೈಭವನ್ನು ಸೆರೆ ಹಿಡಿಯಲು ಚಿಂತಿಸಲಾಗುತ್ತಿದೆ. ಆದರೆ, ಸದ್ಯಕ್ಕೆ ಇದಕ್ಕಾಗಿ ಯಾವುದೇ ಹಣ ಮೀಸಲಿ ಟ್ಟಿಲ್ಲ. ಹಾಗಾಗಿ, ಪ್ರಾಯೋಜಕರ ಸಹಾಯ ದಿಂದ ಈ ಯೋಜನೆ ಜಾರಿಗೆ ತರಲು ಪ್ರಯತ್ನಿಸಲಾಗುತ್ತಿದೆ ಎಂದು ತಾಂತ್ರಿಕ ನಿರ್ದೇಶಕ ಕೆ. ಎಂ. ಮುನಿಗೋಪಾಲರಾಜು ಹೇಳಿದರು.

 

ಕೆ.ಬಿ. ರಮೇಶ ನಾಯಕ

ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ನಾನು ಮೂಲತಃ ಚಾಮರಾಜನಗರ ತಾಲ್ಲೂಕು ಮತ್ತು ಜಿಲ್ಲೆಯ ಕಣ್ಣೇಗಾಲ ಗ್ರಾಮದವನು. ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಪ್ರಾಥಮಿಕ,ಪ್ರೌಢಶಿಕ್ಷಣ, ಚಾಮರಾಜನಗರದಲ್ಲಿ ಪಿಯುಸಿ ವ್ಯಾಸಂಗ ಮಾಡಿದ ನಾನು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದೇನೆ. 1992ರಿಂದ 2002ರವರೆಗೆ ಮೈಸೂರು ಮಿತ್ರ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಸೇವೆ ಸಲ್ಲಿಸಿದ ಬಳಿಕ 2002ರಿಂದ 2012ರವರೆಗೆ ಸಂಯುಕ್ತ ಕರ್ನಾಟಕ ಮೈಸೂರು ಪ್ರಾದೇಶಿಕ ಕಚೇರಿಯಲ್ಲಿ ವರದಿಗಾರನಾಗಿ, 2013ರಿಂದ 2015ರವರೆಗೆ ಹಾಸನ ಮತ್ತು ಮೈಸೂರಿನಲ್ಲಿ ವಿಜಯ ಕರ್ನಾಟಕ ಹಿರಿಯ ವರದಿಗಾರನಾಗಿ, 2015ರಿಂದ 2017ರವರೆಗೆ ಸಂಯುಕ್ತ ಕರ್ನಾಟಕ ಮುಖ್ಯ ವರದಿಗಾರನಾಗಿ, 2017ರಿಂದ 2020 ಜೂನ್‌ವರಗೆ ವಿಶ್ವವಾಣಿ ಮೈಸೂರು ಬ್ಯೂರೋ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸಿದ್ದೇನೆ.

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

4 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

4 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

4 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

4 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

5 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

5 hours ago