Andolana originals

ದಸರಾ ಕ್ರೀಡಾಕೂಟ; ಈ ಬಾರಿ ಏಕ ಮಾದರಿ ಆಟೋಟ

ಜಿ. ತಂಗಂ ಗೋಪಿನಾಥಂ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದಲ್ಲಿ ಯುವ ಸಂಭ್ರಮ, ಯುವ ದಸರಾ ಯುವಜನರ ಅಚ್ಚುಮೆಚ್ಚು ಕಾರ್ಯಕ್ರಮಗಳು ಎಂಬುದು ನಿಸ್ಸಂಶಯ. ಅವುಗಳ ಹೊರತಾಗಿ ದಸರಾ ಕ್ರೀಡಾಕೂಟವು ಯುವ ಸಮೂಹವನ್ನು ಸೂಜಿಗಲ್ಲಿನಂತೆ ಸೆಳೆಯುತ್ತದೆ. ಇಲ್ಲಿ ಗೆಲ್ಲಲೇಬೇಕು ಎಂಬುದು ಪ್ರತಿಯೊಬ್ಬ ಕ್ರೀಡಾಪಟುವಿನ ಕನಸು, ಏಕೆಂದರೆ ಮುಂದಿನ ಕ್ರೀಡಾ ಹಾದಿಯಲ್ಲಿ ಅದೊಂದು ಮೈಲಿಗಲ್ಲು ಆಗುತ್ತದೆ.

ಕ್ರೀಡಾಕೂಟದಲ್ಲಿ ಓಟದ ಸ್ಪರ್ಧೆಯಲ್ಲಿ ಗೆದ್ದವರು ಒಲಿಂಪಿಕ್ಸ್‌ನಲ್ಲೂ ಸ್ಪಽಸಿದ ಉದಾಹರಣೆಗಳಿವೆ. ಅ. ೩ರಿಂದ ೬ರವರೆಗೆ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ ನಡೆಯಲಿದ್ದು, ಇದಕ್ಕಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಕಲ ಸಿದ್ಧತೆ ನಡೆಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಕಳೆದ ವರ್ಷ ಪ್ರಥಮ ಬಾರಿಗೆ ರಾಜ್ಯ ಮಟ್ಟದ ಪ್ರತಿಭಾನ್ವೇಷಣಾ ದಸರಾ ಕ್ರೀಡಾಕೂಟ ‘ಸಿಎಂ ಕಪ್’ ಹಾಗೂ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ ‘ಸಿಎಂ ಕಪ್’ ಎಂಬ ಹೆಸರಿನಲ್ಲಿ ಎರಡು ಮಾದರಿಯಲ್ಲಿ ಕ್ರೀಡಾಕೂಟ ೧೦ ದಿನಗಳ ಕಾಲ ನಡೆದಿತ್ತು.

ಆದರೆ, ಈ ಬಾರಿ ನಾಲ್ಕು ದಿನಗಳ ಕಾಲ ರಾಜ್ಯ ಮಟ್ಟದ ಒಂದು ಮಾದರಿಯ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ. ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದ ಜೊತೆಗೆ ಮೈಸೂರು ವಿಶ್ವವಿದ್ಯಾಲಯದ ಸ್ಪೋರ್ಟ್ಸ್ ಪೆವಿಲಿಯನ್ ಸೇರಿದಂತೆ ವಿವಿಧೆಡೆ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲು ಸಿದ್ಧತೆ ನಡೆದಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಮೈಸೂರು, ಬೆಳಗಾವಿ ಎಂಬ ೫ ಕ್ರೀಡಾ ವಿಭಾಗಗಳನ್ನು ರಚಿಸಲಾಗಿದೆ. ಈ ವಿಭಾಗಗಳಲ್ಲಿ ಉತ್ತಮ ಪ್ರದರ್ಶನ ತೋರಿದ ಕ್ರೀಡಾಪಟುಗಳು ಇಲ್ಲಿ ಪ್ರಶಸ್ತಿಗಾಗಿ ಸೆಣೆಸಲಿದ್ದಾರೆ.

ಗುಂಪು ಸ್ಪರ್ಧೆ: ಜಿಮ್ನಾಸ್ಟಿಕ್, ವಾಲಿಬಾಲ್, ಕಬಡ್ಡಿ, ಖೋ-ಖೋ, ಶಟಲ್ ಬ್ಯಾಡ್ಮಿಂಟನ್, ಬಾಸ್ಕೆಟ್ ಬಾಲ್, ಹ್ಯಾಂಡ್ ಬಾಲ್, ಟೇಬಲ್ ಟೆನಿಸ್, ಟೆನಿಸ್, ಫುಟ್ಬಾಲ್, ಬ್ಯಾಡ್ಮಿಂಟನ್, ಹಾಕಿ ಪಂದ್ಯಾವಳಿ. (ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ).

ಅಥ್ಲೆಟಿಕ್ಸ್: ೧೦೦, ೨೦೦, ೪೦೦, ೮೦೦, ೧,೫೦೦ ಮೀಟರ್ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, ೪೧೦೦ ಮೀ. ಹಾಗೂ ೪೪೦೦ ಮೀ. ರಿಲೇ ಸ್ಪರ್ಧೆಗಳು ನಡೆಯಲಿವೆ.

ಪುರುಷರಿಗೆ ೫,೦೦೦ ಮೀ. ಓಟ, ೧೧೦ ಮೀ. ಹರ್ಡಲ್ಸ್ ನಡೆಯಲಿದೆ. ಮಹಿಳೆಯರಿಗೆ ೩,೦೦೦ ಮೀ. ಓಟ, ೧೦೦ ಮೀ. ಹರ್ಡಲ್ಸ್ ಓಟ ನಡೆಯಲಿದೆ.

ಈಜು ಸ್ಪರ್ಧೆ: ೧೦೦, ೨೦೦, ೪೦೦ ಮೀ. ಫ್ರೀ ಸ್ಟೈಲ್, ೧೦೦, ೨೦೦ ಮೀ. ಬ್ಯಾಕ್ ಸ್ಟ್ರೋಕ್, ೧೦೦ ಮೀ. ಬಟರ್ -, ೧೦೦, ೨೦೦ ಮೀ. ಬ್ರೆಸ್ಟ್ ಸ್ಟ್ರೋಕ್, ೨೦೦ ಮೀ. ಇಂಡುವಿಜಲ್ ಮಿಡ್ಲೆ, ೪೧೦೦ ಮೀ. ಫ್ರೀಸ್ಟೈಲ್ ರಿಲೇ ಇರುತ್ತದೆ. ಮೇಲಿನ ಇಷ್ಟು ಸ್ಪರ್ಧೆಗಳು ತಾಲ್ಲೂಕು, ಜಿಲ್ಲೆ, ವಿಭಾಗ ಮತ್ತು ರಾಜ್ಯ ಮಟ್ಟದಲ್ಲಿ ನಡೆಯಲಿವೆ. ಸೈಕ್ಲೋಥಾನ್, ದೇಹದಾರ್ಢ್ಯ ಹಾಗೂ ಮ್ಯಾರಾಥಾನ್ ಸ್ಪರ್ಧೆ ತಾಲ್ಲೂಕು, ಜಿಲ್ಲೆ ಮತ್ತು ವಿಭಾಗ ಮಟ್ಟದಲ್ಲಿ ನಡೆಯುವುದಿಲ್ಲ. ಬದಲಾಗಿ ಮೈಸೂರಿನಲ್ಲಿ ರಾಜ್ಯ ಮಟ್ಟದ ಸ್ಪರ್ಧೆ ನಡೆಯಲಿದೆ.

ಸ್ಪರ್ಧೆಗಳ ವಿವರ:೩,೫೦೦ ಸ್ಪರ್ಧಿಯಾಗಿ ಪ್ರತಿ ವಿಭಾಗದಿಂದ ೯೦೦ ಕ್ರೀಡಾಪಟುಗಳು ಸೇರಿದಂತೆ ಒಟ್ಟು ೫ ವಿಭಾಗಗಳಿಂದ ೩,೫೦೦ ಸ್ಪರ್ಧಿಗಳುಈ ಕ್ರೀಡಾಕೂಟದಲ್ಲಿ ಪ್ರತಿಭೆಯನ್ನು ಪ್ರದರ್ಶಿಸಲಿದ್ದಾರೆ. ಅಥ್ಲೆಟಿಕ್ಸ್, ಗುಂಪು ಮಾದರಿ ಸೇರಿದಂತೆ ಬರೋಬ್ಬರಿ ೨೭ ಕ್ರೀಡೆಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ೩ ಕೋಟಿ ರೂ. ಅನುದಾನ ಈ ಬಾರಿಯ ದಸರಾ ಕ್ರೀಡಾಕೂಟಕ್ಕೆ ಒಟ್ಟು ೬ ಕೋಟಿ ರೂ. ಅನುದಾನ ಕೋರಿ ಕ್ರೀಡಾ ಇಲಾಖೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿತ್ತು. ಸರ್ಕಾರ ಸದ್ಯ ಶೇ. ೫೦ ರಷ್ಟು ಅಂದರೆ, ೩ ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಸೆ. ೨೬, ೨೭ರಂದು ಜಿಲ್ಲಾ ಮಟ್ಟದ ಕ್ರೀಡಾಕೂಟ ಮೈಸೂರು ಜಿಲ್ಲೆಯ ೯ ತಾಲ್ಲೂಕುಗಳಲ್ಲಿ ನಡೆದ ೨೦೨೪-೨೫ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟದ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ, ಜಿಲ್ಲಾ ಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟವನ್ನು ಸೆ. ೨೬ ಮತ್ತು ೨೭ರಂದು ನಗರದ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಇಲ್ಲಿನ ವಿಜೇತರನ್ನು ವಿಭಾಗೀಯ ಮಟ್ಟದ ಸ್ಪರ್ಧೆಗೆ ಆಯ್ಕೆ ಮಾಡಲಾಗುತ್ತದೆ. ಅದರಲ್ಲಿ ಜಯ ಗಳಿಸಿದವರಿಗೆ ದಸರಾ ಕ್ರೀಡಾಕೂಟದಲ್ಲಿ ಭಾಗಿಯಾಗಲು ಅವಕಾಶ ನೀಡಲಾಗುತ್ತದೆ.

ಪ್ರಸಕ್ತ ಸಾಲಿನ ದಸರಾ ಕ್ರೀಡಾಕೂಟಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಕಲ ಸಿದ್ದತೆ ನಡೆಸುತ್ತಿದ್ದು, ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣ, ಮೈಸೂರು ವಿವಿಯ ಸ್ಪೋರ್ಟ್ಸ್ ಪೆವಿಲಿಯನ್ ಸೇರಿದಂತೆ ವಿವಿಧೆಡೆ ಅ. ೩ ರಿಂದ ೬ ರವರೆಗೆ ರಾಜ್ಯ ಮಟ್ಟದ ಸ್ಪರ್ಧೆಗಳು ನಡೆಯಲಿವೆ. ೩,೫೦೦ ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದು, ಕ್ರೀಡಾಕೂಟಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ? ಭಾಸ್ಕರ್ ನಾಯಕ್, ಸಹಾಯಕ ನಿರ್ದೇಶಕ

 

ಜಿ ತಂಗಂ ಗೋಪಿನಾಥಂ

ಮೂಲತಃ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಗೋಪಿನಾಥಂ ಗ್ರಾಮದವನಾದ ನಾನು ಸದ್ಯ,‌ ಮೈಸೂರಿನಲ್ಲಿ ನೆಲೆಸಿದ್ದೇನೆ. 2019ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಮಹಾರಾಜ ಕಾಲೇಜಿನಲ್ಲಿ ಬಿಎ ( ಇತಿಹಾಸ, ಐಚ್ಛಿಕ ಕನ್ನಡ, ಪತ್ರಿಕೋದ್ಯಮ ) ಪದವಿಯನ್ನು ಮುಗಿಸಿದ್ದೇನೆ. ನಂತರ 2021ರಲ್ಲಿ‌ ಮೈಸೂರು ವಿಶ್ವವಿದ್ಯಾನಿಲಯದ‌ಲ್ಲಿ ಎಂಎ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ‌ 2 ವರ್ಷಗಳ ‌ಕಾಲ ಅನುಭವ ಪಡೆದುಕೊಂಡಿದ್ದೇನೆ. ವಿಜಯವಾಣಿ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ಸಹಾಯಕ ವರದಿಗಾರನಾಗಿ ಕೆಲಸ ಮಾಡಿದ್ದೇನೆ. ಕಳೆದ 8 ತಿಂಗಳಿಂದ ಮೈಸೂರಿನ ಆಂದೋಲನ‌ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.

Recent Posts

ವಿಧಾನಸೌಧದಲ್ಲಿ ಮಾಧ್ಯಮಕ್ಕೆ ಇನ್ನಷ್ಟು ನಿರ್ಬಂಧ

ಬೆಂಗಳೂರು : ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಕಾರ್ಯವ್ಯಾಪ್ತಿಯನ್ನು ನಿರ್ಬಂಧಿಸುವ ಕುರಿತು ವಾರ್ತಾ ಇಲಾಖೆಗೆ ಸರ್ಕಾರ ಪತ್ರ ಬರೆದಿದೆ. ಪತ್ರದಲ್ಲಿ, ಮಾಧ್ಯಮಗಳು…

10 mins ago

ನಾಳೆಯಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ ಪುನರಾರಂಭ

ಮೈಸೂರು : ನಾಗರಹೊಳೆ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನವನಗಳಲ್ಲಿ ಫೆಬ್ರವರಿ 19ರಿಂದ ಸಫಾರಿ ಪುನರಾರಂಭವಾಗಲಿದೆ ಎಂದು ಅರಣ್ಯ ಸಚಿವ ಈಶ್ವರ…

55 mins ago

ಮೈಸೂರು | ಸ್ವಚ್ಛ ಸರ್ವೇಕ್ಷಣೆ ; ಜಾಥಾ ನಡೆಸಿ ಜನರಿಗೆ ಜಾಗೃತಿ

ಮೈಸೂರು : ಸ್ವಚ್ಛ ಸರ್ವೇಕ್ಷಣೆ-2026ರ ಅಂಗವಾಗಿ ನಗರಪಾಲಿಕೆ ವತಿಯಿಂದ ಶೌಚಾಲಯ ಬಳಕೆ ಹಾಗೂ ಸ್ವಚ್ಛತೆ ಕುರಿತು ವಿದ್ಯಾರ್ಥಿಗಳಿಂದ ಜಾಥಾ ಹಾಗೂ…

1 hour ago

ಜ್ಞಾನದ ಜೊತೆ ಕೌಶಲವೂ ಮುಖ್ಯ : ಪರೀಕ್ಷಾಂಗ ಕುಲಸಚಿವ ನಾಗರಾಜು ಅಭಿಮತ

ಮೈಸೂರು : ಇಂದಿನ ಕಾಲದಲ್ಲಿ ಜ್ಞಾನದ ಜೊತೆಗೆ ಕೌಶಲ ತುಂಬಾ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,…

2 hours ago

ಡಿ.ಕೆ.ಶಿವಕುಮಾರ್‌ ನಿಯತ್ತಿನ ಸೈನಿಕ: ಶಾಸಕ ರವಿಕುಮಾರ್‌ ಗಣಿಗ ಬ್ಯಾಟಿಂಗ್‌

ಮಂಡ್ಯ: ಸಚಿವ ಎಚ್‌.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಶಾಸಕ…

4 hours ago

ಸಾಗರದಲ್ಲಿ ಭಾರತದ ಸಾರ್ವಭೌಮತ್ವ: ವಿಶಾಖಪಟ್ಟಣಂನಲ್ಲಿ ರಾಷ್ಟ್ರಪತಿ ಮುರ್ಮುರಿಂದ ನೌಕಾಶಕ್ತಿ ಪ್ರದರ್ಶನ ವೀಕ್ಷಣೆ

ವಿಶಾಖಪಟ್ಟಣಂ: ಭಾರತೀಯ ನೌಕಾಪಡೆಯ ವಿಶ್ವದ ವಿವಿಧ ದೇಶಗಳ ನೌಕಾಪಡೆಗಳೊಂದಿಗೆ ಸೇರಿ ತನ್ನ ಅಪ್ರತಿಮ ಶೌರ್ಯ ಹಾಗೂ ಸನ್ನದ್ಧತೆಯನ್ನು ಬುಧವಾರ ವಿಶಾಖಪಟ್ಟಣಂ…

4 hours ago