Andolana originals

ಫಿರಂಗಿ ಗಾಡಿಗಳಿಗೆ ಪೂಜೆ; ಇಂದಿನಿಂದ ಕುಶಾಲು ತೋಪು ಸಿಡಿಸುವ ಒಣ ತಾಲೀಮು

ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ಅರಮನೆಯ ಆವರಣದಲ್ಲಿ ಸಿದ್ಧತೆಗಳು ಭರದಿಂದ ಸಾಗಿದ್ದು, ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆ ಹಾಗೂ ಅಶ್ವಾರೋಹಿ ದಳಕ್ಕೆ ಭಾರೀ ಶಬ್ದ ಪರಿಚಯ ಮಾಡಿಸುವ ಸಲುವಾಗಿ ಕುಶಾಲುತೋಪು ಸಿಡಿಸುವ ಫಿರಂಗಿ ಗಾಡಿಗಳಿಗೆ ಗುರುವಾರ ಪೂಜೆ ಸಲ್ಲಿಸಲಾಯಿತು. ನಗರದ ಅಂಬಾವಿಲಾಸ ಅರಮನೆ ಆವರಣದ ಆನೆ ಬಾಗಿಲು ಬಳಿ 11 ಫಿರಂಗಿ ಗಾಡಿಗಳಿಗೆ ಪೂಜೆ ಸಲ್ಲಿಸಲಾಯಿತು. ಅರ್ಚಕ ಪ್ರಹ್ಲಾದ್ ರಾವ್ ನೇತೃತ್ವದಲ್ಲಿ ಧಾರ್ಮಿಕ ಕಾರ್ಯ ನೆರವೇರಿತು. ನಗರ ಪೊಲೀಸ್ ಆಯುಕ್ತ ರಾದ ಸೀಮಾ ಲಾಟ್ಕರ್ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಸೀಮಾ ಲಾಟ್ಕರ್,

ಶುಕ್ರವಾರದಿಂದ ಕುಶಾಲು ತೋಪು ಸಿಡಿಸುವ ಒಣ ತಾಲೀಮು ಆರಂಭಿಸಲಾಗುತ್ತದೆ. ನಗರ ಸಶಸ್ತ್ರ ಮೀಸಲು ಪಡೆಯ ೩೦ಕ್ಕೂ ಹೆಚ್ಚು ಸಿಬ್ಬಂದಿ ಪೂರ್ವ ತಾಲೀಮಿನಲ್ಲಿ ಭಾಗಿಯಾಗಲಿದ್ದಾರೆ. ಜಂಬೂಸವಾರಿ ಮೆರವಣಿಗೆ ಸಮೀಪಿಸುತ್ತಿದ್ದಂತೆ ಪೂರ್ಣ ಪ್ರಮಾಣದ ತಾಲೀಮು ನಡೆಸಲಿದ್ದಾರೆ ಎಂದು ಹೇಳಿದರು. ವಸ್ತುಪ್ರದರ್ಶನ ಆವರಣದಲ್ಲಿ ಮೂರು ದಿನ ಕುಶಾಲು ತೋಪು ಸಿಡಿಸಿ ಗಜಪಡೆ, ಅಶ್ವಾರೋಹಿ ದಳಗಳಿಗೆ ಭಾರೀ ಶಬ್ದದ ಪರಿಚಯ ಮಾಡಿಕೊಡಲಾಗುತ್ತದೆ. ಅ. 12ರಂದು ಜಂಬೂಸವಾರಿ ವೇಳೆ ಕುಶಾಲು ತೋಪು ಸಿಡಿಸಲಾಗುತ್ತದೆ ಎಂದರು.

ದಸರಾ ಗಜಪಡೆ ಹಾಗೂ ಕುದುರೆಗಳ ಸಮ್ಮುಖದಲ್ಲಿ ಪೂರ್ಣ ಪ್ರಮಾಣದ ತಾಲೀಮು ನಡೆಸಲಾಗುತ್ತದೆ. ಕುಶಾಲು ತೋಪು ಸಿಡಿಸಿದಾಗ ಆನೆ, ಕುದುರೆಗಳು ಬೆದರದಿರಲೆಂದು ತಾಲೀಮು ನಡೆಸಲಾಗುವುದು. -ಸೀಮಾ ಲಾಟ್ಕರ್, ನಗರ ಪೊಲೀಸ್ ಆಯುಕ್ತರು.

andolana

Recent Posts

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

58 mins ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

1 hour ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

2 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

4 hours ago

ಓದುಗರ ಪತ್ರ: ಫಿಜಿಯೋ ಥೆರಪಿ ಸೌಲಭ್ಯ ಕಲ್ಪಿಸಿ

ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…

7 hours ago

ಓದುಗರ ಪತ್ರ: ಮರಗಳ ಗಣತಿ ಸ್ವಾಗತಾರ್ಹ

ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…

7 hours ago