Andolana originals

ಫಿರಂಗಿ ಗಾಡಿಗಳಿಗೆ ಪೂಜೆ; ಇಂದಿನಿಂದ ಕುಶಾಲು ತೋಪು ಸಿಡಿಸುವ ಒಣ ತಾಲೀಮು

ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ಅರಮನೆಯ ಆವರಣದಲ್ಲಿ ಸಿದ್ಧತೆಗಳು ಭರದಿಂದ ಸಾಗಿದ್ದು, ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆ ಹಾಗೂ ಅಶ್ವಾರೋಹಿ ದಳಕ್ಕೆ ಭಾರೀ ಶಬ್ದ ಪರಿಚಯ ಮಾಡಿಸುವ ಸಲುವಾಗಿ ಕುಶಾಲುತೋಪು ಸಿಡಿಸುವ ಫಿರಂಗಿ ಗಾಡಿಗಳಿಗೆ ಗುರುವಾರ ಪೂಜೆ ಸಲ್ಲಿಸಲಾಯಿತು. ನಗರದ ಅಂಬಾವಿಲಾಸ ಅರಮನೆ ಆವರಣದ ಆನೆ ಬಾಗಿಲು ಬಳಿ 11 ಫಿರಂಗಿ ಗಾಡಿಗಳಿಗೆ ಪೂಜೆ ಸಲ್ಲಿಸಲಾಯಿತು. ಅರ್ಚಕ ಪ್ರಹ್ಲಾದ್ ರಾವ್ ನೇತೃತ್ವದಲ್ಲಿ ಧಾರ್ಮಿಕ ಕಾರ್ಯ ನೆರವೇರಿತು. ನಗರ ಪೊಲೀಸ್ ಆಯುಕ್ತ ರಾದ ಸೀಮಾ ಲಾಟ್ಕರ್ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಸೀಮಾ ಲಾಟ್ಕರ್,

ಶುಕ್ರವಾರದಿಂದ ಕುಶಾಲು ತೋಪು ಸಿಡಿಸುವ ಒಣ ತಾಲೀಮು ಆರಂಭಿಸಲಾಗುತ್ತದೆ. ನಗರ ಸಶಸ್ತ್ರ ಮೀಸಲು ಪಡೆಯ ೩೦ಕ್ಕೂ ಹೆಚ್ಚು ಸಿಬ್ಬಂದಿ ಪೂರ್ವ ತಾಲೀಮಿನಲ್ಲಿ ಭಾಗಿಯಾಗಲಿದ್ದಾರೆ. ಜಂಬೂಸವಾರಿ ಮೆರವಣಿಗೆ ಸಮೀಪಿಸುತ್ತಿದ್ದಂತೆ ಪೂರ್ಣ ಪ್ರಮಾಣದ ತಾಲೀಮು ನಡೆಸಲಿದ್ದಾರೆ ಎಂದು ಹೇಳಿದರು. ವಸ್ತುಪ್ರದರ್ಶನ ಆವರಣದಲ್ಲಿ ಮೂರು ದಿನ ಕುಶಾಲು ತೋಪು ಸಿಡಿಸಿ ಗಜಪಡೆ, ಅಶ್ವಾರೋಹಿ ದಳಗಳಿಗೆ ಭಾರೀ ಶಬ್ದದ ಪರಿಚಯ ಮಾಡಿಕೊಡಲಾಗುತ್ತದೆ. ಅ. 12ರಂದು ಜಂಬೂಸವಾರಿ ವೇಳೆ ಕುಶಾಲು ತೋಪು ಸಿಡಿಸಲಾಗುತ್ತದೆ ಎಂದರು.

ದಸರಾ ಗಜಪಡೆ ಹಾಗೂ ಕುದುರೆಗಳ ಸಮ್ಮುಖದಲ್ಲಿ ಪೂರ್ಣ ಪ್ರಮಾಣದ ತಾಲೀಮು ನಡೆಸಲಾಗುತ್ತದೆ. ಕುಶಾಲು ತೋಪು ಸಿಡಿಸಿದಾಗ ಆನೆ, ಕುದುರೆಗಳು ಬೆದರದಿರಲೆಂದು ತಾಲೀಮು ನಡೆಸಲಾಗುವುದು. -ಸೀಮಾ ಲಾಟ್ಕರ್, ನಗರ ಪೊಲೀಸ್ ಆಯುಕ್ತರು.

andolana

Recent Posts

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

1 hour ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

2 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

5 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

5 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

5 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

5 hours ago