Andolana originals

2ನೇ ಹಂತದ ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ

ಜನಪ್ರತಿನಿಧಿಗಳು,ಅಧಿಕಾರಿಗಳ ಅನುಪಸ್ಥಿತಿಯಲ್ಲಿ ಪೂಜೆ ಸಲ್ಲಿಸಿದ ಅರಣ್ಯ ಇಲಾಖೆ

 

ಮೈಸೂರು: ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಎರಡನೇ ಹಂತದಲ್ಲಿ ಆಗಮಿಸಿದ ಮಹೇಂದ್ರ ನೇತೃತ್ವದ ಐದು ಆನೆಗಳನ್ನೂ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು. ಮೊದಲ ಹಂತದಲ್ಲಿ ಆಗಮಿಸಿದ್ದ 9 ಆನೆಗಳೊಂದಿಗೆ ಈಗ ಬಂದಿರುವ ಐದು ಆನೆಗಳೂ ಸೇರಿದಂತೆ ಒಟ್ಟು 14 ಆನೆಗಳು ಭಾನುವಾರದಿಂದ ಪೂರ್ಣ ಪ್ರಮಾಣದಲ್ಲಿ ತಾಲೀಮು ಶುರು ಮಾಡಲಿವೆ. ಜನಪ್ರತಿನಿಧಿ ಗಳು, ಜಿಲ್ಲಾಮಟ್ಟದ ಅಧಿಕಾರಿಗಳ ಅನುಪಸ್ಥಿತಿ ಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಜಯಮಾರ್ತಾಂಡ ದಾರದ ಬಳಿ ಪೂಜೆ ಸಲ್ಲಿಸಿ ಪುಷ್ಪಾರ್ಚನೆಗೈದು ಬರಮಾಡಿಕೊಂಡರು.

ದುಬಾರೆ ಶಿಬಿರದಿಂದ ಪ್ರಶಾಂತ, ಸುಗ್ರೀವ, ಮತ್ತಿಗೋಡು ಶಿಬಿರದಿಂದ ಮಹೇಂದ್ರ, ರಾಮ ಪುರ ಶಿಬಿರದಿಂದ ಹಿರಣ್ಯ, ದೊಡ್ಡಹರವೆ ಶಿಬಿರ ದಿಂದ ಬಂದ ಲಕ್ಷ್ಮೀ ಆನೆಗಳನ್ನು ಮೊದಲಿಗೆ ಲಾರಿಯಿಂದ ಸುರಕ್ಷಿತವಾಗಿ ಕೆಳಗಿಳಿಸಿಕೊಂಡು ನಂತರ ಕೊಳದಲ್ಲಿ ಸ್ನಾನ ಮಾಡಿಸಲಾಯಿತು. ನಂತರ, ಜಯ ಮಾರ್ತಾಂಡ ದ್ವಾರದ ಬಳಿ ಕರೆ ತಂದು ನಿಲ್ಲಿಸಲಾಯಿತು. ಅರ್ಚಕ ಪ್ರಹ್ಲಾದ್ ರಾವ್ ಅವರು ಐದೂ ಆನೆಗಳ ಪಾದ ಪೂಜೆ ಮಾಡಿದರು.

ನಂತರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಾಲತಿ ಪ್ರಿಯ, ಡಿಸಿಎಫ್ ಡಾ.ಐ.ಬಿ.ಪ್ರಭುಗೌಡ, ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ಅವರು ಪುಷ್ಪಾರ್ಚನೆ ಮಾಡಿ ಕಬ್ಬು, ಬೆಲ್ಲ, ಚಕ್ಕುಲಿ, ಕೋಡುಬಳೆ ನೀಡಿ ಸ್ವಾಗತಿಸಿದರು. ಬಳಿಕ ನೇರವಾಗಿ ಆನೆಗಳು ಬಿಡಾರ ಹೂಡಿರುವ ಸ್ಥಳಕ್ಕೆ ಕರೆದೊಯ್ಯ ಲಾಯಿತು. ಎರಡನೇ ಹಂತದಲ್ಲಿ ಆಗಮಿಸಿದ್ದ ರಿಂದಾಗಿ ಸರಳವಾಗಿ ಸ್ವಾಗತಿಸಲಾಯಿತು. ಮಾವುತರು, ಕಾವಾಡಿಗಳ ಕುಟುಂಬದವರಿಗೆ ಅರಮನೆ ಮಂಡಳಿ ವತಿಯಿಂದ ಬೇಕಾದ ಪರಿಕರಗಳನ್ನು ವಿತರಿಸಲಾಯಿತು.

ಮೊದಲನೇ ಹಂತದಲ್ಲಿ 9, ಎರಡನೇ ಹಂತದಲ್ಲಿ 5 ಆನೆಗಳು ಅರಮನೆಗೆ ಆಗಮಿಸಿವೆ. ಶುಕ್ರವಾರ ಎರಡನೇ ಹಂತದ ಆನೆಗಳಿಗಷ್ಟೇ ತೂಕ ಪರೀಕ್ಷೆ ನಡೆಯಲಿದೆ. ನಂತರ ಎಲ್ಲ ಆನೆಗಳಿಗೂ ಪೂರ್ಣ ಪ್ರಮಾಣದಲ್ಲಿ ತಾಲೀಮು ಶುರುವಾಗಲಿದೆ. -ಡಾ.ಐ.ಬಿ.ಪ್ರಭುಗೌಡ, ಉಪ ಅರಣ್ಯ ಸಂರಕ್ಷಣಾಧಿಕಾರಿ.

ಮೊದಲ ಬಾರಿ ದಸರೆಯಲ್ಲಿ ಲಕ್ಷ್ಮೀ ಮೈಸೂರು: ಎರಡನೇ ಹಂತದಲ್ಲಿ ಆಗಮಿಸಿರುವ ಐದು ಆನೆಗಳ ಪೈಕಿ ಲಕ್ಷ್ಮೀ ಮೊದಲ ಬಾರಿಗೆ ದಸರಾ ಮಹೋತ್ಸವದಲ್ಲಿ ಭಾಗಿಯಾಗುತ್ತಿದೆ. ಈ ಆನೆಯು ಸರ್ಕಸ್ ಆನೆಯಾಗಿದ್ದು, 2015ರಲ್ಲಿ ಅರಣ್ಯ ಇಲಾಖೆಯ ವಶಕ್ಕೆ ಪಡೆದುಕೊಳ್ಳಲಾಗಿತ್ತು. ಈಗ ಸಂಪೂರ್ಣ ಆರೋಗ್ಯವಾಗಿದೆ.

ಪ್ರಶಾಂತ: ವರ್ಷ-51, ಎತ್ತರ-2.61 ಮೀ. ತೂಕ-4,650 ಕೆ.ಜಿ. ಶಿಬಿರ-ದುಬಾರೆ

ಲಕ್ಷ್ಮೀ: ವರ್ಷ-53, ಎತ್ತರ -2.52 ಮೀ, ತೂಕ-3,000-3,500 ಕೆ.ಜಿ. ಶಿಬಿರ-ದೊಡ್ಡಹರವೆ

ಮಹೇಂದ್ರ: ವರ್ಷ-41 ಎತ್ತರ-2.75 ಮೀ. ತೂಕ-3,150 ಕೆ.ಜಿ, ಶಿಬಿರ: ಮತ್ತಿಗೋಡು

ಸುಗ್ರೀವ: ವರ್ಷ-42, ಎತ್ತರ-2.77 ಮೀ, ತೂಕ – 4,800-5,000 ಕೆಜಿ, ಶಿಬಿರ-ದುಬಾರೆ

ಹಿರಣ್ಯ: ವರ್ಷ-47, ಎತ್ತರ-2.40 ಮೀ, ತೂಕ-2,800 ಕೆ.ಜಿ, ಶಿಬಿರ-ರಾಮಪುರ

andolana

Recent Posts

ಆದಿತ್ಯ ಬಿರ್ಲಾ ಒಕ್ಕೂಟದ ತೆಕ್ಕೆಗೆ ಆರ್‌ಸಿಬಿ : 16,706 ಕೋಟಿಗೆ ಖರೀದಿ

ಬೆಂಗಳೂರು : ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ಬರೋಬ್ಬರಿ 16,706 ಕೋಟಿ ಮೊತ್ತಕ್ಕೆ ಮಾರಾಟವಾಗುವ…

6 mins ago

ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಹೊಸದಿಲ್ಲಿ : ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತೆ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ…

21 mins ago

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

11 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

11 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

14 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

14 hours ago