Andolana originals

2ನೇ ಹಂತದ ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ

ಜನಪ್ರತಿನಿಧಿಗಳು,ಅಧಿಕಾರಿಗಳ ಅನುಪಸ್ಥಿತಿಯಲ್ಲಿ ಪೂಜೆ ಸಲ್ಲಿಸಿದ ಅರಣ್ಯ ಇಲಾಖೆ

 

ಮೈಸೂರು: ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಎರಡನೇ ಹಂತದಲ್ಲಿ ಆಗಮಿಸಿದ ಮಹೇಂದ್ರ ನೇತೃತ್ವದ ಐದು ಆನೆಗಳನ್ನೂ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು. ಮೊದಲ ಹಂತದಲ್ಲಿ ಆಗಮಿಸಿದ್ದ 9 ಆನೆಗಳೊಂದಿಗೆ ಈಗ ಬಂದಿರುವ ಐದು ಆನೆಗಳೂ ಸೇರಿದಂತೆ ಒಟ್ಟು 14 ಆನೆಗಳು ಭಾನುವಾರದಿಂದ ಪೂರ್ಣ ಪ್ರಮಾಣದಲ್ಲಿ ತಾಲೀಮು ಶುರು ಮಾಡಲಿವೆ. ಜನಪ್ರತಿನಿಧಿ ಗಳು, ಜಿಲ್ಲಾಮಟ್ಟದ ಅಧಿಕಾರಿಗಳ ಅನುಪಸ್ಥಿತಿ ಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಜಯಮಾರ್ತಾಂಡ ದಾರದ ಬಳಿ ಪೂಜೆ ಸಲ್ಲಿಸಿ ಪುಷ್ಪಾರ್ಚನೆಗೈದು ಬರಮಾಡಿಕೊಂಡರು.

ದುಬಾರೆ ಶಿಬಿರದಿಂದ ಪ್ರಶಾಂತ, ಸುಗ್ರೀವ, ಮತ್ತಿಗೋಡು ಶಿಬಿರದಿಂದ ಮಹೇಂದ್ರ, ರಾಮ ಪುರ ಶಿಬಿರದಿಂದ ಹಿರಣ್ಯ, ದೊಡ್ಡಹರವೆ ಶಿಬಿರ ದಿಂದ ಬಂದ ಲಕ್ಷ್ಮೀ ಆನೆಗಳನ್ನು ಮೊದಲಿಗೆ ಲಾರಿಯಿಂದ ಸುರಕ್ಷಿತವಾಗಿ ಕೆಳಗಿಳಿಸಿಕೊಂಡು ನಂತರ ಕೊಳದಲ್ಲಿ ಸ್ನಾನ ಮಾಡಿಸಲಾಯಿತು. ನಂತರ, ಜಯ ಮಾರ್ತಾಂಡ ದ್ವಾರದ ಬಳಿ ಕರೆ ತಂದು ನಿಲ್ಲಿಸಲಾಯಿತು. ಅರ್ಚಕ ಪ್ರಹ್ಲಾದ್ ರಾವ್ ಅವರು ಐದೂ ಆನೆಗಳ ಪಾದ ಪೂಜೆ ಮಾಡಿದರು.

ನಂತರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಾಲತಿ ಪ್ರಿಯ, ಡಿಸಿಎಫ್ ಡಾ.ಐ.ಬಿ.ಪ್ರಭುಗೌಡ, ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ಅವರು ಪುಷ್ಪಾರ್ಚನೆ ಮಾಡಿ ಕಬ್ಬು, ಬೆಲ್ಲ, ಚಕ್ಕುಲಿ, ಕೋಡುಬಳೆ ನೀಡಿ ಸ್ವಾಗತಿಸಿದರು. ಬಳಿಕ ನೇರವಾಗಿ ಆನೆಗಳು ಬಿಡಾರ ಹೂಡಿರುವ ಸ್ಥಳಕ್ಕೆ ಕರೆದೊಯ್ಯ ಲಾಯಿತು. ಎರಡನೇ ಹಂತದಲ್ಲಿ ಆಗಮಿಸಿದ್ದ ರಿಂದಾಗಿ ಸರಳವಾಗಿ ಸ್ವಾಗತಿಸಲಾಯಿತು. ಮಾವುತರು, ಕಾವಾಡಿಗಳ ಕುಟುಂಬದವರಿಗೆ ಅರಮನೆ ಮಂಡಳಿ ವತಿಯಿಂದ ಬೇಕಾದ ಪರಿಕರಗಳನ್ನು ವಿತರಿಸಲಾಯಿತು.

ಮೊದಲನೇ ಹಂತದಲ್ಲಿ 9, ಎರಡನೇ ಹಂತದಲ್ಲಿ 5 ಆನೆಗಳು ಅರಮನೆಗೆ ಆಗಮಿಸಿವೆ. ಶುಕ್ರವಾರ ಎರಡನೇ ಹಂತದ ಆನೆಗಳಿಗಷ್ಟೇ ತೂಕ ಪರೀಕ್ಷೆ ನಡೆಯಲಿದೆ. ನಂತರ ಎಲ್ಲ ಆನೆಗಳಿಗೂ ಪೂರ್ಣ ಪ್ರಮಾಣದಲ್ಲಿ ತಾಲೀಮು ಶುರುವಾಗಲಿದೆ. -ಡಾ.ಐ.ಬಿ.ಪ್ರಭುಗೌಡ, ಉಪ ಅರಣ್ಯ ಸಂರಕ್ಷಣಾಧಿಕಾರಿ.

ಮೊದಲ ಬಾರಿ ದಸರೆಯಲ್ಲಿ ಲಕ್ಷ್ಮೀ ಮೈಸೂರು: ಎರಡನೇ ಹಂತದಲ್ಲಿ ಆಗಮಿಸಿರುವ ಐದು ಆನೆಗಳ ಪೈಕಿ ಲಕ್ಷ್ಮೀ ಮೊದಲ ಬಾರಿಗೆ ದಸರಾ ಮಹೋತ್ಸವದಲ್ಲಿ ಭಾಗಿಯಾಗುತ್ತಿದೆ. ಈ ಆನೆಯು ಸರ್ಕಸ್ ಆನೆಯಾಗಿದ್ದು, 2015ರಲ್ಲಿ ಅರಣ್ಯ ಇಲಾಖೆಯ ವಶಕ್ಕೆ ಪಡೆದುಕೊಳ್ಳಲಾಗಿತ್ತು. ಈಗ ಸಂಪೂರ್ಣ ಆರೋಗ್ಯವಾಗಿದೆ.

ಪ್ರಶಾಂತ: ವರ್ಷ-51, ಎತ್ತರ-2.61 ಮೀ. ತೂಕ-4,650 ಕೆ.ಜಿ. ಶಿಬಿರ-ದುಬಾರೆ

ಲಕ್ಷ್ಮೀ: ವರ್ಷ-53, ಎತ್ತರ -2.52 ಮೀ, ತೂಕ-3,000-3,500 ಕೆ.ಜಿ. ಶಿಬಿರ-ದೊಡ್ಡಹರವೆ

ಮಹೇಂದ್ರ: ವರ್ಷ-41 ಎತ್ತರ-2.75 ಮೀ. ತೂಕ-3,150 ಕೆ.ಜಿ, ಶಿಬಿರ: ಮತ್ತಿಗೋಡು

ಸುಗ್ರೀವ: ವರ್ಷ-42, ಎತ್ತರ-2.77 ಮೀ, ತೂಕ – 4,800-5,000 ಕೆಜಿ, ಶಿಬಿರ-ದುಬಾರೆ

ಹಿರಣ್ಯ: ವರ್ಷ-47, ಎತ್ತರ-2.40 ಮೀ, ತೂಕ-2,800 ಕೆ.ಜಿ, ಶಿಬಿರ-ರಾಮಪುರ

andolana

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

5 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

5 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

5 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

5 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

5 hours ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

6 hours ago