Andolana originals

2ನೇ ಹಂತದ ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ

ಜನಪ್ರತಿನಿಧಿಗಳು,ಅಧಿಕಾರಿಗಳ ಅನುಪಸ್ಥಿತಿಯಲ್ಲಿ ಪೂಜೆ ಸಲ್ಲಿಸಿದ ಅರಣ್ಯ ಇಲಾಖೆ

 

ಮೈಸೂರು: ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಎರಡನೇ ಹಂತದಲ್ಲಿ ಆಗಮಿಸಿದ ಮಹೇಂದ್ರ ನೇತೃತ್ವದ ಐದು ಆನೆಗಳನ್ನೂ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು. ಮೊದಲ ಹಂತದಲ್ಲಿ ಆಗಮಿಸಿದ್ದ 9 ಆನೆಗಳೊಂದಿಗೆ ಈಗ ಬಂದಿರುವ ಐದು ಆನೆಗಳೂ ಸೇರಿದಂತೆ ಒಟ್ಟು 14 ಆನೆಗಳು ಭಾನುವಾರದಿಂದ ಪೂರ್ಣ ಪ್ರಮಾಣದಲ್ಲಿ ತಾಲೀಮು ಶುರು ಮಾಡಲಿವೆ. ಜನಪ್ರತಿನಿಧಿ ಗಳು, ಜಿಲ್ಲಾಮಟ್ಟದ ಅಧಿಕಾರಿಗಳ ಅನುಪಸ್ಥಿತಿ ಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಜಯಮಾರ್ತಾಂಡ ದಾರದ ಬಳಿ ಪೂಜೆ ಸಲ್ಲಿಸಿ ಪುಷ್ಪಾರ್ಚನೆಗೈದು ಬರಮಾಡಿಕೊಂಡರು.

ದುಬಾರೆ ಶಿಬಿರದಿಂದ ಪ್ರಶಾಂತ, ಸುಗ್ರೀವ, ಮತ್ತಿಗೋಡು ಶಿಬಿರದಿಂದ ಮಹೇಂದ್ರ, ರಾಮ ಪುರ ಶಿಬಿರದಿಂದ ಹಿರಣ್ಯ, ದೊಡ್ಡಹರವೆ ಶಿಬಿರ ದಿಂದ ಬಂದ ಲಕ್ಷ್ಮೀ ಆನೆಗಳನ್ನು ಮೊದಲಿಗೆ ಲಾರಿಯಿಂದ ಸುರಕ್ಷಿತವಾಗಿ ಕೆಳಗಿಳಿಸಿಕೊಂಡು ನಂತರ ಕೊಳದಲ್ಲಿ ಸ್ನಾನ ಮಾಡಿಸಲಾಯಿತು. ನಂತರ, ಜಯ ಮಾರ್ತಾಂಡ ದ್ವಾರದ ಬಳಿ ಕರೆ ತಂದು ನಿಲ್ಲಿಸಲಾಯಿತು. ಅರ್ಚಕ ಪ್ರಹ್ಲಾದ್ ರಾವ್ ಅವರು ಐದೂ ಆನೆಗಳ ಪಾದ ಪೂಜೆ ಮಾಡಿದರು.

ನಂತರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಾಲತಿ ಪ್ರಿಯ, ಡಿಸಿಎಫ್ ಡಾ.ಐ.ಬಿ.ಪ್ರಭುಗೌಡ, ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ಅವರು ಪುಷ್ಪಾರ್ಚನೆ ಮಾಡಿ ಕಬ್ಬು, ಬೆಲ್ಲ, ಚಕ್ಕುಲಿ, ಕೋಡುಬಳೆ ನೀಡಿ ಸ್ವಾಗತಿಸಿದರು. ಬಳಿಕ ನೇರವಾಗಿ ಆನೆಗಳು ಬಿಡಾರ ಹೂಡಿರುವ ಸ್ಥಳಕ್ಕೆ ಕರೆದೊಯ್ಯ ಲಾಯಿತು. ಎರಡನೇ ಹಂತದಲ್ಲಿ ಆಗಮಿಸಿದ್ದ ರಿಂದಾಗಿ ಸರಳವಾಗಿ ಸ್ವಾಗತಿಸಲಾಯಿತು. ಮಾವುತರು, ಕಾವಾಡಿಗಳ ಕುಟುಂಬದವರಿಗೆ ಅರಮನೆ ಮಂಡಳಿ ವತಿಯಿಂದ ಬೇಕಾದ ಪರಿಕರಗಳನ್ನು ವಿತರಿಸಲಾಯಿತು.

ಮೊದಲನೇ ಹಂತದಲ್ಲಿ 9, ಎರಡನೇ ಹಂತದಲ್ಲಿ 5 ಆನೆಗಳು ಅರಮನೆಗೆ ಆಗಮಿಸಿವೆ. ಶುಕ್ರವಾರ ಎರಡನೇ ಹಂತದ ಆನೆಗಳಿಗಷ್ಟೇ ತೂಕ ಪರೀಕ್ಷೆ ನಡೆಯಲಿದೆ. ನಂತರ ಎಲ್ಲ ಆನೆಗಳಿಗೂ ಪೂರ್ಣ ಪ್ರಮಾಣದಲ್ಲಿ ತಾಲೀಮು ಶುರುವಾಗಲಿದೆ. -ಡಾ.ಐ.ಬಿ.ಪ್ರಭುಗೌಡ, ಉಪ ಅರಣ್ಯ ಸಂರಕ್ಷಣಾಧಿಕಾರಿ.

ಮೊದಲ ಬಾರಿ ದಸರೆಯಲ್ಲಿ ಲಕ್ಷ್ಮೀ ಮೈಸೂರು: ಎರಡನೇ ಹಂತದಲ್ಲಿ ಆಗಮಿಸಿರುವ ಐದು ಆನೆಗಳ ಪೈಕಿ ಲಕ್ಷ್ಮೀ ಮೊದಲ ಬಾರಿಗೆ ದಸರಾ ಮಹೋತ್ಸವದಲ್ಲಿ ಭಾಗಿಯಾಗುತ್ತಿದೆ. ಈ ಆನೆಯು ಸರ್ಕಸ್ ಆನೆಯಾಗಿದ್ದು, 2015ರಲ್ಲಿ ಅರಣ್ಯ ಇಲಾಖೆಯ ವಶಕ್ಕೆ ಪಡೆದುಕೊಳ್ಳಲಾಗಿತ್ತು. ಈಗ ಸಂಪೂರ್ಣ ಆರೋಗ್ಯವಾಗಿದೆ.

ಪ್ರಶಾಂತ: ವರ್ಷ-51, ಎತ್ತರ-2.61 ಮೀ. ತೂಕ-4,650 ಕೆ.ಜಿ. ಶಿಬಿರ-ದುಬಾರೆ

ಲಕ್ಷ್ಮೀ: ವರ್ಷ-53, ಎತ್ತರ -2.52 ಮೀ, ತೂಕ-3,000-3,500 ಕೆ.ಜಿ. ಶಿಬಿರ-ದೊಡ್ಡಹರವೆ

ಮಹೇಂದ್ರ: ವರ್ಷ-41 ಎತ್ತರ-2.75 ಮೀ. ತೂಕ-3,150 ಕೆ.ಜಿ, ಶಿಬಿರ: ಮತ್ತಿಗೋಡು

ಸುಗ್ರೀವ: ವರ್ಷ-42, ಎತ್ತರ-2.77 ಮೀ, ತೂಕ – 4,800-5,000 ಕೆಜಿ, ಶಿಬಿರ-ದುಬಾರೆ

ಹಿರಣ್ಯ: ವರ್ಷ-47, ಎತ್ತರ-2.40 ಮೀ, ತೂಕ-2,800 ಕೆ.ಜಿ, ಶಿಬಿರ-ರಾಮಪುರ

andolana

Recent Posts

ಬಂಧನದಲ್ಲಿರುವ ಮುನಿರತ್ನ ಆರೋಗ್ಯದಲ್ಲಿ ದಿಢೀರ್‌ ಏರುಪೇರು: ಜಯದೇವ ಆಸ್ಪತ್ರೆಗೆ ದಾಖಲು

ಬೆಂಗಳೂರು: ಲಂಚ ಬೇಡಿಕೆ, ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ…

1 hour ago

ದಸರಾ ಚಲನಚಿತ್ರೋತ್ಸವ- 2024| ಉತ್ತಮ ಕಿರುಚಿತ್ರ ಆಯ್ಕೆಗೆ ಪರಿಣಿತರಿಂದ ವೀಕ್ಷಣೆ

ಐನಾಕ್ಸ್ ಚಿತ್ರಮಂದಿರದಲ್ಲಿ ಆಯ್ಕೆಯಾದ ಅತ್ಯುತ್ತಮ ಕಿರು ಚಿತ್ರಗಳ ಪ್ರದರ್ಶನ ಮೈಸೂರು : ದಸರಾ ಚಲನ ಚಿತ್ರೋತ್ಸವ 2024ರ ಅಂಗವಾಗಿ ಕಿರು ಚಿತ್ರಗಳ…

2 hours ago

ಮೈಶುಗರ್: 2.5 ಲಕ್ಷ ಟನ್‌ನಷ್ಟು ಕಬ್ಬು ಅರೆಯಲು ಯಾವುದೇ ತೊಂದರೆ ಇಲ್ಲ: ಡಾ: ಹೆಚ್.ಎಲ್ ನಾಗರಾಜು

ಮಂಡ್ಯ: ಮೈ ಶುಗರ್ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ಕಬ್ಬು ಕಟಾವು ಕೆಲಸ ನಡೆಯುತ್ತಿದ್ದು, ಪ್ರತಿದಿನ ಸುಮಾರು 3000 ಟನ್ ನಷ್ಟು…

2 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಆನೆ ಸಾವು

ಹನೂರು: ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವನ್ಯಜೀವಿ ವಲಯದ ಪಿ.ಜಿ ಪಾಳ್ಯ ಶಾಖೆ ಮಾವತ್ತೂರು…

2 hours ago

ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ: ಆರ್‌.ಅಶೋಕ ಆಗ್ರಹ

ಕಾಂಗ್ರೆಸ್‌ ಸರ್ಕಾರದ ತುಷ್ಟೀಕರಣ ರಾಜಕಾರಣ: ವಿಪಕ್ಷ ನಾಯಕ ಬೆಂಗಳೂರು: ನಾಗಮಂಗಲದ ಕೋಮುಗಲಭೆ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್‌ ಧ್ವಜ ಹಾರಿಸಿದ ಘಟನೆ ಹಾಗೂ…

3 hours ago

ಜೊತೆಗಿದ್ದ ಯುವತಿಗೆ ಲೈಂಗಿಕ ಕಿರುಕುಳ: ಕೊರಿಯೋಗ್ರಾಫರ್‌ ವಿರುದ್ಧ ದೂರು ದಾಖಲು

ಮೈಸೂರು: ಬಾಲಿವುಡ್‌ನಿಂದ ಸ್ಯಾಂಡಲ್‌ವುಡ್‌ ವರೆಗೂ ಅನೇಕ ದಕ್ಷಿಣ ಭಾರತದ ಸ್ಟಾರ್‌ ನಟರಿಗೆ ಕೊರಿಯೋಗ್ರಾಫರ್‌ ಮಾಡಿರುವ ಹೆಸರಾಂತ ತೆಲುಗು ಡ್ಯಾನ್ಸ್ ಕೊರಿಯೋಗ್ರಾಫರ್‌…

3 hours ago