Andolana originals

2ನೇ ಹಂತದ ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ

ಜನಪ್ರತಿನಿಧಿಗಳು,ಅಧಿಕಾರಿಗಳ ಅನುಪಸ್ಥಿತಿಯಲ್ಲಿ ಪೂಜೆ ಸಲ್ಲಿಸಿದ ಅರಣ್ಯ ಇಲಾಖೆ

 

ಮೈಸೂರು: ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಎರಡನೇ ಹಂತದಲ್ಲಿ ಆಗಮಿಸಿದ ಮಹೇಂದ್ರ ನೇತೃತ್ವದ ಐದು ಆನೆಗಳನ್ನೂ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು. ಮೊದಲ ಹಂತದಲ್ಲಿ ಆಗಮಿಸಿದ್ದ 9 ಆನೆಗಳೊಂದಿಗೆ ಈಗ ಬಂದಿರುವ ಐದು ಆನೆಗಳೂ ಸೇರಿದಂತೆ ಒಟ್ಟು 14 ಆನೆಗಳು ಭಾನುವಾರದಿಂದ ಪೂರ್ಣ ಪ್ರಮಾಣದಲ್ಲಿ ತಾಲೀಮು ಶುರು ಮಾಡಲಿವೆ. ಜನಪ್ರತಿನಿಧಿ ಗಳು, ಜಿಲ್ಲಾಮಟ್ಟದ ಅಧಿಕಾರಿಗಳ ಅನುಪಸ್ಥಿತಿ ಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಜಯಮಾರ್ತಾಂಡ ದಾರದ ಬಳಿ ಪೂಜೆ ಸಲ್ಲಿಸಿ ಪುಷ್ಪಾರ್ಚನೆಗೈದು ಬರಮಾಡಿಕೊಂಡರು.

ದುಬಾರೆ ಶಿಬಿರದಿಂದ ಪ್ರಶಾಂತ, ಸುಗ್ರೀವ, ಮತ್ತಿಗೋಡು ಶಿಬಿರದಿಂದ ಮಹೇಂದ್ರ, ರಾಮ ಪುರ ಶಿಬಿರದಿಂದ ಹಿರಣ್ಯ, ದೊಡ್ಡಹರವೆ ಶಿಬಿರ ದಿಂದ ಬಂದ ಲಕ್ಷ್ಮೀ ಆನೆಗಳನ್ನು ಮೊದಲಿಗೆ ಲಾರಿಯಿಂದ ಸುರಕ್ಷಿತವಾಗಿ ಕೆಳಗಿಳಿಸಿಕೊಂಡು ನಂತರ ಕೊಳದಲ್ಲಿ ಸ್ನಾನ ಮಾಡಿಸಲಾಯಿತು. ನಂತರ, ಜಯ ಮಾರ್ತಾಂಡ ದ್ವಾರದ ಬಳಿ ಕರೆ ತಂದು ನಿಲ್ಲಿಸಲಾಯಿತು. ಅರ್ಚಕ ಪ್ರಹ್ಲಾದ್ ರಾವ್ ಅವರು ಐದೂ ಆನೆಗಳ ಪಾದ ಪೂಜೆ ಮಾಡಿದರು.

ನಂತರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಾಲತಿ ಪ್ರಿಯ, ಡಿಸಿಎಫ್ ಡಾ.ಐ.ಬಿ.ಪ್ರಭುಗೌಡ, ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ಅವರು ಪುಷ್ಪಾರ್ಚನೆ ಮಾಡಿ ಕಬ್ಬು, ಬೆಲ್ಲ, ಚಕ್ಕುಲಿ, ಕೋಡುಬಳೆ ನೀಡಿ ಸ್ವಾಗತಿಸಿದರು. ಬಳಿಕ ನೇರವಾಗಿ ಆನೆಗಳು ಬಿಡಾರ ಹೂಡಿರುವ ಸ್ಥಳಕ್ಕೆ ಕರೆದೊಯ್ಯ ಲಾಯಿತು. ಎರಡನೇ ಹಂತದಲ್ಲಿ ಆಗಮಿಸಿದ್ದ ರಿಂದಾಗಿ ಸರಳವಾಗಿ ಸ್ವಾಗತಿಸಲಾಯಿತು. ಮಾವುತರು, ಕಾವಾಡಿಗಳ ಕುಟುಂಬದವರಿಗೆ ಅರಮನೆ ಮಂಡಳಿ ವತಿಯಿಂದ ಬೇಕಾದ ಪರಿಕರಗಳನ್ನು ವಿತರಿಸಲಾಯಿತು.

ಮೊದಲನೇ ಹಂತದಲ್ಲಿ 9, ಎರಡನೇ ಹಂತದಲ್ಲಿ 5 ಆನೆಗಳು ಅರಮನೆಗೆ ಆಗಮಿಸಿವೆ. ಶುಕ್ರವಾರ ಎರಡನೇ ಹಂತದ ಆನೆಗಳಿಗಷ್ಟೇ ತೂಕ ಪರೀಕ್ಷೆ ನಡೆಯಲಿದೆ. ನಂತರ ಎಲ್ಲ ಆನೆಗಳಿಗೂ ಪೂರ್ಣ ಪ್ರಮಾಣದಲ್ಲಿ ತಾಲೀಮು ಶುರುವಾಗಲಿದೆ. -ಡಾ.ಐ.ಬಿ.ಪ್ರಭುಗೌಡ, ಉಪ ಅರಣ್ಯ ಸಂರಕ್ಷಣಾಧಿಕಾರಿ.

ಮೊದಲ ಬಾರಿ ದಸರೆಯಲ್ಲಿ ಲಕ್ಷ್ಮೀ ಮೈಸೂರು: ಎರಡನೇ ಹಂತದಲ್ಲಿ ಆಗಮಿಸಿರುವ ಐದು ಆನೆಗಳ ಪೈಕಿ ಲಕ್ಷ್ಮೀ ಮೊದಲ ಬಾರಿಗೆ ದಸರಾ ಮಹೋತ್ಸವದಲ್ಲಿ ಭಾಗಿಯಾಗುತ್ತಿದೆ. ಈ ಆನೆಯು ಸರ್ಕಸ್ ಆನೆಯಾಗಿದ್ದು, 2015ರಲ್ಲಿ ಅರಣ್ಯ ಇಲಾಖೆಯ ವಶಕ್ಕೆ ಪಡೆದುಕೊಳ್ಳಲಾಗಿತ್ತು. ಈಗ ಸಂಪೂರ್ಣ ಆರೋಗ್ಯವಾಗಿದೆ.

ಪ್ರಶಾಂತ: ವರ್ಷ-51, ಎತ್ತರ-2.61 ಮೀ. ತೂಕ-4,650 ಕೆ.ಜಿ. ಶಿಬಿರ-ದುಬಾರೆ

ಲಕ್ಷ್ಮೀ: ವರ್ಷ-53, ಎತ್ತರ -2.52 ಮೀ, ತೂಕ-3,000-3,500 ಕೆ.ಜಿ. ಶಿಬಿರ-ದೊಡ್ಡಹರವೆ

ಮಹೇಂದ್ರ: ವರ್ಷ-41 ಎತ್ತರ-2.75 ಮೀ. ತೂಕ-3,150 ಕೆ.ಜಿ, ಶಿಬಿರ: ಮತ್ತಿಗೋಡು

ಸುಗ್ರೀವ: ವರ್ಷ-42, ಎತ್ತರ-2.77 ಮೀ, ತೂಕ – 4,800-5,000 ಕೆಜಿ, ಶಿಬಿರ-ದುಬಾರೆ

ಹಿರಣ್ಯ: ವರ್ಷ-47, ಎತ್ತರ-2.40 ಮೀ, ತೂಕ-2,800 ಕೆ.ಜಿ, ಶಿಬಿರ-ರಾಮಪುರ

andolana

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

2 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

2 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

2 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

3 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

4 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

4 hours ago