Andolana originals

2ನೇ ಹಂತದ ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ

ಜನಪ್ರತಿನಿಧಿಗಳು,ಅಧಿಕಾರಿಗಳ ಅನುಪಸ್ಥಿತಿಯಲ್ಲಿ ಪೂಜೆ ಸಲ್ಲಿಸಿದ ಅರಣ್ಯ ಇಲಾಖೆ

 

ಮೈಸೂರು: ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಎರಡನೇ ಹಂತದಲ್ಲಿ ಆಗಮಿಸಿದ ಮಹೇಂದ್ರ ನೇತೃತ್ವದ ಐದು ಆನೆಗಳನ್ನೂ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು. ಮೊದಲ ಹಂತದಲ್ಲಿ ಆಗಮಿಸಿದ್ದ 9 ಆನೆಗಳೊಂದಿಗೆ ಈಗ ಬಂದಿರುವ ಐದು ಆನೆಗಳೂ ಸೇರಿದಂತೆ ಒಟ್ಟು 14 ಆನೆಗಳು ಭಾನುವಾರದಿಂದ ಪೂರ್ಣ ಪ್ರಮಾಣದಲ್ಲಿ ತಾಲೀಮು ಶುರು ಮಾಡಲಿವೆ. ಜನಪ್ರತಿನಿಧಿ ಗಳು, ಜಿಲ್ಲಾಮಟ್ಟದ ಅಧಿಕಾರಿಗಳ ಅನುಪಸ್ಥಿತಿ ಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಜಯಮಾರ್ತಾಂಡ ದಾರದ ಬಳಿ ಪೂಜೆ ಸಲ್ಲಿಸಿ ಪುಷ್ಪಾರ್ಚನೆಗೈದು ಬರಮಾಡಿಕೊಂಡರು.

ದುಬಾರೆ ಶಿಬಿರದಿಂದ ಪ್ರಶಾಂತ, ಸುಗ್ರೀವ, ಮತ್ತಿಗೋಡು ಶಿಬಿರದಿಂದ ಮಹೇಂದ್ರ, ರಾಮ ಪುರ ಶಿಬಿರದಿಂದ ಹಿರಣ್ಯ, ದೊಡ್ಡಹರವೆ ಶಿಬಿರ ದಿಂದ ಬಂದ ಲಕ್ಷ್ಮೀ ಆನೆಗಳನ್ನು ಮೊದಲಿಗೆ ಲಾರಿಯಿಂದ ಸುರಕ್ಷಿತವಾಗಿ ಕೆಳಗಿಳಿಸಿಕೊಂಡು ನಂತರ ಕೊಳದಲ್ಲಿ ಸ್ನಾನ ಮಾಡಿಸಲಾಯಿತು. ನಂತರ, ಜಯ ಮಾರ್ತಾಂಡ ದ್ವಾರದ ಬಳಿ ಕರೆ ತಂದು ನಿಲ್ಲಿಸಲಾಯಿತು. ಅರ್ಚಕ ಪ್ರಹ್ಲಾದ್ ರಾವ್ ಅವರು ಐದೂ ಆನೆಗಳ ಪಾದ ಪೂಜೆ ಮಾಡಿದರು.

ನಂತರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಾಲತಿ ಪ್ರಿಯ, ಡಿಸಿಎಫ್ ಡಾ.ಐ.ಬಿ.ಪ್ರಭುಗೌಡ, ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ಅವರು ಪುಷ್ಪಾರ್ಚನೆ ಮಾಡಿ ಕಬ್ಬು, ಬೆಲ್ಲ, ಚಕ್ಕುಲಿ, ಕೋಡುಬಳೆ ನೀಡಿ ಸ್ವಾಗತಿಸಿದರು. ಬಳಿಕ ನೇರವಾಗಿ ಆನೆಗಳು ಬಿಡಾರ ಹೂಡಿರುವ ಸ್ಥಳಕ್ಕೆ ಕರೆದೊಯ್ಯ ಲಾಯಿತು. ಎರಡನೇ ಹಂತದಲ್ಲಿ ಆಗಮಿಸಿದ್ದ ರಿಂದಾಗಿ ಸರಳವಾಗಿ ಸ್ವಾಗತಿಸಲಾಯಿತು. ಮಾವುತರು, ಕಾವಾಡಿಗಳ ಕುಟುಂಬದವರಿಗೆ ಅರಮನೆ ಮಂಡಳಿ ವತಿಯಿಂದ ಬೇಕಾದ ಪರಿಕರಗಳನ್ನು ವಿತರಿಸಲಾಯಿತು.

ಮೊದಲನೇ ಹಂತದಲ್ಲಿ 9, ಎರಡನೇ ಹಂತದಲ್ಲಿ 5 ಆನೆಗಳು ಅರಮನೆಗೆ ಆಗಮಿಸಿವೆ. ಶುಕ್ರವಾರ ಎರಡನೇ ಹಂತದ ಆನೆಗಳಿಗಷ್ಟೇ ತೂಕ ಪರೀಕ್ಷೆ ನಡೆಯಲಿದೆ. ನಂತರ ಎಲ್ಲ ಆನೆಗಳಿಗೂ ಪೂರ್ಣ ಪ್ರಮಾಣದಲ್ಲಿ ತಾಲೀಮು ಶುರುವಾಗಲಿದೆ. -ಡಾ.ಐ.ಬಿ.ಪ್ರಭುಗೌಡ, ಉಪ ಅರಣ್ಯ ಸಂರಕ್ಷಣಾಧಿಕಾರಿ.

ಮೊದಲ ಬಾರಿ ದಸರೆಯಲ್ಲಿ ಲಕ್ಷ್ಮೀ ಮೈಸೂರು: ಎರಡನೇ ಹಂತದಲ್ಲಿ ಆಗಮಿಸಿರುವ ಐದು ಆನೆಗಳ ಪೈಕಿ ಲಕ್ಷ್ಮೀ ಮೊದಲ ಬಾರಿಗೆ ದಸರಾ ಮಹೋತ್ಸವದಲ್ಲಿ ಭಾಗಿಯಾಗುತ್ತಿದೆ. ಈ ಆನೆಯು ಸರ್ಕಸ್ ಆನೆಯಾಗಿದ್ದು, 2015ರಲ್ಲಿ ಅರಣ್ಯ ಇಲಾಖೆಯ ವಶಕ್ಕೆ ಪಡೆದುಕೊಳ್ಳಲಾಗಿತ್ತು. ಈಗ ಸಂಪೂರ್ಣ ಆರೋಗ್ಯವಾಗಿದೆ.

ಪ್ರಶಾಂತ: ವರ್ಷ-51, ಎತ್ತರ-2.61 ಮೀ. ತೂಕ-4,650 ಕೆ.ಜಿ. ಶಿಬಿರ-ದುಬಾರೆ

ಲಕ್ಷ್ಮೀ: ವರ್ಷ-53, ಎತ್ತರ -2.52 ಮೀ, ತೂಕ-3,000-3,500 ಕೆ.ಜಿ. ಶಿಬಿರ-ದೊಡ್ಡಹರವೆ

ಮಹೇಂದ್ರ: ವರ್ಷ-41 ಎತ್ತರ-2.75 ಮೀ. ತೂಕ-3,150 ಕೆ.ಜಿ, ಶಿಬಿರ: ಮತ್ತಿಗೋಡು

ಸುಗ್ರೀವ: ವರ್ಷ-42, ಎತ್ತರ-2.77 ಮೀ, ತೂಕ – 4,800-5,000 ಕೆಜಿ, ಶಿಬಿರ-ದುಬಾರೆ

ಹಿರಣ್ಯ: ವರ್ಷ-47, ಎತ್ತರ-2.40 ಮೀ, ತೂಕ-2,800 ಕೆ.ಜಿ, ಶಿಬಿರ-ರಾಮಪುರ

andolana

Recent Posts

ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್?

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್ ನೀಡುವ ಸಾಧ್ಯತೆ ಇದೆ. ಪ್ರತಿ ವರ್ಷದಂತೆ ಈ ವರ್ಷವೂ ಮೆಟ್ರೊ…

12 mins ago

ಕಾಂಗ್ರೆಸ್‌ ಹೈಕಮಾಂಡ್‌ಗೆ ಕರ್ನಾಟಕ ರಾಜ್ಯವೇ ಎಟಿಎಂ: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿಗಳು ಅಬಕಾರಿ ವಿಚಾರದಲ್ಲಿ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬುದು ಬಿಜೆಪಿ ಹಾಗೂ ಜೆಡಿಎಸ್‌…

12 mins ago

ಫೆ.14ರಿಂದ 18ರವರೆಗೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ: ಸಿದ್ಧತೆ ಪರಿಶೀಲಿಸಿದ ಎಈ ರಘು

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.14 ರಿಂದ 18ರವರೆಗೆ…

38 mins ago

ಅಂತರರಾಷ್ಟ್ರೀಯ ವಾಣಿಜ್ಯ ಮೇಳ 2026: ಉತ್ಪಾದನೋತ್ತರ ಕೃಷಿ ಕಾರ್ಯಕ್ರಮವನ್ನು ಯಶ್ವಸಿಗೊಳಿಸಿ: ಎನ್.ಚಲುವರಾಯಸ್ವಾಮಿ

ಬೆಂಗಳೂರು: ನಮ್ಮ ಸರ್ಕಾರವು 2017ರಲ್ಲಿ ಪ್ರಾರಂಭಿಸಿದ ಸಾವಯವ ಮತ್ತು ಸಿರಿಧಾನ್ಯ ಮೇಳವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮ್ಮೆಲ್ಲರ ಹೆಮ್ಮೆ…

1 hour ago

ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ತಡೆ: ಕೇಂದ್ರ ಅರಣ್ಯ ಸಚಿವರ ಜೊತೆ ಎಚ್‌ಡಿಕೆ ಮಾತುಕತೆ

ನವದೆಹಲಿ: ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್‌…

1 hour ago

ಫೆ.10ಕ್ಕೆ ಹಸಗೂಲಿ ಪಾರ್ವತಾಂಬೆ ದೇವಸ್ಥಾನ ಮೊದಲ ವರ್ಷದ ಅರಾಧನೆ ಮಹೋತ್ಸವ

ಹಳ್ಳಿಕಾರ್ ಜೋಡೆತ್ತುಗಳ ಪ್ರದರ್ಶನ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಹಸಗೂಲಿ ಗ್ರಾಮದಲ್ಲಿ ಕಳೆದ ವರ್ಷ ಶ್ರೀ ಅಲ್ಲಹಳ್ಳಿ ಪಾರ್ವತಾಂಬೆ ನೂತನ…

1 hour ago