Andolana originals

ಮೈಸೂರು ದಸರಾ 2024: ಹಾಲು ಕರೆಯುವ ಸ್ಪರ್ಧೆ ಬಹುಮಾನ ಮೊತ್ತ ದ್ವಿಗುಣ

ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ರೈತ ದಸರಾದಲ್ಲಿ ಗ್ರಾಮೀಣ ಪ್ರದೇಶದ ರೈತರ ಪ್ರಮುಖ ಕಾರ್ಯಕ್ರಮವಾಗಿರುವ ಹಾಲು ಕರೆಯುವ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನೀಡುವ ಬಹುಮಾನವನ್ನು ದ್ವಿಗುಣಗೊಳಿಸಲಾಗಿದೆ ಎಂದು ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಹೇಳಿದರು.

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ರೈತ ದಸರಾ ಕಾರ್ಯಕ್ರಮದ ಅಽಕ ಹಾಲು ಕರೆಯುವ ಸ್ಪರ್ಧೆ ಹಾಗೂ ಶ್ವಾನ ಪ್ರದರ್ಶನ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಅ. ೬ ಮತ್ತು ೭ರಂದು ಜೆ. ಕೆ. ಮೈದಾನದಲ್ಲಿ ನಡೆಯುವ ಹಾಲು ಕರೆಯುವ ಸ್ಪರ್ಧೆಗೆ ಬಹುಮಾನಗಳ ಮೊತ್ತವನ್ನು ಈ ಹಿಂದಿನ ವರ್ಷಗಳಿಗಿಂತ ದ್ವಿಗುಣಗೊಳಿಸಲಾಗಿದೆ ಎಂದರು. ಅ. ೬ರಂದು ನಡೆಯುವ ಶ್ವಾನ ಪ್ರದರ್ಶನದಲ್ಲಿ ನಾಗರಿಕರು ತಮ್ಮ ಶ್ವಾನಗಳೊಂದಿಗೆ ಭಾಗವಹಿಸ ಬೇಕು ಎಂದು ಮನವಿ ಮಾಡಿದರು. ರೈತ ದಸರಾ ಉಪ ಸಮಿತಿ ಉಪ ವಿಶೇಷಾಧಿಕಾರಿ ಡಾ. ಎಂ. ಕೃಷ್ಣರಾಜು, ಕಾರ್ಯಾಧ್ಯಕ್ಷ ಕೆ. ಜಿ. ರವಿ, ಸಹ ಕಾರ್ಯದರ್ಶಿ ಡಾ. ನಾಗರಾಜು, ಜಿ. ಎಚ್. ಮಂಜುನಾಥ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಪ್ರಥಮ ಬಹುಮಾನವಾಗಿ ೧ ಲಕ್ಷ ರೂ., ದ್ವಿತೀಯ ಬಹುಮಾನವಾಗಿ ೮೦ ಸಾವಿರ ರೂ. , ತೃತೀಯ ೬೦ ಸಾವಿರ ರೂ. , ನಾಲ್ಕನೇ ಬಹುಮಾನವಾಗಿ ೪೦ ಸಾವಿರ ರೂ. ಗೆ ನಿಗದಿಪಡಿಸಲಾಗಿದೆ. ಈ ಸ್ಪರ್ಧೆಗೆ ರಾಜ್ಯದಾದ್ಯಂತ ಅತಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು, ಹೈನುಗಾರರು ಉತ್ತಮ ತಳಿಯ ರಾಸುಗಳೊಂದಿಗೆ ಭಾಗವಹಿಸಲು ಮತ್ತು ಬಹುಮಾನ ಗೆಲ್ಲುವುದಕ್ಕೆ ಉತ್ತೇಜಿಸಲು ಇಂತಹ ನಿರ್ಧಾರ ಮಾಡಲಾಗಿದೆ. – ಕೆ. ವೆಂಕಟೇಶ್, ಪಶು ಸಂಗೋಪನಾ ಸಚಿವ

 

 

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

8 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

35 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago