Andolana originals

ಮೈಸೂರು ದಸರಾ 2024: ಹಾಲು ಕರೆಯುವ ಸ್ಪರ್ಧೆ ಬಹುಮಾನ ಮೊತ್ತ ದ್ವಿಗುಣ

ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ರೈತ ದಸರಾದಲ್ಲಿ ಗ್ರಾಮೀಣ ಪ್ರದೇಶದ ರೈತರ ಪ್ರಮುಖ ಕಾರ್ಯಕ್ರಮವಾಗಿರುವ ಹಾಲು ಕರೆಯುವ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನೀಡುವ ಬಹುಮಾನವನ್ನು ದ್ವಿಗುಣಗೊಳಿಸಲಾಗಿದೆ ಎಂದು ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಹೇಳಿದರು.

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ರೈತ ದಸರಾ ಕಾರ್ಯಕ್ರಮದ ಅಽಕ ಹಾಲು ಕರೆಯುವ ಸ್ಪರ್ಧೆ ಹಾಗೂ ಶ್ವಾನ ಪ್ರದರ್ಶನ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಅ. ೬ ಮತ್ತು ೭ರಂದು ಜೆ. ಕೆ. ಮೈದಾನದಲ್ಲಿ ನಡೆಯುವ ಹಾಲು ಕರೆಯುವ ಸ್ಪರ್ಧೆಗೆ ಬಹುಮಾನಗಳ ಮೊತ್ತವನ್ನು ಈ ಹಿಂದಿನ ವರ್ಷಗಳಿಗಿಂತ ದ್ವಿಗುಣಗೊಳಿಸಲಾಗಿದೆ ಎಂದರು. ಅ. ೬ರಂದು ನಡೆಯುವ ಶ್ವಾನ ಪ್ರದರ್ಶನದಲ್ಲಿ ನಾಗರಿಕರು ತಮ್ಮ ಶ್ವಾನಗಳೊಂದಿಗೆ ಭಾಗವಹಿಸ ಬೇಕು ಎಂದು ಮನವಿ ಮಾಡಿದರು. ರೈತ ದಸರಾ ಉಪ ಸಮಿತಿ ಉಪ ವಿಶೇಷಾಧಿಕಾರಿ ಡಾ. ಎಂ. ಕೃಷ್ಣರಾಜು, ಕಾರ್ಯಾಧ್ಯಕ್ಷ ಕೆ. ಜಿ. ರವಿ, ಸಹ ಕಾರ್ಯದರ್ಶಿ ಡಾ. ನಾಗರಾಜು, ಜಿ. ಎಚ್. ಮಂಜುನಾಥ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಪ್ರಥಮ ಬಹುಮಾನವಾಗಿ ೧ ಲಕ್ಷ ರೂ., ದ್ವಿತೀಯ ಬಹುಮಾನವಾಗಿ ೮೦ ಸಾವಿರ ರೂ. , ತೃತೀಯ ೬೦ ಸಾವಿರ ರೂ. , ನಾಲ್ಕನೇ ಬಹುಮಾನವಾಗಿ ೪೦ ಸಾವಿರ ರೂ. ಗೆ ನಿಗದಿಪಡಿಸಲಾಗಿದೆ. ಈ ಸ್ಪರ್ಧೆಗೆ ರಾಜ್ಯದಾದ್ಯಂತ ಅತಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು, ಹೈನುಗಾರರು ಉತ್ತಮ ತಳಿಯ ರಾಸುಗಳೊಂದಿಗೆ ಭಾಗವಹಿಸಲು ಮತ್ತು ಬಹುಮಾನ ಗೆಲ್ಲುವುದಕ್ಕೆ ಉತ್ತೇಜಿಸಲು ಇಂತಹ ನಿರ್ಧಾರ ಮಾಡಲಾಗಿದೆ. – ಕೆ. ವೆಂಕಟೇಶ್, ಪಶು ಸಂಗೋಪನಾ ಸಚಿವ

 

 

andolana

Recent Posts

ರಾಜ್ಯದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ನಾಯಕತ್ವ ಗೊಂದಲ ಸೃಷ್ಟಿ ಮಾಡಿಲ್ಲ: ಮಲ್ಲಿಕಾರ್ಜುನ ಖರ್ಗೆ

ಕಲಬುರ್ಗಿ: ರಾಜ್ಯದಲ್ಲಿ ನಾಯಕತ್ವ ಗೊಂದಲವನ್ನು ಹೈಕಮಾಂಡ್‌ ಸೃಷ್ಟಿ ಮಾಡಿಲ್ಲ. ಲೋಕಲ್‌ನವರೇ ಮಾಡಿಕೊಂಡಿದ್ದಾರೆ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್‌…

2 mins ago

ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ

ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ…

32 mins ago

ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಾಕಿದ ದುಷ್ಕರ್ಮಿಗಳು

ಮಂಡ್ಯ: ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದುಷ್ಕರ್ಮಿಗಳ ಅಮಾನವೀಯ ಕೃತ್ಯ ಪಾಂಡವಪುರ ತಾಲ್ಲೂಕಿನ ಚಿಕ್ಕಕೊಪ್ಪಲು…

51 mins ago

ರಾಜ್ಯದ ಮಹಿಳೆಯರಿಗೆ ಗುಡ್‌ನ್ಯೂಸ್:‌ ನಾಳೆಯಿಂದಲೇ ಬ್ಯಾಂಕ್‌ ಖಾತೆಗೆ ಗೃಹಲಕ್ಷ್ಮೀ ಹಣ

ಬೆಂಗಳೂರು: ರಾಜ್ಯದ ಪ್ರತಿ ಯಜಮಾನಿಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ಕೊಟ್ಟಿದೆ. ಸೋಮವಾರದಿಂದಲೇ ಪ್ರತಿ ಮನೆ ಗೃಹಲಕ್ಷ್ಮೀಯರ…

1 hour ago

ಹುಲಿ ಸೆರೆಗೆ ಚಾಮರಾಜನಗರದಲ್ಲಿ ಆಪರೇಷನ್‌ ಬೀಸ್ಟ್‌ ಆರಂಭ: ಡ್ರೋನ್‌ ಮೂಲಕ ಕಾರ್ಯಾಚರಣೆ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…

2 hours ago

ಅಕ್ರಮವಾಗಿ ಕೇರಳಕ್ಕೆ ಜಾನುವಾರು ಸಾಗಾಟ: ಇಬ್ಬರ ಬಂಧನ

ಮಡಿಕೇರಿ: ಗೋವುಗಳನ್ನು ಸಾಕಣೆ ಮಾಡಲೆಂದು ಖರೀದಿಸಿ ಅಕ್ರಮವಾಗಿ ಕೇರಳದ ಕಸಾಯಿಖಾನೆಗೆ ಸಾಗಣೆ ಮಾಡಲು ಯತ್ನಿಸಿದ್ದ ಇಬ್ಬರನ್ನು ವಿರಾಜಪೇಟೆ ನಗರ ಠಾಣೆ…

2 hours ago