ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ರೈತ ದಸರಾದಲ್ಲಿ ಗ್ರಾಮೀಣ ಪ್ರದೇಶದ ರೈತರ ಪ್ರಮುಖ ಕಾರ್ಯಕ್ರಮವಾಗಿರುವ ಹಾಲು ಕರೆಯುವ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನೀಡುವ ಬಹುಮಾನವನ್ನು ದ್ವಿಗುಣಗೊಳಿಸಲಾಗಿದೆ ಎಂದು ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಹೇಳಿದರು.
ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ರೈತ ದಸರಾ ಕಾರ್ಯಕ್ರಮದ ಅಽಕ ಹಾಲು ಕರೆಯುವ ಸ್ಪರ್ಧೆ ಹಾಗೂ ಶ್ವಾನ ಪ್ರದರ್ಶನ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಅ. ೬ ಮತ್ತು ೭ರಂದು ಜೆ. ಕೆ. ಮೈದಾನದಲ್ಲಿ ನಡೆಯುವ ಹಾಲು ಕರೆಯುವ ಸ್ಪರ್ಧೆಗೆ ಬಹುಮಾನಗಳ ಮೊತ್ತವನ್ನು ಈ ಹಿಂದಿನ ವರ್ಷಗಳಿಗಿಂತ ದ್ವಿಗುಣಗೊಳಿಸಲಾಗಿದೆ ಎಂದರು. ಅ. ೬ರಂದು ನಡೆಯುವ ಶ್ವಾನ ಪ್ರದರ್ಶನದಲ್ಲಿ ನಾಗರಿಕರು ತಮ್ಮ ಶ್ವಾನಗಳೊಂದಿಗೆ ಭಾಗವಹಿಸ ಬೇಕು ಎಂದು ಮನವಿ ಮಾಡಿದರು. ರೈತ ದಸರಾ ಉಪ ಸಮಿತಿ ಉಪ ವಿಶೇಷಾಧಿಕಾರಿ ಡಾ. ಎಂ. ಕೃಷ್ಣರಾಜು, ಕಾರ್ಯಾಧ್ಯಕ್ಷ ಕೆ. ಜಿ. ರವಿ, ಸಹ ಕಾರ್ಯದರ್ಶಿ ಡಾ. ನಾಗರಾಜು, ಜಿ. ಎಚ್. ಮಂಜುನಾಥ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
ಪ್ರಥಮ ಬಹುಮಾನವಾಗಿ ೧ ಲಕ್ಷ ರೂ., ದ್ವಿತೀಯ ಬಹುಮಾನವಾಗಿ ೮೦ ಸಾವಿರ ರೂ. , ತೃತೀಯ ೬೦ ಸಾವಿರ ರೂ. , ನಾಲ್ಕನೇ ಬಹುಮಾನವಾಗಿ ೪೦ ಸಾವಿರ ರೂ. ಗೆ ನಿಗದಿಪಡಿಸಲಾಗಿದೆ. ಈ ಸ್ಪರ್ಧೆಗೆ ರಾಜ್ಯದಾದ್ಯಂತ ಅತಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು, ಹೈನುಗಾರರು ಉತ್ತಮ ತಳಿಯ ರಾಸುಗಳೊಂದಿಗೆ ಭಾಗವಹಿಸಲು ಮತ್ತು ಬಹುಮಾನ ಗೆಲ್ಲುವುದಕ್ಕೆ ಉತ್ತೇಜಿಸಲು ಇಂತಹ ನಿರ್ಧಾರ ಮಾಡಲಾಗಿದೆ. – ಕೆ. ವೆಂಕಟೇಶ್, ಪಶು ಸಂಗೋಪನಾ ಸಚಿವ
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…