ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ರೈತ ದಸರಾದಲ್ಲಿ ಗ್ರಾಮೀಣ ಪ್ರದೇಶದ ರೈತರ ಪ್ರಮುಖ ಕಾರ್ಯಕ್ರಮವಾಗಿರುವ ಹಾಲು ಕರೆಯುವ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನೀಡುವ ಬಹುಮಾನವನ್ನು ದ್ವಿಗುಣಗೊಳಿಸಲಾಗಿದೆ ಎಂದು ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಹೇಳಿದರು.
ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ರೈತ ದಸರಾ ಕಾರ್ಯಕ್ರಮದ ಅಽಕ ಹಾಲು ಕರೆಯುವ ಸ್ಪರ್ಧೆ ಹಾಗೂ ಶ್ವಾನ ಪ್ರದರ್ಶನ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಅ. ೬ ಮತ್ತು ೭ರಂದು ಜೆ. ಕೆ. ಮೈದಾನದಲ್ಲಿ ನಡೆಯುವ ಹಾಲು ಕರೆಯುವ ಸ್ಪರ್ಧೆಗೆ ಬಹುಮಾನಗಳ ಮೊತ್ತವನ್ನು ಈ ಹಿಂದಿನ ವರ್ಷಗಳಿಗಿಂತ ದ್ವಿಗುಣಗೊಳಿಸಲಾಗಿದೆ ಎಂದರು. ಅ. ೬ರಂದು ನಡೆಯುವ ಶ್ವಾನ ಪ್ರದರ್ಶನದಲ್ಲಿ ನಾಗರಿಕರು ತಮ್ಮ ಶ್ವಾನಗಳೊಂದಿಗೆ ಭಾಗವಹಿಸ ಬೇಕು ಎಂದು ಮನವಿ ಮಾಡಿದರು. ರೈತ ದಸರಾ ಉಪ ಸಮಿತಿ ಉಪ ವಿಶೇಷಾಧಿಕಾರಿ ಡಾ. ಎಂ. ಕೃಷ್ಣರಾಜು, ಕಾರ್ಯಾಧ್ಯಕ್ಷ ಕೆ. ಜಿ. ರವಿ, ಸಹ ಕಾರ್ಯದರ್ಶಿ ಡಾ. ನಾಗರಾಜು, ಜಿ. ಎಚ್. ಮಂಜುನಾಥ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
ಪ್ರಥಮ ಬಹುಮಾನವಾಗಿ ೧ ಲಕ್ಷ ರೂ., ದ್ವಿತೀಯ ಬಹುಮಾನವಾಗಿ ೮೦ ಸಾವಿರ ರೂ. , ತೃತೀಯ ೬೦ ಸಾವಿರ ರೂ. , ನಾಲ್ಕನೇ ಬಹುಮಾನವಾಗಿ ೪೦ ಸಾವಿರ ರೂ. ಗೆ ನಿಗದಿಪಡಿಸಲಾಗಿದೆ. ಈ ಸ್ಪರ್ಧೆಗೆ ರಾಜ್ಯದಾದ್ಯಂತ ಅತಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು, ಹೈನುಗಾರರು ಉತ್ತಮ ತಳಿಯ ರಾಸುಗಳೊಂದಿಗೆ ಭಾಗವಹಿಸಲು ಮತ್ತು ಬಹುಮಾನ ಗೆಲ್ಲುವುದಕ್ಕೆ ಉತ್ತೇಜಿಸಲು ಇಂತಹ ನಿರ್ಧಾರ ಮಾಡಲಾಗಿದೆ. – ಕೆ. ವೆಂಕಟೇಶ್, ಪಶು ಸಂಗೋಪನಾ ಸಚಿವ
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…
ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…
ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…
ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…