ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ರೈತ ದಸರಾದಲ್ಲಿ ಗ್ರಾಮೀಣ ಪ್ರದೇಶದ ರೈತರ ಪ್ರಮುಖ ಕಾರ್ಯಕ್ರಮವಾಗಿರುವ ಹಾಲು ಕರೆಯುವ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನೀಡುವ ಬಹುಮಾನವನ್ನು ದ್ವಿಗುಣಗೊಳಿಸಲಾಗಿದೆ ಎಂದು ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಹೇಳಿದರು.
ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ರೈತ ದಸರಾ ಕಾರ್ಯಕ್ರಮದ ಅಽಕ ಹಾಲು ಕರೆಯುವ ಸ್ಪರ್ಧೆ ಹಾಗೂ ಶ್ವಾನ ಪ್ರದರ್ಶನ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಅ. ೬ ಮತ್ತು ೭ರಂದು ಜೆ. ಕೆ. ಮೈದಾನದಲ್ಲಿ ನಡೆಯುವ ಹಾಲು ಕರೆಯುವ ಸ್ಪರ್ಧೆಗೆ ಬಹುಮಾನಗಳ ಮೊತ್ತವನ್ನು ಈ ಹಿಂದಿನ ವರ್ಷಗಳಿಗಿಂತ ದ್ವಿಗುಣಗೊಳಿಸಲಾಗಿದೆ ಎಂದರು. ಅ. ೬ರಂದು ನಡೆಯುವ ಶ್ವಾನ ಪ್ರದರ್ಶನದಲ್ಲಿ ನಾಗರಿಕರು ತಮ್ಮ ಶ್ವಾನಗಳೊಂದಿಗೆ ಭಾಗವಹಿಸ ಬೇಕು ಎಂದು ಮನವಿ ಮಾಡಿದರು. ರೈತ ದಸರಾ ಉಪ ಸಮಿತಿ ಉಪ ವಿಶೇಷಾಧಿಕಾರಿ ಡಾ. ಎಂ. ಕೃಷ್ಣರಾಜು, ಕಾರ್ಯಾಧ್ಯಕ್ಷ ಕೆ. ಜಿ. ರವಿ, ಸಹ ಕಾರ್ಯದರ್ಶಿ ಡಾ. ನಾಗರಾಜು, ಜಿ. ಎಚ್. ಮಂಜುನಾಥ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
ಪ್ರಥಮ ಬಹುಮಾನವಾಗಿ ೧ ಲಕ್ಷ ರೂ., ದ್ವಿತೀಯ ಬಹುಮಾನವಾಗಿ ೮೦ ಸಾವಿರ ರೂ. , ತೃತೀಯ ೬೦ ಸಾವಿರ ರೂ. , ನಾಲ್ಕನೇ ಬಹುಮಾನವಾಗಿ ೪೦ ಸಾವಿರ ರೂ. ಗೆ ನಿಗದಿಪಡಿಸಲಾಗಿದೆ. ಈ ಸ್ಪರ್ಧೆಗೆ ರಾಜ್ಯದಾದ್ಯಂತ ಅತಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು, ಹೈನುಗಾರರು ಉತ್ತಮ ತಳಿಯ ರಾಸುಗಳೊಂದಿಗೆ ಭಾಗವಹಿಸಲು ಮತ್ತು ಬಹುಮಾನ ಗೆಲ್ಲುವುದಕ್ಕೆ ಉತ್ತೇಜಿಸಲು ಇಂತಹ ನಿರ್ಧಾರ ಮಾಡಲಾಗಿದೆ. – ಕೆ. ವೆಂಕಟೇಶ್, ಪಶು ಸಂಗೋಪನಾ ಸಚಿವ
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…