Andolana originals

ದಸರಾ: ಮಿನುಗು ದೀಪಗಳ ಅಲಂಕಾರ!

ಕೆ.ಬಿ.ರಮೇಶ ನಾಯಕ

ನಾಡಹಬ್ಬದಲ್ಲಿ ಪಶ್ಚಿಮ ಬಂಗಾಳದ ಕೊಲ್ಕತ್ತಾ ಮಾದರಿಯಲ್ಲಿ ದೀಪಗಳ ಅಳವಡಿಕೆ 

೧೩೬ ಕಿ.ಮೀ. ಉದ್ದದ ದೀಪಾಲಂಕಾರ, ಪ್ರಮುಖ ವೃತ್ತಗಳು ವರ್ಣಮಯ

ವಿದ್ಯುತ್ ದೀಪಗಳಿಂದ ಕಂಗೊಳಿಸುವ ಅರಮನೆ ನಗರಿ ಮೈಸೂರು

ದೀಪಾಲಂಕಾರಕ್ಕೆ ೧೦ ಕೋಟಿ ರೂಪಾಯಿ ವೆಚ್ಚ

ಮೈಸೂರು: ಮೈಸೂರು ದಸರಾ ಎಂದಾಕ್ಷಣ ಜಗಜಗಿಸುವ ವಿದ್ಯುತ್ ದೀಪಗಳ ಸರಮಾಲೆ, ಅಲಂಕೃತ ಗೊಂಡ ಉದ್ಯಾನಗಳು, ಸಿಂಗರಿಸಿದ ಪಾರಂಪರಿಕ ಕಟ್ಟಡಗಳು, ವೃತ್ತಗಳು ಹಾಗೂ ರಸ್ತೆಗಳು ಲಕ್ಷಾಂತರ ಜನರ ಮನಸ್ಸನ್ನು ಮೋಡಿ ಮಾಡಲಿದ್ದು, ಮೊದಲ ಬಾರಿಗೆ ಮಿನುಗು ದೀಪಗಳ (ಮೂಮೆಂಟ್ಲೈಟ್) ಅಲಂಕಾರ ಮಾಡಲಾಗುತ್ತಿದೆ.

ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಅಳವಡಿಸುವ ದೀಪಾಲಂಕಾರದ ಮಾದರಿಯ ಜತೆಗೆ ಮೊಟ್ಟ ಮೊದಲ ಬಾರಿಗೆ ಸ್ಥಳೀಯರು ಹಾಗೂ ಹೊರಗಿನ ಪ್ರವಾಸಿಗರನ್ನು ಆಕರ್ಷಿಸುವ ರೀತಿಯಲ್ಲಿ ಮಿನುಗುವ ದೀಪಗಳನ್ನು ರಾಜಮಾರ್ಗಗಳಲ್ಲಿ ಅಳವಡಿಸಲಾಗುತ್ತಿದೆ. ನೋಡುವ ವ್ಯಕ್ತಿಗೆ ದೀಪಗಳು ಮಿನುಗುತ್ತಲೇ ಕಣ್ಮುಂದೆ ಹಾದು ಹೋಗುವ ರೀತಿಯಲ್ಲಿ ಮುದ ನೀಡಲಿವೆ.

ಕಳೆದ ವರ್ಷ ೧೨೦ ಕಿ.ಮೀ ಹಾಗೂ ೯೦ ವೃತ್ತಗಳಿಗೆ ದೀಪಾಲಂಕಾರ ಮಾಡಲಾಗಿತ್ತು. ಈ ವರ್ಷ ದೀಪಾಲಂಕಾರದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದ್ದು, ಕಳೆದ ವರ್ಷಕ್ಕಿಂತ ಈ ಬಾರಿ ನಗರದಲ್ಲಿ ಹೆಚ್ಚುವರಿ ೧೬ ಕಿ.ಮೀ. ಜತೆಗೆ ಒಟ್ಟು ೧೩೬ ಕಿ.ಮೀ. ವಿದ್ಯುತ್ ದೀಪಾಲಂಕಾರ ಮಾಡುವ ಜತೆಗೆ ಪ್ರಮುಖ ೧೧೬ ವೃತ್ತಗಳಲ್ಲೂ ವಿದ್ಯುತ್ ದೀಪಾಲಂಕಾರ ಮಾಡುತ್ತಿರುವುದರಿಂದ ಎಲ್ಲ ದಿಕ್ಕುಗಳೂ ಬೆಳಕಿನಮಯವಾಗಲಿವೆ.

ದೀಪಾಲಂಕೃತಗೊಳ್ಳುವ ವೃತ್ತಗಳು: ವಿಶೇಷವಾಗಿ ಚಾಮರಾಜ ವೃತ್ತ, ಕೃಷ್ಣರಾಜ ಒಡೆಯರ್ ವೃತ್ತ, ಜಯಚಾಮರಾಜ ವೃತ್ತ, ಬಸವೇಶ್ವರ ವೃತ್ತ, ಗಾಂಧಿ ವೃತ್ತ, ಅಂಬೇಡ್ಕರ್ ವೃತ್ತ, ಫೌಂಟೇನ್ ವೃತ್ತ, ಎಂಡಿಎ ವೃತ್ತ, ರೈಲ್ವೆ ನಿಲ್ದಾಣ, ದಾಸಪ್ಪ ವೃತ್ತ, ಕೌಟಿಲ್ಯ ವೃತ್ತ, ಜಲದರ್ಶಿನಿ ರಸ್ತೆಯ ಕಲಾಮಂದಿರ ವೃತ್ತ, ಸರ್ಕಾರಿ ಅತಿಥಿಗೃಹ ಮಾರ್ಗದ ಕಮಾನು ದ್ವಾರ, ಬಾಬು ಜಗಜೀವನ್‌ರಾಮ್ ವೃತ್ತ, ಆಯುರ್ವೇದ ಆಸ್ಪತ್ರೆ ವೃತ್ತ, ಮೈಸೂರು-ಬೆಂಗಳೂರು ರಸ್ತೆಯ ಕಮಾನು ಗೇಟು, ಅಗ್ರಹಾರ ವೃತ್ತ ಸೇರಿದಂತೆ ನಗರದ ಪ್ರಮುಖ ವೃತ್ತಗಳನ್ನು ದೀಪಾಲಂಕೃತಗೊಳಿಸಲಾಗುತ್ತದೆ.

ರಸ್ತೆ ರಸ್ತೆಗಳೂ ಬೆಳಕುಮಯ: ಪ್ರತಿವರ್ಷದಂತೆ ಅಲಂಕೃತ ಗೊಳ್ಳುವ ಜಂಬೂ ಸವಾರಿ ಸಾಗುವ ಸಯ್ಯಾಜಿರಾವ್ ರಸ್ತೆ, ನಗರದ ರೈಲು ನಿಲ್ದಾಣದಿಂದ ಇರ್ವಿನ್ ರಸ್ತೆ, ಚಾಮುಂಡಿ ಬೆಟ್ಟದ ತಪ್ಪಲಿನಿಂದ ಮೆಟ್ಟಿಲುಗಳ ಮೂಲಕ ಸಾಗುವ ರಸ್ತೆ, ನಂಜನಗೂಡು ರಸ್ತೆ, ಹರ್ಷ ರಸ್ತೆ, ಅಶೋಕ ರಸ್ತೆ, ಮಹದೇಶ್ವರ ರಸ್ತೆ, ಹುಣಸೂರು ರಸ್ತೆ, ಜೆಎಲ್‌ಬಿ ರಸ್ತೆ, ಮೈಸೂರು -ಬೆಂಗಳೂರು ರಸ್ತೆ, ವಿನೋಬಾ ರಸ್ತೆ, ಧನ್ವಂತರಿ ರಸ್ತೆ, ನಾರಾಯಣಶಾಸ್ತ್ರಿ ರಸ್ತೆ, ಚಾಮರಾಜ ಜೋಡಿ ರಸ್ತೆ, ಬುಲೇವಾರ್ಡ್ ರಸ್ತೆ, ಸಿದ್ಧಾರ್ಥನಗರ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳು ದೀಪಾಲಂಕೃತಗೊಳ್ಳಲಿವೆ.

ಕಟ್ಟಡಗಳಿಗೂ ದೀಪಾಲಂಕಾರ: ಜಿಲ್ಲಾಧಿಕಾರಿ ಕಚೇರಿ, ಜಿಪಂ, ನ್ಯಾಯಾಲಯ, ನಗರಪಾಲಿಕೆ, ಕಾಡಾ ಕಚೇರಿ ಸೇರಿದಂತೆ ಸರ್ಕಾರಿ ಕಚೇರಿಗಳು, ಪಾರಂಪರಿಕ ಕಟ್ಟಡಗಳಿಗೂ ಬೆಳಕಿನ ಸಂಭ್ರಮವಾಗಲಿದೆ. ಈಗಾಗಲೇ ನಗರ ಹಾಗೂ ಹೊರವಲಯದಲ್ಲಿ ಸಾರ್ವಜನಿಕರ ಉದ್ಯಾನಗಳಿಗೂ ದೀಪಾಲಂಕಾರ ಮಾಡುವ ಕೆಲಸ ನಡೆಯುತ್ತಿದೆ. ರಾತ್ರಿ ೭ ಗಂಟೆಗೆ ಅರಮನೆಗೆ ವಿದ್ಯುತ್ ದೀಪ ಹಾಕುತ್ತಿದ್ದಂತೆ ಇಡೀ ನಗರ ಕ್ಷಣಾರ್ಧದಲ್ಲಿ ಜಗಮಗಿಸಲಿದೆ.

” ೧೦ ಕೋಟಿ ರೂ. ಖರ್ಚು: ಈ ಬಾರಿಯ ದಸರಾ ಮಹೋತ್ಸವಕ್ಕೆ ವಿದ್ಯುತ್ ದೀಪಾಲಂಕಾರ ಮಾಡಲು ಅಂದಾಜು ೯ರಿಂದ ೧೦ ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತಿದೆ. ಈಗಾಗಲೇ ದೀಪಾಲಂಕಾರಕ್ಕೆ ಬೇಕಾದ ಹಣವನ್ನು ಭರಿಸಲು ಸರ್ಕಾರ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂಧನ ಸಚಿವ ಕೆ.ಜೆ.ಜಾರ್ಜ್ ಮಾರ್ಗದರ್ಶನದಲ್ಲಿ ಈ ಪ್ರಕ್ರಿಯೆ ಮಾಡಲಾಗುತ್ತಿದೆ. ಈಗಾಗಲೇ ತುಂಡು ಗುತ್ತಿಗೆ ನೀಡಲಾಗಿದೆ. ಅರಮನೆಯ ದೀಪಗಳ ಮಾದರಿಗೆ ಹೋಲಿಕೆ ರೀತಿಯಲ್ಲಿ ದೀಪಗಳನ್ನು ಅಳವಡಿಸುವ ಜತೆಗೆ ಪ್ರಮುಖ ವೃತ್ತಗಳು, ರಸ್ತೆಗಳಲ್ಲಿ ಚಿತ್ತಾಕರ್ಷಕ ದೀಪಗಳನ್ನು ಅಳವಡಿಸುತ್ತಿರುವುದು ವಿಶೇಷವಾಗಿದೆ.”

” ದಸರಾ ಆಚರಣೆ ಮೈಸೂರಿನ ಸಾಂಸ್ಕೃತಿಕ ವೈಭವವಾಗಿದೆ. ಜಂಬೂ ಸವಾರಿಯಂತೆ ದೀಪಾಲಂಕಾರವೂ ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾಗಿದೆ. ಈ ಆಚರಣೆಯಿಂದ ಇಂದಿನ ಪೀಳಿಗೆಗೆ ನಮ್ಮ ಪೂರ್ವಿಕರ ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯವಾಗಿದೆ. ನಮ್ಮ ಇಲಾಖೆಯ ಕರ್ತವ್ಯದೊಂದಿಗೆ ದಸರಾ ಉತ್ಸವದಲ್ಲಿ ಭಾಗಿಯಾಗಲು ಇದೊಂದು ಸುವರ್ಣಾವಕಾಶವಾಗಿದೆ. ಈ ಬಾರಿ ಅಂದಾಜು ೧೦ ಕೋಟಿ ರೂ. ವೆಚ್ಚವಾಗುವ ಸಾಧ್ಯತೆ ಇದೆ.”

-ಕೆ.ಎಂ.ಮುನಿಗೋಪಾಲ ರಾಜು, ವ್ಯವಸ್ಥಾಪಕ ನಿರ್ದೇಶಕರು, ಸೆಸ್ಕ್

ಆಂದೋಲನ ಡೆಸ್ಕ್

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

13 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

22 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

22 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

22 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

22 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

22 hours ago