Andolana originals

ದಸರಾ: ಪ್ರವಾಸೋದ್ಯಮಕ್ಕೆ ಭಾರೀ ವರಮಾನ

ಚಿರಂಜೀವಿ ಸಿ.ಹುಲ್ಲಹಳ್ಳಿ
ಹೋಟೆಲ್ ಉದ್ಯಮಕ್ಕೆ 100 ಕೋಟಿ ರೂ. ವಹಿವಾಟು

ಮೈಸೂರು: ದಸರಾ ಹಬ್ಬ ಶನಿವಾರ ಸಂಪನ್ನಗೊಂಡಿದೆ. 10 ದಿನಗಳ ಈ ಉತ್ಸವದ ಕೂನೆಯ ನಾಲ್ಕು ದಿನಗಳಲ್ಲಿ ನಿರೀಕ್ಷೆ ಮೀರಿ ಪ್ರವಾಸೋದ್ಯದು ವರಮಾನ ಹರಿದುಬಂದಿದೆ. ನವರಾತ್ರಿಯ ಸಂದರ್ಭದಲ್ಲಿ ಲಕ್ಷಾಂತರ ಜನರು ಆಗಮಿಸಿರುವ ಕಾರಣ ಪ್ರವಾಸೋದ್ಯಮಕ್ಕೆ ದೊಡ್ಡ ಬೂಸ್ಟರ್ ಡೋಸ್ ಸಿಕ್ಕಿದ್ದು, ಹೋಟೆಲ್ ಉದ್ಯಮಕ್ಕೆ ಕೊನೆಯ ನಾಲ್ಕು ದಿನಗಳಲ್ಲಿ ಬರೋಬ್ಬರಿ ನೂರು ಕೋಟಿ ರೂ ವಹಿವಾಟು ನಡೆದಿದೆ.

ಕಳೆದ ವರ್ಷ ಬರದ ಹಿನ್ನೆಲೆಯಲ್ಲಿ ದಸರಾವನ್ನು ಸಾಂಪ್ರದಾಯಿಕವಾಗಿ ಆಚರಿಸಿದ್ದರಿಂದ ಪ್ರವಾಸೋದ್ಯಮ ವಲಯಕ್ಕೆ ಸ್ವಲ್ಪ ಪೆಟ್ಟುಬಿದ್ದಿತ್ತು. ಆದರೆ, ಈ ಬಾರಿಯ ದಸರೆಗೆ ಪ್ರವಾಸಿಗರು ಪ್ರವಾಹದೋಪಾದಿಯಲ್ಲಿ ಆಗಮಿಸಿದ್ದರಿಂದ ದೊಡ್ಡ ಪ್ರಮಾಣದ ವಹಿದಾಟು ನಡೆದು ಆದಾಯವೂ ಬಂದಿದೆ.

ಕಳೆದ ಎರಡು-ಮೂರು ವರ್ಷಗಳಿಗೆ ಹೋಲಿಕೆ ಮಾಡಿದರೆ ಈ ಬಾರಿ ಮೈಸೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭೇಟಿ ನೀಡಿದ್ದಾರೆ. ಅರಮನೆ, ಶ್ರೀಚಾಮರಾಜೇಂದ್ರ ಮೃಗಾಲಯ, ಚಾಮುಂಡಿಬೆಟ್ಟ ಸೇರಿದಂತೆ ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳಿಗೆ ಪ್ರವಾಸಿಗರು ಬಗ್ಗೆ ಇಟ್ಟಿದ್ದಾರೆ.

ನವರಾತ್ರಿ ಹಬ್ಬಕ್ಕೆ ಅ.3ರಂದು ಚಾಮುಂಡಿ ಬೆಟ್ಟದಲ್ಲಿ ಚಾಲನೆ ಲಭಿಸಿತ್ತು. ಅಂದಿನಿಂದಲು ದಸರಾ ಉತ್ಸವ ವೈವಿಧ್ಯಮಯ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ವಿವಿಧ ಜಿಲ್ಲೆಗಳಿಂದಷ್ಟೇ ಅಲ್ಲದೇ ನೆರೆ ರಾಜ್ಯ, ವಿದೇಶಗಳಿಂದಲೂ ಲಕ್ಷಾಂತರ ಮಂದಿ ಪ್ರವಾಸಿಗರು ಮೈಸೂರಿಗೆ ಬಂದಿದ್ದು, ಪ್ರವಾಸಿ ತಾಣಗಳ ವೀಕ್ಷಣೆಗೆ ಮುಗಿಬಿದ್ದಿದ್ದರು.

ಕಳೆದ ಬಾರಿ ಒಟ್ಟಾರೆ 5 ಲಕ್ಷ ಮಂದಿ ಮೈಸೂರಿಗೆ ಭೇಟಿ ನೀಡಿದ್ದರು. ಆದರೆ, ಈ ಬಾರಿ 6 ಲಕ್ಷಕ್ಕೂ ಅಧಿಕ ಮಂದಿ ಮೈಸೂರಿಗೆ ಆಗಮಿಸಿದರು ಎಂದು ಆಂದಾಜಿಸಲಾಗಿದೆ. ಹೋಟೆಲ್ ಉದ್ಯಮ, ವ್ಯಾಪಾರ ವಹಿವಾಟು, ಸಿಹಿ, ಖಾರ ತಿನಿಸುಗಳು ಮತ್ತಿತರ ವ್ಯಾಪಾರಗಳಿಂದ 100 ಕೋಟಿ ರೂ.ಗಳಿಗೂ ಹೆಚ್ಚು ವಹಿವಾಟು ನಡೆದಿದೆ.

ಈ ಬಾರಿ ಗರಿಷ್ಠ ಪ್ರಮಾಣದಲ್ಲಿ ಪ್ರವಾಸಿಗರು ಭೇಟಿ ನೀಡಿದ್ದಾರೆ. 2020 ಮತ್ತು 2021ರಲ್ಲಿ ಕೊರೊನಾ ಸಾಂಕ್ರಾಮಿಕ ಪಿಡುಗಿನಿಂದ ದಸರಾ ಅರಮನೆಗಷ್ಟೆ ಸೀಮಿತವಾಗಿತ್ತು, ಬರಗಾಲದ ಪರಿಣಾಮ 2023ರಲ್ಲಿ ರಾಜ್ಯ ಸರ್ಕಾರ ಸರಳ ದಸರಾ ಎಂದು ಘೋಷಿಸಿದ ಹಿನ್ನೆಲೆಯಲ್ಲಿ ಹೆಚ್ಚಿನ ಪ್ರವಾಸಿಗರು ಮೈಸೂರಿನತ್ತ ಮುಖ ಮಾಡಿರಲಿಲ್ಲ. ಆದರೆ, ಈ ವರ್ಷ ನಿರೀಕ್ಷೆ ಮೀರಿ ಪ್ರವಾಸಿಗರು ನಗರಕ್ಕೆ ಲಗ್ಗೆ ಇಟ್ಟಿದ್ದಾರೆ.

ನಗರದ 415 ಹೋಟೆಲ್‌ನಲ್ಲಿರುವ ಎಲ್ಲ ಮಾದರಿಯ 10,500 ಕೊಠಡಿಗಳು ಸಂಪೂರ್ಣ ಭರ್ತಿಯಾಗಿ ಹೊರವಲಯದಲ್ಲಿನ ರೆಸಾರ್ಟ್ ರಾಷ್ಟ್ರಗಳಲ್ಲಿ ಉಳಿದುಕೊಂಡಿದ್ದಾರೆ. ನಂಜನಗೂಡು, ಹುಣಸೂರು, ಶ್ರೀರಂಗಪಟ್ಟಣದಲ್ಲಿಯೂ ರೂಂಗಳನ್ನು ಬಾಡಿಗೆ ಪಡೆದಿದ್ದಾರೆ. ಹೀಗಾಗಿ ಹೋಟೆಲ್ ಉದ್ಯಮದಲ್ಲಿ 100 ಕೋಟಿ ರೂ. ವಹಿವಾಟು ನಡೆದಿದ್ದು, ಹೋಟೆಲ್ ಉದ್ಯಮವೂ ಸುಧಾರಿಸುವಂತಾಯಿತು.

2022ರ ನವರಾತ್ರಿಯ ದಿನಗಳಲ್ಲಿ 16,09,993 ಮಂದಿ ಮೃಗಾಲಯದಲ್ಲಿ ವನ್ಯಜೀವಿಗಳನ್ನು ಕಣ್ಣುಂಬಿಕೊಂಡಿದ್ದರು. 2023ರಲ್ಲಿ 18,09,002 ಮಂದಿ ಬಂದಿದ್ದರು. ಆದರೆ, ಈ ಬಾರಿ 17,09,400 ಮೃಗಾಲಯದಲ್ಲಿ ಪ್ರಾಣಿಗಳನ್ನು ವೀಕ್ಷಿಸಿದ್ದಾರೆ. ಕಾರಂಜಿಕೆರೆಗೂ ಹೆಚ್ಚ ಕಡಿಮೆ ಅಷ್ಟೇ ಸಂಖ್ಯೆಯ ಜನರು ಭೇಟಿ ನೀಡಿದ್ದಾರೆ ಎಂದು ಶ್ರೀ ಚಾಮರಾಜೇಂದ್ರ ಮೃಗಾಲಯದ ನಿರ್ದೇಶಕ ಮಹೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ದಸರಾ ಹಬ್ಬದ ಮೊದಲ 6 ದಿನಗಳಲ್ಲಿ ಕೇವಲ 50ರಷ್ಟು ಹೋಟೆಲ್ ತೊಂಡಿಗಳನ್ನೇ ಭರ್ಸಿಯಾಗಿದ್ದವು. ಕೊನೆಯ 4 ದಿನಗಳಲ್ಲಿ ಶೇ.100ರಷ್ಟು ಕೊಠಡಿಗಳು ಭರ್ತಿಯಾದವು. ಇದರಿಂದ 100 ಕೋಟಿ ರೂ ವಹಿವಾಟು ನಡೆದಿದ್ದು, ಹೋಟೆಲ್‌ ಉದ್ಯಮವು ಸುಧಾರಿಸುವಂತಾಯಿ.
– ಸಿ.ನಾರಾಯಣಗೌಡ, ಅಧ್ಯಕ್ಷರು, ಹೋಟೆಲ್ ಮಾಲೀಕರ ಸಂಘ, ಮೈಸೂರು.

ಮೃಗಾಲಯಕ್ಕೆ ಕಳೆದ ವರ್ಷಕ್ಕಿಂತ ಕಡಿಮೆ ಪ್ರವಾಸಿಗರು!
ಮೈಸೂರು ದಸರಾ ಮಹೋತ್ಸವದಲ್ಲಿ ಮೈಸೂರಿಗೆ ಆಗಮಿಸುವ ಪ್ರವಾಸಿಗರು ಅರಮನೆ ಹಾಗೂ ಮೃಗಾಲಯಕ್ಕೆ ಭೇಟಿ ನೀಡುವುದು ಖಚಿತ, ಆದರೆ, ಮೃಗಾಲಯಕ್ಕೆ ಕಳೆದ ವರ್ಷಕ್ಕಿಂತ ಕಡಿಮೆ ಜನರು ಮೃಗಾಲಯಕ್ಕೆ ಭೇಟಿ ನೀಡಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

18 mins ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

21 mins ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

26 mins ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

30 mins ago

ದ್ವೇಷ ಭಾಷಣಕ್ಕೆ ಕಡಿವಾಣ | ಗರಿಷ್ಟ 10 ವರ್ಷ ಶಿಕ್ಷೆ, ವಿಧಾನಸಭೆಯಲ್ಲಿ ಮಸೂದೆ ಮಂಡನೆ, BJP ವಿರೋಧ

ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…

40 mins ago

ಮೈವಿವಿಯಲ್ಲಿ ಫ್ರೆಂಚ್‌ ಭಾಷೆ ವಿಭಾಗ ಪುನರಾಂಭಿಸಲು ಚರ್ಚೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಫ್ರಾನ್ಸ್ ದೇಶದ ರಾಯಭಾರಿಗಳ ನಿಯೋಗ ಭೇಟಿ ನೀಡಿ ಫ್ರೆಂಚ್ ಭಾಷೆ ವಿಭಾಗವನ್ನು ಮರು ಆರಂಭಿಸುವ…

1 hour ago