Andolana originals

ದೀಪಾಲಂಕಾರ: ಜಗಜಗಿಸಿದೆ ಅರಮನೆಗಳ ನಗರ

ಕೆ.ಬಿ.ರಮೇಶನಾಯಕ

ಬೆರಗಾಗಿಸಿರುವ ಬಣ್ಣದ ವಿದ್ಯುತ್ ದೀಪಗಳ ಬೆಳಕು
ಸಿಎಂ, ಡಿಸಿಎಂ, ಇಂಧನ ಸಚಿವರ ಪ್ರತಿಕೃತಿ
ಕಂಗೊಳಿಸುತ್ತಿರುವ ಕೆ.ಆರ್.ವೃತ್ತ
ವರ್ಣಮಯ ರಸ್ತೆಗಳಲ್ಲಿ ಓಡಾಡುವ ಸಂಭ್ರಮ

ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವದ ಪ್ರಯುಕ್ತ ಅರಮನೆ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರದ ಚಿತ್ತಾಕರ್ಷಕ ಆಕೃತಿಗಳ ಮೂಲಕ ಲಕ್ಷಾಂತರ ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ.

ಹೊಸತನದ ದೀಪಾಲಂಕಾರ ಮಾಡಿರುವುದರಿಂದ ಹಲವು ವೃತ್ತಗಳು ಕಂಗೊಳಿಸುತ್ತಿವೆ. ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತದಿಂದ ಪ್ರಮುಖ ವೃತ್ತ, ರಸ್ತೆಗಳಲ್ಲಿ ವಿಶಿಷ್ಟವಾಗಿ ಅಲಂಕಾರ ಮಾಡಿರುವುದರ ಜತೆಗೆ ಇಡೀ ಮೈಸೂರು ಸುತ್ತುವರಿದಂತೆ ದೀಪಾಲಂಕಾರ ಮಾಡಿರುವ ಹಿನ್ನೆಲೆಯಲ್ಲಿ ನೋಡುಗರ ಕಣ್ಮನ ಸೆಳೆಯುತ್ತಿದೆ. ಕಳೆದ ವರ್ಷ 120 ಕಿ.ಮೀ. ಹಾಗೂ 91 ವೃತ್ತಗಳಿಗೆ ದೀಪಾಲಂಕಾರ ಮಾಡಲಾಗಿತ್ತು. ಈ ವರ್ಷ ದೀಪಾಲಂಕಾರದಲ್ಲಿ ಕೆಲವು ಬದಲಾವಣೆ ಮಾಡಿದ್ದು, ನಗರದ ಹೊರ ವರ್ತುಲ ರಸ್ತೆಯ 42 ಕಿ.ಮೀ. ರಸ್ತೆಗೂ ದೀಪಾಲಂಕಾರದ ಜತೆಗೆ ಸದ್ಯ ಆಯ್ಕೆ ಮಾಡಿರುವ 100 ವೃತ್ತಗಳನ್ನು ಸೇರ್ಪಡೆ ಮಾಡಲಾಗಿದೆ.

ನಗರದ ಪ್ರಮುಖ ರಸ್ತೆಗಳು, ವೃತ್ತ ಹಾಗೂ ಪಾರಂಪರಿಕ ಮಾದರಿಗಳನ್ನು ಅಳವಡಿಸಿದ್ದು, ಪ್ರಜಾಪ್ರಭುತ್ವ ಸಾಗಿಬಂದ ಕಟ್ಟಡಗಳಿಗೆ ದೀಪಾಲಂಕಾರ ಮಾಡುವ ಮೂಲಕ ದಸರಾ ವೈಭಕ್ಕೆ ಮೆರುಗು ನೀಡಿ ಮೈಸೂರನ್ನು ಪ್ರಕಾಶಿಸುವಂತೆ ಮಾಡಲಾಗಿದೆ.

ಯಾವ್ಯಾವ ವೃತ್ತದಲ್ಲಿ ಅಲಂಕಾರ?: ನಗರದ ಮಣಿಪಾಲ್ ಆಸ್ಪತ್ರೆ ಬಳಿಯ ಬೆಂಗಳೂರು- ಮೈಸೂರು ರಸ್ತೆ ವರ್ತುಲ ರಸ್ತೆಯ ವೃತ್ತ, ವೆಂಕಟೇಶ್ವರ ದೇವಸ್ಥಾನ ವೃತ್ತ, ಹುಣಸೂರು, ನಂಜನಗೂಡು, ಕೆಆರ್‌ಎಸ್ ರಸ್ತೆಯ ವರ್ತುಲ ರಸ್ತೆ, ಜಯಚಾಮರಾಜ ಒಡೆಯರ್ ವೃತ್ತ, ಕ್ಲಾಕ್ ಟವರ್, ಫೌಂಟೇನ್, ಸರ್ಕಾರಿ ಅತಿಥಿಗೃಹ, ಫೈವ್ ಲೈಟ್, ಮುಡಾ, ಡಾ. ಬಿ. ಆರ್.ಅಂಬೇಡ್ಕರ್, ಮಿಲೇನಿಯಂ, ಆಯುರ್ವೇದಿಕ್, ಹೈವೇ ಸೇರಿದಂತೆ ಹಲವು ವೃತ್ತಗಳು ವಿಭಿನ್ನ ಬಗೆಯ ದೀಪಾಲಂಕಾರದಿಂದ ಕಂಗೊಳಿಸುತ್ತಿವೆ.

ಮಹನೀಯರ ಪ್ರತಿಕೃತಿಗಳು: ವಿವಿಧೆಡೆ 65 ಪ್ರತಿಕೃತಿಗಳ ಹಾದಿ, ಭುವನೇಶ್ವರಿ, ಸೋಮನಾಥೇಶ್ವರ ದೇವಾಲಯ, ಸಂವಿಧಾನದ ಪ್ರಸ್ತಾವನೆ, ಮುಮ್ಮಡಿ ಕೃಷ್ಣರಾಜ ಒಡೆಯರ್, ನಾಲ್ವಡಿ ಕೃಷ್ಣರಾಜ ಒಡೆಯರ್, ಕೆಂಪ ನಂಜಮ್ಮಣ್ಣಿ, ಜಯಚಾಮರಾಜ ಒಡೆಯರ್, ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಅವರ ಪ್ರತಿಕೃತಿಗಳು ನೋಡುಗರನ್ನು ಆಕರ್ಷಿಸುತ್ತಿವೆ.

ಸಯ್ಯಾಜಿರಾವ್ ರಸ್ತೆ, ಇರ್ವಿನ್ ರಸ್ತೆ, ನಂಜನಗೂಡು ರಸ್ತೆ, ಹರ್ಷ ರಸ್ತೆ, ಅಶೋಕ ರಸ್ತೆ, ಮಹದೇಶ್ವರ ರಸ್ತೆ, ಹುಣಸೂರು ರಸ್ತೆ, ಜೆಎಲ್‌ಬಿ ರಸ್ತೆ, ಮೈಸೂರು- ಬೆಂಗಳೂರು ರಸ್ತೆ, ವಿನೋಬಾ ರಸ್ತೆ, ಧನ್ವಂತರಿ ರಸ್ತೆ, ನಾರಾಯಣಶಾಸ್ತ್ರಿ ಚಾಮರಾಜ ಜೋಡಿ ರಸ್ತೆ, ಬುಲೇವಾರ್ಡ್ ರಸ್ತೆ, ಸಿದ್ದಾರ್ಥನಗರ ರಸ್ತೆ, ಸರ್ಕಾರಿ ಕಚೇರಿಗಳು, ಪಾರಂಪರಿಕ ಕಟ್ಟಡಗಳು, ಸಾರ್ವಜನಿಕರ ಉದ್ಯಾನವನಗಳಿಗೂ ದೀಪಾಲಂಕಾರ ಮಾಡಲಾಗಿದೆ.

ರಾತ್ರಿ 7 ಗಂಟೆಗೆ ಅರಮನೆಯಲ್ಲಿ ವಿದ್ಯುತ್ ದೀಪ ಬೆಳಗುತ್ತಿದ್ದಂತೆ ಇಡೀ ನಗರ ಕ್ಷಣಾರ್ಧದಲ್ಲಿ ಬಣ್ಣಗಳ ಬೆಳಕಿನ ಮಳೆಯಲ್ಲಿ ಮಿಂದೆದ್ದಂತೆ ಕಾಣುತ್ತದೆ. ಅದನ್ನು ನೋಡಿ ಆನಂದಿಸಲು ಜನರು ದಂಡು ದಂಡಾಗಿಯೇ ಮುಖ್ಯರಸ್ತೆಗಳ ಕಡೆಗೆ ದಾಂಗುಡಿ ಇಡುತ್ತಿದ್ದಾರೆ.

ಜನರಿಂದ ಸಕಾರಾತ್ಮಕ ಪ್ರತಿಕ್ರಿಯೆ:
ಮೈಸೂರಿನ ಪ್ರಮುಖ ವೃತ್ತಗಳಲ್ಲಿ ವಿಭಿನ್ನ ಮಾದರಿಯ ದೀಪಾಲಂಕಾರ ಪ್ರತಿಕೃತಿಗಳು ನೋಡುಗರ ಮನಸ್ಸನ್ನು ಮುದಗೊಳಿಸುತ್ತಿವೆ. ಜನರಿಂದ ಸಕಾರಾತಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ತುಂಬಾ ಸಂತೋಷವಾಗಿದೆ. ಈ ಬಾರಿ 21 ದಿನಗಳ ಕಾಲ ದೀಪಾಲಂಕಾರ ಇರುವುದರಿಂದ ನಿರೀಕ್ಷೆ ಮೀರಿ ಜನರು ದೀಪಾಲಂಕಾರವನ್ನು ಕಣ್ಣುಂಬಿಕೊಳ್ಳುವ ಸಾಧ್ಯತೆ ಇದೆ.
ಕೆ.ಎಂ.ಮುನಿಗೋಪಾಲರಾಜು, ತಾಂತ್ರಿಕ ನಿರ್ದೇಶಕರು, ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ.

ಆಂದೋಲನ ಡೆಸ್ಕ್

Recent Posts

ಅಕಾಲಿಕ ಮಳೆಯಿಂದ ಒಣ ಮರ ಬಿದ್ದು ದೇಗುಲ ಹಾನಿ

ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…

7 hours ago

ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ಸೂಕ್ತ ಕ್ರಮ: ಡಿಸಿಎಫ್‌ ಶ್ರೀಪತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…

7 hours ago

ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರ ಭರವಸೆ ಈಡೇರಿಕೆಗೆ ಆಗ್ರಹ: ತಹಶಿಲ್ದಾರ್‌ ಮುಖಾಂತರ ಸರ್ಕಾರಕ್ಕೆ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…

7 hours ago

ಹನೂರು| ಚಿರತೆ ದಾಳಿಗೆ ಹಸು ಬಲಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…

7 hours ago

ಹನೂರು| ಭೂತರಾಯನ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…

7 hours ago

ಎಷ್ಟೇ ಟೀಕಿಸಿದರೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ್‌

ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭರವಸೆ…

7 hours ago