ಸುಣ್ಣ-ಬಣ್ಣ ಬಳಿಯುವ ಕೆಲಸ ಬಿರುಸು; ಸಸ್ಯಕಾಶಿಗೂ ಸಿದ್ಧತೆ
ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಆವರಣದಲ್ಲಿ ಸಿದ್ಧತಾ ಕಾರ್ಯ ಚುರುಕುಗೊಂಡಿದ್ದು, ಸುಣ್ಣ-ಬಣ್ಣ ಬಳಿಯುವ ಕೆಲಸ ಶುರುವಾಗಿದೆ.
ಅರಮನೆ ಮುಂಭಾಗದ ಕೆಲವು ಪ್ರದೇಶಗಳಲ್ಲಿ ಇಂಟರ್ ಲಾಕ್ ಬದಲಿಸುವ ಕಾರ್ಯಕ್ಕೂ ಕೈ ಹಾಕಲಾಗಿದೆ. ಆರಂಭಿಕ ಹಂತದಲ್ಲಿಯೇ ಅರಮನೆ ಸುತ್ತಲೂ ಇರುವ ಕಾಂಪೌಂಡ್, ದ್ವಾರದ ಗೋಡೆಗಳಿಗೆ ಬಣ್ಣ ಬಳಿಯುವ ಕಾರ್ಯ ಬಿರುಸಿನಿಂದ ಸಾಗಿದೆ. ಅ.3ರಿಂದ 12ರವರೆಗೆ ನವರಾತ್ರಿ ಮಹೋತ್ಸವ ಜರುಗಲಿದ್ದು, ಅಷ್ಟರೊಳಗೆ ಅರಮನೆಯಲ್ಲಿ ಸಿದ್ಧತಾ ಕಾರ್ಯ ಪೂರ್ಣಗೊಳ್ಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ವಿವಿಧ ಕಾರ್ಯಗಳನ್ನು ತ್ವರಿತಗತಿಯಲ್ಲಿ ನಡೆಸಲಾಗುತ್ತಿದೆ.
ಸಸ್ಯಕಾಶಿಗೂ ಸಿದ್ಧತೆ: ನವರಾತ್ರಿ ಸಂದರ್ಭದಲ್ಲಿ ಅರಮನೆ ಆವರಣದಲ್ಲಿ ಸಂಭ್ರಮ ಮನೆ ಮಾಡಲಿದ್ದು, ಅರಮನೆ ಆವರಣದಲ್ಲಿರುವ ವಿವಿಧ ಪಾರ್ಕ್ಗಳಲ್ಲೂ ಬಣ್ಣ-ಬಣ್ಣದ ಹೂವಿನ ಗಿಡಗಳು ತಲೆ ಎತ್ತಲಿವೆ. ಈಗಾಗಲೇ ಅರಮನೆಯ ತೋಟಗಾರಿಕಾ ಸಿಬ್ಬಂದಿ ನೂರಾರು ಗಿಡಗಳನ್ನು ಬೆಳೆಸಿದ್ದು, ಅವುಗಳನ್ನು ಪಾಲನೆ ಮಾಡುತ್ತಿದ್ದಾರೆ.
ವಿವಿಧ ತಳಿಯ, ಬಣ್ಣ-ಬಣ್ಣದ ಆಕರ್ಷಕ ಹೂವಿನ ಗಿಡ ಗಳನ್ನು ಹೂಕುಂಡ ಗಳಲ್ಲಿ ಬೆಳೆಸಲಾಗಿದೆ. ಹೂವಿನ ಗಿಡಗಳಿಗೆ ಅಂತಿಮ ಹಂತದ ಪಾಲನೆ ಮಾಡಲಾಗುತ್ತಿದ್ದು, 15 ದಿನಗಳ ನಂತರ ಹೂಕುಂಡಗಳನ್ನು ಅರಮನೆ ಆವರಣದ ಪಾಕ್ ೯ಗಳಲ್ಲಿ ವಿವಿಧ ಆಕಾರದಲ್ಲಿ ಜೋಡಣೆ ಮಾಡಲಾಗುತ್ತದೆ.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…