Andolana originals

ಅರಮನೆ ಆವರಣದಲ್ಲಿ ಸಿದ್ಧತಾ ಕಾರ್ಯ ಚುರುಕು

ಸುಣ್ಣ-ಬಣ್ಣ ಬಳಿಯುವ ಕೆಲಸ ಬಿರುಸು; ಸಸ್ಯಕಾಶಿಗೂ ಸಿದ್ಧತೆ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಆವರಣದಲ್ಲಿ ಸಿದ್ಧತಾ ಕಾರ್ಯ ಚುರುಕುಗೊಂಡಿದ್ದು, ಸುಣ್ಣ-ಬಣ್ಣ ಬಳಿಯುವ ಕೆಲಸ ಶುರುವಾಗಿದೆ.

ಅರಮನೆ ಮುಂಭಾಗದ ಕೆಲವು ಪ್ರದೇಶಗಳಲ್ಲಿ ಇಂಟರ್‌ ಲಾಕ್ ಬದಲಿಸುವ ಕಾರ್ಯಕ್ಕೂ ಕೈ ಹಾಕಲಾಗಿದೆ. ಆರಂಭಿಕ ಹಂತದಲ್ಲಿಯೇ ಅರಮನೆ ಸುತ್ತಲೂ ಇರುವ ಕಾಂಪೌಂಡ್, ದ್ವಾರದ ಗೋಡೆಗಳಿಗೆ ಬಣ್ಣ ಬಳಿಯುವ ಕಾರ್ಯ ಬಿರುಸಿನಿಂದ ಸಾಗಿದೆ. ಅ.3ರಿಂದ 12ರವರೆಗೆ ನವರಾತ್ರಿ ಮಹೋತ್ಸವ ಜರುಗಲಿದ್ದು, ಅಷ್ಟರೊಳಗೆ ಅರಮನೆಯಲ್ಲಿ ಸಿದ್ಧತಾ ಕಾರ್ಯ ಪೂರ್ಣಗೊಳ್ಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ವಿವಿಧ ಕಾರ್ಯಗಳನ್ನು ತ್ವರಿತಗತಿಯಲ್ಲಿ ನಡೆಸಲಾಗುತ್ತಿದೆ.

ಸಸ್ಯಕಾಶಿಗೂ ಸಿದ್ಧತೆ: ನವರಾತ್ರಿ ಸಂದರ್ಭದಲ್ಲಿ ಅರಮನೆ ಆವರಣದಲ್ಲಿ ಸಂಭ್ರಮ ಮನೆ ಮಾಡಲಿದ್ದು, ಅರಮನೆ ಆವರಣದಲ್ಲಿರುವ ವಿವಿಧ ಪಾರ್ಕ್‌ಗಳಲ್ಲೂ ಬಣ್ಣ-ಬಣ್ಣದ ಹೂವಿನ ಗಿಡಗಳು ತಲೆ ಎತ್ತಲಿವೆ. ಈಗಾಗಲೇ ಅರಮನೆಯ ತೋಟಗಾರಿಕಾ ಸಿಬ್ಬಂದಿ ನೂರಾರು ಗಿಡಗಳನ್ನು ಬೆಳೆಸಿದ್ದು, ಅವುಗಳನ್ನು ಪಾಲನೆ ಮಾಡುತ್ತಿದ್ದಾರೆ.

ವಿವಿಧ ತಳಿಯ, ಬಣ್ಣ-ಬಣ್ಣದ ಆಕರ್ಷಕ ಹೂವಿನ ಗಿಡ ಗಳನ್ನು ಹೂಕುಂಡ ಗಳಲ್ಲಿ ಬೆಳೆಸಲಾಗಿದೆ. ಹೂವಿನ ಗಿಡಗಳಿಗೆ ಅಂತಿಮ ಹಂತದ ಪಾಲನೆ ಮಾಡಲಾಗುತ್ತಿದ್ದು, 15 ದಿನಗಳ ನಂತರ ಹೂಕುಂಡಗಳನ್ನು ಅರಮನೆ ಆವರಣದ ಪಾಕ್ ೯ಗಳಲ್ಲಿ ವಿವಿಧ ಆಕಾರದಲ್ಲಿ ಜೋಡಣೆ ಮಾಡಲಾಗುತ್ತದೆ.

 

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

8 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

9 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

10 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

11 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

11 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

15 hours ago