Andolana originals

ಪ್ರವಾಸಿಗರೇ ಇರಲಿ ಎಚ್ಚರ

ಎಚ್.ಎಸ್.ದಿನೇಶ್‌ ಕುಮಾರ್‌ 

ದಸರಾ ಮಹೋತ್ಸವದಲ್ಲಿ ವಂಚನೆ ಸಾಧ್ಯತೆ ಹಿನ್ನೆಲೆ

ವಂಚಕರ ಬಗ್ಗೆ ಎಚ್ಚರವಹಿಸಲು ಕಮಿಷನರ್ ಸೀಮಾ ಲಾಟ್ಕರ್ ಮನವಿ 

ಮೈಸೂರು: ದಸರಾ ಮಹೋತ್ಸವದ ಸಂಭ್ರಮದಲ್ಲಿ ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ ಪ್ರವಾಸಿಗರು ಮೈಸೂರಿಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಪ್ರವಾಸಿಗರು ಮತ್ತು ಸಾರ್ವಜನಿಕರು ಅಪರಿಚಿತರ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕಾಗುತ್ತದೆ. ಇಲ್ಲವಾದಲ್ಲಿ ವಿನಾ ಕಾರಣ ವಂಚನೆಗೆ ಒಳಗಾಗಬೇಕಾಗುತ್ತದೆ. ಹೀಗಾಗಿ ನಗರ ಪೊಲೀಸರು ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದ್ದಾರೆ.

ಮಫ್ತಿಯಲ್ಲಿ ನಗರಾದ್ಯಂತ ಸಂಚರಿಸುತ್ತಿರುವ ಪೊಲೀಸರು, ಪ್ರತಿದಿನ ವಂಚಕರ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಅವರನ್ನು ವಶಕ್ಕೆ ಪಡೆದು ಎಚ್ಚರಿಕೆ ನೀಡುವ ಕೆಲಸವನ್ನು ಸದ್ದಿಲ್ಲದೆ ಮಾಡುತ್ತಿದ್ದಾರೆ. ಇದರ ಜೊತೆಗೆ ಪ್ರವಾಸಿಗರೂ ಎಚ್ಚರಿಕೆಯಿಂದ ಇರಬೇಕು. ಪೊಲೀಸರ ಸಲಹೆ- ಸೂಚನೆಗಳನ್ನು ಪಾಲಿಸಬೇಕು ಎಂದು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಮನವಿ ಮಾಡಿದ್ದಾರೆ

ಮುನ್ನೆಚ್ಚರಿಕೆಗಳೇನು?: 

* ಮೈಸೂರಿಗೆ ಬಂದಿಳಿಯುವ ಪ್ರವಾಸಿಗರನ್ನು ಸ್ವಾಗತಿಸಿ ಕೊಠಡಿಯನ್ನು ಕೊಡಿಸುವುದಾಗಿ ಹೇಳುವ ಮಧ್ಯವರ್ತಿಗಳ ನಡೆಯ ಬಗ್ಗೆ ಎಚ್ಚರದಿಂದಿರಬೇಕು

* ರೈಲು, ಬಸ್ ನಿಲ್ದಾಣಗಳಲ್ಲಿ ಪೊಲೀಸ್ ಹಾಗೂ ಪ್ರವಾಸೋದ್ಯಮ ಸಹಾಯವಾಣಿಗಳಿವೆ. ಅಲ್ಲಿ ಕರ್ತವ್ಯ ನಿರ್ವಹಿಸುವವರನ್ನು ಭೇಟಿ ಮಾಡಿ ಕೊಠಡಿ, ಹೋಟೆಲ್ ಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಿ. ಇಲ್ಲವಾದಲ್ಲಿ ಆನ್‌ಲೈನ್ ಮೂಲಕ ಕೊಠಡಿ ಕಾಯ್ದಿರಿಸುವುದು ಉತ್ತಮ  ಎಲ್ಲೆಂದರಲ್ಲಿ ಆಟೋ ಹತ್ತುವ ಬದಲು ಪ್ರೀ-ಪೇಯ್ಡ್ ಆಟೋ ಬಳಸಿ, ನೀವು ಸಂಚರಿಸುವ ಆಟೋ ಮೀಟರ್ ಸುಸ್ಥಿತಿಯಲ್ಲಿದೆಯೇ ಎಂಬುದನ್ನು ಗಮನಿಸಿಕೊಳ್ಳಿ

* ದಸರಾ, ಪಂಜಿನ ಕವಾಯತು ಮತ್ತಿತರ ಕಾರ್ಯಕ್ರಮಗಳ ಪಾಸ್ ಹಾಗೂ ಟಿಕೆಟ್ ಕೊಡಿಸುವುದಾಗಿ ಹೇಳುವವರನ್ನು ಆದಷ್ಟು ದೂರವಿಡಿ, ಟಿಕೆಟ್ ದೊರೆಯುವ ಮಾಹಿತಿಯನ್ನು ಪ್ರವಾಸಿ ಹಾಗೂ ಪೊಲೀಸ್ ಸಹಾಯ ಕೇಂದ್ರಗಳಲ್ಲಿ ಹಾಗೂ ದಸರಾ ವೆಬ್‌ಸೈಟ್ ಮೂಲಕ ತಿಳಿದುಕೊಳ್ಳಿ

* ಅಪರಿಚಿತರೊಂದಿಗೆ ಊಟ, ತಿಂಡಿ ಸೇವಿಸುವ ಮುನ್ನ ಅವರ ಸಾಚಾತನದ ಬಗ್ಗೆ ತಿಳಿದುಕೊಳ್ಳಲು ಪ್ರಯತ್ನಿಸಿ, ಇಲ್ಲವೇ ಅವರಿಂದ ಅಂತರ ಕಾಯ್ದುಕೊಳ್ಳಲು ಪ್ರಯತ್ನಿಸಿ  ಪ್ರವಾಸಿಗರು ಅಪರಿಚಿತ ಸ್ಥಳಗಳಲ್ಲಿ ಒಂಟಿಯಾಗಿ ಅಥವಾ ಅಪರಿಚಿತರೊಡನೆ ಮದ್ಯ ಸೇವನೆ, ಊಟೋಪಚಾರ ಮಾಡುವುದರಿಂದ ದೂರವಿದ್ದರೆ ಒಳಿತು

* ಖಾಸಗಿಯಾಗಿ ವಾಹನದಲ್ಲಿ ನಗರಕ್ಕೆ ಆಗಮಿಸುವ ಪ್ರಯಾಣಿಕರು ಸಂಚಾರ ನಿಯಮವನ್ನು ತಪ್ಪದೇ ಪಾಲಿಸುವ ಮೂಲಕ ದಂಡದಿಂದ ತಪ್ಪಿಸಿಕೊಳ್ಳಿ

* ಆರೋಗ್ಯ ಕೈಕೊಟ್ಟಲ್ಲಿ ಚಾಮರಾಜ ಜೋಡಿ ರಸ್ತೆ, ರಾಮಾನುಜ ರಸ್ತೆ, ನಜರ್‌ಬಾದ್‌ನಲ್ಲಿರುವ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಕೆ.ಆರ್.ಆಸ್ಪತ್ರೆ, ಚಲುವಾಂಬ ಆಸ್ಪತ್ರೆ ಸೇರಿದಂತೆ ಇನ್ನಿತರ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ಪಡೆದುಕೊಳ್ಳಿ. ಖಾಸಗಿ ಆಸ್ಪತ್ರೆಗಳೂ ಸಾಕಷ್ಟಿವೆ. ಆನ್‌ಲೈನ್ ಮೂಲಕ ಅವುಗಳ ವಿಳಾಸ ತಿಳಿದುಕೊಳ್ಳಿ.

ಆಂದೋಲನ ಡೆಸ್ಕ್

Recent Posts

INS vs NZ | ಮಿಚೆಲ್‌ ಅಬ್ಬರಕ್ಕೆ ರಾಹುಲ್‌ ಶತಕ ವ್ಯರ್ಥ : ಭಾರತಕ್ಕೆ ಸೋಲು

ರಾಜ್‌ಕೋಟ್ : ಡೆರಿಲ್ ಮಿಚೆಲ್ ಅಮೋಘ ಶತಕ (131) ಹಾಗೂ ವಿಲ್ ಯಂಗ್ (87) ಅರ್ಧಶತಕದ ನೆರವಿನಿಂದ ಆತಿಥೇಯ ಭಾರತ…

40 mins ago

ವಾಹನ ಸವಾರರು ಹೆಲ್ಮೆಟ್‌ ಬಳಸುತ್ತಿದ್ದಾರೆಯೇ? : ಜಾಗೃತಿ ಮೂಡಿಸಲು ಬಂದ ಯಮಧರ್ಮ

ಮೈಸೂರು : ನಗರದ ಹೃದಯ ಭಾಗವಾದ ಕೆ.ಆರ್.ವೃತ್ತದಲ್ಲಿ ಗಂಧದಗುಡಿ ಫೌಂಡೇಶನ್ ಮತ್ತು ನಗರ ಸಂಚಾರ ಪೊಲೀಸ್ ಸಂಯುಕ್ತಾಶ್ರಯದಲ್ಲಿ ಸಂಕ್ರಾಂತಿ ಹಬ್ಬದ…

2 hours ago

ಬಳ್ಳಾರಿ ಗಲಭೆ | ಪಾದಯಾತ್ರೆಗೆ ಬಿಜೆಪಿಯಲ್ಲಿ ಭಿನ್ನಮತ

ಬೆಂಗಳೂರು : ಬ್ಯಾನರ್ ಅಳವಡಿಕೆ ಸಂಬಂಧಪಟ್ಟ ಬಳ್ಳಾರಿಯಲ್ಲಿ ನಡೆದ ಗಲಭೆ ಖಂಡಿಸಿ ಪಾದಯಾತ್ರೆ ನಡೆಸುವ ವಿಷಯದಲ್ಲಿ ಬಿಜೆಪಿಯೊಳಗೆ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ.…

3 hours ago

ವರ್ಕ್ ಫ್ರಮ್ ಹೋಮ್ ಕೆಲಸ | ಮಹಿಳೆಗೆ 9.7 ಲಕ್ಷ ರೂ. ವಂಚನೆ

ಮೈಸೂರು: ವರ್ಕ್ ಫ್ರಂ ಹೋಂ ಕೆಲಸಕ್ಕೆ ಸೇರಿದ ಮಹಿಳೆ ನಂತರ ನಕಲಿ ಕಂಪೆನಿಯವರ ಮಾತನ್ನು ಕೇಳಿ ಷೇರು ಮಾರುಕಟ್ಟೆಯಲ್ಲಿ ಹಣ…

3 hours ago

ಎರಡು ಪ್ರತ್ಯೇಕ ಅಪಘಾತ : ಇಬ್ಬರು ಸಾವು

ಮೈಸೂರು : ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಳವಾಡಿ ಹಾಗೂ ಕಡಕೊಳ ಬಳಿ ನಡೆದಿದೆ. ಮೊದಲನೇ…

3 hours ago

ಸಂಕ್ರಾಂತಿಗೆ ಸಾಂಸ್ಕೃತಿಕ ನಗರಿ ಸಜ್ಜು : ಎಲ್ಲೆಲ್ಲೂ ಶಾಪಿಂಗ್ ಸಡಗರ

ಮೈಸೂರು : ವರ್ಷದ ಮೊದಲ ಹಬ್ಬ ಸುಗ್ಗಿ ಸಂಕ್ರಾತಿ ಹಿನ್ನೆಲೆ ನಗರದಲ್ಲಿ ಸಂಭ್ರಮ ಮನೆ ಮಾಡಿದ್ದು, ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಬೇಕಾದ…

4 hours ago