Andolana originals

ಮೈಸೂರು: ಸುಗಮ ಸಂಚಾರಕ್ಕೆ 50 ಹೊಸ ಸಿಗ ಲ್ ಲೈಟ್ ಅಳವಡಿಕೆ

ಎಚ್. ಎಸ್. ದಿನೇಶ್ ಕುಮಾರ್

ಮೈಸೂರು: ಸುಗಮ ಸಂಚಾರ ವ್ಯವಸ್ಥೆಗಾಗಿ ನಗರದಾದ್ಯಂತ ಸುಮಾರು 9 ಕೋಟಿ ರೂ. ವೆಚ್ಚದಲ್ಲಿ ವಿವಿಧ ವೃತ್ತ ಗಳು ಹಾಗೂ ಜಂಕ್ಷನ್‌ಗಳಲ್ಲಿ 50 ಹೊಸ ಸಿಗ್ನಲ್ ಲೈಟ್ ಗಳನ್ನು ಅಳವಡಿಸಲು ಪೊಲೀಸ್ ಇಲಾಖೆ ಸಿದ್ಧತೆ ನಡೆಸಿದೆ.

ವಾಹನ ಚಾಲನೆ ಮಾಡಲು ಅನುಮತಿ ಇದೆ ಅಥವಾ ಇಲ್ಲ ಎಂಬುದನ್ನು ಸೂಚಿಸುವ ಉದ್ದೇಶಕ್ಕಾಗಿ ರಸ್ತೆ ಬದಿಯಲ್ಲಿ ಟ್ರಾಫಿಕ್ ಲೈಟ್ ಅಥವಾ ಟ್ರಾಫಿಕ್ ಸಿಗ್ನಲ್ ಅಥವಾ ಸ್ಟಾಪ್ ಲೈಟ್ ಅಳವಡಿಸಲು ತೀರ್ಮಾನಿಸಲಾಗಿದೆ.

ಮೋಟಾರು ವಾಹನವನ್ನು ಚಾಲನೆ ಮಾಡುವ ಪ್ರತಿಯೊಬ್ಬರೂ ಟ್ರಾಫಿಕ್ ಸಿಗ್ನಲ್‌ಗಳನ್ನು ಪಾಲನೆ ಮಾಡುವುದು ಕಡ್ಡಾಯ. ಸಿಗ್ನಲ್‌ಗಳನ್ನು ಉಲ್ಲಂಘಿಸಿದವರಿಗೆ ಪೊಲೀಸ್ ಇಲಾಖೆ ವತಿಯಿಂದ ದಂಡ ವಿಽಸಲಾಗುತ್ತದೆ. ಇಲ್ಲಿ ದಂಡ ಎಂಬುದು ನೆಪಮಾತ್ರ. ಟ್ರಾಫಿಕ್ ಸಂಕೇತ ಗಳನ್ನು, ವಾಹನ ಚಾಲನೆಯ ನಿಬಂಧನೆಗಳನ್ನು ಮತ್ತು ಟ್ರಾಫಿಕ್ ಅಥವಾ ಪೊಲೀಸ್ ಅಧಿಕಾರಿಗಳು ನೀಡುವ ನಿರ್ದೇಶನಗಳನ್ನು ಪಾಲಿಸುವುದು ಮೋಟಾರು ವಾಹನ ವನ್ನು ಚಾಲನೆ ಮಾಡುವ ಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯ.

ವಾಹನ ಚಾಲಕರ ಸುರಕ್ಷತೆಗಾಗಿ, ವಾಹನಗಳ ಸುಗಮ ಸಂಚಾರಕ್ಕಾಗಿ ಹಾಗೂ ಪಾದಚಾರಿಗಳ ಅನುಕೂಲಕ್ಕಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿರುತ್ತದೆ. ಈ ನಿಯಮವನ್ನು ವಾಹನ ಚಾಲಕರು ಪಾಲಿಸುವುದರಿಂದ ಅಪಘಾತಗಳಿಗೆ ಕಡಿವಾಣ ಹಾಕಬಹುದು.

ವಾಹನಗಳು ಹಾಗೂ ಜನರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಟ್ರಾಫಿಕ್ ಸಿಗ್ನಲ್‌ಗಳ ಅವಶ್ಯವೂ ಹೆಚ್ಚಿದೆ. ಇದನ್ನು ಮನಗಂಡ ಪೊಲೀಸ್ ಇಲಾಖೆ ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳು, ತಾಲ್ಲೂಕು ಕೇಂದ್ರಗಳು, ಹೋಬಳಿ ಮಟ್ಟದ ವೃತ್ತಗಳು ಹಾಗೂ ಪ್ರಮುಖ ವೃತ್ತಗಳಲ್ಲಿ ಸಿಗ್ನಲ್‌ಗಳನ್ನು ಅಳವಡಿಸಲು ಮುಂದಾಗಿದೆ.

ಎರಡನೇ ದೊಡ್ಡ ನಗರವಾಗಿ ಬೆಳೆಯುತ್ತಿರುವ ಮೈಸೂರು, ಸುಮಾರು ೧೦-೧೫ ಕಿ. ಮೀ. ವ್ಯಾಪ್ತಿಯನ್ನು ಹೊಂದಿದೆ. ಇಲ್ಲಿ ವಾಹನಗಳ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹೀಗಾಗಿ ಪ್ರಮುಖ ರಸ್ತೆಗಳು ಹಾಗೂ ವೃತ್ತಗಳ ಬಳಿ ಟ್ರಾಫಿಕ್ ಸಿಗ್ನಲ್‌ಗಳ ಅವಶ್ಯಕತೆ ಇದೆ.

ಈಗಾಗಲೇ ಮೈಸೂರಲ್ಲಿ ೬೫ ವಾರ್ಡ್‌ಗಳ ವಿವಿಧ ರಸ್ತೆ ಗಳಲ್ಲಿ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸಲಾಗಿದೆ. ಇದೀಗ ವಾಹನಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ನಗರದಾದ್ಯಂತ ಪ್ರಮುಖ ಹಾಗೂ ಹೆಚ್ಚು ವಾಹನಗಳ ಸಂಚಾರವಿರುವ ೫೦ ರಸ್ತೆ ಗಳಲ್ಲಿ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸಲಾಗುತ್ತಿದೆ.

ಪೊಲೀಸ್ ಇಲಾಖೆಯಿಂದ ಬೆಂಗಳೂರಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣ; 60 ದಿನಗಳೊಳಗೆ ಕಾಮಗಾರಿ ಪೂರ್ಣಗೊಳಿಸಲು ಷರತ್ತು: ರಾಜ್ಯಾದ್ಯಂತ ಜಿಲ್ಲಾ, ತಾಲ್ಲೂಕು ಮತ್ತು ಹೋಬಳಿ ಕೇಂದ್ರಗಳಲ್ಲಿ ಸಿಗ್ನಲ್‌ಗೆ ಚಿಂತನೆ ಮುಂದಿನ ದಿನಗಳಲ್ಲಿ ಮೈಸೂರಿನ ಗಾಯತ್ರಿ ಭವನ ಜಂಕ್ಷನ್, ಸಿಲ್ಕ್ ಫ್ಯಾಕ್ಟರಿ ವೃತ್ತ, ಅಶೋಕ ವೃತ್ತ, ಸದ್ವಿದ್ಯಾ ಶಾಲೆ ವೃತ್ತ, ಆಯುರ್ವೇದ ಆಸ್ಪತ್ರೆ ವೃತ್ತ, ದಿವಾನ್ಸ್ ರಸ್ತೆ ಜಂಕ್ಷನ್, ತ್ರಿವೇಣಿ ವೃತ್ತ, ಚಿಕ್ಕಬೋರಯ್ಯ ಜಂಕ್ಷನ್ ಸೇರಿದಂತೆ ನಗರದ ವಿವಿಧ ೫೦ ರಸ್ತೆಗಳು ಹಾಗೂ ಜಂಕ್ಷನ್‌ಗಳಲ್ಲಿ ಸಿಗ್ನಲ್ ಲೈಟ್ ಅಳವಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ನಗರಪಾಲಿಕೆಯಿಂದ 10 ಸಿಗ್ನಲ್ ಲೈಟ್: ಇದೇ ವೇಳೆ ನಗರಪಾಲಿಕೆಯಿಂದ ಕೂಡ ನಗರದ ವಿವಿಧೆಡೆ 10 ಸಿಗ್ನಲ್ ಲೈಟ್ ಅಳವಡಿಸಲು ಮುಂದಾಗಿದ್ದು, ನಗರದ ಆರ್‌ಟಿಒ ವೃತ್ತ, ದೇವೇಗೌಡ ವೃತ್ತ, ಕಾಯಿಮಟ್ಟೆ ವೃತ್ತ ಸೇರಿದಂತೆ ಐದು ರಸ್ತೆಗಳಲ್ಲಿ ಈಗಾಗಲೇ ಸಿಗ್ನಲ್ ಲೈಟ್ ಅಳವಡಿಸಲಾಗಿದೆ. ಉಳಿದ ಐದು ಸಿಗ್ನಲ್ ಲೈಟ್‌ಗಳನ್ನು ಸಂಚಾರ ಪೊಲೀಸ್ ಅಧಿಕಾರಿಗಳ ಉಸ್ತುವಾರಿಯಲ್ಲಿ ಅಳವಡಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಆಂದೋಲನ ಡೆಸ್ಕ್

Recent Posts

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಅಮಾನತು

ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್…

2 hours ago

ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಮತ್ತೊಮ್ಮೆ ಕಾನೂನು ಸಂಕಷ್ಟ

ನವದೆಹಲಿ: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್‌ನಿಂದ ನೋಟಿಸ್…

2 hours ago

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

9 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

9 hours ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

9 hours ago

ಕೆ.ಆರ್.ಪೇಟೆ: ಶೇ.19ರಷ್ಟು ಮಳೆ ಕೊರತೆ

ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…

9 hours ago