Andolana originals

ಗೌರಿ-ಗಣೇಶ ಹಬ್ಬಕ್ಕೆ ಅರಮನೆ ನಗರಿ ಸಜ್ಜು

ಗೌರಿ-ಗಣೇಶ ಖರೀದಿಸಿದ ಜನರು; ಹೂವು-ಹಣ್ಣು ಖರೀದಿಯೂ ಜೋರು

 

ಮೈಸೂರು: ಗೌರಿ-ಗಣೇಶ ಹಬ್ಬವನ್ನು ಸಂಭ್ರಮ-ಸಡಗರದಿಂದ ಆಚರಿಸಲು ಸಾಂಸ್ಕೃತಿಕ ನಗರಿಯ ಜನತೆ ಸಜ್ಜಾಗಿದ್ದು, ಹಬ್ಬಕ್ಕೆ ಅಗತ್ಯವಿರುವ ಗಣೇಶನ ವಿಗ್ರಹ, ಹೂವು-ಹಣ್ಣು, ಬಾಳೆಕಂದು, ಗರಿಕೆ, ಪೂಜಾ ಸಾಮಗ್ರಿಗಳ ಖರೀದಿ ಜೋರಾಗಿ ನಡೆಯಿತು.

ಒಂದೆಡೆ ಅಗತ್ಯ ವಸ್ತುಗಳ ಖರೀದಿ ಜೋರಾದರೆ, ಇತ್ತ ನಗರದ ಹಲವು ಬಡಾವಣೆಗಳು, ರಸ್ತೆ ಬದಿಗಳಲ್ಲಿ ಗೌರಿ-ಗಣೇಶನ ಮೂರ್ತಿಗಳಿಂದ ತುಂಬಿದ್ದವು. 100 ರೂ. ಬೆಲೆಯ ಪುಟ್ಟ ಗಣಪನಿಂದ ಹಿಡಿದು 300 ಸಾವಿರ ರೂ.ನ ಗಣಪನವರೆಗೂ ನಾನಾ ಬೆಲೆಯ ಮೂರ್ತಿಗಳು ಮಾರಾಟವಾದವು.

ಅಯೋಧ್ಯೆ ರಾಮ, ಸೌಮ್ಯ ಸ್ವಭಾವದ ಶಿವಲಿಂಗ ಗಣಪ, ರಾಜಸ್ತಾನಿ ಗಣಪ, ತಾಂಡವ ನೃತ್ಯದ ಕಾಲಭೈರವ ಗಣಪ, ಬೆಣ್ಣೆ ಗಣಪ, ಒಡಿಶಾ ಶೈಲಿಯ ಗಣಪ, ಮುಂಬೈನಲ್ಲಿ ಜನಪ್ರಿಯವಾಗಿರುವ ‘ಲಾಲ್‌ಬಾಗ್ ರಾಜ”.. ಹೀಗೆ ಬಗೆ ಬಗೆಯ ನಾಲ್ವಾರು ಅಡಿಗಳ ಎತ್ತರದವರೆಗಿನ ಗಣೇಶನ ಮೂರ್ತಿಗಳನ್ನು ಮಾರಾಟಕ್ಕೆ ಇಡಲಾಗಿತ್ತು. ಗೌರಿ ಹಬ್ಬಕ್ಕಾಗಿ ಗಜಗೌರಿ, ಮಂಗಳಗೌರಿ, ಮಡಿಗೌರಿ, ಮೈಸೂರು ಗೌರಿ, ಬೆಂಗಳೂರು ಗೌರಿ ಮೂರ್ತಿಗಳು ರಾರಾಜಿಸಿದವು. ಪರಿಸರ ಸ್ನೇಹಿ, ಜೇಡಿಮಣ್ಣಿನ ಗಣೇಶನನ್ನು ಗ್ರಾಹಕರು ಖರೀದಿಸಿದರು.

ಹೂ, ಹಣ್ಣು ಖರೀದಿ…

ದೇವರಾಜ ಮಾರುಕಟ್ಟೆ ಸೇರಿದಂತೆ ನಗರದ ಬಹುತೇಕ ಮಾರುಕಟ್ಟೆಗಳಲ್ಲಿ ಜನಜಂಗುಳಿ ಕಂಡುಬಂದಿತು. ಹೂವು- ಹಣ್ಣು, ಬಾಳೆಕಂದು, ಗರಿಕೆ ಮಾರಾಟ ಭರ್ಜರಿಯಾಗಿಯೇ ನಡೆಯಿತು. ಬಾಗಿನ, ಗರಿಕೆ, ಬೇಲದ ಹಣ್ಣು, ಎಕ್ಕದ ಹೂವಿನ ಹಾರಕ್ಕೆ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇತ್ತು. ಇದರೊಂದಿಗೆ ಬಾಳೆಕಂದು, ಹೂವಿನ ಹಾರ ಇತ್ಯಾದಿ ಪೂಜಾ ಸಾಮಗ್ರಿಗಳನ್ನು ಜನರು ವಿಶೇಷವಾಗಿ ಖರೀದಿಸುತ್ತಿದ್ದರು. ಕೆಲ ದಿನಗಳ ಹಿಂದಷ್ಟೆ ಕಡಿಮೆ ಇದ್ದ ಅಗತ್ಯ ವಸ್ತುಗಳ ಬೆಲೆಗಳು ಹಬ್ಬದ ಹಿನ್ನೆಲೆಯಲ್ಲಿ ಏರಿಕೆಯಾಗಿದ್ದವು. ಏಲಕ್ಕಿ ಬಾಳೆ ಕೆಜಿಗೆ 100 ರೂ.ನಿಂದ 120 ರೂ.ಗೆ ಮಾರಾಟವಾಯಿತು. ಸೇಬು, ಮೂಸಂಬಿ, ದಾಳಿಂಬೆ, ಕಿತ್ತಳೆ, ಪೈನಾಪಲ್, ದ್ರಾಕ್ಷಿ ಸೀತಾಫಲ ಮೊದಲಾದ ಹಣ್ಣುಗಳ ಬೆಲೆ ಕನಿಷ್ಠ 30ರಿಂದ 40 ರೂ.ವರೆಗೆ ಹೆಚ್ಚಾಗಿದೆ. ಸೇವಂತಿಗೆ ಮಾರಿಗೆ 100 ರೂ.ನಿಂದ 120 ರೂ.ವರೆಗೆ ಮಾರಾಟವಾದರೆ ಮಲ್ಲಿಗೆ, ಮರಲೆ, ಸುಗಂಧ ರಾಜ, ಕಾಕಡ, ಕನಕಾಂಬರ, ಗುಲಾಬಿ ಹೂ, ಚೆಂಡು ಹೂ, ಮೂರು ರೀತಿಯ ಬಣ್ಣದ ಗಣಗಲೆ ಹೂ ಸೇರಿದಂತೆ ಎಲ್ಲ ಹೂಗಳ ದರವೂ ಕೊಂಚ ಏರಿಕೆಯಾಗಿತ್ತು.

ಬಾಗಿನ ಸಾಮಗ್ರಿಗೆ ಡಿಮ್ಯಾಂಡ್…
ಸಾಮಾನ್ಯವಾಗಿ ಗೌರಿ ಹಬ್ಬಕ್ಕೆ ಅಣ್ಣ-ತಂಗಿಗೆ ಬಾಗಿನ ಕೊಡುವುದು ಸಂಪ್ರದಾಯ. ಅಲ್ಲದೆ, ಹೆಣ್ಣು ಮಕ್ಕಳಿಗೆ ತವರು ಮನೆಯಿಂದ ಬಾಗಿನ ಕೊಡುತ್ತಾರೆ. ಈ ಹಿನ್ನೆಲೆಯಲ್ಲಿ ಬಾಗಿನ ಸಾಮಗ್ರಿಗೆ ಹೆಚ್ಚಿನ ಡಿಮ್ಯಾಂಡ್ ಸೃಷ್ಟಿಯಾಗಿತ್ತು. ಗರಿಕೆ, ಬಿಲ್ವಪತ್ರೆ, ಬಾಳೆಕಂದು, ಬಾಗಿನ ನೀಡಲು ಬೇಕಾದ ಮೊರ, ಬಾಗಿನದ ಸಾಮಗ್ರಿಗಳು, ಬಳೆ ಸೇರಿದಂತೆ ಗೌರಿ ಹಬ್ಬಕ್ಕೆ ಬೇಕಾದ ವಸ್ತುಗಳ ಖರೀದಿಯೂ ಜೋರಾಗಿ ನಡೆಯಿತು.

ಬಟ್ಟೆ ಖರೀದಿ ಜೋರು…
ಹಬ್ಬದ ಹಿನ್ನೆಲೆಯಲ್ಲಿ ಹೊಸ ಬಟ್ಟೆ ಖರೀದಿಯೂ ಜೋರಾಗಿ ನಡೆದಿದ್ದು, ಪ್ರಭಾ, ಒಲಂಪಿಯಾ ಚಿತ್ರ ಮಂದಿರದ ಬಳಿ, ಸಯ್ಯಾಜಿರಾವ್‌ ರಾವ್ ರಸ್ತೆ, ಗಾಂಧಿ ವೃತ್ತ, ಅಗ್ರಹಾರ, ದೇವರಾಜ ಅರಸು ರಸ್ತೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳ ಬಟ್ಟೆ ಅಂಗಡಿಗಳು ಜನರಿಂದ ತುಂಬಿದ್ದವು. ದೇವರಾಜ ಮಾರುಕಟ್ಟೆ, ಮಂಡಿ ಮಾರ್ಕೆಟ್, ಅಗ್ರಹಾರದ ವಾಣಿವಿಲಾಸ ಮಾರುಕಟ್ಟೆ, ನಂಜುಮಳಿಗೆ, ಧನ್ವಂತ್ರಿ ರಸ್ತೆ, ಸಯ್ಯಾಜಿರಾವ್ ರಸ್ತೆ, ಅಗ್ರಹಾರ, ಗಾಂಧಿ ವೃತ್ತ, ರೈಲು ನಿಲ್ದಾಣ ಸೇರಿದಂತೆ ನಗರದ ಪ್ರಮುಖ ವೃತ್ತಗಳಲ್ಲಿ ಹಬ್ಬದ ಖರೀದಿ ಭರಾಟೆ ಜೋರಾಗಿ ನಡೆಯಿತು.

ಹಣ್ಣುಗಳ ದರ ಪ್ರತಿ ಕೆಜಿಗೆ (ರೂಪಾಯಿಗಳಲ್ಲಿ): ಸೇಬು 200, ದಾಳಿಂಬೆ 200, ಸೀತಾಫಲ 120, ಮರಸೇಬು 100, ಕಿತ್ತಲೆ 120, ಮೊಸಂಬಿ 80, ಏಲಕ್ಕಿ ಬಾಳೆ 130, ದ್ರಾಕಿ 200.

ಹೂವುಗಳ ದರ ಪ್ರತಿ ಕೆಜಿಗೆ (ರೂಪಾಯಿಗಳಲ್ಲಿ): ಸೇವಂತಿಗೆ 300, ಮಲ್ಲಿಗೆ 1500, ಮರಲೆ 100, ಸುಗಂಧ ರಾಜ 400, ಕಾಕಡ 1,000, ಕನಕಾಂಬರ 2,500, ಗುಲಾಬಿ ಹೂ 400.

 

 

ಜಿ ತಂಗಂ ಗೋಪಿನಾಥಂ

ಮೂಲತಃ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಗೋಪಿನಾಥಂ ಗ್ರಾಮದವನಾದ ನಾನು ಸದ್ಯ,‌ ಮೈಸೂರಿನಲ್ಲಿ ನೆಲೆಸಿದ್ದೇನೆ. 2019ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಮಹಾರಾಜ ಕಾಲೇಜಿನಲ್ಲಿ ಬಿಎ ( ಇತಿಹಾಸ, ಐಚ್ಛಿಕ ಕನ್ನಡ, ಪತ್ರಿಕೋದ್ಯಮ ) ಪದವಿಯನ್ನು ಮುಗಿಸಿದ್ದೇನೆ. ನಂತರ 2021ರಲ್ಲಿ‌ ಮೈಸೂರು ವಿಶ್ವವಿದ್ಯಾನಿಲಯದ‌ಲ್ಲಿ ಎಂಎ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ‌ 2 ವರ್ಷಗಳ ‌ಕಾಲ ಅನುಭವ ಪಡೆದುಕೊಂಡಿದ್ದೇನೆ. ವಿಜಯವಾಣಿ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ಸಹಾಯಕ ವರದಿಗಾರನಾಗಿ ಕೆಲಸ ಮಾಡಿದ್ದೇನೆ. ಕಳೆದ 8 ತಿಂಗಳಿಂದ ಮೈಸೂರಿನ ಆಂದೋಲನ‌ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.

Recent Posts

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

38 mins ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

1 hour ago

ನಂದಿನ ರಾಯಭಾರಿಯಾಗಿ ಸುಧಾರಾಣಿ

ಬೆಂಗಳೂರು : ರಾಜ್ಯದ ಹೆಮ್ಮೆಯ ಬ್ರ್ಯಾಂಡ್ ನಂದಿನಿ ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯನ್ನಾಗಿ ಹಿರಿಯ ನಟಿ ಸುಧಾರಾಣಿ ಅವರನ್ನು ನೇಮಿಸಲಾಗಿದೆ.…

1 hour ago

ನಾಳೆ ಭಾರತ ಬಂದ್‌ : ಶಾಲಾ, ಕಾಲೇಜು ಬಂದ್? ಏನಿರುತ್ತೇ, ಏನಿರಲ್ಲ?

ಹೊಸದಿಲ್ಲಿ : ಕೇಂದ್ರ ಸರ್ಕಾರದ ಕೃಷಿ, ಕಾರ್ಮಿಕ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ನಾಳೆ(ಫೆ.12) ಭಾರತ್‌ ಬಂದ್‌ಗೆ ಕರೆ ನೀಡಲಾಗಿದೆ.…

1 hour ago

ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ ಕಡ್ಡಾಯ ; ವಂದೇ ಮಾತರಂಗೂ ಶಿಷ್ಟಾಚಾರ ಗೌರವ!

ಹೊಸದಿಲ್ಲಿ : ‘ರಾಷ್ಟ್ರಗೀತೆ’ಗೂ ಮುನ್ನ ‘ವಂದೇ ಮಾತರಂ’ ಹಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದ್ದು, ಕಾಂಗ್ರೆಸ್ ಕೈಬಿಟ್ಟಿದ್ದ ಚರಣಗಳ ಮರುಸೇರ್ಪಡೆಗೊಳಿಸಿದೆ.…

2 hours ago

ವಿದ್ಯಾರ್ಥಿಗಳು ಹೊಸ ಹೊಸ ವಿಷಯಗಳ ಕಡೆ ಗಮನಹರಿಸಿ : ಕುಲಪತಿ ಲೋಕನಾಥ್‌ ಸಲಹೆ

ಮೈಸೂರು : ಇಂದಿನ ಯುವಜನತೆ ಪುಸ್ತಕಗಳಿಗೆ ಸೀಮಿತವಾಗದೆ, ಮಹಾತ್ಮರ ಚಿಂತನೆಗಳಿಂದ ಪ್ರೇರಣೆ ಪಡೆದು ಆತ್ಮಸ್ಥೈರ್ಯದಿಂದ ಬದುಕು ಕಟ್ಟಿಕೊಳ್ಳಬೇಕು ಎಂದು ಮೈಸೂರು…

2 hours ago