Andolana originals

ಮುಡಾ: ಸರ್ಜರಿಗೆ ಮುಂದಾದ ಸಿಎಂ

ಆಡಳಿತಾಧಿಕಾರಿಯಾಗಿ ಶೀಘ್ರದಲ್ಲೇ ಖಡಕ್‌ ಐಎಎಸ್‌ ಅಧಿಕಾರಿ ನೇಮಕ?
ಕೆ.ಬಿ.ರಮೇಶನಾಯಕ
ಮೈಸೂರು: ತಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಲು ಕಾರಣವಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಪ್ರಕರಣದಿಂದ ಅಸಮಾಧಾನಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೊನೆಗೂ ಮುಡಾಗೆ ಮೇಜರ್ ಸರ್ಜರಿ ಮಾಡಲು ಮುಂದಾಗಿದ್ದಾರೆ.

ಹಲವು ವರ್ಷಗಳಿಂದ ಮುಡಾದಲ್ಲಿ ಸದ್ದಿಲ್ಲದೆ ನಡೆಯುತ್ತಿದ್ದ ಕಾನೂನುಬಾಹಿ ರವಾದ ಚಟುವಟಿಕೆಗಳನ್ನು ರಾಜಕಾರಣಿ ಗಳು ಮತ್ತು ಆಪ್ತರು ಪ್ರಭಾವ ಬಳಸಿ ಕೊಂಡು ಪಡೆದಿರುವ ನಿವೇಶನಗಳನ್ನು ಗುರುತು ಮಾಡಿ ತನಿಖೆ ನಡೆಸುವ ಮೂಲಕ ರಾಜಕೀಯ ಎದುರಾಳಿಗಳಿಗೆ ಕಾನೂನಾತ್ಮಕವಾಗಿಯೇ ಬಿಸಿಮುಟ್ಟಿಸಲು ನಿರ್ಧಾರ ಮಾಡಿದ್ದಾರೆ.

ಮೇಜರ್ ಸರ್ಜರಿಗೆ ರಣತಂತ್ರವನ್ನು ಸದ್ದಿಲ್ಲದೆ ರೂಪಿಸಿರುವ ಸಿದ್ದರಾಮಯ್ಯ ಅವರು, ಕೆ.ಮರೀಗೌಡ ಅವರಿಂದ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಿ, ಹಿರಿಯ ಐಎಎಸ್ ಅಧಿಕಾರಿಯನ್ನು ಆಡಳಿತಾಧಿಕಾರಿಯಾಗಿ ನೇಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈಗಾಗಲೇ ಮುಡಾ ಆಯುಕ್ತರು, ಕಾರ್ಯದರ್ಶಿ, ನಗರ ಯೋಜಕ ಸದಸ್ಯರು, ವಿಶೇಷ ಭೂಸ್ವಾಧೀನಾಧಿಕಾರಿಗಳ ಹುದ್ದೆಗೆ ಹೊಸಬರನ್ನು ನೇಮಿಸಿರುವ ಸರ್ಕಾರವು ಆಡಳಿತಾಧಿಕಾರಿ ಸ್ಥಾನಕ್ಕೆ ಹಿರಿಯ ಖಡಕ್ ಅಧಿಕಾರಿಯನ್ನು ತಂದು ಕೂರಿಸಲು ಮೂವರ ಹೆಸರುಗಳನ್ನು ಪಟ್ಟಿ ಮಾಡಿದೆ ಎಂದು ಹೇಳಲಾಗಿದೆ.

ಒಂದುವೇಳೆ ಮುಡಾ ಆಡಳಿತಾಧಿಕಾರಿ ನೇಮಕಗೊಂಡರೆ ಹಳೆಯ ಅಕ್ರಮಗಳು ಹೊರಬರುವ ಸಾಧ್ಯತೆಗಳಿವೆ. ಬಡಾವಣೆಗಳನ್ನು ರಚಿಸಿ ನಗರದ ಬಡವರು, ಮಧ್ಯಮ ವರ್ಗದ ಜನರಿಗೆ ನಿವೇಶನ ಹಂಚಿಕೆ ಮಾಡಬೇಕಾದ ಮುಡಾ, ತನ್ನ ಕೆಲಸವನ್ನು ಮರೆತು ಖಾಸಗಿ ಬಡಾವಣೆಗಳ ರಚನೆಗೆ ಅನುಮತಿ ಕೊಡುವುದಕ್ಕಷ್ಟೇ ಸೀಮಿತವಾಗಿತ್ತು ಎಂಬ ಆರೋಪಗಳಿವೆ.

ಸರ್ಕಾರದಿಂದ ದೊರೆಯುವ ಮತ್ತು ಬಡಾವಣೆಗಳಿಂದ ಸಂಗಹವಾಗುವ ಆದಾಯದಿಂದ ಒಂದಿಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು ಬಿಟ್ಟರೆ ದಶಕದಿಂದ ಹೊಸದಾಗಿ ಒಂದೇ ಒಂದು ನಿವೇಶವನ್ನೂ ಹಂಚಿಕೆ ಒಂದೇ ಒಂದು ನಿವೇಶವನ್ನೂ ಹಂಚಿಕೆ ಮಾಡಿರಲಿಲ್ಲ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಕೆಸರೆಯಲ್ಲಿ ಮುಡಾ ಸ್ವಾಧೀನ ಪಡಿಸಿಕೊಂಡಿದ್ದ ಭೂಮಿಗೆ ಬದಲಾಗಿ ವಿಜಯನಗರ ಬಡಾವಣೆಯಲ್ಲಿ 14 ನಿವೇಶನಗಳನ್ನು ಮಂಜೂರು ಮಾಡಲಾಗಿತ್ತು.

ಈ ವಿಚಾರ ಹೊರಗೆ ಬರುತ್ತಿದ್ದಂತೆ ದೊಡ್ಡ ವಿವಾದಕ್ಕೆ ಕಾರಣವಾಯಿತು. ಆರಂಭದಲ್ಲಿ ನಿವೇಶನಗಳನ್ನು ವಾಪಸ್ ನೀಡಿ ತನಿಖೆಗೆ ಆದೇಶ ನೀಡಬೇಕೆಂಬ ಕೂಗಿಗೆ ಒಪ್ಪದ ಸಿಎಂ, ಪ್ರತಿಪಕ್ಷಗಳ ಒತ್ತಡದಿಂದ ಪಿ.ಎನ್.ದೇಸಾಯಿ ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗ ರಚನೆ ಮಾಡಿದ್ದರು. ನಂತರ, ಈ ವಿವಾದ ತೀವ್ರ ಸ್ವರೂಪ ಪಡೆದು ರಾಜ್ಯಪಾಲರ ಅಂಗಳಕ್ಕೆ ತಲುಪಿ, ಪ್ರಾಸಿಕ್ಯೂಷನ್‌ಗೆ ಒಪ್ಪಿಗೆ ಸಿಕ್ಕಿತ್ತು.

ಹಾಗಾಗಿ ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಎಲ್ಲಾ ಬೆಳವಣಿಗೆಗಳಿಂದ ಸಿದ್ದರಾಮಯ್ಯ ಅವರು, ತಾವೇನೂ ತಪ್ಪು ಮಾಡಿಲ್ಲವೆಂದು ಬಲವಾಗಿ ಸಮರ್ಥಿಸಿಕೊಳ್ಳುತ್ತಲೇ ಎದುರಾಳಿಗಳ ಅಕ್ರಮಗಳನ್ನು ತಮ್ಮ ಬೆಂಬಲಿಗ ಸಚಿವರ ಮೂಲಕ ಹೊರ ಹಾಕುವ ಕೆಲಸಕ್ಕೆ ಕೈ ಹಾಕಿದ್ದರು. ಇದೀಗ ಮುಡಾ ಸರ್ಜರಿಗೆ ಮುಂದಾಗುವ ಮೂಲಕ ರಾಜಕೀಯ ಎದುರಾಳಿಗಳಿಗೆ ತಿರುಗೇಟು ನೀಡಲು ಮುಂದಾಗಿದ್ದಾರೆ.

ರಾಜೀನಾಮೆ ನೀಡಲು ಮರೀಗೌಡಗೆ ಸೂಚನೆ?
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ 14 ನಿವೇಶನಗಳನ್ನು ಹಿಂತಿರುಗಿಸಲು ನಿರ್ಧರಿಸಿ ಮುಡಾಕ್ಕೆ ಪತ್ರ ಬರೆದರು. ಕೂಡಲೇ ಮುಡಾ ನಿವೇಶನಗಳ ಖಾತೆಯನ್ನು ರದ್ದುಪಡಿಸಿ, ವಶಕ್ಕೆ ಪಡೆದುಕೊಂಡಿತ್ತು. ಮುಡಾದಿಂದ ನಿವೇಶನ ಅಕ್ರಮ ಹಂಚಿಕೆ ವಿಚಾರ ದೊಡ್ಡ ಮಟ್ಟದಲ್ಲಿ ಸದ್ದು ಮಾಡುವುದಕ್ಕೆ ಕಾರಣ ಎನ್ನಲಾದ ಕೆ. ಮರೀಗೌಡ ಅವರಿಗೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಆಂದೋಲನ ಡೆಸ್ಕ್

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

15 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

5 hours ago