Andolana originals

ಮುಡಾ ಆಡಳಿತಕ್ಕೆ ಶೀಘ್ರದಲ್ಲೇ ಹೊಸ ರೂಪ

ಕೆ.ಬಿ.ರಮೇಶನಾಯಕ

ನಾಲ್ವಡಿ ಕಾಲದಲ್ಲಿ ಸ್ಥಾಪಿತಗೊಂಡಿದ್ದ ಸಿಐಟಿಬಿ

೧೯೮೮ರಲ್ಲಿ ನಗರಾಭಿವೃದ್ಧಿ ಪ್ರಾಧಿಕಾರವಾಗಿ ರಚನೆ

ಆಡಳಿತಾತ್ಮಕ ವಿಚಾರದಲ್ಲೂ ಹಲವು ಬದಲಾವಣೆಗಳು

ಆಡಳಿತದಲ್ಲಿ ಶಾಸಕರ ಅಧಿಕಾರಕ್ಕೂ ಒಂದಿಷ್ಟು ಕೊಕ್

ಮೈಸೂರು: ೫೦:೫೦ ಅನುಪಾತದಡಿ ನಿವೇಶನ ಹಂಚಿಕೆಯಲ್ಲಾಗಿರುವ ಹಗರಣದಿಂದಾಗಿ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗುರಿಯಾಗಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವನ್ನು ರದ್ದುಪಡಿಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ್ದು, ಈ ಕುರಿತು ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಅಧಿಸೂಚನೆ ಜಾರಿಯಾದ ಮೇಲೆ ಆಡಳಿತಾತ್ಮಕವಾಗಿ ಹೊಸ ಸ್ವರೂಪ ಪಡೆದುಕೊಳ್ಳಲಿದೆ.

ಈ ಸಂಬಂಧ ವಿಧಾನಮಂಡಲ ಅಧಿ ವೇಶನದಲ್ಲಿ ಮಂಡಿಸಿರುವ ಮಸೂದೆಗೆ ಒಪ್ಪಿಗೆ ಸಿಕ್ಕಿದ್ದು, ರಾಜ್ಯಪಾಲರ ಅನುಮೋದನೆ ದೊರೆತ ಮೇಲೆ ರಾಜ್ಯಪತ್ರದಲ್ಲಿ ಪ್ರಕಟವಾಗು ತ್ತಿದ್ದಂತೆ ೧೨೦ ವರ್ಷಗಳ ಇತಿಹಾಸ ಹೊಂದಿ ರುವ ಪ್ರಾಧಿಕಾರ ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲಾರಂಭಿಸಲಿದೆ. ಈ ಮೂಲಕ ಪ್ರಾಧಿ ಕಾರ ಆಡಳಿತಾತ್ಮಕವಾಗಿ ಮತ್ತು ರಾಜಕೀಯ ವಾಗಿ ಸಾಕಷ್ಟು ಬದಲಾವಣೆಗಳನ್ನು ಕಾಣುವ ದಿನಗಳು ಸಮೀಪಿಸಿವೆ.

ಮೈಸೂರನ್ನು ದೇಶದಲ್ಲೇ ಸುಂದರ ನಗರವನ್ನಾಗಿ ನಿರ್ಮಾಣ ಮಾಡಬೇಕೆಂಬ ಕನಸು ಕಂಡಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆ ಯರ್ ಅವರು ೧೯೦೪ರಲ್ಲಿ ನಗರಾಭಿವೃದ್ಧಿ ವಿಶ್ವಸ್ಥ ಮಂಡಳಿಯನ್ನು ರಚನೆ ಮಾಡಿದ್ದರು. ಬದಲಾದ ಕಾಲಕ್ಕೆ ತಕ್ಕಂತೆ ನಾಗರಿಕರ ಬೇಡಿಕೆಗಳನ್ನು ಪೂರೈಸಿ ಹೊಸ ಬಡಾವಣೆಗಳ ನಿರ್ಮಾಣದ ಮಹಾದಾಸೆಯಿಂದ ೧೯೮೮ ರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವನ್ನಾಗಿ ಬದಲಾಯಿಸಲಾಯಿತು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಐದು ದಶಕಗಳಲ್ಲಿ ಹತ್ತಾರು ಬಡಾವಣೆಗಳನ್ನು ನಿರ್ಮಿಸಿ ನಿವೇಶನಗಳನ್ನು ರಚನೆ ಮಾಡಿದ್ದರೆ, ಸಾವಿರಾರು ಖಾಸಗಿ ಬಡಾವಣೆಗಳಿಗೆ ಅನುಮೋದನೆ ನೀಡಿ ಗಮನ ಸೆಳೆದಿತ್ತು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಕೆಸರೆ ಬದಲಿಗೆ ವಿಜಯನಗರ ಬಡಾವಣೆಯಲ್ಲಿ ೧೪ ಬದಲಿ ನಿವೇಶನಗಳನ್ನು ನೀಡಿದ್ದರಿಂದಾಗಿ ದೊಡ್ಡ ವಿವಾದ ಉಂಟಾಗಿತ್ತು. ಇದಾದ ಬಳಿಕ ಹಲವಾರು ವಿದ್ಯಮಾನಗಳು ನಡೆದು ಲೋಕಾಯುಕ್ತ, ಜಾರಿ ನಿರ್ದೇಶನಾಲಯ, ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಏಕಸದಸ್ಯ ವಿಚಾರಣಾ ಆಯೋಗ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿವೆ. ಇದರಿಂದಾಗಿ ಮುಡಾಗೆ ಬಂದಿರುವ ಅಪವಾದವನ್ನು ತೊಡೆದು ಹಾಕಲು ರಾಜ್ಯ ಸರ್ಕಾರ ಮುಂದಾಗಿದ್ದು, ಮೈಸೂರು ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಿದೆ.

ಆಡಳಿತದ ಸ್ವರೂಪದಲ್ಲಿ ಬದಲಾವಣೆ: ನೂತನವಾಗಿ ಅಸ್ತಿತ್ವಕ್ಕೆ ಬರುವ ಮೈಸೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರನ್ನು ಹೊಂದಿರಲಿದೆ. ಓರ್ವ ಹಣಕಾಸು ಸದಸ್ಯ, ಓರ್ವ ಇಂಜಿನಿಯರ್, ಒಬ್ಬ ಟೌನ್ ಪ್ಲಾನರ್, ವಾಸ್ತುಶಿಲ್ಪ ಅನುಭವ ಇರುವ ಓರ್ವ ವ್ಯಕ್ತಿ, ಆಯುಕ್ತರು, ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆಯ ಅಧಿಕಾರಿ, ಸರ್ಕಾರ ನಾಮನಿರ್ದೇಶನ ಮಾಡುವ ಒಬ್ಬ ಶಾಸಕ, ಎಸ್‌ಸಿ, ಎಸ್‌ಟಿ ಸಮುದಾಯಗಳ ತಲಾ ಒಬ್ಬರು, ಮಹಿಳೆಯೊಬ್ಬರು ಸೇರಿ ನಾಲ್ವರು ಸದಸ್ಯರಾಗಿರಲಿದ್ದಾರೆ.

ಪ್ರತ್ಯೇಕ ಅಧಿನಿಯಮ: ೨೦೧೧ನೇ ಸಾಲಿನ ಜನಗಣತಿಯಂತೆ ಮೈಸೂರು ನಗರದ ಜನಸಂಖ್ಯೆಯು ೮,೯೩,೦೬೨ ಇದ್ದು, ಮೈಸೂರು ಸ್ಥಳೀಯ ಯೋಜನಾ ಪ್ರದೇಶದ ಜನಸಂಖ್ಯೆ ೧೬,೯೬,೫೭೭ ಇರುತ್ತದೆ. ಪ್ರಸ್ತುತದಲ್ಲಿ ಮೈಸೂರು ನಗರ ೧೦ ಲಕ್ಷ ಜನಸಂಖ್ಯೆ ಹೊಂದುವ ಸಾಧ್ಯತೆ ಇದ್ದು, ಮೆಟ್ರೋಪಾಲಿಟನ್ ನಗರದ ಎಲ್ಲ ಲಕ್ಷಣಗಳನ್ನೂ ಹೊಂದಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯವ್ಯಯ ಮತ್ತು ಇತರೆ ಕಾರ್ಯಚಟುವಟಿಕೆಗಳು ವಿಸ್ತರಿಸಿಕೊಂಡಿರುತ್ತವೆ. ಅತಿ ವೇಗ ಮತ್ತು ಬೃಹತ್ ಪ್ರಮಾಣದ ಬೆಳವಣಿಗೆಗಳಿಂದಾಗಿ ಪ್ರಾಧಿಕಾರ ಸಂಕೀರ್ಣ ಸವಾಲುಗಳನ್ನು ಎದುರಿಸುತ್ತಿದ್ದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾದರಿಯಲ್ಲಿ ಪ್ರತ್ಯೇಕ ಅಧಿನಿಯಮ ರಚಿಸಿದೆ.

ಏನೆಲ್ಲಾಅಧಿಕಾರ?: ಪ್ರಾಧಿಕಾರವು ಸ್ಥಳೀಯ ಯೋಜನಾ ಪ್ರದೇಶ ವ್ಯಾಪ್ತಿಯಲ್ಲಿ ಅಭಿವೃದ್ಧಿ ಯೋಜನೆಗಳನ್ನು ರೂಪಿಸಬಹುದಾಗಿದೆ. ಜೊತೆಗೆ ಸರ್ಕಾರದ ಪೂರ್ವಾನುಮತಿ ಮೇರೆಗೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ. ಭೂ ಸ್ವಾಧಿನ, ಸುಧಾರಣಾ ತೆರಿಗೆ ವಿಧಿಸುವ ಅಧಿಕಾರ, ಭೂಮಿ ಮತ್ತು ಕಟ್ಟಡಗಳಿಗೆ ತೆರಿಗೆ ವಿಧಿಸುವುದು, ರಸ್ತೆ ನಿರ್ವಹಣೆ, ಬಡಾವಣೆ ನಿರ್ಮಾಣ ಸೇರಿದಂತೆ ಕೆಲ ಹೆಚ್ಚುವರಿ ಅಧಿಕಾರವನ್ನು ನೀಡಲಾಗಿದೆ.”

” ರಾಜ್ಯ ಸರ್ಕಾರ ಮೈಸೂರು ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದು ಗೊತ್ತಾಗಿದೆ. ಸರ್ಕಾರದಿಂದ ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದ ಮೇಲೆ ಯಾವ್ಯಾವ ಅಂಶಗಳು ಇವೆ ಎಂಬುದು ತಿಳಿಯಲಿದೆ. ಆದೇಶದಲ್ಲಿರುವ ಅಂಶಗಳನ್ನು ಓದಿದ ಮೇಲೆ ಯಾವ ರೀತಿ ಕೆಲಸ ಮಾಡಬಹುದು ಎಂಬುದು ತಿಳಿಯಲಿದೆ. ಸಾರ್ವಜನಿಕರ ಪರವಾಗಿ ಕೆಲಸ ಮಾಡುವುದು ನಮ್ಮ ಆದ್ಯ ಕರ್ತವ್ಯ. ಸರ್ಕಾರ ಮುಂದಿನ ದೂರದೃಷ್ಟಿ ಇಟ್ಟುಕೊಂಡು ಪ್ರಾಧಿಕಾರ ರಚನೆ ಮಾಡಿದೆ.”

-ರಘುನಂದನ್,ಆಯುಕ್ತರು, ಮುಡಾ. 

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

11 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

11 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

13 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

14 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

14 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

14 hours ago