ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ 2 ಕೆಳಸೇತುವೆ, 5 ಮೇಲ್ಸೇತುವೆಗಳ ನಿರ್ಮಾಣ
ಶ್ರೀಧರ್ ಆರ್.ಭಟ್
ನಂಜನಗೂಡು: ನಂಜನಗೂಡು-ಮೈಸೂರು ಮಧ್ಯದ ರಾಷ್ಟ್ರೀಯ ಹೆದ್ದಾರಿಗೆ ಮೇಲ್ಸೇತುವೆ, ಕೆಳಸೇತುವೆಗಳ ನಿರ್ಮಾಣದ ಮೂಲಕ ಕಾಯಕಲ್ಪ ದೊರೆಯುತ್ತಿದೆ.
ಮೈಸೂರಿನಿಂದ ನಂಜನಗೂಡು ಮಾರ್ಗವಾಗಿ ಕೇರಳ ಮತ್ತು ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ೭೬೬ಕ್ಕೆ ಮೇಲ್ಸೇತುವೆ ಹಾಗೂ ಕೆಳಸೇತುವೆಗಳನ್ನು ನಿರ್ಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ೧೨೭ ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಆರಂಭಿಸಲಾಗುತ್ತಿದೆ.
ಮೈಸೂರು-ನಂಜನಗೂಡು ಮಧ್ಯದ ಚತುಷ್ಪಥ ರಸ್ತೆಯಲ್ಲಿ ಪ್ರತಿದಿನ ೩೦ ಸಾವಿರಕ್ಕೂ ಹೆಚ್ಚು ವಾಹನ ಗಳು ಸಂಚರಿಸುತ್ತಿದ್ದು, ಹಿಂದೆ ಆಗಿರುವ ಅಪಘಾತ ಗಳು ಮುಂದೆ ಆಗಬಹುದಾದ ಅಪಘಾತಗಳನ್ನು ಗಮನದಲ್ಲಿಟ್ಟುಕೊಂಡ ಹೆದ್ದಾರಿ ಪ್ರಾಧಿಕಾರ ಆರು ಕಡೆ ಸುರಕ್ಷತಾ ವಲಯವನ್ನು ಈಗಾಗಲೇ ಗುರುತಿಸಿದ್ದು, ಅಲ್ಲಿ ೧೨೭ ಕೋಟಿ ರೂ. ವೆಚ್ಚದಲ್ಲಿ ಕೆಳಸೇತುವೆ ಮತ್ತು ಮೇಲ್ಸೇತುವೆ ನಿರ್ಮಿಸಲು ವರದಿ ಸಿದ್ಧಪಡಿಸಿತ್ತು.
ಆ ವರದಿಗೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದ್ದು, ಈ ಕಾಮಗಾರಿಯಿಂದಾಗಿ ವಾಹನ ದಟ್ಟಣೆಗೆ ಕಡಿವಾಣ ಬೀಳುವುದರೊಂದಿಗೆ ಈ ಹೆದ್ದಾರಿಯಲ್ಲಿ ಸರಣಿ ಅಪಘಾತಗಳನ್ನು ತಪ್ಪಿಸಲು ಸಾಧ್ಯವಾಗಬಹುದು ಎನ್ನಲಾಗಿದೆ.
ಎಲ್ಲೆಲ್ಲಿ ಕೆಳಸೇತುವೆ? : ನಂಜನಗೂಡು ತಾಲ್ಲೂಕಿನ ಎಲಚಗೆರೆ ಹಾಗೂ ಕಳಲೆ ಗೇಟ್ ಬಳಿ ನಾಲ್ಕು ಪಥದ ಕೆಳಸೇತುವೆ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಉಳಿದಂತೆ ಹೊಸಹಳ್ಳಿ ಹಾಗೂ ಕಡಕೊಳ ಮತ್ತು ಸಚ್ಚಿದಾನಂದ ಆಶ್ರಮದ ಸಮೀಪ ಸ್ಥಳಾವಕಾಶ ಕಡಿಮೆ ಇರುವುದರಿಂದ ಅಲ್ಲಿ ಎರಡು ಪಥದ ಮೇಲ್ಸೇತುವೆ ನಿರ್ಮಿಸಲು ಉದ್ದೇಶಿಸಲಾ ಗಿದೆ. ಈ ಮೂಲಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುರಕ್ಷಿತ ಸಂಚಾರಕ್ಕೆ ಆದ್ಯತೆ ನೀಡಲಾಗಿದೆ.
ಬೆಂಗಳೂರು: ಮಹಾರಾಷ್ಟ್ರದ ಎಎನ್ಟಿಎಫ್ ಅಧಿಕಾರಿಗಳು ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿ ಬರೋಬ್ಬರಿ 55 ಕೋಟಿ ಮೌಲ್ಯದ…
ಹುಣಸೂರು : ಹುಣಸೂರು ನಗರದಲ್ಲಿ ಹಾಡಹಗಲೇ ದೊಡ್ಡ ದರೋಡೆ ನಡೆದಿದ್ದು, ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ…
ನವದೆಹಲಿ: ಪ್ರಧಾನಿ ಮೋದಿ ಅವರು ಇಂದು ತಮ್ಮ 129ನೇ ಮನ್ ಕಿ ಬಾತ್ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. 2025ರಲ್ಲಿ ಭಾರತದ…
ಕಾರವಾರ: ದೇಶದ ಪ್ರಥಮ ಪ್ರಜೆಯಾಗಿರುವ ಸೇನಾ ಪಡೆಗಳ ಮಹಾದಂಡ ನಾಯಕಿ ರಾಷ್ಟ್ರಪತಿ ದ್ರೌಪದ ಮುರ್ಮು ಅವರು ಇಂದು ಜಲಾಂತರಗಾಮಿ ನೌಕೆಯಲ್ಲಿ…
ಮೈಸೂರು: ಅಯ್ಯಪ್ಪ ಸ್ವಾಮಿ ದೇವಸ್ಥಾನ ಪಕ್ಕದ ಕೇರಳ ರಾಜ್ಯದಲ್ಲಿ ಇದ್ದರೂ ಅಯ್ಯಪ್ಪನಿಗೆ ಹೆಚ್ಚಿನ ಭಕ್ತರು ಇರುವುದು ನಮ್ಮ ಕರ್ನಾಟಕದಲ್ಲಿಯೇ ಪ್ರತಿ…
ಚಾಮರಾಜನಗರ: ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ಹಲವು ಗ್ರಾಮಗಳಲ್ಲಿ…