Andolana originals

ಮೈಸೂರು ‘ಯೋಗ ಜಿಲ್ಲೆ’ ಘೋಷಣೆಗೆ ತಯಾರಿ

ಕೆ.ಬಿ.ರಮೇಶನಾಯಕ

ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ 

ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ ಜತೆಗೆ ಯೋಗದಲ್ಲಿ ಗಿನ್ನಿಸ್ ಸೇರಿದಂತೆ ಹಲವು ದಾಖಲೆಗಳನ್ನು ನಿರ್ಮಿಸಿರುವ ಸಾಂಸ್ಕೃತಿಕ ನಗರಿ ಮೈಸೂರನ್ನು ‘ಯೋಗ ಜಿಲ್ಲೆ’ಯಾಗಿ ಘೋಷಣೆ ಮಾಡುವ ತಯಾರಿ ನಡೆಯುತ್ತಿದ್ದು, ಇದರಿಂದ ಜಿಲ್ಲೆಗೆ ಹಲವು ಲಾಭಗಳು ದೊರೆಯಲಿದೆ.

ಮೈಸೂರನ್ನು ‘ಯೋಗ ಜಿಲ್ಲೆ’ಯಾಗಿ ಘೋಷಣೆ ಮಾಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಶೀಘ್ರದಲ್ಲಿಯೇ ಅಧಿಕೃತವಾಗಿ ಘೋಷಣೆ ಹೊರಡಿಸಲಾಗುವುದು’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿರುವುದು ಮತ್ತಷ್ಟು ಗಮನ ಸೆಳೆದಿದೆ. ಕಳೆದ ವರ್ಷವೇ ಯೋಗ ಜಿಲ್ಲೆ ಘೋಷಣೆ ಆಗಬೇಕಾಗಿತ್ತು. ಆದರೆ, ಕಾರಣಾಂತರಗಳಿಂದ ಈ ಪ್ರಕ್ರಿಯೆ ಮುಂದಕ್ಕೆ ಹೋಯಿತು. ತಡವಾಗಿಯಾದರೂ ಮೈಸೂರಿಗೆ ಯೋಗ ಜಿಲ್ಲೆಯ ಪಟ್ಟ ಬರುತ್ತಿರುವುದು ಸಂತಸದ ವಿಚಾರವಾಗಿದೆ.

ಈಗಾಗಲೇ ಯೋಗದ ಮೂಲಕ ಜಗತ್ತಿನ ವಿವಿಧೆಡೆಯಿಂದ ಯೋಗಾಸಕ್ತರನ್ನು ಮೈಸೂರು ಆಕರ್ಷಿಸುತ್ತಿದೆ. ಪ್ರತಿವರ್ಷ ಯೋಗ ಕಲಿಯುವವರ ಹಾಗೂ ಯೋಗ ಕಲಿಸುವ ಗುರುಗಳ ಸಂಖ್ಯೆಯಲ್ಲೂ ವೃದ್ಧಿಯಾಗುತ್ತಿದೆ. ಅಲ್ಲದೆ, ಮೈಸೂರು ಯೋಗ ಪರಂಪರೆಗೆ ಸುದೀರ್ಘ ಇತಿಹಾಸ ಹೊಂದಿದೆ. ಇದರ ಜತೆಗೆ ಯೋಗ ಜಿಲ್ಲೆಯ ಗರಿ ಮೂಡಿದರೆ ಮೈಸೂರು ಮತ್ತಷ್ಟು ಸಂಖ್ಯೆಯಲ್ಲಿ ಯೋಗಾಸಕ್ತರನ್ನು ಆಕರ್ಷಿಸುವುದರಲ್ಲಿ ಅನುಮಾನವಿಲ್ಲ.

ಜಿಲ್ಲೆಯಲ್ಲಿ ಈಗಾಗಲೇ ೧.೫೦ ಲಕ್ಷ ಜನರು ಯೋಗಾಭ್ಯಾಸ ಮಾಡುತ್ತಿದ್ದು, ಈ ಸಂಖ್ಯೆ ವರ್ಷದಿಂದ ವರ್ಷಕ್ಕೆ ಬೆಳೆಯುತ್ತಿದೆ. ಜಿಲ್ಲೆಯಲ್ಲಿ ೫೦೦ಕ್ಕೂ ಹೆಚ್ಚು ಯೋಗ ಶಾಲೆಗಳು ಸಕ್ರಿಯವಾಗಿ ಕಾರ್ಯನಿರ್ವ ಹಿಸುತ್ತಿವೆ. ಮೈಸೂರಿಗೆ ಬಂದು ಯೋಗ ಕಲಿಯಲು ಸಾಧ್ಯವಾಗದೆ ಇರುವವರಿಗೆ ಯೋಗ ಗುರುಗಳು ಆನ್ಲೈನ್ ಮೂಲಕವೂ ಯೋಗ ಕಲಿಸುತ್ತಿದ್ದು, ಜಿಲ್ಲೆಯಲ್ಲಿ ೨೦೦ಕ್ಕೂ ಹೆಚ್ಚು ಆನ್‌ಲೈನ್ ತರಗತಿಗಳು ನಿತ್ಯ ನಡೆಯುತ್ತಿವೆ. ಪ್ರತಿ ವರ್ಷ ಅಮೆರಿಕ, ಆಸ್ಟ್ರೇಲಿಯಾ, ಸಿಂಗಾಪುರ್ ಸೇರಿದಂತೆ ಯೂರೋಪ್ದೇ ಶಗಳಿಂದ ಸರಾಸರಿ ೩೦೦ಕ್ಕೂ ಹೆಚ್ಚು ವಿದೇಶಿಯರು ನಗರದ ವಿವಿಧ ಯೋಗ ಶಾಲೆಗಳಲ್ಲಿ ಯೋಗ ಕಲಿತು ವಿಶ್ವದ ವಿವಿಧೆಡೆ ಯೋಗವನ್ನು ವಿಸ್ತರಿಸುತ್ತಿದ್ದಾರೆ.

ಗಿನ್ನಿಸ್ ದಾಖಲೆ ನಿರ್ಮಿಸಿದ್ದ ನಗರ ಯೋಗದಲ್ಲಿ ಮೈಸೂರು ಹಲವು ದಾಖಲೆಗಳನ್ನು ನಿರ್ಮಿಸಿದೆ. ನಗರದ ರೇಸ್‌ಕೋರ್ಸ್ ಮೈದಾನದಲ್ಲಿ ೨೦೧೭ ಜೂನ್ ೨೧ರಂದು ಹಮ್ಮಿಕೊಂಡಿದ್ದ ತೃತೀಯ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಬರೋಬ್ಬರಿ ೫೫,೫೦೬ ಯೋಗಪಟುಗಳು ಪಾಲ್ಗೊಂಡು ಸಾಮೂಹಿಕ ಯೋಗ ಪ್ರದರ್ಶಿಸುವ ಮೂಲಕ ಗಿನ್ನೆಸ್ ದಾಖಲೆ ನಿರ್ಮಿಸಿದ್ದರು. ಜಿಲ್ಲೆಯ ಹಲವು ಯೋಗಪಟುಗಳು ಹಾಗೂ ಯೋಗ ಶಿಕ್ಷಕರು ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಯೋಗಕ್ಕೆ ಸಂಬಂಧಿಸಿದ ಪ್ರಶಸ್ತಿಗಗಳನ್ನು ಪಡೆಯುವ ಮೂಲಕ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

” ಮೈಸೂರನ್ನು ‘ಯೋಗ ಜಿಲ್ಲೆ’ಯಾಗಿ ಘೋಷಣೆ ಮಾಡುವುದರಿಂದ ಜಿಲ್ಲೆಗೆ ಹಲವಾರು ಲಾಭಗಳು ದೊರೆಯಲಿದೆ. ಇದರಿಂದ ಜಿಲ್ಲೆಯಲ್ಲಿ ಯೋಗ ಕಲಿಯುವವರ ಸಂಖ್ಯೆ ಹೆಚ್ಚಾಗಲಿದ್ದು, ಯೋಗ ಕಲಿಸುವ ಗುರುಗಳಿಗೆ ಉದ್ಯೋಗ ಸೃಷ್ಟಿ ಮಾಡಿದಂತೆ ಆಗುತ್ತದೆ. ಅಲ್ಲದೆ, ಯೋಗ ಚಟುವಟಿಕೆ ವಿಸ್ತರಿಸಲು ಕೇಂದ್ರ ಸರ್ಕಾರ ೧ ಕೋಟಿ ರೂ. ಅನುದಾನ ನೀಡಲಿದೆ. ಇದರಲ್ಲಿ ಯೋಗ ಭವನ ನಿರ್ಮಾಣ, ಪ್ರತಿ ತಾಲೂಕುಗಳಲ್ಲಿ ಯೋಗ ಚಟುವಟಿಕೆಗಳನ್ನು ಆಯೋಜಿಸಲಾಗುತ್ತದೆ.”

-ಗಣೇಶ್‌ಕುಮಾರ್, ಯೋಗ ಗುರು

 

 

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

5 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

5 hours ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

6 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

6 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

7 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

8 hours ago