Andolana originals

ಮೈ ಕೊರೆಯುವ ಚಳಿ ನಲುಗಿದ ಮೈಸೂರು

ಧನರ್ಮಾಸಕ್ಕೆ ಮೊದಲೇ ಚಳಿ ದಾಂಗುಡಿ
ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್‌ ದಾಖಲು

ಕೆ.ಬಿ.ರಮೇಶನಾಯಕ
ಮೈಸೂರು : ಜಿಲ್ಲೆಯಲ್ಲಿ ಕಳೆದ ಕೆಲವು ದಿನ ಗಳಿಂದ ಮೈ ಕೊರೆಯುವ ಚಳಿ ಪ್ರಾರಂಭ ಗೊಂಡಿದ್ದು, ದಿಢೀರನೆ ವಾತಾವರಣದಲ್ಲಿ ಉಷ್ಣಾಂಶ ಕುಸಿತ ಕಂಡು ಬಂದಿದೆ. ಶೀತ ಮಾರುತದಿಂದ ಜನರು ಕಂಗಾಲಾಗಿದ್ದಾರೆ.

ನವೆಂಬರ್‌ನಲ್ಲಿ ಆಗಿಂದಾಗ್ಗೆ ಮಳೆ ಹಾಗೂ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳು ತ್ತಿದ್ದ ಹಿನ್ನೆಲೆಯಲ್ಲಿ ಚಳಿ ವಾತಾವರಣ ಕಂಡು ಬರಲಿಲ್ಲ. ಆದರೆ, ಮಳೆ ಹಾಗೂ ಮೋಡ ಕವಿದ ವಾತಾವರಣ ದೂರವಾಗುತ್ತಿದ್ದಂತೆಯೇ ಚಳಿಯು ತೀವ್ರಗೊಳ್ಳಲು ಪ್ರಾರಂಭವಾಗಿದೆ. ಜಿಲ್ಲೆಯಲ್ಲಿ ಕನಿಷ್ಠ ೧೬ ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲೂ ಚಳಿ ಅನುಭವವಾಗುತ್ತಿದ್ದು, ಜನರು ಬೆಚ್ಚನೆಯ ಉಡುಪು ಧರಿಸಿ ಸಂಚರಿ ಸುತ್ತಿರುವ ದೃಶ್ಯಗಳು ಕಂಡು ಬರುತ್ತಿವೆ.

ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಜಿಲ್ಲೆಯಲ್ಲಿ ಡಿ. ೧ ರಿಂದ ೩ರವರೆಗೆ ಕನಿಷ್ಠ ೧೬ ರಿಂದ ೧೭ ಹಾಗೂ ಗರಿಷ್ಟ ೨೮ ರಿಂದ ೨೯ ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಜಿಲ್ಲೆಯಲ್ಲಿ ಚಳಿಯ ತೀವ್ರತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರೈತಾಪಿ ವರ್ಗದವರು ಜಾನುವಾರುಗಳ ರಕ್ಷಣೆ ಹಾಗೂ ಬೆಳೆಗಳ ರಕ್ಷಣೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಭಾರತೀಯ ಹವಾಮಾನ ಇಲಾಖೆಯ ನಾಗನಹಳ್ಳಿಯ ಕೃಷಿ ಹವಾಮಾನ ಕ್ಷೇತ್ರ ವಿಭಾಗದ ಹಿರಿಯ ಕ್ಷೇತ್ರ ಅಧಿಕ್ಷಕ ಡಾ. ಎನ್. ಉಮಾಶಂಕರ್ ಅಗತ್ಯ ಸಲಹೆಗಳನ್ನು ನೀಡಿದ್ದಾರೆ.

ಬೆಳಿಗ್ಗೆ ಕಡಿಮೆ ತಾಪಮಾನ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಬೆಳೆಗಳು ಮತ್ತು ಜಾನುವಾರುಗಳಿಗೆ ಶೀತದ ಒತ್ತಡವನ್ನು ಉಂಟು ಮಾಡಬಹುದು. ಹಾಗಾಗಿ ತರಕಾರಿ ಹೊಲಗಳಲ್ಲಿ ಮಣ್ಣಿನ ಉಷ್ಣತೆ ಯನ್ನು ಕಾಪಾಡಿಕೊಳ್ಳಲು ಸಂಜೆ ಲಘು ನೀರಾವರಿ ಒದಗಿಸುವುದು ಉತ್ತಮ. ರಾತ್ರಿಯಲ್ಲಿ ನರ್ಸರಿಗಳು ಮತ್ತು ಎಳೆಯ ಸಸಿಗಳನ್ನು (ಟೊಮೆಟೊ, ಮೆಣಸಿನಕಾಯಿ, ಎಲೆಕೋಸು) ಒಣ ಹುಲ್ಲು ಅಥವಾ ಪ್ಲಾಸ್ಟಿಕ್ ಹಾಳೆಗಳಿಂದ ಮುಚ್ಚಬೇಕು ಎಂದು ಸಲಹೆ ನೀಡಿದ್ದಾರೆ.

ನೀರಾವರಿ ನಿರ್ವಹಣೆಗೆ ಅಗತ್ಯ ಸಲಹೆ: ಮಳೆಯ ನಿರೀಕ್ಷೆ ಇಲ್ಲದ ಕಾರಣ ೫ ರಿಂದ ೭ ದಿನಗಳಿಗೊಮ್ಮೆ ಬೆಳೆಗಳಿಗೆ ನೀರು ಹಾಕುವುದು ಉತ್ತಮ. ತೇವಾಂಶ

ಮಧ್ಯಮವಾಗಿರುವುದರಿಂದ ಹೆಚ್ಚುವರಿ ನೀರಾವರಿಯನ್ನು ತಪ್ಪಿಸಬೇಕು. ಭತ್ತ (ಹಾಲುಕರೆಯುವ ಹಂತ), ರಾಗಿ, ಕೆಂಪು ಬೇಳೆ ಮತ್ತು ತರಕಾರಿ ಬೆಳೆಗಳಿಗೆ ನೀರಾವರಿಗೆ ಆದ್ಯತೆ ನೀಡಬೇಕು. ಕಳೆ ಕೀಳಲು, ಮಣ್ಣು ತೆಗೆಯಲು ಮತ್ತು ಗೊಬ್ಬರ ಅಥವಾ ಕೀಟನಾಶಕ ಅನ್ವಯಿಕೆಗೆ ಅನುಕೂಲಕರ ಹವಾಮಾನ ಹೊಂದಿದೆ. ಧಾನ್ಯಗಳು, ಅರಿಶಿನ, ಶುಂಠಿ ಮತ್ತು ದ್ವಿದಳ ಧಾನ್ಯಗಳನ್ನು ಕೊಯ್ಲು ಮಾಡಲು ಮತ್ತು ಒಣಗಿಸಲು ಒಣ ಮತ್ತು ಬಿಸಿಲಿನ ವಾತಾವರಣ ಸೂಕ್ತವಾಗಿದೆ.

ಕೊಯ್ಲಿನ ನಂತರದ ನಷ್ಟವನ್ನು ತಪ್ಪಿಸಲು ಉತ್ಪನ್ನಗಳನ್ನು ಸಂಗ್ರಹಿಸಿ ಬಿಸಿಲಿನಲ್ಲಿ ಒಣಗಿಸ ಬೇಕು. ಬಾಳೆ, ತೆಂಗು ಮತ್ತು ಅಡಕೆಯ ಜಲಾನಯನ ಪ್ರದೇಶಗಳ ಸುತ್ತಲೂ ಮಲ್ಚಿಂಗ್ ಮಾಡುವುದರಿಂದ ಮಣ್ಣಿನ ತೇವಾಂಶವನ್ನು ಸಂರಕ್ಷಿಸಲು ಸಹಾಯವಾಗುತ್ತದೆ. ಬಾಳೆ, ಪಪ್ಪಾಯಿ ಮತ್ತು ಸಪೋಟಾದಂತಹ ಹಣ್ಣಿನ ಬೆಳೆಗಳಿಗೆ ನಿಯಮಿತವಾಗಿ ನೀರಾವರಿ ಒದಗಿಸಬೇಕು. ಗಾಳಿಯ ಪ್ರಸರಣವನ್ನು ಸುಧಾರಿಸಲು ಅನಗತ್ಯ ಚಿಗುರುಗಳನ್ನು ಕತ್ತರಿಸಬೇಕು.

ಚಳಿಯಿಂದ ಜಾನುವಾರುಗಳನ್ನು ರಕ್ಷಿಸಿ
ಚಳಿಯ ವಾತಾವರಣ ಇರುವ ಹಿನ್ನೆಲೆಯಲ್ಲಿ ಜಾನುವಾರು ಮತ್ತು ಕೋಳಿಗಳಿಗೆ ರಾತ್ರಿ ಮತ್ತು ಮುಂಜಾನೆ ಬೆಚ್ಚಗಿನ ಮತ್ತು ಒಣ ಆಶ್ರಯಗಳನ್ನು ಒದಗಿಸಬೇಕು. ಕೊಟ್ಟಿಗೆಗಳಿಗೆ ಶೀತ ಗಾಳಿ ಪ್ರವೇಶಿಸುವುದನ್ನು ತಪ್ಪಿಸಬೇಕು. ರೇಷ್ಮೆ ಹುಳು ಸಾಕುವ ಮನೆಗಳಲ್ಲಿ ಸೂಕ್ತವಾದ ಉಷ್ಣಾಂಶ ಮತ್ತು ತೇವಾಂಶವನ್ನು ಕಾಪಾಡಿ ಕೊಳ್ಳಬೇಕು. ರೇಷ್ಮೆ ಹುಳುಗಳು ಬೆಳಗಿನ ತಂಪಾದ ಗಾಳಿಗೆ ಒಡ್ಡಿಕೊಳ್ಳುವುದನ್ನು ತಪ್ಪಿಸಬೇಕು. ಹಗಲಿನ ವೇಳೆಯಲ್ಲಿ ಸಾಕಷ್ಟು ಗಾಳಿ ಬೀಸುವುದನ್ನು ಖಚಿತಪಡಿಸಿ ಕೊಳ್ಳಬೇಕು.

ಜಿಲ್ಲೆಯಲ್ಲಿ ತಾಪಮಾನ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳು ಹಾಗೂ ಬೆಳೆಗಳ ರಕ್ಷಣೆಗೆ ಅಗತ್ಯ ಕ್ರಮ ವಹಿಸಬೇಕು. ಬೆಳಗಿನ ತಾಪಮಾನ ಕಡಿಮೆ ಇರುವ ಹಿನ್ನೆಲೆಯಲ್ಲಿ ತೇವಾಂಶವನ್ನು ಕಾಪಾಡಿಕೊಳ್ಳಬೇಕು. ಜಾನುವಾರುಗಳಿಗೆ ಬೆಚ್ಚನೆಯ ಆಶ್ರಯ ಒದಗಿಸಿ ಅವುಗಳನ್ನು ಚಳಿಯಿಂದ ರಕ್ಷಿಸಬೇಕು. -ಡಾ. ಎನ್. ಉಮಾಶಂಕರ್, ಹಿರಿಯ ಕ್ಷೇತ್ರ ಅಧಿಕ್ಷಕ, ಕೃಷಿ ಹವಾಮಾನ ಕ್ಷೇತ್ರ ವಿಭಾಗ

ಆಂದೋಲನ ಡೆಸ್ಕ್

Recent Posts

ತೆಕ್ಕಲಕೋಟೆ | ಉತ್ಖನನ ವೇಳೆ ಎರಡು ಅಸ್ಥಿ ಪಂಜರ ಪತ್ತೆ

ಬಳ್ಳಾರಿ : ಜಿಲ್ಲೆಯಲ್ಲಿ ಐದು ಸಾವಿರ ವರ್ಷಗಳಷ್ಟು ಹಳೆಯದಾದ ಪ್ರಾಗೈತಿಹಾಸಿಕ ಕಾಲದ ಎರಡು ಅಸ್ಥಿ ಪಂಜರಗಳು ಪತ್ತೆಯಾಗಿದ್ದು, ಇತಿಹಾಸ ಸಂಶೋಧನಾ…

1 hour ago

ಮಂಡ್ಯದಲ್ಲಿ ಎಆರ್‌ಎಐ ಸೆಂಟರ್‌ ತೆರೆಯಲು 500 ಕೋಟಿ ರೂ. : ಎಚ್‌ಡಿಕೆ

ಮೈಸೂರು : ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆ, ಉತ್ತೇಜನಕ್ಕೆ ಕೇಂದ್ರಸರ್ಕಾರ ಆದ್ಯತೆ ನೀಡಿರುವ ಜತೆಗೆ, ಮಂಡ್ಯ ಜಿಲ್ಲೆಯಲ್ಲಿ ಆಟೋಮೋಟಿವ್ ರೀಸರ್ಚ್ ಅಸೋಸಿಯೆಷನ್…

1 hour ago

ಗಮನ ಸೆಳೆದ ಸ್ವಚ್ಛತಾ ಮ್ಯಾರಥಾನ್‌

ಮೈಸೂರು : ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಸ್ವಚ್ಛತೆಯಲ್ಲಿ ಸಾರ್ವಜನಿಕರ ಸಹಭಾಗಿತ್ವಕ್ಕಾಗಿ ಓಡೋಣ ಮೈಸೂರಿಗಾಗಿ ಒಂದಾಗೋಣ ಸ್ವಚ್ಛತೆಗಾಗಿ ಶೀರ್ಷಿಕೆಯಡಿ ಸ್ವಚ್ಚತಾ…

2 hours ago

ಗೃಹಲಕ್ಷ್ಮಿಗೆ ಜೀವಿತ ಪ್ರಮಾಣಪತ್ರ ಕಡ್ಡಾಯ : ಸಿಎಂ ಸೂಚನೆ

ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ, ಕೂಡಲೇ ಕ್ರಮ ವಹಿಸುವಂತೆ ಸಿಎಂ…

3 hours ago

ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ: ಇಬ್ಬರಿಗೆ ಗಂಭೀರ ಗಾಯ

ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್‌ ವಿಮಾನವೊಂದು ಪತನವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಲಬುರ್ಗಿಯಿಂದ ಬೆಳಗಾವಿಗೆ…

4 hours ago

ಕಳೆದ 4 ವರ್ಷದಲ್ಲಿ ಆನ್‌ಲೈನ್ ಬೆಟ್ಟಿಂಗ್ ದಂಧೆಗೆ 35 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ಹಾವಳಿ ತೀವ್ರಗೊಂಡಿದೆ. ಕಳೆದ 4 ವರ್ಷದಲ್ಲಿ 35 ಮಂದಿ ಆನ್ ಲೈನ್ ಬೆಟ್ಟಿಂಗ್ ದಂಧೆಗೆ…

4 hours ago