Andolana originals

‘ಮೈಸೂರು ಮತ್ತೆ ಸ್ವಚ್ಛ ನಗರಿ ಗರಿ ಧರಿಸಬೇಕು’

ಪ್ರಶಾಂತ್ ಎನ್.ಮಲ್ಲಿಕ್

ಸ್ವಚ್ಛತಾ ರಾಯಭಾರಿಗಳ ಆಶಯ ; ‘ಸಾರ್ವಜನಿಕರ ಸಹಕಾರಕ್ಕೆ ಮನವಿ ಮಾಡಿದ ಹರಿಪ್ರಿಯಾ, ವಸಿಷ್ಠ ಸಿಂಹ, ಅನನ್ಯಾ ಭಟ್

ಮೈಸೂರು: ನಗರಪಾಲಿಕೆಯ ಸ್ವಚ್ಛ ಸರ್ವೇಕ್ಷಣ ೨೦೨೬ರ ರಾಯ ಭಾರಿ ಗಳಾಗಿ ಆಯ್ಕೆಯಾಗಿರುವ ೬ ಮಂದಿ ಪೈಕಿ ಇಬ್ಬರು ಕಲಾವಿದರು ಹಾಗೂ ಒಬ್ಬರು ಚಲನಚಿತ್ರ ಗಾಯಕರು ಆಯ್ಕೆಯಾಗಿದ್ದು, ದೇಶದಲ್ಲೇ ಮೈಸೂರು ಮತ್ತೆ ಪ್ರಥಮ ಸ್ವಚ್ಛನಗರಿಯಾಗಬೇಕು ಎಂಬ ಆಶಯವನ್ನು ಮೂವರೂ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ಸ್ವಚ್ಛತೆ ಅಭಿಯಾನ ಮತ್ತು ಅದರ ಮಹತ್ವವನ್ನು ಕುರಿತು ಸಾರ್ವಜನಿಕರ ಗಮನಕ್ಕೆ ತಂದಿದ್ದಾರೆ. ಜೊತೆಗೆ ಜನರು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ. ಸಿನಿಮಾ ಕಲಾವಿದ ದಂಪತಿ ಹರಿಪ್ರಿಯಾ, ವಸಿಷ್ಠ ಸಿಂಹ ಮತ್ತು ಗಾಯಕರಾದ ಅನನ್ಯಾ ಭಟ್ ಅವರು ‘ಆಂದೋಲನ’ದೊಂದಿಗೆ ಮಾತನಾಡಿದ್ದು, ಅವರ ಮಾತುಗಳು ಇಂತಿವೆ

ಮೈಸೂರು ನನ್ನ ಊರು. ಇಲ್ಲಿ ನನ್ನ ಬಾಲ್ಯವನ್ನು ಕಳೆದಿದ್ದೇನೆ. ಶಾಲಾ ದಿನಗಳನ್ನು ಅನುಭವಿಸಿದ್ದೇನೆ. ೨೦೧೪ರಲ್ಲಿ ಆರಂಭವಾದ ಸ್ವಚ್ಛ ಭಾರತ್ ಅಭಿಯಾನದ ವೇಳೆ ಮೈಸೂರು ದೇಶದಲ್ಲೇ ಮೊದಲ ಸ್ಥಾನ ಪಡೆದಿತ್ತು. ಆ ಗೌರವವನ್ನು ಮತ್ತೆ ತರುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ. ಮೈಸೂರು ಮಹಾನಗರ ಪಾಲಿಕೆ, ಪೌರ ಕಾರ್ಮಿಕರು ಮತ್ತು ಅಧಿಕಾರಿಗಳ ಶ್ರಮ ಸ್ಛೂರ್ತಿದಾಯಕ. ಸ್ವಚ್ಛತಾ ಕಾರ್ಯಕ್ರಮಕ್ಕೆ ಸೀಮಿತವಾಗಬಾರದು. ಅದನ್ನು ನಮ್ಮ ಜೀವನದ ಭಾಗವಾಗಿ ಅಳವಡಿಸಿಕೊಳ್ಳಬೇಕು. ಮುಂದಿನ ಪೀಳಿಗೆಗೆ ನೀಡಬಹುದಾದ ದೊಡ್ಡ ಉಡುಗೊರೆ ಸ್ವಚ್ಛ ಮತ್ತು ಸುಂದರ ಮೈಸೂರು. ಮಕ್ಕಳಿಗೆ ಆಸ್ತಿ ಮಾತ್ರವಲ್ಲ, ಶುದ್ಧ ಗಾಳಿ ಮತ್ತು ಉತ್ತಮ ಪರಿಸರ ಕಲ್ಪಿಸುವುದು ನಮ್ಮ ಕರ್ತವ್ಯ. ಸ್ವಚ್ಛತೆಯ ಕೊರತೆಯಿಂದ ಹರಡುವ ರೋಗಗಳಿಂದ ಸಮಾಜವನ್ನು ರಕ್ಷಿಸುವುದಕ್ಕೆ ಇದು ಕೂಡ ಒಂದು ದಾರಿ.

-ವಸಿಷ್ಠ ಸಿಂಹ, ನಟ ಹಾಗೂ ಸ್ವಚ್ಛತಾ ಬ್ರ್ಯಾಂಡ್‌ ಅಂಬಾಸಿಡರ್,

ಮೈಸೂರು ನಗರಪಾಲಿಕೆ ಮೈಸೂರಿನೊಂದಿಗೆ ನನ್ನ ಸಂಬಂಧ ಅಪಾರ. ಸ್ವಚ್ಛತೆ ಮನೆಮಾತಾಗಬೇಕು; ಅದು ನಮ್ಮ ಮನೆಯಿಂದಲೇ ಆರಂಭವಾಗಬೇಕು. ನಾವು ನಮ್ಮ ಮನೆ, ವಾಹನ ಹಾಗೂ ಮನೆಮುಂದಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡರೆ ನಗರ ಸುಂದರವಾಗುತ್ತದೆ. ಮೈಸೂರು ಹಿಂದೆ ಅಗ್ರಸ್ಥಾನದಲ್ಲಿತ್ತು; ಪ್ರತಿ ವರ್ಷವೂ ಅದೇ ಸ್ಥಾನದಲ್ಲಿ ಕಾಣಬೇಕು ಎಂಬುದು ನನ್ನ ಆಶಯ. ಈಗಿನ ‘ಸ್ವಚ್ಛತಾ ಲೀಗ್’ ಜನರನ್ನು ಒಗ್ಗೂಡಿಸುವ ಉತ್ತಮ ಪರಿಕಲ್ಪನೆ. ಯಾರು ನಂಬರ್ ೧ ಎನ್ನುವುದಕ್ಕಿಂತ, ನಮ್ಮ ನಗರ ಗೆಲ್ಲುವುದು ಮುಖ್ಯ. ನಮ್ಮ ಕಣ್ಣ ಮುಂದೆ ಕಸ ಕಂಡರೆ ಎತ್ತಿ ಸ್ವಚ್ಛ ಮಾಡುವ ಶಪಥ ಮಾಡೋಣ. ಮುಂದಿನ ಪೀಳಿಗೆಗೆ ಸ್ವಚ್ಛ, ಸುಂದರ ಮೈಸೂರನ್ನು ನೀಡೋಣ.

-ಹರಿಪ್ರಿಯಾ, ನಟಿ ಹಾಗೂ ಸ್ವಚ್ಛತಾ ಬ್ರ್ಯಾಂಡ್‌ ಅಂಬಾಸಿಡರ್,

ಮೈಸೂರು ನಗರಪಾಲಿಕೆ ‘ಮೈಸೂರಿನ ಸ್ವಚ್ಛತಾ ರಾಯಭಾರಿಯಾಗಿ ಆಯ್ಕೆಯಾಗಿರುವುದು ನನಗೆ ಅಪಾರ ಸಂತೋಷ ತಂದಿದೆ. ಇದು ಗೌರವ ಮಾತ್ರವಲ್ಲ, ದೊಡ್ಡ ಜವಾಬ್ದಾರಿಯೂ ಹೌದು. ಮೈಸೂರು ಈಗಾಗಲೇ ಸ್ವಚ್ಛ ನಗರವಾಗಿ ಹೆಸರು ಪಡೆದಿದೆ. ಪ್ರವಾಸಿಗರು  ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದರಿಂದ ಸಾರ್ವಜನಿಕ ಸ್ಥಳಗಳನ್ನು ಇನ್ನಷ್ಟು ಸ್ವಚ್ಛವಾಗಿಟ್ಟುಕೊಳ್ಳಬೇಕು. ಶಾಲಾ ಮಕ್ಕಳನ್ನು ವಾರಾಂತ್ಯಗಳಲ್ಲಿ ಸ್ವಚ್ಛತಾ ಕಾರ್ಯಗಳಲ್ಲಿ ಭಾಗಿಯಾಗಿಸುವ ಮೂಲಕ ಮುಂದಿನ ತಲೆಮಾರಿಗೆ ಜಾಗೃತಿ ಮೂಡಿಸಬಹುದು. ಸಾರ್ವಜನಿಕರು ಕಸವನ್ನು ಕಂಡ ಕಂಡ ಜಾಗದಲ್ಲೆಲ್ಲ ಎಸೆಯದೆ ಡಸ್ಟ್‌ಬಿನ್‌ಗಳಲ್ಲಿ ಹಾಕುವ ಅಭ್ಯಾಸ ಬೆಳೆಸಬೇಕು. ಸ್ವಚ್ಛತಾ ಕಾರ್ಮಿಕರನ್ನು ಗೌರವದಿಂದ ಕಾಣಬೇಕು; ಅವರು ನಮ್ಮ ಸಮುದಾಯದ ಹೆಮ್ಮೆ. ಮೈಸೂರು ನಗರ ಪಾಲಿಕೆ ಸಹಕಾರದಿಂದ ಮೈಸೂರನ್ನು ಇನ್ನಷ್ಟು ಸ್ವಚ್ಛ ಮತ್ತು ಸುಂದರ ನಗರವನ್ನಾಗಿಸಲು ಸಾರ್ವಜನಿಕರು ಕೈಜೋಡಿಸಬೇಕು.

-ಅನನ್ಯಾ ಭಟ್, ಗಾಯಕಿ, ಹಾಗೂ ಸ್ವಚ್ಛತಾ ಬ್ರ್ಯಾಂಡ್ ಅಂಬಾಸಿಡರ್, ಮೈಸೂರು ನಗರಪಾಲಿಕೆ

 

 

ಆಂದೋಲನ ಡೆಸ್ಕ್

Recent Posts

ಛತ್ತೀಸ್‌ಗಢ ವಿದ್ಯುತ್‌ ಸ್ಥಾವರ ಸ್ಫೋಟ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್‌ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…

7 mins ago

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

3 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

3 hours ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

3 hours ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

3 hours ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

3 hours ago