Andolana originals

ಜ್ಞಾನದ ಬೆಳಕು ನೀಡುವ ಮೈವಿವಿ ಕ್ಯಾಂಪಸ್ ಕತ್ತಲಿನಲ್ಲಿ!

ಮೈಸೂರು ದೀಪಾಲಂಕಾರದ ಸಂಭ್ರಮದಲ್ಲಿದ್ದರೂ ಮಾನಸಗಂಗೋತ್ರಿ ಕ್ಯಾಂಪಸ್‌ನಲ್ಲಿ ಬೆಳಗದ ದೀಪಗಳು

ವಾಸು ವಿ.ಹೊಂಗನೂರು
ಮೈಸೂರು: 60ರ ದಶಕದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಹೊಸ ಕ್ಯಾಂಪಸ್ ಆಗಿ ಮಾನಸಗಂಗೋತ್ರಿ ರೂಪುಗೊಂಡಿತು. ಅಂದಿನಿಂದ ಇಲ್ಲಿಯವರೆಗೂ ಅದು ತನ್ನದೇ ಆದ ಘನತೆ, ಕೀರ್ತಿಯನ್ನು ಕಾಪಾಡಿಕೊಂಡು ಬಂದಿದೆ.

ದಶಕದಿಂದೀಚೆಗೆ ವಿಜ್ಞಾನ್ ಭವನ್, ಬಿಎಂ ಶ್ರೀ ಸಭಾಂಗಣ, ಬಯಲು ರಂಗಮಂದಿರ, ನೂತನ ರಸ್ತೆ ನಿರ್ಮಾಣ, ವಾಕಿಂಗ್ ಪಾಥ್, ಪಾರಂಪರಿಕ ವಿದ್ಯುತ್ ದೀಪಗಳ ಅಳವಡಿಕೆ, ಗಡಿಯಾರ ಗೋಪುರ, ಗೌತಮ ಬುದ್ದ, ಅಂಬೇಡ್ಕರ್, ಗಾಂಧಿ, ಕುವೆಂಪು ಪ್ರತಿಮೆಗಳು ಗಂಗೋತ್ರಿಯನ್ನು ಕಳೆಗಟ್ಟುವಂತೆ ಮಾಡಿವೆ.

ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿರುವ ಈ ವಿಶ್ವವಿದ್ಯಾನಿಲಯದಲ್ಲಿ ಸಮರ್ಪಕ ನಿರ್ವಹಣೆ ಆಗದೆ ಒಂದಾದ ಮೇಲೊಂದರಂತೆ ಸಮಸ್ಯೆಗಳು ಕಾಡ ತೊಡಗಿವೆ. ‘ಆಂದೋಲನ’ ದಿನಪತ್ರಿಕೆಯಲ್ಲಿ ಈ ಹಿಂದೆ ಆರ್‌ಓ ಪ್ಲಾಂಟ್‌ಗಳ ಅವ್ಯವಸ್ಥೆಯ ಬಗ್ಗೆ ವರದಿ ಪ್ರಕಟಗೊಂಡಿತ್ತು.

ಇದರ ಬೆನ್ನಲ್ಲೇ ಮತ್ತೊಂದು ಸಮಸ್ಯೆ ಎದುರಾಗಿದ್ದು, ಕ್ಯಾಂಪಸ್‌ನಲ್ಲಿ ವಿದ್ಯುತ್ ದೀಪಗಳು ಕೈ ಕೊಡುತ್ತಿರುವುದು ರಾತ್ರಿ ವೇಳೆ ಓದುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ.

ಗಡಿಯಾರ ಗೋಪುರದಿಂದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಡೆಗೆ ತೆರಳುವ ಮಾರ್ಗದಲ್ಲಿನ ದೀಪಗಳು ಸಂಪೂರ್ಣವಾಗಿ ಕೆಟ್ಟು ಹೋಗಿದ್ದು, ಅಲ್ಲಲ್ಲಿ ಒಂದೊಂದು ದೀಪಗಳು ಮಾತ್ರ ಉರಿಯುತ್ತಿವೆ. ರಾತ್ರಿ ವೇಳೆ ಕ್ಯಾಂಪಸ್‌ನಲ್ಲಿ ನಾಯಿಗಳ ಹಾವಳಿ ಹೆಚ್ಚಾ ಗಿದ್ದು, ಕ್ಯಾಂಪಸ್‌ನಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.

ಮಾನಸ ಗಂಗೋತ್ರಿಯ ಆಕರ್ಷಣೀಯ ಸ್ಥಳಗಳಲ್ಲಿ ಒಂದಾದ ಬುದ್ಧನ ಪ್ರತಿಮೆಯ ಸುತ್ತ ಹಾಕಲಾಗಿರುವ ದೀಪಗಳು ಒಂದೂ ಕೆಲಸ ಮಾಡುತ್ತಿಲ್ಲ. ಹಲವು ಬಲ್ಬ್‌ಗಳು ನುಚ್ಚುನೂರಾಗಿದ್ದರೇ, ಉಳಿದವು ಕೆಲಸಕ್ಕೆ ಬಾರದ ಸ್ಥಿತಿಯಲ್ಲಿವೆ. ರಾತ್ರಿಯಾದರೇ ವಿದ್ಯಾರ್ಥಿ ನಿಲಯಕ್ಕೆ ತೆರಳುವ ವಿದ್ಯಾರ್ಥಿಗಳು ಭಯದಿಂದ ಸಂಚಾರ ನಡೆಸುವ ಸ್ಥಿತಿ ನಿರ್ಮಾಣವಾಗಿದೆ.

ಮೈಸೂರು ದಸರಾ ಸಂಭ್ರಮ ದಲ್ಲಿದ್ದರೂ ಗಂಗೋತ್ರಿಗೆ ಸಿಗಬೇಕಿರುವ ಕನಿಷ್ಠ ಮೂಲಸೌಕರ್ಯಗಳು ದೊರೆತಿಲ್ಲ. ಬೆಳಕಿನ ಅವಶ್ಯಕತೆ ತುಂಬಾ ಇರುವ ಕಡೆಗಳಲ್ಲಿ ವಿದ್ಯುತ್ ದೀಪಗಳು ಕೆಲಸ ಮಾಡುತ್ತಿಲ್ಲ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸಮಸ್ಯೆ ಪರಿಹರಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಮೈಸೂರು ವಿವಿಯ ಮಾನಸ ಗಂಗೋತ್ರಿಗೆ ವಿಶ್ವಮಟ್ಟದಲ್ಲಿ ಒಂದು ವಿಶೇಷ ಸ್ಥಾನಮಾನವಿದೆ. ಇಂತಹ ವಿವಿಯ ನಿರ್ವಹಣೆಯಲ್ಲಿ ಆಡಳಿತ ಮಂಡಳಿ ನಿರಾಸಕ್ತಿ ತೋರುತ್ತಿರುವುದು ಬೇಸರದ ಸಂಗತಿ. ಸಂಬಂಧಪಟ್ಟ ಅಧಿಕಾರಿಗಳು ಕಾರ್ಯೋನ್ಮುಖರಾಗಿ ಕೂಡಲೇ ಸಮಸ್ಯೆ ಪರಿಹರಿಸಬೇಕು. ವಿವಿಯಲ್ಲಿನ ವಿದ್ಯುತ್‌ ಸಮಸ್ಯೆ ಬಗ್ಗೆ ಮುಂದಿನ ಸಿಂಡಿಕೇಟ್ ಸಭೆಯಲ್ಲಿ ಚರ್ಚಿಸಲಾಗುವುದು.

-ಡಾ.ನಟರಾಜ್ ಶಿವಣ್ಣ, ಸಿಂಡಿಕೇಟ್ ಸದಸ್ಯರು, ಮೈಸೂರು ವಿಶ್ವವಿದ್ಯಾನಿಲಯ.

ಆಂದೋಲನ ಡೆಸ್ಕ್

Recent Posts

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

4 hours ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

8 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

8 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

9 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

10 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

10 hours ago