Andolana originals

ಜ್ಞಾನದ ಬೆಳಕು ನೀಡುವ ಮೈವಿವಿ ಕ್ಯಾಂಪಸ್ ಕತ್ತಲಿನಲ್ಲಿ!

ಮೈಸೂರು ದೀಪಾಲಂಕಾರದ ಸಂಭ್ರಮದಲ್ಲಿದ್ದರೂ ಮಾನಸಗಂಗೋತ್ರಿ ಕ್ಯಾಂಪಸ್‌ನಲ್ಲಿ ಬೆಳಗದ ದೀಪಗಳು

ವಾಸು ವಿ.ಹೊಂಗನೂರು
ಮೈಸೂರು: 60ರ ದಶಕದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಹೊಸ ಕ್ಯಾಂಪಸ್ ಆಗಿ ಮಾನಸಗಂಗೋತ್ರಿ ರೂಪುಗೊಂಡಿತು. ಅಂದಿನಿಂದ ಇಲ್ಲಿಯವರೆಗೂ ಅದು ತನ್ನದೇ ಆದ ಘನತೆ, ಕೀರ್ತಿಯನ್ನು ಕಾಪಾಡಿಕೊಂಡು ಬಂದಿದೆ.

ದಶಕದಿಂದೀಚೆಗೆ ವಿಜ್ಞಾನ್ ಭವನ್, ಬಿಎಂ ಶ್ರೀ ಸಭಾಂಗಣ, ಬಯಲು ರಂಗಮಂದಿರ, ನೂತನ ರಸ್ತೆ ನಿರ್ಮಾಣ, ವಾಕಿಂಗ್ ಪಾಥ್, ಪಾರಂಪರಿಕ ವಿದ್ಯುತ್ ದೀಪಗಳ ಅಳವಡಿಕೆ, ಗಡಿಯಾರ ಗೋಪುರ, ಗೌತಮ ಬುದ್ದ, ಅಂಬೇಡ್ಕರ್, ಗಾಂಧಿ, ಕುವೆಂಪು ಪ್ರತಿಮೆಗಳು ಗಂಗೋತ್ರಿಯನ್ನು ಕಳೆಗಟ್ಟುವಂತೆ ಮಾಡಿವೆ.

ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿರುವ ಈ ವಿಶ್ವವಿದ್ಯಾನಿಲಯದಲ್ಲಿ ಸಮರ್ಪಕ ನಿರ್ವಹಣೆ ಆಗದೆ ಒಂದಾದ ಮೇಲೊಂದರಂತೆ ಸಮಸ್ಯೆಗಳು ಕಾಡ ತೊಡಗಿವೆ. ‘ಆಂದೋಲನ’ ದಿನಪತ್ರಿಕೆಯಲ್ಲಿ ಈ ಹಿಂದೆ ಆರ್‌ಓ ಪ್ಲಾಂಟ್‌ಗಳ ಅವ್ಯವಸ್ಥೆಯ ಬಗ್ಗೆ ವರದಿ ಪ್ರಕಟಗೊಂಡಿತ್ತು.

ಇದರ ಬೆನ್ನಲ್ಲೇ ಮತ್ತೊಂದು ಸಮಸ್ಯೆ ಎದುರಾಗಿದ್ದು, ಕ್ಯಾಂಪಸ್‌ನಲ್ಲಿ ವಿದ್ಯುತ್ ದೀಪಗಳು ಕೈ ಕೊಡುತ್ತಿರುವುದು ರಾತ್ರಿ ವೇಳೆ ಓದುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ.

ಗಡಿಯಾರ ಗೋಪುರದಿಂದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಡೆಗೆ ತೆರಳುವ ಮಾರ್ಗದಲ್ಲಿನ ದೀಪಗಳು ಸಂಪೂರ್ಣವಾಗಿ ಕೆಟ್ಟು ಹೋಗಿದ್ದು, ಅಲ್ಲಲ್ಲಿ ಒಂದೊಂದು ದೀಪಗಳು ಮಾತ್ರ ಉರಿಯುತ್ತಿವೆ. ರಾತ್ರಿ ವೇಳೆ ಕ್ಯಾಂಪಸ್‌ನಲ್ಲಿ ನಾಯಿಗಳ ಹಾವಳಿ ಹೆಚ್ಚಾ ಗಿದ್ದು, ಕ್ಯಾಂಪಸ್‌ನಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.

ಮಾನಸ ಗಂಗೋತ್ರಿಯ ಆಕರ್ಷಣೀಯ ಸ್ಥಳಗಳಲ್ಲಿ ಒಂದಾದ ಬುದ್ಧನ ಪ್ರತಿಮೆಯ ಸುತ್ತ ಹಾಕಲಾಗಿರುವ ದೀಪಗಳು ಒಂದೂ ಕೆಲಸ ಮಾಡುತ್ತಿಲ್ಲ. ಹಲವು ಬಲ್ಬ್‌ಗಳು ನುಚ್ಚುನೂರಾಗಿದ್ದರೇ, ಉಳಿದವು ಕೆಲಸಕ್ಕೆ ಬಾರದ ಸ್ಥಿತಿಯಲ್ಲಿವೆ. ರಾತ್ರಿಯಾದರೇ ವಿದ್ಯಾರ್ಥಿ ನಿಲಯಕ್ಕೆ ತೆರಳುವ ವಿದ್ಯಾರ್ಥಿಗಳು ಭಯದಿಂದ ಸಂಚಾರ ನಡೆಸುವ ಸ್ಥಿತಿ ನಿರ್ಮಾಣವಾಗಿದೆ.

ಮೈಸೂರು ದಸರಾ ಸಂಭ್ರಮ ದಲ್ಲಿದ್ದರೂ ಗಂಗೋತ್ರಿಗೆ ಸಿಗಬೇಕಿರುವ ಕನಿಷ್ಠ ಮೂಲಸೌಕರ್ಯಗಳು ದೊರೆತಿಲ್ಲ. ಬೆಳಕಿನ ಅವಶ್ಯಕತೆ ತುಂಬಾ ಇರುವ ಕಡೆಗಳಲ್ಲಿ ವಿದ್ಯುತ್ ದೀಪಗಳು ಕೆಲಸ ಮಾಡುತ್ತಿಲ್ಲ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸಮಸ್ಯೆ ಪರಿಹರಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಮೈಸೂರು ವಿವಿಯ ಮಾನಸ ಗಂಗೋತ್ರಿಗೆ ವಿಶ್ವಮಟ್ಟದಲ್ಲಿ ಒಂದು ವಿಶೇಷ ಸ್ಥಾನಮಾನವಿದೆ. ಇಂತಹ ವಿವಿಯ ನಿರ್ವಹಣೆಯಲ್ಲಿ ಆಡಳಿತ ಮಂಡಳಿ ನಿರಾಸಕ್ತಿ ತೋರುತ್ತಿರುವುದು ಬೇಸರದ ಸಂಗತಿ. ಸಂಬಂಧಪಟ್ಟ ಅಧಿಕಾರಿಗಳು ಕಾರ್ಯೋನ್ಮುಖರಾಗಿ ಕೂಡಲೇ ಸಮಸ್ಯೆ ಪರಿಹರಿಸಬೇಕು. ವಿವಿಯಲ್ಲಿನ ವಿದ್ಯುತ್‌ ಸಮಸ್ಯೆ ಬಗ್ಗೆ ಮುಂದಿನ ಸಿಂಡಿಕೇಟ್ ಸಭೆಯಲ್ಲಿ ಚರ್ಚಿಸಲಾಗುವುದು.

-ಡಾ.ನಟರಾಜ್ ಶಿವಣ್ಣ, ಸಿಂಡಿಕೇಟ್ ಸದಸ್ಯರು, ಮೈಸೂರು ವಿಶ್ವವಿದ್ಯಾನಿಲಯ.

ಆಂದೋಲನ ಡೆಸ್ಕ್

Recent Posts

ಟಿ20 ವಿಶ್ವಕಪ್‌ : ಇಟಲಿ ವಿರುದ್ಧ ವೆಸ್ಟ್‌ ಇಂಡೀಸ್‌ಗೆ ಸುಲಭ ಜಯ

ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್‌ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…

3 hours ago

ಟಿ20 ವಿಶ್ವಕಪ್ | ಭರ್ಜರಿ ಜಯ ; ಶ್ರೀಲಂಕಾ ಸೋಲಿಸಿ ಸೂಪರ್ 8ಗೆ ಲಗ್ಗೆ ಇಟ್ಟ ಜಿಂಬಾಬ್ವೆ

ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…

3 hours ago

ದ್ವಿತೀಯ ಪಿಯುಸಿ | ಮೈಸೂರು ಟಾಪ್‌ 10ರೊಳಗೆ ಸ್ಥಾನ ಪಡೆಯಲು ಶ್ರಮಿಸಿ

ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…

4 hours ago

ಎಐ ಭಾರತದ ಭವಿಷ್ಯ ; ನಿಯಂತ್ರಣ ನಮ್ಮ ಕೈಯಲ್ಲಿರಲಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…

4 hours ago

ಬಂಡೀಪುರ ಸಫಾರಿ ಪರ-ವಿರೋಧ ಜಟಾಪಟಿ ; ರೈತರು, ಸಫಾರಿ ಬೆಂಬಲಿತರು ಪೊಲೀಸರ ವಶಕ್ಕೆ.

ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…

5 hours ago

ಬೂದನೂರು ಉತ್ಸವ : ನಾಳೆಯಿಂದ ಹೆಲಿ ಟೂರಿಸಂ

ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…

5 hours ago