Andolana originals

ಜ್ಞಾನದ ಬೆಳಕು ನೀಡುವ ಮೈವಿವಿ ಕ್ಯಾಂಪಸ್ ಕತ್ತಲಿನಲ್ಲಿ!

ಮೈಸೂರು ದೀಪಾಲಂಕಾರದ ಸಂಭ್ರಮದಲ್ಲಿದ್ದರೂ ಮಾನಸಗಂಗೋತ್ರಿ ಕ್ಯಾಂಪಸ್‌ನಲ್ಲಿ ಬೆಳಗದ ದೀಪಗಳು

ವಾಸು ವಿ.ಹೊಂಗನೂರು
ಮೈಸೂರು: 60ರ ದಶಕದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಹೊಸ ಕ್ಯಾಂಪಸ್ ಆಗಿ ಮಾನಸಗಂಗೋತ್ರಿ ರೂಪುಗೊಂಡಿತು. ಅಂದಿನಿಂದ ಇಲ್ಲಿಯವರೆಗೂ ಅದು ತನ್ನದೇ ಆದ ಘನತೆ, ಕೀರ್ತಿಯನ್ನು ಕಾಪಾಡಿಕೊಂಡು ಬಂದಿದೆ.

ದಶಕದಿಂದೀಚೆಗೆ ವಿಜ್ಞಾನ್ ಭವನ್, ಬಿಎಂ ಶ್ರೀ ಸಭಾಂಗಣ, ಬಯಲು ರಂಗಮಂದಿರ, ನೂತನ ರಸ್ತೆ ನಿರ್ಮಾಣ, ವಾಕಿಂಗ್ ಪಾಥ್, ಪಾರಂಪರಿಕ ವಿದ್ಯುತ್ ದೀಪಗಳ ಅಳವಡಿಕೆ, ಗಡಿಯಾರ ಗೋಪುರ, ಗೌತಮ ಬುದ್ದ, ಅಂಬೇಡ್ಕರ್, ಗಾಂಧಿ, ಕುವೆಂಪು ಪ್ರತಿಮೆಗಳು ಗಂಗೋತ್ರಿಯನ್ನು ಕಳೆಗಟ್ಟುವಂತೆ ಮಾಡಿವೆ.

ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿರುವ ಈ ವಿಶ್ವವಿದ್ಯಾನಿಲಯದಲ್ಲಿ ಸಮರ್ಪಕ ನಿರ್ವಹಣೆ ಆಗದೆ ಒಂದಾದ ಮೇಲೊಂದರಂತೆ ಸಮಸ್ಯೆಗಳು ಕಾಡ ತೊಡಗಿವೆ. ‘ಆಂದೋಲನ’ ದಿನಪತ್ರಿಕೆಯಲ್ಲಿ ಈ ಹಿಂದೆ ಆರ್‌ಓ ಪ್ಲಾಂಟ್‌ಗಳ ಅವ್ಯವಸ್ಥೆಯ ಬಗ್ಗೆ ವರದಿ ಪ್ರಕಟಗೊಂಡಿತ್ತು.

ಇದರ ಬೆನ್ನಲ್ಲೇ ಮತ್ತೊಂದು ಸಮಸ್ಯೆ ಎದುರಾಗಿದ್ದು, ಕ್ಯಾಂಪಸ್‌ನಲ್ಲಿ ವಿದ್ಯುತ್ ದೀಪಗಳು ಕೈ ಕೊಡುತ್ತಿರುವುದು ರಾತ್ರಿ ವೇಳೆ ಓದುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ.

ಗಡಿಯಾರ ಗೋಪುರದಿಂದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಡೆಗೆ ತೆರಳುವ ಮಾರ್ಗದಲ್ಲಿನ ದೀಪಗಳು ಸಂಪೂರ್ಣವಾಗಿ ಕೆಟ್ಟು ಹೋಗಿದ್ದು, ಅಲ್ಲಲ್ಲಿ ಒಂದೊಂದು ದೀಪಗಳು ಮಾತ್ರ ಉರಿಯುತ್ತಿವೆ. ರಾತ್ರಿ ವೇಳೆ ಕ್ಯಾಂಪಸ್‌ನಲ್ಲಿ ನಾಯಿಗಳ ಹಾವಳಿ ಹೆಚ್ಚಾ ಗಿದ್ದು, ಕ್ಯಾಂಪಸ್‌ನಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.

ಮಾನಸ ಗಂಗೋತ್ರಿಯ ಆಕರ್ಷಣೀಯ ಸ್ಥಳಗಳಲ್ಲಿ ಒಂದಾದ ಬುದ್ಧನ ಪ್ರತಿಮೆಯ ಸುತ್ತ ಹಾಕಲಾಗಿರುವ ದೀಪಗಳು ಒಂದೂ ಕೆಲಸ ಮಾಡುತ್ತಿಲ್ಲ. ಹಲವು ಬಲ್ಬ್‌ಗಳು ನುಚ್ಚುನೂರಾಗಿದ್ದರೇ, ಉಳಿದವು ಕೆಲಸಕ್ಕೆ ಬಾರದ ಸ್ಥಿತಿಯಲ್ಲಿವೆ. ರಾತ್ರಿಯಾದರೇ ವಿದ್ಯಾರ್ಥಿ ನಿಲಯಕ್ಕೆ ತೆರಳುವ ವಿದ್ಯಾರ್ಥಿಗಳು ಭಯದಿಂದ ಸಂಚಾರ ನಡೆಸುವ ಸ್ಥಿತಿ ನಿರ್ಮಾಣವಾಗಿದೆ.

ಮೈಸೂರು ದಸರಾ ಸಂಭ್ರಮ ದಲ್ಲಿದ್ದರೂ ಗಂಗೋತ್ರಿಗೆ ಸಿಗಬೇಕಿರುವ ಕನಿಷ್ಠ ಮೂಲಸೌಕರ್ಯಗಳು ದೊರೆತಿಲ್ಲ. ಬೆಳಕಿನ ಅವಶ್ಯಕತೆ ತುಂಬಾ ಇರುವ ಕಡೆಗಳಲ್ಲಿ ವಿದ್ಯುತ್ ದೀಪಗಳು ಕೆಲಸ ಮಾಡುತ್ತಿಲ್ಲ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸಮಸ್ಯೆ ಪರಿಹರಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಮೈಸೂರು ವಿವಿಯ ಮಾನಸ ಗಂಗೋತ್ರಿಗೆ ವಿಶ್ವಮಟ್ಟದಲ್ಲಿ ಒಂದು ವಿಶೇಷ ಸ್ಥಾನಮಾನವಿದೆ. ಇಂತಹ ವಿವಿಯ ನಿರ್ವಹಣೆಯಲ್ಲಿ ಆಡಳಿತ ಮಂಡಳಿ ನಿರಾಸಕ್ತಿ ತೋರುತ್ತಿರುವುದು ಬೇಸರದ ಸಂಗತಿ. ಸಂಬಂಧಪಟ್ಟ ಅಧಿಕಾರಿಗಳು ಕಾರ್ಯೋನ್ಮುಖರಾಗಿ ಕೂಡಲೇ ಸಮಸ್ಯೆ ಪರಿಹರಿಸಬೇಕು. ವಿವಿಯಲ್ಲಿನ ವಿದ್ಯುತ್‌ ಸಮಸ್ಯೆ ಬಗ್ಗೆ ಮುಂದಿನ ಸಿಂಡಿಕೇಟ್ ಸಭೆಯಲ್ಲಿ ಚರ್ಚಿಸಲಾಗುವುದು.

-ಡಾ.ನಟರಾಜ್ ಶಿವಣ್ಣ, ಸಿಂಡಿಕೇಟ್ ಸದಸ್ಯರು, ಮೈಸೂರು ವಿಶ್ವವಿದ್ಯಾನಿಲಯ.

ಆಂದೋಲನ ಡೆಸ್ಕ್

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

25 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

31 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

40 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago