Andolana originals

ಜ್ಞಾನದ ಬೆಳಕು ನೀಡುವ ಮೈವಿವಿ ಕ್ಯಾಂಪಸ್ ಕತ್ತಲಿನಲ್ಲಿ!

ಮೈಸೂರು ದೀಪಾಲಂಕಾರದ ಸಂಭ್ರಮದಲ್ಲಿದ್ದರೂ ಮಾನಸಗಂಗೋತ್ರಿ ಕ್ಯಾಂಪಸ್‌ನಲ್ಲಿ ಬೆಳಗದ ದೀಪಗಳು

ವಾಸು ವಿ.ಹೊಂಗನೂರು
ಮೈಸೂರು: 60ರ ದಶಕದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಹೊಸ ಕ್ಯಾಂಪಸ್ ಆಗಿ ಮಾನಸಗಂಗೋತ್ರಿ ರೂಪುಗೊಂಡಿತು. ಅಂದಿನಿಂದ ಇಲ್ಲಿಯವರೆಗೂ ಅದು ತನ್ನದೇ ಆದ ಘನತೆ, ಕೀರ್ತಿಯನ್ನು ಕಾಪಾಡಿಕೊಂಡು ಬಂದಿದೆ.

ದಶಕದಿಂದೀಚೆಗೆ ವಿಜ್ಞಾನ್ ಭವನ್, ಬಿಎಂ ಶ್ರೀ ಸಭಾಂಗಣ, ಬಯಲು ರಂಗಮಂದಿರ, ನೂತನ ರಸ್ತೆ ನಿರ್ಮಾಣ, ವಾಕಿಂಗ್ ಪಾಥ್, ಪಾರಂಪರಿಕ ವಿದ್ಯುತ್ ದೀಪಗಳ ಅಳವಡಿಕೆ, ಗಡಿಯಾರ ಗೋಪುರ, ಗೌತಮ ಬುದ್ದ, ಅಂಬೇಡ್ಕರ್, ಗಾಂಧಿ, ಕುವೆಂಪು ಪ್ರತಿಮೆಗಳು ಗಂಗೋತ್ರಿಯನ್ನು ಕಳೆಗಟ್ಟುವಂತೆ ಮಾಡಿವೆ.

ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿರುವ ಈ ವಿಶ್ವವಿದ್ಯಾನಿಲಯದಲ್ಲಿ ಸಮರ್ಪಕ ನಿರ್ವಹಣೆ ಆಗದೆ ಒಂದಾದ ಮೇಲೊಂದರಂತೆ ಸಮಸ್ಯೆಗಳು ಕಾಡ ತೊಡಗಿವೆ. ‘ಆಂದೋಲನ’ ದಿನಪತ್ರಿಕೆಯಲ್ಲಿ ಈ ಹಿಂದೆ ಆರ್‌ಓ ಪ್ಲಾಂಟ್‌ಗಳ ಅವ್ಯವಸ್ಥೆಯ ಬಗ್ಗೆ ವರದಿ ಪ್ರಕಟಗೊಂಡಿತ್ತು.

ಇದರ ಬೆನ್ನಲ್ಲೇ ಮತ್ತೊಂದು ಸಮಸ್ಯೆ ಎದುರಾಗಿದ್ದು, ಕ್ಯಾಂಪಸ್‌ನಲ್ಲಿ ವಿದ್ಯುತ್ ದೀಪಗಳು ಕೈ ಕೊಡುತ್ತಿರುವುದು ರಾತ್ರಿ ವೇಳೆ ಓದುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ.

ಗಡಿಯಾರ ಗೋಪುರದಿಂದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಡೆಗೆ ತೆರಳುವ ಮಾರ್ಗದಲ್ಲಿನ ದೀಪಗಳು ಸಂಪೂರ್ಣವಾಗಿ ಕೆಟ್ಟು ಹೋಗಿದ್ದು, ಅಲ್ಲಲ್ಲಿ ಒಂದೊಂದು ದೀಪಗಳು ಮಾತ್ರ ಉರಿಯುತ್ತಿವೆ. ರಾತ್ರಿ ವೇಳೆ ಕ್ಯಾಂಪಸ್‌ನಲ್ಲಿ ನಾಯಿಗಳ ಹಾವಳಿ ಹೆಚ್ಚಾ ಗಿದ್ದು, ಕ್ಯಾಂಪಸ್‌ನಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.

ಮಾನಸ ಗಂಗೋತ್ರಿಯ ಆಕರ್ಷಣೀಯ ಸ್ಥಳಗಳಲ್ಲಿ ಒಂದಾದ ಬುದ್ಧನ ಪ್ರತಿಮೆಯ ಸುತ್ತ ಹಾಕಲಾಗಿರುವ ದೀಪಗಳು ಒಂದೂ ಕೆಲಸ ಮಾಡುತ್ತಿಲ್ಲ. ಹಲವು ಬಲ್ಬ್‌ಗಳು ನುಚ್ಚುನೂರಾಗಿದ್ದರೇ, ಉಳಿದವು ಕೆಲಸಕ್ಕೆ ಬಾರದ ಸ್ಥಿತಿಯಲ್ಲಿವೆ. ರಾತ್ರಿಯಾದರೇ ವಿದ್ಯಾರ್ಥಿ ನಿಲಯಕ್ಕೆ ತೆರಳುವ ವಿದ್ಯಾರ್ಥಿಗಳು ಭಯದಿಂದ ಸಂಚಾರ ನಡೆಸುವ ಸ್ಥಿತಿ ನಿರ್ಮಾಣವಾಗಿದೆ.

ಮೈಸೂರು ದಸರಾ ಸಂಭ್ರಮ ದಲ್ಲಿದ್ದರೂ ಗಂಗೋತ್ರಿಗೆ ಸಿಗಬೇಕಿರುವ ಕನಿಷ್ಠ ಮೂಲಸೌಕರ್ಯಗಳು ದೊರೆತಿಲ್ಲ. ಬೆಳಕಿನ ಅವಶ್ಯಕತೆ ತುಂಬಾ ಇರುವ ಕಡೆಗಳಲ್ಲಿ ವಿದ್ಯುತ್ ದೀಪಗಳು ಕೆಲಸ ಮಾಡುತ್ತಿಲ್ಲ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸಮಸ್ಯೆ ಪರಿಹರಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಮೈಸೂರು ವಿವಿಯ ಮಾನಸ ಗಂಗೋತ್ರಿಗೆ ವಿಶ್ವಮಟ್ಟದಲ್ಲಿ ಒಂದು ವಿಶೇಷ ಸ್ಥಾನಮಾನವಿದೆ. ಇಂತಹ ವಿವಿಯ ನಿರ್ವಹಣೆಯಲ್ಲಿ ಆಡಳಿತ ಮಂಡಳಿ ನಿರಾಸಕ್ತಿ ತೋರುತ್ತಿರುವುದು ಬೇಸರದ ಸಂಗತಿ. ಸಂಬಂಧಪಟ್ಟ ಅಧಿಕಾರಿಗಳು ಕಾರ್ಯೋನ್ಮುಖರಾಗಿ ಕೂಡಲೇ ಸಮಸ್ಯೆ ಪರಿಹರಿಸಬೇಕು. ವಿವಿಯಲ್ಲಿನ ವಿದ್ಯುತ್‌ ಸಮಸ್ಯೆ ಬಗ್ಗೆ ಮುಂದಿನ ಸಿಂಡಿಕೇಟ್ ಸಭೆಯಲ್ಲಿ ಚರ್ಚಿಸಲಾಗುವುದು.

-ಡಾ.ನಟರಾಜ್ ಶಿವಣ್ಣ, ಸಿಂಡಿಕೇಟ್ ಸದಸ್ಯರು, ಮೈಸೂರು ವಿಶ್ವವಿದ್ಯಾನಿಲಯ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

14 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

14 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

14 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

14 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

14 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

14 hours ago