Andolana originals

ಜ್ಞಾನದ ಬೆಳಕು ನೀಡುವ ಮೈವಿವಿ ಕ್ಯಾಂಪಸ್ ಕತ್ತಲಿನಲ್ಲಿ!

ಮೈಸೂರು ದೀಪಾಲಂಕಾರದ ಸಂಭ್ರಮದಲ್ಲಿದ್ದರೂ ಮಾನಸಗಂಗೋತ್ರಿ ಕ್ಯಾಂಪಸ್‌ನಲ್ಲಿ ಬೆಳಗದ ದೀಪಗಳು

ವಾಸು ವಿ.ಹೊಂಗನೂರು
ಮೈಸೂರು: 60ರ ದಶಕದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಹೊಸ ಕ್ಯಾಂಪಸ್ ಆಗಿ ಮಾನಸಗಂಗೋತ್ರಿ ರೂಪುಗೊಂಡಿತು. ಅಂದಿನಿಂದ ಇಲ್ಲಿಯವರೆಗೂ ಅದು ತನ್ನದೇ ಆದ ಘನತೆ, ಕೀರ್ತಿಯನ್ನು ಕಾಪಾಡಿಕೊಂಡು ಬಂದಿದೆ.

ದಶಕದಿಂದೀಚೆಗೆ ವಿಜ್ಞಾನ್ ಭವನ್, ಬಿಎಂ ಶ್ರೀ ಸಭಾಂಗಣ, ಬಯಲು ರಂಗಮಂದಿರ, ನೂತನ ರಸ್ತೆ ನಿರ್ಮಾಣ, ವಾಕಿಂಗ್ ಪಾಥ್, ಪಾರಂಪರಿಕ ವಿದ್ಯುತ್ ದೀಪಗಳ ಅಳವಡಿಕೆ, ಗಡಿಯಾರ ಗೋಪುರ, ಗೌತಮ ಬುದ್ದ, ಅಂಬೇಡ್ಕರ್, ಗಾಂಧಿ, ಕುವೆಂಪು ಪ್ರತಿಮೆಗಳು ಗಂಗೋತ್ರಿಯನ್ನು ಕಳೆಗಟ್ಟುವಂತೆ ಮಾಡಿವೆ.

ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿರುವ ಈ ವಿಶ್ವವಿದ್ಯಾನಿಲಯದಲ್ಲಿ ಸಮರ್ಪಕ ನಿರ್ವಹಣೆ ಆಗದೆ ಒಂದಾದ ಮೇಲೊಂದರಂತೆ ಸಮಸ್ಯೆಗಳು ಕಾಡ ತೊಡಗಿವೆ. ‘ಆಂದೋಲನ’ ದಿನಪತ್ರಿಕೆಯಲ್ಲಿ ಈ ಹಿಂದೆ ಆರ್‌ಓ ಪ್ಲಾಂಟ್‌ಗಳ ಅವ್ಯವಸ್ಥೆಯ ಬಗ್ಗೆ ವರದಿ ಪ್ರಕಟಗೊಂಡಿತ್ತು.

ಇದರ ಬೆನ್ನಲ್ಲೇ ಮತ್ತೊಂದು ಸಮಸ್ಯೆ ಎದುರಾಗಿದ್ದು, ಕ್ಯಾಂಪಸ್‌ನಲ್ಲಿ ವಿದ್ಯುತ್ ದೀಪಗಳು ಕೈ ಕೊಡುತ್ತಿರುವುದು ರಾತ್ರಿ ವೇಳೆ ಓದುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ.

ಗಡಿಯಾರ ಗೋಪುರದಿಂದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಡೆಗೆ ತೆರಳುವ ಮಾರ್ಗದಲ್ಲಿನ ದೀಪಗಳು ಸಂಪೂರ್ಣವಾಗಿ ಕೆಟ್ಟು ಹೋಗಿದ್ದು, ಅಲ್ಲಲ್ಲಿ ಒಂದೊಂದು ದೀಪಗಳು ಮಾತ್ರ ಉರಿಯುತ್ತಿವೆ. ರಾತ್ರಿ ವೇಳೆ ಕ್ಯಾಂಪಸ್‌ನಲ್ಲಿ ನಾಯಿಗಳ ಹಾವಳಿ ಹೆಚ್ಚಾ ಗಿದ್ದು, ಕ್ಯಾಂಪಸ್‌ನಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.

ಮಾನಸ ಗಂಗೋತ್ರಿಯ ಆಕರ್ಷಣೀಯ ಸ್ಥಳಗಳಲ್ಲಿ ಒಂದಾದ ಬುದ್ಧನ ಪ್ರತಿಮೆಯ ಸುತ್ತ ಹಾಕಲಾಗಿರುವ ದೀಪಗಳು ಒಂದೂ ಕೆಲಸ ಮಾಡುತ್ತಿಲ್ಲ. ಹಲವು ಬಲ್ಬ್‌ಗಳು ನುಚ್ಚುನೂರಾಗಿದ್ದರೇ, ಉಳಿದವು ಕೆಲಸಕ್ಕೆ ಬಾರದ ಸ್ಥಿತಿಯಲ್ಲಿವೆ. ರಾತ್ರಿಯಾದರೇ ವಿದ್ಯಾರ್ಥಿ ನಿಲಯಕ್ಕೆ ತೆರಳುವ ವಿದ್ಯಾರ್ಥಿಗಳು ಭಯದಿಂದ ಸಂಚಾರ ನಡೆಸುವ ಸ್ಥಿತಿ ನಿರ್ಮಾಣವಾಗಿದೆ.

ಮೈಸೂರು ದಸರಾ ಸಂಭ್ರಮ ದಲ್ಲಿದ್ದರೂ ಗಂಗೋತ್ರಿಗೆ ಸಿಗಬೇಕಿರುವ ಕನಿಷ್ಠ ಮೂಲಸೌಕರ್ಯಗಳು ದೊರೆತಿಲ್ಲ. ಬೆಳಕಿನ ಅವಶ್ಯಕತೆ ತುಂಬಾ ಇರುವ ಕಡೆಗಳಲ್ಲಿ ವಿದ್ಯುತ್ ದೀಪಗಳು ಕೆಲಸ ಮಾಡುತ್ತಿಲ್ಲ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸಮಸ್ಯೆ ಪರಿಹರಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಮೈಸೂರು ವಿವಿಯ ಮಾನಸ ಗಂಗೋತ್ರಿಗೆ ವಿಶ್ವಮಟ್ಟದಲ್ಲಿ ಒಂದು ವಿಶೇಷ ಸ್ಥಾನಮಾನವಿದೆ. ಇಂತಹ ವಿವಿಯ ನಿರ್ವಹಣೆಯಲ್ಲಿ ಆಡಳಿತ ಮಂಡಳಿ ನಿರಾಸಕ್ತಿ ತೋರುತ್ತಿರುವುದು ಬೇಸರದ ಸಂಗತಿ. ಸಂಬಂಧಪಟ್ಟ ಅಧಿಕಾರಿಗಳು ಕಾರ್ಯೋನ್ಮುಖರಾಗಿ ಕೂಡಲೇ ಸಮಸ್ಯೆ ಪರಿಹರಿಸಬೇಕು. ವಿವಿಯಲ್ಲಿನ ವಿದ್ಯುತ್‌ ಸಮಸ್ಯೆ ಬಗ್ಗೆ ಮುಂದಿನ ಸಿಂಡಿಕೇಟ್ ಸಭೆಯಲ್ಲಿ ಚರ್ಚಿಸಲಾಗುವುದು.

-ಡಾ.ನಟರಾಜ್ ಶಿವಣ್ಣ, ಸಿಂಡಿಕೇಟ್ ಸದಸ್ಯರು, ಮೈಸೂರು ವಿಶ್ವವಿದ್ಯಾನಿಲಯ.

ಆಂದೋಲನ ಡೆಸ್ಕ್

Recent Posts

ನಾಳೆಗೆ 60 ದಿನಗಳ ಡೆಡ್‌ಲೈನ್‌ ಅಂತ್ಯ: ಸಂಕಷ್ಟದಲ್ಲಿ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್‌: ಅಮೇರಿಕಾ ಮತ್ತು ಇರಾನ್‌ ನಡುವಿನ ಮಿಲಿಟರಿ ಸಂಘರ್ಷ ಈಗ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌…

9 mins ago

ರಾಜ್ಯದಲ್ಲಿ ಮೂರು ದಿನ ಮಳೆ ಮುನ್ಸೂಚನೆ: ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.1ರಂದು ರಾಯಚೂರು, ಕೊಪ್ಪಳ,…

1 hour ago

ಯಾಲಕ್ಕೂರು, ಸುತ್ತಲಿನ ಗ್ರಾಮಗಳಿಗೆ ಬಂತು ಸಾರಿಗೆ ಬಸ್ಸು!

ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…

5 hours ago

ಓದುಗರ ಪತ್ರ: ಬಿಸಿಲಲ್ಲೋ ಅಣ್ಣಾ..!

ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…

5 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳ ಅಭಿವೃದ್ಧಿ ಸ್ವಾಗತಾರ್ಹ

ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…

5 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುವ ಇಂಟರ್ನಲ್ಸ್ ಅಂಕಗಳು

ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…

5 hours ago