Andolana originals

ಜ್ಞಾನದ ಬೆಳಕು ನೀಡುವ ಮೈವಿವಿ ಕ್ಯಾಂಪಸ್ ಕತ್ತಲಿನಲ್ಲಿ!

ಮೈಸೂರು ದೀಪಾಲಂಕಾರದ ಸಂಭ್ರಮದಲ್ಲಿದ್ದರೂ ಮಾನಸಗಂಗೋತ್ರಿ ಕ್ಯಾಂಪಸ್‌ನಲ್ಲಿ ಬೆಳಗದ ದೀಪಗಳು

ವಾಸು ವಿ.ಹೊಂಗನೂರು
ಮೈಸೂರು: 60ರ ದಶಕದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಹೊಸ ಕ್ಯಾಂಪಸ್ ಆಗಿ ಮಾನಸಗಂಗೋತ್ರಿ ರೂಪುಗೊಂಡಿತು. ಅಂದಿನಿಂದ ಇಲ್ಲಿಯವರೆಗೂ ಅದು ತನ್ನದೇ ಆದ ಘನತೆ, ಕೀರ್ತಿಯನ್ನು ಕಾಪಾಡಿಕೊಂಡು ಬಂದಿದೆ.

ದಶಕದಿಂದೀಚೆಗೆ ವಿಜ್ಞಾನ್ ಭವನ್, ಬಿಎಂ ಶ್ರೀ ಸಭಾಂಗಣ, ಬಯಲು ರಂಗಮಂದಿರ, ನೂತನ ರಸ್ತೆ ನಿರ್ಮಾಣ, ವಾಕಿಂಗ್ ಪಾಥ್, ಪಾರಂಪರಿಕ ವಿದ್ಯುತ್ ದೀಪಗಳ ಅಳವಡಿಕೆ, ಗಡಿಯಾರ ಗೋಪುರ, ಗೌತಮ ಬುದ್ದ, ಅಂಬೇಡ್ಕರ್, ಗಾಂಧಿ, ಕುವೆಂಪು ಪ್ರತಿಮೆಗಳು ಗಂಗೋತ್ರಿಯನ್ನು ಕಳೆಗಟ್ಟುವಂತೆ ಮಾಡಿವೆ.

ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿರುವ ಈ ವಿಶ್ವವಿದ್ಯಾನಿಲಯದಲ್ಲಿ ಸಮರ್ಪಕ ನಿರ್ವಹಣೆ ಆಗದೆ ಒಂದಾದ ಮೇಲೊಂದರಂತೆ ಸಮಸ್ಯೆಗಳು ಕಾಡ ತೊಡಗಿವೆ. ‘ಆಂದೋಲನ’ ದಿನಪತ್ರಿಕೆಯಲ್ಲಿ ಈ ಹಿಂದೆ ಆರ್‌ಓ ಪ್ಲಾಂಟ್‌ಗಳ ಅವ್ಯವಸ್ಥೆಯ ಬಗ್ಗೆ ವರದಿ ಪ್ರಕಟಗೊಂಡಿತ್ತು.

ಇದರ ಬೆನ್ನಲ್ಲೇ ಮತ್ತೊಂದು ಸಮಸ್ಯೆ ಎದುರಾಗಿದ್ದು, ಕ್ಯಾಂಪಸ್‌ನಲ್ಲಿ ವಿದ್ಯುತ್ ದೀಪಗಳು ಕೈ ಕೊಡುತ್ತಿರುವುದು ರಾತ್ರಿ ವೇಳೆ ಓದುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ.

ಗಡಿಯಾರ ಗೋಪುರದಿಂದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಡೆಗೆ ತೆರಳುವ ಮಾರ್ಗದಲ್ಲಿನ ದೀಪಗಳು ಸಂಪೂರ್ಣವಾಗಿ ಕೆಟ್ಟು ಹೋಗಿದ್ದು, ಅಲ್ಲಲ್ಲಿ ಒಂದೊಂದು ದೀಪಗಳು ಮಾತ್ರ ಉರಿಯುತ್ತಿವೆ. ರಾತ್ರಿ ವೇಳೆ ಕ್ಯಾಂಪಸ್‌ನಲ್ಲಿ ನಾಯಿಗಳ ಹಾವಳಿ ಹೆಚ್ಚಾ ಗಿದ್ದು, ಕ್ಯಾಂಪಸ್‌ನಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.

ಮಾನಸ ಗಂಗೋತ್ರಿಯ ಆಕರ್ಷಣೀಯ ಸ್ಥಳಗಳಲ್ಲಿ ಒಂದಾದ ಬುದ್ಧನ ಪ್ರತಿಮೆಯ ಸುತ್ತ ಹಾಕಲಾಗಿರುವ ದೀಪಗಳು ಒಂದೂ ಕೆಲಸ ಮಾಡುತ್ತಿಲ್ಲ. ಹಲವು ಬಲ್ಬ್‌ಗಳು ನುಚ್ಚುನೂರಾಗಿದ್ದರೇ, ಉಳಿದವು ಕೆಲಸಕ್ಕೆ ಬಾರದ ಸ್ಥಿತಿಯಲ್ಲಿವೆ. ರಾತ್ರಿಯಾದರೇ ವಿದ್ಯಾರ್ಥಿ ನಿಲಯಕ್ಕೆ ತೆರಳುವ ವಿದ್ಯಾರ್ಥಿಗಳು ಭಯದಿಂದ ಸಂಚಾರ ನಡೆಸುವ ಸ್ಥಿತಿ ನಿರ್ಮಾಣವಾಗಿದೆ.

ಮೈಸೂರು ದಸರಾ ಸಂಭ್ರಮ ದಲ್ಲಿದ್ದರೂ ಗಂಗೋತ್ರಿಗೆ ಸಿಗಬೇಕಿರುವ ಕನಿಷ್ಠ ಮೂಲಸೌಕರ್ಯಗಳು ದೊರೆತಿಲ್ಲ. ಬೆಳಕಿನ ಅವಶ್ಯಕತೆ ತುಂಬಾ ಇರುವ ಕಡೆಗಳಲ್ಲಿ ವಿದ್ಯುತ್ ದೀಪಗಳು ಕೆಲಸ ಮಾಡುತ್ತಿಲ್ಲ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸಮಸ್ಯೆ ಪರಿಹರಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಮೈಸೂರು ವಿವಿಯ ಮಾನಸ ಗಂಗೋತ್ರಿಗೆ ವಿಶ್ವಮಟ್ಟದಲ್ಲಿ ಒಂದು ವಿಶೇಷ ಸ್ಥಾನಮಾನವಿದೆ. ಇಂತಹ ವಿವಿಯ ನಿರ್ವಹಣೆಯಲ್ಲಿ ಆಡಳಿತ ಮಂಡಳಿ ನಿರಾಸಕ್ತಿ ತೋರುತ್ತಿರುವುದು ಬೇಸರದ ಸಂಗತಿ. ಸಂಬಂಧಪಟ್ಟ ಅಧಿಕಾರಿಗಳು ಕಾರ್ಯೋನ್ಮುಖರಾಗಿ ಕೂಡಲೇ ಸಮಸ್ಯೆ ಪರಿಹರಿಸಬೇಕು. ವಿವಿಯಲ್ಲಿನ ವಿದ್ಯುತ್‌ ಸಮಸ್ಯೆ ಬಗ್ಗೆ ಮುಂದಿನ ಸಿಂಡಿಕೇಟ್ ಸಭೆಯಲ್ಲಿ ಚರ್ಚಿಸಲಾಗುವುದು.

-ಡಾ.ನಟರಾಜ್ ಶಿವಣ್ಣ, ಸಿಂಡಿಕೇಟ್ ಸದಸ್ಯರು, ಮೈಸೂರು ವಿಶ್ವವಿದ್ಯಾನಿಲಯ.

ಆಂದೋಲನ ಡೆಸ್ಕ್

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

3 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

11 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

11 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

11 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

11 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

11 hours ago