Andolana originals

ಜ್ಞಾನದ ಬೆಳಕು ನೀಡುವ ಮೈವಿವಿ ಕ್ಯಾಂಪಸ್ ಕತ್ತಲಿನಲ್ಲಿ!

ಮೈಸೂರು ದೀಪಾಲಂಕಾರದ ಸಂಭ್ರಮದಲ್ಲಿದ್ದರೂ ಮಾನಸಗಂಗೋತ್ರಿ ಕ್ಯಾಂಪಸ್‌ನಲ್ಲಿ ಬೆಳಗದ ದೀಪಗಳು

ವಾಸು ವಿ.ಹೊಂಗನೂರು
ಮೈಸೂರು: 60ರ ದಶಕದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಹೊಸ ಕ್ಯಾಂಪಸ್ ಆಗಿ ಮಾನಸಗಂಗೋತ್ರಿ ರೂಪುಗೊಂಡಿತು. ಅಂದಿನಿಂದ ಇಲ್ಲಿಯವರೆಗೂ ಅದು ತನ್ನದೇ ಆದ ಘನತೆ, ಕೀರ್ತಿಯನ್ನು ಕಾಪಾಡಿಕೊಂಡು ಬಂದಿದೆ.

ದಶಕದಿಂದೀಚೆಗೆ ವಿಜ್ಞಾನ್ ಭವನ್, ಬಿಎಂ ಶ್ರೀ ಸಭಾಂಗಣ, ಬಯಲು ರಂಗಮಂದಿರ, ನೂತನ ರಸ್ತೆ ನಿರ್ಮಾಣ, ವಾಕಿಂಗ್ ಪಾಥ್, ಪಾರಂಪರಿಕ ವಿದ್ಯುತ್ ದೀಪಗಳ ಅಳವಡಿಕೆ, ಗಡಿಯಾರ ಗೋಪುರ, ಗೌತಮ ಬುದ್ದ, ಅಂಬೇಡ್ಕರ್, ಗಾಂಧಿ, ಕುವೆಂಪು ಪ್ರತಿಮೆಗಳು ಗಂಗೋತ್ರಿಯನ್ನು ಕಳೆಗಟ್ಟುವಂತೆ ಮಾಡಿವೆ.

ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿರುವ ಈ ವಿಶ್ವವಿದ್ಯಾನಿಲಯದಲ್ಲಿ ಸಮರ್ಪಕ ನಿರ್ವಹಣೆ ಆಗದೆ ಒಂದಾದ ಮೇಲೊಂದರಂತೆ ಸಮಸ್ಯೆಗಳು ಕಾಡ ತೊಡಗಿವೆ. ‘ಆಂದೋಲನ’ ದಿನಪತ್ರಿಕೆಯಲ್ಲಿ ಈ ಹಿಂದೆ ಆರ್‌ಓ ಪ್ಲಾಂಟ್‌ಗಳ ಅವ್ಯವಸ್ಥೆಯ ಬಗ್ಗೆ ವರದಿ ಪ್ರಕಟಗೊಂಡಿತ್ತು.

ಇದರ ಬೆನ್ನಲ್ಲೇ ಮತ್ತೊಂದು ಸಮಸ್ಯೆ ಎದುರಾಗಿದ್ದು, ಕ್ಯಾಂಪಸ್‌ನಲ್ಲಿ ವಿದ್ಯುತ್ ದೀಪಗಳು ಕೈ ಕೊಡುತ್ತಿರುವುದು ರಾತ್ರಿ ವೇಳೆ ಓದುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ.

ಗಡಿಯಾರ ಗೋಪುರದಿಂದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಡೆಗೆ ತೆರಳುವ ಮಾರ್ಗದಲ್ಲಿನ ದೀಪಗಳು ಸಂಪೂರ್ಣವಾಗಿ ಕೆಟ್ಟು ಹೋಗಿದ್ದು, ಅಲ್ಲಲ್ಲಿ ಒಂದೊಂದು ದೀಪಗಳು ಮಾತ್ರ ಉರಿಯುತ್ತಿವೆ. ರಾತ್ರಿ ವೇಳೆ ಕ್ಯಾಂಪಸ್‌ನಲ್ಲಿ ನಾಯಿಗಳ ಹಾವಳಿ ಹೆಚ್ಚಾ ಗಿದ್ದು, ಕ್ಯಾಂಪಸ್‌ನಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.

ಮಾನಸ ಗಂಗೋತ್ರಿಯ ಆಕರ್ಷಣೀಯ ಸ್ಥಳಗಳಲ್ಲಿ ಒಂದಾದ ಬುದ್ಧನ ಪ್ರತಿಮೆಯ ಸುತ್ತ ಹಾಕಲಾಗಿರುವ ದೀಪಗಳು ಒಂದೂ ಕೆಲಸ ಮಾಡುತ್ತಿಲ್ಲ. ಹಲವು ಬಲ್ಬ್‌ಗಳು ನುಚ್ಚುನೂರಾಗಿದ್ದರೇ, ಉಳಿದವು ಕೆಲಸಕ್ಕೆ ಬಾರದ ಸ್ಥಿತಿಯಲ್ಲಿವೆ. ರಾತ್ರಿಯಾದರೇ ವಿದ್ಯಾರ್ಥಿ ನಿಲಯಕ್ಕೆ ತೆರಳುವ ವಿದ್ಯಾರ್ಥಿಗಳು ಭಯದಿಂದ ಸಂಚಾರ ನಡೆಸುವ ಸ್ಥಿತಿ ನಿರ್ಮಾಣವಾಗಿದೆ.

ಮೈಸೂರು ದಸರಾ ಸಂಭ್ರಮ ದಲ್ಲಿದ್ದರೂ ಗಂಗೋತ್ರಿಗೆ ಸಿಗಬೇಕಿರುವ ಕನಿಷ್ಠ ಮೂಲಸೌಕರ್ಯಗಳು ದೊರೆತಿಲ್ಲ. ಬೆಳಕಿನ ಅವಶ್ಯಕತೆ ತುಂಬಾ ಇರುವ ಕಡೆಗಳಲ್ಲಿ ವಿದ್ಯುತ್ ದೀಪಗಳು ಕೆಲಸ ಮಾಡುತ್ತಿಲ್ಲ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸಮಸ್ಯೆ ಪರಿಹರಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಮೈಸೂರು ವಿವಿಯ ಮಾನಸ ಗಂಗೋತ್ರಿಗೆ ವಿಶ್ವಮಟ್ಟದಲ್ಲಿ ಒಂದು ವಿಶೇಷ ಸ್ಥಾನಮಾನವಿದೆ. ಇಂತಹ ವಿವಿಯ ನಿರ್ವಹಣೆಯಲ್ಲಿ ಆಡಳಿತ ಮಂಡಳಿ ನಿರಾಸಕ್ತಿ ತೋರುತ್ತಿರುವುದು ಬೇಸರದ ಸಂಗತಿ. ಸಂಬಂಧಪಟ್ಟ ಅಧಿಕಾರಿಗಳು ಕಾರ್ಯೋನ್ಮುಖರಾಗಿ ಕೂಡಲೇ ಸಮಸ್ಯೆ ಪರಿಹರಿಸಬೇಕು. ವಿವಿಯಲ್ಲಿನ ವಿದ್ಯುತ್‌ ಸಮಸ್ಯೆ ಬಗ್ಗೆ ಮುಂದಿನ ಸಿಂಡಿಕೇಟ್ ಸಭೆಯಲ್ಲಿ ಚರ್ಚಿಸಲಾಗುವುದು.

-ಡಾ.ನಟರಾಜ್ ಶಿವಣ್ಣ, ಸಿಂಡಿಕೇಟ್ ಸದಸ್ಯರು, ಮೈಸೂರು ವಿಶ್ವವಿದ್ಯಾನಿಲಯ.

ಆಂದೋಲನ ಡೆಸ್ಕ್

Recent Posts

ಶಿಷ್ಯವೇತನಕ್ಕೆ ಸಂಶೋಧಕರ ಆಗ್ರಹ : ಭಾನುವಾರ ಸಭೆ

ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…

43 mins ago

ನಿರ್ಮಾಣ ಹಂತದಲ್ಲಿದ್ದ ಹನುಮನ ದೇಗುಲದ ಛಾವಣಿ ಕುಸಿತ ; 7 ಭಕ್ತರು ಸಾವು

ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…

3 hours ago

ಚೂರಿ ಇರಿತ ಆರೋಪ : ಐವರ ವಿರುದ್ಧ ಪ್ರಕರಣ

ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…

5 hours ago

ಹನೂರು | ಪೊನ್ನಾಚಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…

6 hours ago

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

9 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

9 hours ago