Andolana originals

ಸ್ವಚ್ಛತೆಗೆ ಮೈಸೂರಿನ ಮಾರ್ಗದರ್ಶನ!

ಕೆ.ಬಿ.ರಮೇಶನಾಯಕ

ರಾಯಚೂರು, ಮಸ್ಕಿ ತಂಡಗಳಿಗೆ ತರಬೇತಿ; ಸ್ವಚ್ಛ ಶೆಹರ್ ಯೋಜನೆಯಡಿ ಒಡಂಬಡಿಕೆ

ಮೈಸೂರು: ಸ್ವಚ್ಛತೆಯಲ್ಲಿ ಹಲವು ಬಾರಿ ದೇಶದ ಗಮನ ಸೆಳೆದಿರುವ ಅರಮನೆಗಳ ನಗರಿ ಮೈಸೂರು ಇದೀಗ ಸ್ವಚ್ಛತೆಯ ವಿಚಾರದಲ್ಲಿ ಮಾರ್ಗ ದರ್ಶಕ ಜವಾಬ್ದಾರಿಯನ್ನೂ ವಹಿಸಿಕೊಂಡು ರಾಜ್ಯದ ಗಮನ ಸೆಳೆದಿದ್ದು, ಈ ಬಾರಿ ರಾಯಚೂರು ನಗರ ಹಾಗೂ ಮಸ್ಕಿ ಪಟ್ಟಣವು ಸ್ವಚ್ಛ ಸರ್ವೇಕ್ಷಣೆಯಲ್ಲಿಮೈಸೂರಿನ ಮಾರ್ಗದರ್ಶನದೊಂದಿಗೆ ಮುನ್ನಡೆಯುತ್ತಿರುವುದು ಗಮನಾರ್ಹವಾಗಿದೆ.

ಸ್ವಚ್ಛ ಸರ್ವೇಕ್ಷಣೆಯಲ್ಲಿ ಮೈಸೂರಿನ ಮಾದರಿಯಲ್ಲಿಯೇ ರಾಯಚೂರು ಮಹಾನಗರ ಪಾಲಿಕೆ ಹಾಗೂ ಮಸ್ಕಿ ಪಟ್ಟಣ ಪಂಚಾಯಿತಿಗಮನ ಸೆಳೆಯುವ ಉದ್ದೇಶ ಹೊಂದಿದ್ದು, ಈ ಹಿನ್ನೆಲೆಯಲ್ಲಿ ಸ್ವಚ್ಛ ಶೆಹರ್ ಯೋಜನೆಯಡಿ ಈ ನಗರ, ಪಟ್ಟಣವು ಮೈಸೂರು ಮಹಾನಗರ ಪಾಲಿಕೆಯೊಂದಿಗೆ ಒಡಂಬಡಿಕೆಗೆ ಸಹಿ ಹಾಕಿದೆ.

ಇದರಿಂದಾಗಿ ಈ ಬಾರಿ ಮೈಸೂರು ಸ್ವಚ್ಛ ನಗರಿಯಲ್ಲಿ ಮೈಸೂರಿನ ಕೀರ್ತಿ ಹೊಂದಲು ಆದ್ಯತೆ ಕೊಡುವುದರ ಜತೆಗೆ, ಮಾರ್ಗದರ್ಶನ ನೀಡುವ ಎರಡೂ ನಗರಗಳಿಗೆ ಪಾಠ ಮಾಡಲಿದೆ.

ಏನಿದು ಒಡಂಬಡಿಕೆ?: ಸ್ವಚ್ಛ ಸರ್ವೇಕ್ಷಣೆಯಲ್ಲಿ ಉತ್ತಮ ಸಾಧನೆ ತೋರಲು ಕೇವಲ ನಗರವನ್ನು ಶುಚಿಯಾಗಿಟ್ಟುಕೊಂಡರೆ ಮಾತ್ರ ಸಾಲದು. ಇದರ ಜತೆಗೆ ಕೇಂದ್ರ ಸರ್ಕಾರ ನೀಡುವ ನಿರ್ದೇಶನದ ಪ್ರಕಾರ ಹಲವಾರು ಮಾನದಂಡಗಳನ್ನು ಪೂರೈಸಬೇಕು. ಅಲ್ಲದೆ, ಹಲವು ದಾಖಲೆಗಳನ್ನುಸಿದ್ಧಪಡಿಸಬೇಕು ಹಾಗೂ ಜನರಿಂದ ಅಭಿಪ್ರಾಯವನ್ನು ಸಂಗ್ರಹಿಸಬೇಕು. ಈ ವಿಚಾರದಲ್ಲಿ ಅಪಾರ ಅನುಭವ ಹೊಂದಿರುವ ಮೈಸೂರು ನಗರದ ಮಾರ್ಗದರ್ಶನವನ್ನು ರಾಯಚೂರು ನಗರ ಹಾಗೂ ಮಸ್ಕಿ ಪಡೆಯಲು ಪ್ರಾರಂಭಿಸಿದೆ.

ಒಡಂಬಡಿಕೆಯ ಭಾಗವಾಗಿ ಮೈಸೂರು ತನ್ನ ಉತ್ತಮ ಸ್ವಚ್ಛತಾ ಪದ್ಧತಿಗಳು, ತಾಂತ್ರಿಕ ಮಾರ್ಗದರ್ಶನ, ತ್ಯಾಜ್ಯ ನಿರ್ವಹಣಾ ವಿಧಾನಗಳು ಹಾಗೂ ಐಇಸಿ ಚಟುವಟಿಕೆಗಳ ಅನುಭವವನ್ನು ರಾಯಚೂರು ಮತ್ತು ಮಸ್ಕಿಯೊಂದಿಗೆ ಹಂಚಿಕೊಳ್ಳಲು ಪ್ರಾರಂಭಿಸಿದೆ. ಈ ಮೂಲಕ ಈ ನಗರಗಳ ಸ್ವಚ್ಛತಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶ ಹೊಂದಲಾಗಿದೆ.

ಮೈಸೂರಿನಲ್ಲಿ ತರಬೇತಿ: ಯೋಜನೆಯ ಭಾಗವಾಗಿ ಇತ್ತೀಚೆಗೆ ರಾಯಚೂರು ಮಹಾನಗರ ಪಾಲಿಕೆಯ ತಂಡ ನಗರಕ್ಕೆ ಭೇಟಿ ನೀಡಿ ಎರಡು ದಿನಗಳ ತರಬೇತಿ ಪಡೆಯಿತು. ಈ ಅವಧಿಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಸ್ತು ನಿರ್ವಹಣೆ, ಸ್ವಚ್ಛ ಸರ್ವೇಕ್ಷಣ ಸರ್ವೇಯಲ್ಲಿ ನಿರ್ವಹಿಸಬೇಕಾದ ವಿಷಯಗಳ ಚರ್ಚಿಸಲಾಯಿತು.

ಸ್ವಚ್ಛ ಸರ್ವೇಕ್ಷಣೆಗೆ ಸಜ್ಜು: ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನಡೆಸುವ ಸ್ವಚ್ಛ ಸರ್ವೇಕ್ಷಣೆಗೆ ಪ್ರತಿ ವರ್ಷ ಭಿನ್ನವಾದ ಪರಿಕಲ್ಪನೆ ನೀಡಿ ಅಂಕಗಳನ್ನು ನಿಗದಿಪಡಿಸಲಾಗುತ್ತದೆ.ಅಂಕಗಳನ್ನು ಈ ನೂತನ ಪರಿಕಲ್ಪನೆಗೆ ಪೂರಕವಾಗಿ  ಬದಲಾವಣೆ ಮಾಡಲಾಗುತ್ತದೆ. ಹಾಗಾಗಿ ಪ್ರತಿ ಬಾರಿ ನಗರವನ್ನು ಶುಚಿಯಾಗಿಡುವ ದೈನಂದಿನ ಕಾರ್ಯದ ಜತೆಗೆ ಕೇಂದ್ರ ಸರ್ಕಾರ ನೀಡುವ ನೂತನ ಪರಿಕಲ್ಪನೆಗೆ ಪೂರಕವಾಗಿ ನಗರವನ್ನು ಸ್ವಚ್ಛತೆಯಲ್ಲಿ ಸಜ್ಜುಗೊಳಿಸಬೇಕಾಗುತ್ತದೆ.

ಕಳೆದ ಬಾರಿ ಸ್ವಚ್ಛ ಸರ್ವೇಕ್ಷಣೆಯ ಅಂಕಗಳನ್ನು ೯,೫೦೦ ನಿಂದ ೧೨,೫೦೦ಕ್ಕೆ ಏರಿಕೆ ಮಾಡಿ ಹಲವಾರು ಮಾರ್ಪಾಡುಗಳನ್ನು ಮಾಡಲಾಗಿತ್ತು. ಈ ಮಾರ್ಪಾಡಿಗೆ ತಕ್ಕಹಾಗೆ ನಗರವನ್ನು ಸಜ್ಜುಗೊಳಿಸಲಾಗಿತ್ತು. ಇದರ ಪರಿಣಾಮ ಕಳೆದ ಬಾರಿಯ ಸ್ವಚ್ಛ ಸರ್ವೇಕ್ಷಣೆಯಲ್ಲಿ ‘ಸೂಪರ್ ಸ್ವಚ್ಛ ಲೀಗ್ ಪ್ರಶಸ್ತಿ’ಯನ್ನು ಮೈಸೂರು ನಗರ ಪಡೆದುಕೊಂಡಿತ್ತು. ಈ ಪ್ರಶಸ್ತಿಯನ್ನು ಪಡೆದ ದೇಶದ ಕೆಲವೇ ಕೆಲವು ನಗರಗಳ ಪೈಕಿ ಮೈಸೂರು ಕೂಡ ಒಂದಾಗಿದೆ. ಕಳೆದ ಬಾರಿ ರೆಡ್ಯೂಸ್ (ಕಡಿಮೆ ಮಾಡು), ರೀಯೂಸ್ (ಮರುಬಳಕೆ) ಮತ್ತು ರೀಸೈಕಲ್ (ಪುನರ್ಬಳಕೆ) ಪರಿಕಲ್ಪನೆಯಡಿ ಸ್ವಚ್ಛ ಸರ್ವೇಕ್ಷಣೆ ನಡೆದಿತ್ತು. ಈ ಬಾರಿ ೨೦೨೫ನೇ ಸಾಲಿನ ಸ್ವಚ್ಛ ಸರ್ವೇಕ್ಷಣೆಯ ಟೂಲ್‌ಕಿಟ್ ಜನವರಿಯಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದ್ದು, ಆ ಟೂಲ್ ಕಿಟ್‌ನಲ್ಲಿ ನೀಡುವ ಥೀಮ್ ಅಡಿಯಲ್ಲಿ ನಗರವನ್ನು ಸಜ್ಜುಗೊಳಿಸುವ ಅವಶ್ಯವಿದೆ.

ಸ್ವಚ್ಛತೆಯಲ್ಲಿ ಮೈಸೂರಿನ ಸಾಧನೆ: ಸ್ವಚ್ಛ ಸರ್ವೇಕ್ಷಣೆಯಲ್ಲಿ ಮೈಸೂರು ೨೦೧೫, ೨೦೧೬ರಲ್ಲಿ ದೇಶದ ನಂ.೧ ಸ್ವಚ್ಛ ನಗರಿಯಾಗಿ ಹೊರ ಹೊಮ್ಮಿತ್ತು. ಆ ನಂತರ ೨೦೧೭ರಲ್ಲಿ ೫ನೇ ಸ್ಥಾನ, ೨೦೧೮ರಲ್ಲಿ ೮, ೨೦೧೯ರಲ್ಲಿ ೩, ೨೦೨೦ರಲ್ಲಿ ೫, ೨೦೨೧ರಲ್ಲಿ ೧೧, ೨೦೨೨ರಲ್ಲಿ ೮, ೨೦೨೩ರಲ್ಲಿ ೨೭ನೇ ಸ್ಥಾನ ಪಡೆದಿತ್ತು. ೨೦೨೪ರಲ್ಲಿ ‘ಸೂಪರ್ ಸ್ವಚ್ಛ ಲೀಗ್ ಪ್ರಶಸ್ತಿ’ ಪಡೆದ ನಗರಗಳನ್ನು ರ‍್ಯಾಂಕಿಂಗ್‌ನಿಂದ ಹೊರಗಿಡಲಾಗಿತ್ತು. ‘ಸೂಪರ್ ಸ್ವಚ್ಛ ಲೀಗ್ ಪ್ರಶಸ್ತಿ’ಯು ರ‍್ಯಾಂಕಿಂಗ್‌ಗಿಂತ ಹೆಚ್ಚಿನ ಮೌಲ್ಯವನ್ನು ಹೊಂದಿದೆ. ಇದರ ಜತೆಗೆ ನಗರವು ಸ್ವಚ್ಛತೆಯಲ್ಲಿ ಹಲವಾರು ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪಡೆದುಕೊಂಡಿದೆ.

” ಸ್ವಚ್ಛ ಶೆಹರ್ ಯೋಜನೆಯಡಿ ರಾಯಚೂರು ಮಹಾನಗರ ಪಾಲಿಕೆ ಹಾಗೂ ಮಸ್ಕಿ ಪಟ್ಟ  ಪಂಚಾಯಿತಿಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು, ಈ ನಗರಗಳನ್ನು ಸ್ವಚ್ಛ ಸರ್ವೇಕ್ಷಣೆಗೆ ಸಜ್ಜುಗೊಳಿಸುವ ವಿಚಾರದಲ್ಲಿ ಅಗತ್ಯ ಮಾರ್ಗದರ್ಶನ ನೀಡಲಾಗುತ್ತಿದೆ.ಸ್ವಚ್ಛತೆಯಲ್ಲಿ ನಾವು ಅನುಸರಿಸುತ್ತಿರುವ ಪದ್ಧತಿಗಳ ಕುರಿತು ಅವರಿಗೆ ಮಾಹಿತಿ ನೀಡಲಾಗುತ್ತಿದೆ. ಸ್ವಚ್ಛ ಸರ್ವೇಕ್ಷಣೆಗೆ ತಾಂತ್ರಿಕವಾಗಿ ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ. ಆ ಮಾಹಿತಿಯನ್ನು ಅವರೊಂದಿಗೆ ಹಂಚಿಕೊಳ್ಳುತ್ತಿದ್ದೇವೆ.”

ಡಾ.ವೆಂಕಟೇಶ್, ಆರೋಗ್ಯಾಧಿಕಾರಿ, ನಗರ ಪಾಲಿಕೆ.

 

 

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

9 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

10 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

11 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

17 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

17 hours ago